ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಗಂಡಸಿನ ಮೃತದೇಹ ಪತ್ತೆ – ಹಲವು ಅನುಮಾನ

(ನ್ಯೂಸ್‌ ಕಡಬ) newskadaba.com ಮೇ. 22. ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ.   ಗೂಡಿನ ಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಎಂಬವರ ಮೃತದೇಹವು ಪಾಣೆಮಂಗಳೂರು ನೂತನ ಸೇತುವೆ ಕೆಳಭಾಗದಲ್ಲಿ ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಪೋಲೀಸರು ಹಾಗೂ ಗೂಡಿನ‌ಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ, […]

ನೇತ್ರಾವತಿ ನದಿಯಲ್ಲಿ ಗಂಡಸಿನ ಮೃತದೇಹ ಪತ್ತೆ – ಹಲವು ಅನುಮಾನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿತ್ತು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ ಗಾಂಜಾ!

(ನ್ಯೂಸ್‌ ಕಡಬ) newskadaba.com ಮೇ. 14. ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ನಡೆದ ಕಾರ್ಯಾಚರಣೆಯಲ್ಲಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ  ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಸುಹಾನಾ (21) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಅವರ ಬಳಿ ಇದ್ದ ಸುಮಾರು 35 ಸಾವಿರ ರೂ. ಮೌಲ್ಯದ ಸುಮಾರು 1

ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿತ್ತು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ ಗಾಂಜಾ! Read More »

ಕರಾವಳಿ, ಕ್ರೈಮ್ ನ್ಯೂಸ್

ರೋಡ್ ರೋಲರ್ ಅಡಿಗೆ ಬಿದ್ದು ಕಾರ್ಮಿಕ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಮೇ. 09. ರಸ್ತೆ ಕಾಮಗಾರಿ ಸಂದರ್ಭ ರೋಡ್ ರೋಲರ್‌ನ ಅಡಿಗೆ ಬಿದ್ದು ಉತ್ತರ ಭಾರತ ಮೂಲದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಶನಿವಾರದಂದು ನಡೆದಿದೆ. ಇಲ್ಲಿನ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭ ರಸ್ತೆ ಬದಿ ಮಲಗಿದ್ದ ಕಾರ್ಮಿಕನ ಮೇಲೆ ರೋಡ್ ರೋಲರ್ ಚಲಿಸಿದ ಪರಿಣಾಮ ಈತ ಮೃತಪಟ್ಟಿದ್ದು, ಘಟನೆಯಿಂದ ಈತನ ದೇಹವಿಡೀ ಅಪ್ಪಚ್ಚಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ರೋಡ್ ರೋಲರ್ ಅಡಿಗೆ ಬಿದ್ದು ಕಾರ್ಮಿಕ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ: ಸ್ನಾನಕ್ಕೆಂದು ನೀರಿಗಿಳಿದಿದ್ದ ಯುವಕ ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಏ. 27. ಸ್ನಾನಕ್ಕೆಂದು ಇಳಿದಿದ್ದ ಯುವಕನೋರ್ವ ರಕ್ಷಿತ್ (26) ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ತಾಲೂಕಿನ ಐತ್ತೂರು ಗ್ರಾಮದ ಅರಬ್ಬಿ ತೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಮೂಲತಃ ಮರ್ದಾಳ ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಈತ, ಸೋಮವಾರ ಸಂಜೆ ಸ್ನೇಹಿತರೊಂದಿಗೆ ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಮರ್ಧಾಳ: ಸ್ನಾನಕ್ಕೆಂದು ನೀರಿಗಿಳಿದಿದ್ದ ಯುವಕ ನೀರುಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ಎಎಸ್‌ಐ ಐತಪ್ಪ ಕೊಲೆ ಯತ್ನ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ‘ರೆಡ್ ಕಾರ್ನರ್’ ನೋಟಿಸ್

(ನ್ಯೂಸ್‌ ಕಡಬ) newskadaba.com,  ಎ.09  ಎಎಸ್‌ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಈ ಹಿಂದೆ ಆರೋಪಿ ಸಫ್ವಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ

ಎಎಸ್‌ಐ ಐತಪ್ಪ ಕೊಲೆ ಯತ್ನ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ‘ರೆಡ್ ಕಾರ್ನರ್’ ನೋಟಿಸ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೀನುಗಾರಿಕಾ ಬಂದರು ಸಮೀಪ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ, ತನಿಖೆ ಚುರುಕು.

(ನ್ಯೂಸ್‌ ಕಡಬ) newskadaba.com,  ಎ.09 ನಗರದ ಮೀನುಗಾರಿಕಾ ಬಂದರಿನ ಸಮೀಪವಿರುವ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ಬೆಂಗ್ರೆ ನಿವಾಸಿ ಮೊಹಿದ್ದೀನ್ ನಾಸಿರ್ (50) ಎಂದು ಗುರುತಿಸಲಾಗಿದೆ. ನದಿಯ ದಡದ ನೀರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಅಪರಿಚಿತ ವ್ಯಕ್ತಿಗಳು ಇವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಫೋನ್

ಮಂಗಳೂರು: ಮೀನುಗಾರಿಕಾ ಬಂದರು ಸಮೀಪ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ, ತನಿಖೆ ಚುರುಕು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಸ್ರೇಲ್ ಪ್ರಯಾಣಿಕರಿಗೆ ಸಂಕಷ್ಟ: ಮೇ 31ರವರೆಗೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ

(ನ್ಯೂಸ್‌ ಕಡಬ) newskadaba.com,  ಎ.06: ಮೇ 31ರ ವರೆಗೆ ಹೊಸದಿಲ್ಲಿ-ಟೆಲ್ ಅವಿವ್ ಮಾರ್ಗದಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾದ ಕಾರ್ಯನಿರ್ವಹಣಾಧಿಕಾರಿ ರವಿವಾರ ದೃಢಪಡಿಸಿದ್ದಾರೆ. ಹೆಚ್ಚಿನ ಪ್ರಮುಖ ವಿಮಾನ ಯಾನ ಸಂಸ್ಥೆಗಳು ಟೆಲ್ ಅವೀವ್ ಮಾರ್ಗದಲ್ಲಿ ತಮ್ಮ ವಿಮಾನಗಳ ಸಂಚಾರಗಳನ್ನು ರದ್ದುಗೊಳಿಸಿವೆ. ಆದರೆ, ಇಐ ಎಐ, ಇಸ್ರಾಏರ್, ಆರ್ಕಿಯಾ ಹಾಗೂ ಏರ್ ಹೈಫಾದಂತಹ ಇಸ್ರೇಲ್‌ನ ವಿಮಾನ ಯಾನ ಸಂಸ್ಥೆಗಳ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ಅಡಿಯಲ್ಲಿ ಸಂಚರಿಸುತ್ತಿವೆ. ವಿಮಾನಗಳ ಸಂಚಾರ ಸ್ಥಗಿತಗೊಳಿಸಿರುವುದು ಇಸ್ರೇಲ್‌ನಲ್ಲಿ ವಾಸಿಸುವ 40

ಇಸ್ರೇಲ್ ಪ್ರಯಾಣಿಕರಿಗೆ ಸಂಕಷ್ಟ: ಮೇ 31ರವರೆಗೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಲ್‌ಪಿಜಿ ಕೊರತೆ; ಪ್ರಯಾಣಿಕರಿಂದ 10% ಹೆಚ್ಚಿಗೆ ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು!

(ನ್ಯೂಸ್‌ ಕಡಬ) newskadaba.com,  ಎ.04:  ಮಧ್ಯಪ್ರಾಚ್ಯ ಯುದ್ಧದಿಂದಾಗಿ ಆಟೋ ಗ್ಯಾಸ್‌ಗೆ ಅಭಾವ, ಗ್ಯಾಸ್‌ ಬಂಕ್‌ನವರಿಂದ ದುಬಾರಿ ದರ ವಸೂಲಿಯಿಂದಾಗಿ ಕೆಲ ಆಟೋ ಚಾಲಕರು ಶೇ.10 ರಷ್ಟು ಬಾಡಿಗೆ ಹಣವನ್ನು ಹೆಚ್ಚುವರಿಯಾಗಿ ನೀಡಿ ಎಂದು ಪ್ರಯಾಣಿಕರಲ್ಲಿ ಮನವಿ ಮಾಡುತ್ತಿದ್ದಾರೆ. ಗಂಟೆಗಟ್ಟಲೆ ಕಾದರೂ ಆಟೋ ಗ್ಯಾಸ್‌ ಸಿಗುತ್ತಿಲ್ಲ. ಮತ್ತೊಂದೆಡೆ ಗ್ಯಾಸ್‌ ಬಂಕ್‌ನವರು ದುಬಾರಿ ದರಕ್ಕೆ ಗ್ಯಾಸ್‌ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರು ಹೆಚ್ಚುವರಿಯಾಗಿ ಶೇ.10 ರಷ್ಟು ಬಾಡಿಗೆ ನೀಡಬೇಕು ಎಂದು ಬೆಂಗಳೂರು ಆಟೋ ಸೇನೆ ಹೆಸರಿನಲ್ಲಿ ಮೀಟರ್‌ ಬಳಿ ಬೋರ್ಡ್‌ಗಳನ್ನು

ಎಲ್‌ಪಿಜಿ ಕೊರತೆ; ಪ್ರಯಾಣಿಕರಿಂದ 10% ಹೆಚ್ಚಿಗೆ ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅಮಾನುಷವಾಗಿ ಅಕ್ರಮ ಜಾನುವಾರು ಸಾಗಾಟ 18 ಜಾನುವಾರುಗಳು ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಎ.03. ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು ಸುಮಾರು 18 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಬಯಲಿಗೆಳೆದಿದ್ದಾರೆ‌. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನ ಒಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಓರ್ವನನ್ನು ಬಂಧಿಸಿದ್ದು ಮತ್ತೋರ್ವ

ಕಡಬ: ಅಮಾನುಷವಾಗಿ ಅಕ್ರಮ ಜಾನುವಾರು ಸಾಗಾಟ 18 ಜಾನುವಾರುಗಳು ವಶಕ್ಕೆ, ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ ಆರಿಫ್ ಕೊಲೆ ಪ್ರಕರಣ: ತನಿಖೆ ಚುರುಕು, ಆರು ಮಂದಿ ಆರೋಪಿಗಳ ಗುರುತು ಪತ್ತೆ

(ನ್ಯೂಸ್‌ ಕಡಬ) newskadaba.com, ಮಾ 31 ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ (40) ಕೊಲೆ ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್‌ನನ್ನು ತೊಕ್ಕೊಟ್ಟು ಫ್ಲೈ ಓವರ್ ಬಳಿ ತಂಡವೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿತ್ತು ಎನ್ನಲಾಗಿದೆ. ಪೊಲೀಸರಿಗೆ ಸವಾಲಾಗಿರುವ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಆಯುಕ್ತರು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಿಕೊಟ್ಟಿದ್ದಾರೆ. ತನಿಖೆ ಆರಂಭಿಸಿರುವ ಸಿಸಿಬಿ ಪೊಲೀಸರು ಶಂಕಿತ

ಉಳ್ಳಾಲ ಆರಿಫ್ ಕೊಲೆ ಪ್ರಕರಣ: ತನಿಖೆ ಚುರುಕು, ಆರು ಮಂದಿ ಆರೋಪಿಗಳ ಗುರುತು ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top