ಕ್ರೈಮ್ ನ್ಯೂಸ್

Theft, crime, Robbery

ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 18. ಮನೆಯ‌ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು‌ ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ದೂರಿನ ಪ್ರಕಾರ, ವಿಟ್ಲಪಡ್ನೂರು‌ ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ಎಂಬವರು ಮಂಗಳವಾರದಂದು ಮನೆಯ ಬಾಗಿಲುಗಳನ್ನು ಭದ್ರಪಡಿಸಿ, ಮಗಳೊಂದಿಗೆ ಕೊಡಂಗಾಯಿಗೆ ತೆರಳಿದ್ದು, ಮಧ್ಯಾಹ್ನ ವೇಳೆ ಹಿಂತಿರುಗಿ ಬಂದಾಗ ಮನೆಯ ಹಿಂಬಾಗದ ಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿತ್ತು. ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ ಕೋಣೆಯೊಂದರ ಕಪಾಟಿನ […]

ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಕಂಟೈನರ್ ಢಿಕ್ಕಿ- ಸಹಸವಾರೆ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸ್ಕೂಟರ್‌ಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಸಹಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕೂಳೂರು ಬಳಿ ನಡೆದಿದೆ. ಮೃತ ಸಹಸವಾರೆಯನ್ನು ಲಾವಣ್ಯ (27) ಎಂದು ಗುರುತಿಸಲಾಗಿದೆ. ಶಕೀಲ್ ಸುವರ್ಣ ಎಂಬವರು ಪತ್ನಿ ಲಾವಣ್ಯ ಅವರೊಂದಿಗೆ ಪಣಂಬೂರಿನಿಂದ ಕಾವೂರು ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕೂಳೂರು ನದಿ ಸೇತುವೆಯಲ್ಲಿ ಪಣಂಬೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದಾಗಿ ಶಕೀಲ್ ಸುವರ್ಣ ಮತ್ತು ಲಾವಣ್ಯ ಸ್ಕೂಟರ್ ಸಮೇತ ರಸ್ತೆಗೆ

ಸ್ಕೂಟರ್ ಗೆ ಕಂಟೈನರ್ ಢಿಕ್ಕಿ- ಸಹಸವಾರೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಪತ್ನಿ ರುಂಡ ಕಡಿದು ಕೈಯಲ್ಲಿ ಹಿಡಿದು ಓಡಾಡುತ್ತಿದ್ದ ಪತಿಯ ಬಂಧನ

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 18. ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಕುರಿತು ಮಾಧೇಪುರದ ಶ್ರೀನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಪೊಖಾರಿಯಾದಿಂದ ವರದಿಯಾಗಿದೆ. ಅರ್ಜುನ್‌ ಶರ್ಮಾ ಎಂಬಾತ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಚಾಕುವಿನಿಂದ ಕತ್ತು ಸೀಳಿ ಆಕೆಯನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಕಾರ್ಯಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಡಿಎಸ್‌‍ಪಿ ಮನೋಜ್‌ ಮೋಹನ್‌ ತಿಳಿಸಿರುವುದಾಗಿ

ಪತ್ನಿ ರುಂಡ ಕಡಿದು ಕೈಯಲ್ಲಿ ಹಿಡಿದು ಓಡಾಡುತ್ತಿದ್ದ ಪತಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾವೇರಿ, ಸೆ. 18. ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮುಂಜಾನೆ ನಡೆದಿದೆ. ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಸರ್ವೀಸ್ ರಸ್ತೆಗೆ ಉರುಳಿಬಿದ್ದಿದೆ. ಇದರಿಂದ 15ಕ್ಕೂ ಅಧಿಕ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.  

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ವಿಧಿವಶ

(ನ್ಯೂಸ್ ಕಡಬ) newskadaba.com ಯಾದಗಿರಿ, ಸೆ. 18. ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರ ದಿ.ವಿಶ್ವನಾಥರೆಡ್ಡಿ ಮುದ್ನಾಳ ಅವರ ಪುತ್ರ, ಮಾಜಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ (70) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡರಾಗಿದ್ದ ಅವರು ಕಳೆದ ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 2018ರಲ್ಲಿ ಬಿಜೆಪಿಯಿಂದ ಯಾದಗಿರಿ ಮತಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮುದ್ನಾಳ ಅವರು 2023ರಲ್ಲಿ ಪರಾಭವಗೊಂಡಿದ್ದರು.

ಮಾಜಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಓರ್ವ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕುದೂರು ಸಮೀಪದ ಭದ್ರಾಪುರ ಗೇಟ್ ಬಳಿ ನಡೆದಿದೆ. ಕುಣಿಗಲ್ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆನ್ನಲಾಗಿದೆ. ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 18. ಅಡುಗೆ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ನಿಟ್ರೆ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕು ನಿಟ್ರೆ ಗ್ರಾಮದ ಹಲವೆಡೆ ಅಬ್ಕಾರಿ ಅಧಿಕಾರಿಗಳು ಸಾಮೂಹಿಕ ದಾಳಿ ನಡೆಸಿದಾಗ ಗ್ರಾಮದ ಮಂಜು ಎಂಬ ಮನೆಯಲ್ಲಿ ಅಡುಗೆ ಕೋಣೆಯಲ್ಲಿ ನಿರ್ಮಿಸಿಕೊಂಡಿದ್ದ ರಹಸ್ಯ ಗೂಡಿನಲ್ಲಿ ಮದ್ಯ ಹಾಗೂ ಬಿಯರ್ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಮಂಜುರವರ ಮನೆಯ ಅಡುಗೆ ಮನೆಯ ರಹಸ್ಯಗೂಡಿನಲ್ಲಿ 8 ಲೀಟರ್

ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿಯ ಮಾಜಿ ಕಾರ್ಯದರ್ಶಿ ಬಿ.ಕೆ ಕೃಷ್ಣಪ ಸೆ.17 ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಕೃಷ್ಣಪ್ಪ ಅವರು ಸಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ರಾಜ್ಯ ಶಿಸ್ತು ಸಮಿತಿ ಸದಸ್ಯರಾಗಿಯೂ ದುಡಿದಿದ್ದಾರೆ. ಅವರು ಎಐಟಿಯುಸಿಯ ಜಿಲ್ಲಾ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ

ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಎರಡೂವರೆ ವರ್ಷಗಳ ಹಿಂದೆ ನಗರದ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್ ಹಾರ್ಟ್ ಎಂಬಲ್ಲಿನ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾರ್ಕಳದ ಬೆಳ್ಮಣ್ ನಿವಾಸಿ ರೋಹಿತ್ ಮಥಾಯಿಸ್ ಎಂದು ಗುರುತಿಸಲಾಗಿದೆ. ಆರೋಪಿ ಮಥಾಯಿಸ್ ಮುಂಬೈಗೆ ಪರಾರಿಯಾಗಿದ್ದನು. ಬಂಧಿತ ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಬೆಳಗಾವಿ, ಸೆ. 18. ಗಣೇಶ ವಿಸರ್ಜನೆಯ ವೇಳೆ ನಡೆದ ಚಾಕು ಇರಿತದಿಂದಾಗಿ ಮೂವರು ಗಾಯಗೊಂಡ ಘಟನೆ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರವೀಣ್ ಗುಂಡ್ಯಾಗೋಳ್ ಎಂಬವರ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಇಬ್ಬರಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ಮೂಲಗಳು ತಿಳಿಸಿವೆ. ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಹುಡುಗರು

ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top