ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಮಗುವೊಂದನ್ನು ಚಿಕಿತ್ಸೆಗೆಂದು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಆಂಬ್ಯುಲೆನ್ಸ್ ಅಪಘಾತಕ್ಕೀಡಾದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ. ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ […]

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ – ಎಸ್‌ಡಿಪಿಐ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಂಗಳೂರಿನಿಂದ ಹಿಂತಿರುಗುವ ಸಂದರ್ಭ ಹಿಂದೂ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತಿದ್ದನೆಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸರ್ಕಾರಿ ಬಸ್ಸಿನ ನಿರ್ವಾಹಕ ಥಳಿಸಿದ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮೀರಾಝ್ ಸುಳ್ಯ‌ರವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಬೆಂಗಳೂರಿನಿಂದ ಹಿಂತಿರುಗುವ ಸಾರ್ವಜನಿಕ ಸಾರಿಗೆ ಬಸ್‌ನಲ್ಲಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ – ಎಸ್‌ಡಿಪಿಐ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರವಾರ: ಉದ್ಯಮಿಯ ಹತ್ಯೆ ಪತ್ನಿಗೆ ಗಂಭೀರ ಗಾಯ-ದುಷ್ಕರ್ಮಿಗಳ ದಾಳಿ

(ನ್ಯೂಸ್ ಕಡಬ) newskadaba.com ಕಾರವಾರ ಸೆ.23: ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ ಉದ್ಯಮಿ ವಿನಾಯಕ ನಾಯ್ಕ (54) ಅವರನ್ನು ಹತ್ಯೆಗೈದು, ಅವರ ಪತ್ನಿ ವೈಶಾಲಿ ಅವರನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.ವಿನಾಯಕ ಮತ್ತು ವೈಶಾಲಿ ದಂಪತಿ ಪುಣೆ ನಗರದಲ್ಲಿ ವಾಸವಿದ್ದು, ಕೈಗಾರಿಕೋದ್ಯಮ ನಡೆಸುತ್ತಿದ್ದರು. ಅವರು ಇತ್ತೀಚೆಗೆ ಸಾತೇರಿ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಹಣಕೋಣಕ್ಕೆ ಬಂದಿದ್ದು, ತಮ್ಮ ಮನೆಯಲ್ಲಿಯೇ ವಾಸವಿದ್ದರು. ಇಂದು ಮುಂಜಾನೆ ದರೋಡೆಕೋರರು ದಂಪತಿಯ ಮೇಲೆ ದಾಳಿ ನಡೆಸಿದ್ದಾರೆ.

ಕಾರವಾರ: ಉದ್ಯಮಿಯ ಹತ್ಯೆ ಪತ್ನಿಗೆ ಗಂಭೀರ ಗಾಯ-ದುಷ್ಕರ್ಮಿಗಳ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 23. ಅಮೀಬಾ ಸೋಂಕಿ (ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್)ನಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ವರದಿಯಾಗಿದೆ. ಮೃತಪಟ್ಟವರನ್ನು ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಎಂದು ಗುರುತಿಸಲಾಗಿದೆ. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಕಡಿಮೆಯಾಗದ ಕಾರಣ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ನಡೆಸಿದ ತಪಾಸಣೆಯಿಂದ ಅಮಿಬಿಕ್ ಸೋಂಕು ದೃಢಪಟ್ಟಿತ್ತು. ಮುಂಬೈಯಿಂದ ಸೋಂಕು ತಗಲಿರಬಹುದು ಎಂದು

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 23. ಅಂಗನವಾಡಿಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಂಗಾವತಿ ನಗರದ ಮೈಬೂಬ್ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಂಗನವಾಡಿ ಕಟ್ಟಡ ನಿರ್ಮಾಣಗೊಂಡು ಕೇವಲ 7 ವರ್ಷಗಳಾಗಿದೆ. ಕಳಪೆ ಕಾಮಗಾರಿಯಿಂದ ಈ ಘಟನೆ ಸಂಭವಿಸಿದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಪಣತ್ತೂರು ಕೆರೆಯಲ್ಲಿ ಈಜಾಡುತ್ತಿದ್ದ 22 ವರ್ಷದ ಯುವಕ ಮಧ್ಯದಲ್ಲಿ ಸುಸ್ತಾಗಿ ದಡ ಸೇರಲು ಸಾಧ್ಯವಾಗದೆ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಾತ್ರಿ 9 ಗಂಟೆ ಸುಮಾರಿಗೆ ಮೃತದೇಹವನ್ನು ಕೆರೆಯಿಂದ ಹೊರತೆಗೆದರು. ಮೃತನನ್ನು ಪಣತ್ತೂರಿನ ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ. ಮೂಲತ: ನೇಪಾಳದವನಾಗಿದ್ದ ಈತ ಪೇಯಿಂಗ್ ಗೆಸ್ಟ್ ವಸತಿ ಗೃಹವೊಂದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  

ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 23. ರಾಷ್ಟ್ರಧ್ವಜದ ಮೇಲಿದ್ದ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರಗಳನ್ನು ಹಾಕಿ ಧ್ವಜ ಹಾರಿಸಿದ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಯುವಕರನ್ನು ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಮಹ್ಮದ್ ಆದಿನಾನ್ ಖಾಜಿ ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’

ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಟ: ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗಾಯಾಳು ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಸರ್ಕಾರ

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 23. ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನದ ಟ್ರಸ್ಟ್ ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಸರ್ಕಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ಹೊರಗೆ ಕಾಲಿಟ್ಟಾಗ ಬೆಂಕಿ ಕಾಣಿಸಿಕೊಂಡು ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಕಟ್ಟಡವನ್ನು

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top