ಕ್ರೈಮ್ ನ್ಯೂಸ್

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 11.  2000 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯಲ್ಲಿ ಬದಲಾವಣೆಗೆ ಯತ್ನಿಸಿದ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ.ಕೆ.ಅಫೈಲ್ ಹುಸೇನ್ (29), ಪ್ರಸೀತ್ (47), ಮೊಹಮ್ಮದ್ ಆಫ್ಘಾಸ್ (34), ನೂರುದ್ದೀನ್ ಅಲಿಯಾಸ್ ಅನ್ವರ್ (34) ಹಾಗೂ ಪ್ರಿಯೇಶ್ (34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ […]

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಅ. 11. ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ನಡೆದಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ

ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ನಗರದ ಪ್ರತಿಷ್ಠಿತ ಬಿಲ್ಡರ್ ಹಾಗೂ ಬಿಜೆಪಿ ಮುಖಂಡರೊಬ್ಬರ ಮನೆಗೆ ಯುವಕರು ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಿಲ್ಡರ್ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ಇಬ್ಬರು ಯುವಕರು ನುಗ್ಗಿ ದಾಂಧಲೆ ನಡೆಸಿದ್ದು ಅವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನುಶ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆ ಯತ್ನ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಅ. 11. ಉದ್ಯಮಿ ಮುಮ್ತಾಝ್‌ ಅಲಿ ಪ್ರಕಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ‌ ಹಾಜರುಪಡಿಸಿದ್ದಾರೆ‌. ಪ್ರಕರಣದ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್‌ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಕಾವೂರು ಪೊಲೀಸರು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ‌ ಮೂವರು ಆರೋಪಿಗಳನ್ನು ಅ.09ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಸ್ರೇಲ್‌ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಬೈರೂತ್, ಅ. 11.  ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಮೃತಪಟ್ಟಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯ ಉಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ದಾಳಿ ಕುರಿತು ಸ್ಪೇನ್‌ ಹಾಗೂ ಇಟಲಿ ದೇಶಗಳು ಆಕ್ರೋಶ ಹೊರಹಾಕಿದ್ದು, ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ

ಇಸ್ರೇಲ್‌ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬೈಕ್ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ. 11.  ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು

ಬೈಕ್ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..!

(ನ್ಯೂಸ್ ಕಡಬ) newskadaba.com ಅ. 09. ನಕಲಿ ಆನ್ ಲೈನ್ ಅರ್ನಿಂಗ್ ಆ್ಯಪ್ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ದೂರುದಾರರು ಸೆ.28ರಂದು ಇನ್ಸ್ಟಾಗ್ರಾಂ ಮೂಲಕ ಬಂದ ಆನ್ ಲೈನ್ ಅರ್ನಿಂಗ್ ಎಂಬ ಲಿಂಕ್ ನ್ನು ಕ್ಲಿಕ್ ಮಾಡಿದ್ದು, ಈ ವೇಳೆ 9733674701 ನಂಬರಿನ ವಾಟ್ಸಾಪ್ ಚಾಟ್ ತೆರೆದುಕೊಂಡಿದೆ. ಅದರಲ್ಲಿ ಅಪರಿಚಿತ ವ್ಯಕ್ತಿಯು ತಾವು ಕಳಿಸಿದ ವಿಡಿಯೋಗೆ ಲೈಕ್ ಮಾಡಿದರೆ 123ರಿಂದ 5000 ರೂ.ವರೆಗೆ ಗಳಿಸಬಹುದು ಎಂದು ತಿಳಿಸಿದ್ದು, ನಂಬಿದ ದೂರುದಾರ

ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಮ್ಮು-ಕಾಶ್ಮೀರ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ..!

(ನ್ಯೂಸ್ ಕಡಬ)newskadaba.com ಶ್ರೀನಗರ, ಅ. 09. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ. ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್ ಅವರ ಮೃತದೇಹವನ್ನು ಅನಂತನಾಗ್‌ನ ಉತ್ರಾಸೂ ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ. ದಕ್ಷಿಣ ಕಾಶ್ಮೀರದ ಕೋಕರ್‌ನಾಗ್ ಅರಣ್ಯದಲ್ಲಿ ರಾತ್ರೋರಾತ್ರಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ 26 ವರ್ಷದ ಪ್ರಾದೇಶಿಕ ಸೇನಾ ಸಿಬ್ಬಂದಿಯನ್ನು ಅಪಹರಿಸಿದ್ದರು ಎಂದು ಸೇನೆ ಇಂದು ದೃಢಪಡಿಸಿದೆ.

ಜಮ್ಮು-ಕಾಶ್ಮೀರ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ನಗರದಲ್ಲಿ ಖಾಸಗಿ ಬಸ್ಸೆಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಚಾಲಕನ ಓವರ್ ಟೇಕ್ ಅಟ್ಟಹಾಸ! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ಸುರಕ್ಷತೆಯನ್ನು ಲೆಕ್ಕಿಸದೆ ನಿರ್ಲಕ್ಷ್ಯತನದಿಂದ ಎದೆ ಝಲ್ಲೆನಿಸುವಂತೆ ಮಾಡಿದ್ದ ಬಸ್ ನ ಓವರ್ ಸ್ಪೀಡ್ ವಿಡಿಯೋಗಳು ಇದೀಗ ವೈರಲ್ ಆಗಿದೆ. ಮಂಗಳೂರು -ಮೂಡಬಿದ್ರೆ ರೂಟ್ ನಲ್ಲಿ ಸಂಚಾರಿಸುತ್ತಿದ್ದ ಜೈನ್ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಾಯಕಾರಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ಆರೋಪಿ 1 (A1) ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅನ್ನು ಆರೋಪಿ 2 (A2) ಎಂದು ಹೆಸರಿಸಿ ಎಫ್‌ಐಆರ್ ದಾಖಲಿಸಿದ್ದಾರೆ.  

ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top