ಕ್ರೈಮ್ ನ್ಯೂಸ್

ಕೆರೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 19.  ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕ ಬುಧವಾರ ರಾತ್ರಿ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ (28) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್ ಮೊಬೈಲ್ ಲೊಕೇಶನ್ ಕೋಟೇಶ್ವರ ಕೆರೆ ಬಳಿಯಲ್ಲಿ ತೋರಿಸುತ್ತಿತ್ತು ಎನ್ನಲಾಗಿದೆ. ಅಲ್ಲಿ ಹೋದಾಗ […]

ಕೆರೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇ.40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ: ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಸಹೋದರರು..!

(ನ್ಯೂಸ್ ಕಡಬ) newskadaba.com ತುಮಕೂರು, ಸೆ. 19. ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನಿರಾಕರಿಸಿದ ನಂತರ ಇಬ್ಬರು ಸಹೋದರರು ತಮ್ಮ ಮೃತ ತಂದೆಯ ಶವವನ್ನು ಮೋಟಾರ್ ಬೈಕ್ ನಲ್ಲಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈಎನ್ ಹೊಸಕೋಟೆ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಸಹೋದರರಾದ ಚಂದ್ರಣ್ಣ ಮತ್ತು ಗೋಪಾಲಪ್ಪ ಅವರು ಶವವನ್ನು ಆಸ್ಪತ್ರೆಯಿಂದ ಸುಮಾರು 3-4 ಕಿಮೀ ದೂರದಲ್ಲಿರುವ ದಳವಾಯಿಹಳ್ಳಿ ಗ್ರಾಮಕ್ಕೆ ಸಾಗಿಸಿದ್ದಾರೆ. ಅಸ್ವಸ್ಥರಾಗಿದ್ದ ತಮ್ಮ ತಂದೆ ಗುಡುಗುಳ್ಳ ಹೊನ್ನೂರಪ್ಪ (80) ಅವರನ್ನು ಆಂಬ್ಯುಲೆನ್ಸ್ ಮೂಲಕ

ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ: ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಸಹೋದರರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ರಕ್ಷಣಾ ಸಚಿವಾಲಯದೊಂದಿಗೆ ಸಂಯೋಜಿತವಾಗಿರುವ ನಗರದ ಸೈನಿಕ ಶಾಲೆಯೊಂದಕ್ಕೆ ಬುಧವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತದ ನಂತರ ಶಾಲಾ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಲಾಯಿತು. ಮಧ್ಯಾಹ್ನ 12.30 ರ ಸುಮಾರಿಗೆ ಶಾಲಾ ಆವರಣದಲ್ಲಿ ಸ್ಪೋಟಕ ಇಡಲಾಗಿದೆ ಎಂದು ಶಾಲೆಗೆ ಅನಾಮಧೇಯ ಇಮೇಲ್ ಬಂದಿದೆ. ಇದರಿಂದ ಆತಂಕಕ್ಕೀಡಾದ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ

ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ರಾಮನಗರ, ಸೆ. 19. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬುಧವಾರದಂದು 40 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದು, ಮುನಿರತ್ನ ಹಾಗೂ ಅವರ ಗನ್‌ಮ್ಯಾನ್‌ ವಿಜಯಕುಮಾರ್, ಸುಧಾಕರ, ಕಿರಣ್‌ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕುಂತೂರು ಚರ್ಚ್ ಬಳಿ ನಡೆದಿದೆ. ಕುಂತೂರು ಕೆಮ್ಮಣ್ಣು ನಿವಾಸಿ ಶಶಿಧರ ಎಂಬವರು ಆಲಂಕಾರಿನಿಂದ ಕುಂತೂರಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆ ಹೋಗುತ್ತಿದ್ದ ಉಮೇಶ ಎಂಬವರು ತನ್ನ ಬೈಕನ್ನು ಯಾವುದೇ ಮುನ್ಸೂಚನೆ ನೀಡದೇ ಒಮ್ಮಲೇ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಬೈಕ್ ಗೆ ಢಿಕ್ಕಿಯಾಗಿ ಸವಾರ ಸಹಿತ ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಹವ್ಯಾಸಿ ಗಾಯಕರಾಗಿ ಚಿರಪರಿಚಿತರಾಗಿದ್ದ ಕುಟ್ರುಪ್ಪಾಡಿ ಗ್ರಾಮದ ಬಾಬು ಸಂಪಡ್ಕ ರವರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ವರದಿಯಾಗಿದೆ. ಕಡಬದ ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸಿ ಎಲ್ಲರಿಗೂ ಪರಿಚಿತರಾಗಿದ್ದ ಇವರು, ಬಳಿಕ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಬಾಬು ಸಂಪಡ್ಕ ಅವರು ಹಲವಾರು ಕಡೆಗಳಲ್ಲಿ ಗಾಯನ, ಭಜನೆ, ನೃತ್ಯಗಳ ಮೂಲಕ ಜನರ ಪ್ರೀತಿ ಗಳಿಸಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ

ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ.ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ‌ ಎಂದರು. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ

ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಎಂಟಿಸಿ ಬಸ್ ಹರಿದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಮೃತಪಟ್ಟ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ವಿಶೇಷ ಚೇತನ ಯುವಕನೋರ್ವ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ನಿಯಂತ್ರಣ ಸಿಗದೇ ಯುವಕನ ಮೇಲೆಯೇ ಹರಿದಿದ್ದು, ಪರಿಣಾಮ ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆನ್ನಲಾಗಿದೆ.

ಬಿಎಂಟಿಸಿ ಬಸ್ ಹರಿದು ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್ ನಿರ್ಮಾಪಕ ಕೋಡಳ್ಳಿ ಶಿವರಾಂ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದ ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದಾರೆ. ಕೋಡಳ್ಳಿ ಶಿವರಾಮ್ ಅವರು ಕನ್ನಡದ ಚಲನಚಿತ್ರಗಳಾದ ಗ್ರಹಣ, ಬೆಳ್ಳಿ ಬೆಳಕು ಸೇರಿದಂತೆ ಇತರೆ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದರು.

ಸ್ಯಾಂಡಲ್ ವುಡ್ ನಿರ್ಮಾಪಕ ಕೋಡಳ್ಳಿ ಶಿವರಾಂ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top