ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಡಿಕೇರಿ, ಸೆ. 26. ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನೊ(50) ಮೃತಪಟ್ಟಿದ್ದಾರೆ. ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ವಾಹನ ಢಿಕ್ಕಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಸ್ಟಲಿನೊರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಯಾಲಿಫೋರ್ನಿಯಾದ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರ ಧ್ವಂಸಗೊಳಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com  ಕ್ಯಾಲಿಫೋರ್ನಿಯಾ, ಸೆ. 26. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಸೆಪ್ಟೆಂಬರ್ 25 ರ ರಾತ್ರಿ ಹಿಂದೂ ವಿರೋಧಿ ಸಂದೇಶಗಳೊಂದಿಗೆ ಧ್ವಂಸಗೊಳಿಸಲಾಯಿತು. ನ್ಯೂಯಾರ್ಕ್‌ನ ಮೆಲ್‌ವಿಲ್ಲೆಯಲ್ಲಿರುವ ಬ್ಯಾಪ್ಸ್ ಮಂದಿರದಲ್ಲಿ ಇದೇ ರೀತಿಯ ಘಟನೆ ನಡೆದ ಹತ್ತು ದಿನಗಳ ನಂತರ ಈ ಅಪವಿತ್ರ ಕೃತ್ಯವು ಸಂಭವಿಸಿದೆ. ನ್ಯೂಯಾರ್ಕ್​​ನಲ್ಲಿ ಸ್ವಾಮಿ ನಾರಾಯಣ ದೇವಾಲಯದ ಮೇಲೆ ನಡೆದ ದಾಳಿಯೂ ಕೂಡ ಕ್ಯಾಲಿಫೋರ್ನಿಯಾ ಹಾಗೂ ಕೆನಡಾದಲ್ಲಿ ನಡೆದ ಮಾದರಿಯಲ್ಲಿಯೇ ನಡೆದಿದೆ. ಇದರ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡವಿರುವ ಸಾಧ್ಯತೆ

ಕ್ಯಾಲಿಫೋರ್ನಿಯಾದ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರ ಧ್ವಂಸಗೊಳಿಸಿದ ಕಿಡಿಗೇಡಿಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಸೆ. 26. ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್(75) ಇಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸೆ.4ರಂದು ರಾಷ್ಟ್ರೀಯ ಹೆದ್ದಾರಿಯ ನೀಲೇಶ್ವರ ಕರುವೆಚ್ಚರಿ ಪೆಟ್ರೋಲ್ ಬಂಕ್ ಸಮೀಪ ಕುಂಞಿಕಣ್ಣನ್ ಸಂಚರಿಸುತ್ತಿದ್ದ ಕಾರು ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿತ್ತು. ಈ ವೇಳೆ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ

ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 26. ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಸೆ. 26. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಹುನಗುಂದ ತಾಲೂಕಿನ ಧನ್ನೂರ ಟೋಲ ನಾಕಾ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ. ಮೃತಪಟ್ಟವರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯ ನಿವಾಸಿಗಳಾದ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಕಾರು ಚಾಲಕ ಮುಹಮ್ಮದ್ ರಫೀಕ್ ಗುಡ್ನಾಳ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಹೊಸಪೇಟೆ ಬಳಿಯ ಹುಲಿಗೆಮ್ಮನ ದೇವಸ್ಥಾನದ ದರ್ಶನ ಮುಗಿಸಿಕೊಂಡು

ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಪುತ್ತೂರಿನಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆ ತರುತ್ತಿದ್ದ ಆ್ಯಂಬುಲೆನ್ಸ್ ಪಡೀಲು ಸಮೀಪ ಪಲ್ಟಿಯಾಗಿ ಗಂಭೀರ ಗಾಯಗೊಂಡ ರೋಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ. ಮೃತರನ್ನು ಕಡಬ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ. ದಾಸಪ್ಪ ರೈ ಅವರ ಪತ್ನಿ ನಳಿನಿ ರೈ (54), ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ.24ರಂದು ತಡರಾತ್ರಿ 1:30ರ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಅನಿಲ ಸಾಗಾಟದ ಟ್ಯಾಂಕರ್ ಲಾರಿ ರಸ್ತೆಗೆ ಮಗುಚಿ ಬಿದ್ದ ಘಟನೆ ಎಡನೀರು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಟ್ಯಾಂಕರ್ ಎಡನೀರು ಕೋರಿಕ್ಕಾರ್ ಮೂಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕಾಸರಗೋಡು ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವಿದ್ಯಾನಗರ ಠಾಣಾ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಂಗಳೂರಿನಿಂದ ಕಂಪೆನಿ ಅಧಿಕಾರಿಗಳು ಬಂದ ಬಳಿಕ ಟ್ಯಾಂಕರ್ ನ್ನು ತೆರವುಗೊಳಿಸುವ ಅಥವಾ ಅನಿಲವನ್ನು ಇನ್ನೊಂದು ಟ್ಯಾಂಕರ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಪ್ರೀತಿಯ ಹೆಸರಿಲ್ಲಿ ಮೋಸ, ದುಬಾರಿ ವಸ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ರಾಹುಲ್ ಚತುರ್ವೇದಿ ಎಂದು ಗುರುತಿಸಲಾಗಿದೆ. ರಾಹುಲ್ ಚತುರ್ವೇದಿ ಮ್ಯಾಟ್ರಿಮೋನಿ ಸೈಟ್ ಗಳಾದ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ರಚಿಸಿದ್ದಾನೆ. ಈ ಖಾತೆಗಳ ಮೂಲಕ ಆತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಐಐಎಂ ಪದವೀಧರನಾಗಿರುವ ಈತನನ್ನು ಬಿಸ್ರಖ್ ಪೊಲೀಸರು ಬಂಧಿಸಿದ್ದಾರೆ.  

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ. ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 25. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೋರ್ವರು ಮೃತಪಟ್ಟು, ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಮಂಗಳೂರು ಪಡೀಲು ಸಮೀಪ ನಡೆದಿದೆ. ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಎಂದು ಗುರುತಿಸಲಾಗಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top