ಕ್ರೈಮ್ ನ್ಯೂಸ್

ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11. ಸ್ಕೂಟರ್ ಪಲ್ಟಿಯಾದ ಪರಿಣಾಮ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳವಾರದಂದು ಮಧ್ಯರಾತ್ರಿ ತ್ಯಾಗರಾಜನಗರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡ ಎಂಬವರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಲ್ಲಿ ಶ್ರೀ ಗಣೇಶನ ಶೋಭಾಯಾತ್ರೆ ನೋಡಿಕೊಂಡು ಮನೆಗೆ ತನ್ನ ಸ್ಕೂಟರ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಗಂಭೀರ ಗಾಯಗೊಂಡ ಕೀರ್ತನ್ ಗೌಡರವರನ್ನು ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದು ಅಲ್ಲಿಂದ […]

ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ಮಾರ್ಬಲ್ ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಹಮ್ಮದ್ ಶರೀಫ್ ಎಂಬಾತ ತಾನು ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ನಂಬಿಸಿದ್ದ. ಅಲ್ಲದೆ ತನ್ನಿಂದ ಹಂತ ಹಂತವಾಗಿ 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                          

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 10.  ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ಪ್ರದೇಶದಲ್ಲಿ ವಾಷಿಂಗ್ ಮೆಷಿನ್ ನಲ್ಲಿ ಮೂರು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಮಹಿಳೆಯನ್ನು ಬಂಧಿಸಲಾಗಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ವಾಷಿಂಗ್ ಮೆಷಿನ್ ನಲ್ಲಿ ಮರೆಮಾಡಿದ ಆರೋಪದ ಮೇಲೆ 40 ವರ್ಷದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿಗೆ ತೆರಳುವ ಮುನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ನಮ್ಮ ನೆರೆಯ ಮನೆಯವರ ಜೊತೆ ತಕರಾರಿದ್ದು ಅವರ ಮನೆಯಲ್ಲಿ ಹುಡುಕಾಟ

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 10.  ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಸಹಾಯಕ ಬ್ಯಾರಿ ಮ್ಯಾಕ್ಫರ್ಸನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಜೇಮ್ಸ್ ಎರ್ಲ್ ಜೋನ್ಸ್ ಅವರು ‘ದಿ ಲಯನ್ ಕಿಂಗ್’ ಕಾರ್ಟೂನ್ ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ‘ಸ್ಟಾರ್ ವಾರ್ಸ್ ’ ಸೇರಿದಂತೆ ಹಲವು ಖ್ಯಾತ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಡುವುದರ ಜತೆಗೆ ರಂಗಭೂಮಿ ಕಲಾವಿದರಾಗಿಯೂ

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೈರೋ, ಸೆ. 10. ದಕ್ಷಿಣ ಗಾಝಾದಲ್ಲಿ ನಿರಾಶ್ರಿತ ಫೆಲೆಸ್ತೀನಿಯರಿದ್ದ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ 40 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹಮಾಸ್ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಆದರೆ ಅಮಾಯಕ ನಾಗರಿಕರನ್ನು ಗುರಿ ಮಾಡಲಾಗಿದೆ ಎಂದು ಹಮಾಸ್ ಹೇಳಿಕೊಂಡಿದೆ. ಯುದ್ಧ ಪೀಡಿತ ಗಾಝಾದ ಅಲ್-ಮವಾಸಿ ಪ್ರದೇಶದಲ್ಲಿನ ಖಾನ್ ಯೂನಿಸ್ ನಗರದಲ್ಲಿ ಕಿಕ್ಕಿರಿದ ಜನಸಂಖ್ಯೆಯಿದ್ದ ನಿರಾಶ್ರಿತರ

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..!

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಸೆ. 10. ಕುಡಿದ ಮತ್ತಿನಲ್ಲಿ ಮಗನೋರ್ವ ತಾಯಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರತ್ನಮ್ಮ ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ರತ್ನಮ ಮಗ ಗಂಗರಾಜು ವಾಸವಾಗಿದ್ದು, ಕುಡಿತದ ದಾಸನಾಗಿದ್ದ ಪುತ್ರ ಆಗಾಗ್ಗೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಎಂದಿನಂತೆ ನಿನ್ನೆಯೂ ಕಂಠಪೂರ್ತಿ ಕುಡಿದುಬಂದ ಮಗ ತಾಯಿಯೊಂದಿಗೆ ಜಗಳವಾಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಗ ಚಾಕುವಿನಿಂದ ತಾಯಿಯನ್ನು ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 10. ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಜನರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಸರಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಗುರಿಯಾಗಿರಿಸಿ ಗಾಳ ಹಾಕ್ತಿದ್ದ ಗ್ಯಾಂಗ್, ಯುವತಿಯರನ್ನು ಮುಂದೆ ಬಿಟ್ಟು ಲಾಡ್ಜ್ ಗೆ ಕರೆಸುತ್ತಿದ್ದು, ನಂತರ ತಾವೇ ದಾಳಿ ನಡೆಸಿ, ಪೋಟೋ-ವಿಡಿಯೋ ಚಿತ್ರೀಕರಿಸಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದರು ಎಂದು

ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!   

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 10.  ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮೈಸೂರಿನ ರಾಘವೇಂದ್ರ ಬಡಾವಣೆ ನಿವಾಸಿಯಾದ ಹುಣಸೂರು, ಕೆ.ಆರ್.ನಗರದಲ್ಲಿನ ಅಶ್ವಿನಿ ಡಯಾಗ್ನಸ್ಟಿಕ್ ಸೆಂಟರ್‍ನ ಶಂಕರ ಜಿ.ಎನ್., ಪಾಂಡವಪುರ ತಾಲೂಕು ಹಿರೇಮರಳಿ ಗ್ರಾಮದ ನವೀನ್ ಎಚ್.ಕೆ. ಹಾಗೂ ಪಾಂಡವಪುರ ತಾಲೂಕು ಹರಳಹಳ್ಳಿ ಗ್ರಾಮದ ಜಬ್ಬರ್ ಎಂದು ಗುರುತಿಸಲಾಗಿದೆ. ಪ್ರಕರಣದ ಈ ಆರೋಪಿಗಳನ್ನು ರವಿವಾರ ಬಂಧಿಸಿ ಅವರಿಂದ

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                 

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು ಹಾಸನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು,

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top