ಕ್ರೈಮ್ ನ್ಯೂಸ್

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 27. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೊಕ್ಕೊಟ್ಟು ಫೈ ಓವರಲ್ಲಿ ಶುಕ್ರವಾರ ನಸುಕಿನ 3.30ರ ಸುಮಾರಿಗೆ ನಡೆದಿದೆ. ಕೊಲೆಯಾದವರನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಎಂದು ಗುರುತಿಸಲಾಗಿದೆ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಆತನ ಮೇಲೆ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ನಲ್ಲಿ ದಾಳಿ […]

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ದೂರು ದಾಖಲು

(ನ್ಯೂಸ್‌ ಕಡಬ) newskadaba.com ಮಾ. 17. ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಲು ಆಮಿಷವೊಡ್ಡಿ 25.85 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ನಿವೃತ್ತಿ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ವಾಟ್ಸ್‌ ಆ್ಯಪ್‌ ಮೂಲಕ ಬಂದ ಟ್ರೇಡಿಂಗ್ ಮಾಹಿತಿಯ ಸಂದೇಶವನ್ನು ಪರಿಶೀಲಿಸಿ, ಸಂದೇಶ ಕಳುಹಿಸಿದವರೊಂದಿಗೆ ವಾಟ್ಸ್‌ ಆ್ಯಪ್‌ ನಲ್ಲಿ ಚಾಟಿಂಗ್ ನಡೆಸಿದ್ದರು. ಬಳಿಕ ಆರೋಪಿಗಳು ವಿವಿಧ ವಾಟ್ಸ್‌ಆ್ಯಪ್ ಗ್ರೂಪ್‌ಗಳಿಗೆ ಅವರನ್ನು ಸೇರಿಸಿ ಶೇ.25 ಲಾಭಾಂಶ ನೀಡಲಾಗುವುದು ಎಂದು ತಿಳಿಸಿ ಜ.21ರಿಂದ

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಾದಕ ವಸ್ತು ಸೇವನೆ ಆರೋಪ- 6 ಮಂದಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಮಾ. 17. ಸಾರ್ವಜನಿಕ ಸ್ಥಳದಲ್ಲಿ ವಿವಿಧೆಡೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಡಿಯಲ್ಲಿ ಆರು ಮಂದಿ ಯುವಕರನ್ನು ಕಂಕನಾಡಿ ನಗರ ಹಾಗೂ ಕಾವೂರು ಠಾಣೆಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಕಿರಣ ಪ್ರಸಾದ್ (22), ಸಲ್ಮಾನ್ (18), ಪ್ರಜ್ವಲ್ (23), ಕಾರ್ತಿಕ್ (24), ಪ್ರಜ್ವಲ್ ಅಶ್ವತ್ಥ್ ವೇಗಸ್ (25) ಮತ್ತು ಅನ್ಸಿಲ್ ಗ್ರಿಪ್ಥ್ ಅಲ್ಪ್ರೇಡ್ (24) ಎಂದು ಗುರುತಿಸಲಾಗಿದೆ.

ಮಾದಕ ವಸ್ತು ಸೇವನೆ ಆರೋಪ- 6 ಮಂದಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com ಮಾ. 17. ಕಡಬ ತಾಲೂಕಿನ ನೆಲ್ಯಾಡಿ ನಿವಾಸಿಯೊಬ್ಬರು ಉಡುಪಿ ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣ ಸಮೀಪದ ವಸತಿ ಗೃಹದ ಬಾಡಿಗೆ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸಮಜಲು ಗುಡ್ಡೆ ನಿವಾಸಿ ಮಥಾಯಿ ಅವರ ಪುತ್ರ ಜಿನ್ಸನ್‌ ಪಿ ಎಂ ಎಂದು ಗುರುತಿಸಲಾಗಿದೆ. ಮಂಗಳೂರು ಬರ್ಕೆಯ ಕೋಸ್ಟಲ್‌ ಗಾರ್ಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಜಿನ್ಸನ್‌ ಅವರು ಪತ್ನಿ ಇಬ್ಬರು ಮಕ್ಕಳ

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಬೈಕ್ ಢಿಕ್ಕಿ- 5 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್‌ ಕಡಬ) newskadaba.com ಮಾ. 17. ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ 5 ವರ್ಷದ ಬಾಲಕಿ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಸಮೀಪ ನಡೆದಿದೆ.   ತಣ್ಣೀರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್‌ ಎಂಬವರು ತಮ್ಮ ಮಗಳು ಸಾಜಿರಾ (33) ಹಾಗೂ ಮೊಮ್ಮಗಳು ಸುಹೈರಾ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ತೆರಳುತ್ತಿದ್ದಾಗ ವಿರುದ್ದ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರು ಬೈಕ್ ಢಿಕ್ಕಿ- 5 ವರ್ಷದ ಬಾಲಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

  ಮದ್ಯದ ಮತ್ತಿನಲ್ಲಿ ಪತ್ನಿ ಹತ್ಯೆ: ಆರೋಪಿ ಪತಿ ಪರಾರಿ (ನ್ಯೂಸ್‌ ಕಡಬ) newskadaba.com,  ಮಾ.16: Bengaluru: ಮದ್ಯದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ MICO Layout ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಳನ್ನು ಗೌರಮ್ಮ (45) ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿದ ಬಳಿಕ ಆರೋಪಿ ಪತಿ ನಾಗರಾಜ್ ಪರಾರಿಯಾಗಿದ್ದಾನೆ. ಮೂಲತಃ Jagalur Taluk ನಿವಾಸಿಗಳಾದ ಈ ದಂಪತಿಗಳು ಉದ್ಯೋಗದ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು. ನಾಗರಾಜ್ ಖಾಸಗಿ

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋಳಿ ಅಂಕಕ್ಕೆ ದಾಳಿ- ಐವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 15. ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 4 ಹುಂಜಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಎಂಬಲ್ಲಿ ನಡೆದಿದೆ. ಕೊಡಂಬೆಟ್ಟು ಗ್ರಾಮದ ಮುಗೇರ ಮನೆಯ ಅಂಕಿತ್, ಉರುಡಾಯಿ ನಿವಾಸಿ ಯಶೋಧರ, ಮುಗೇರ ಮನೆಯ ಶಿವಪ್ಪ, ತಣ್ಣೀರುಪಂಥ ಗ್ರಾಮದ ಮುಂದಿ ಮನೆಯ ಕರುಣಾಕರ ಪೂಜಾರಿ, ಮಚ್ಚಿನ ಗ್ರಾಮದ ಮಡಕ್ಕಿಲ ಮನೆಯ ಉಮೇಶ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಥಳದಿಂದ

ಕೋಳಿ ಅಂಕಕ್ಕೆ ದಾಳಿ- ಐವರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಇಬ್ಬರು ಯುವಕರಿಗೆ ಚೂರಿ ಇರಿತ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 15. ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಸುಳ್ಯದ ಶ್ರೀರಾಂಪೇಟೆಯಲ್ಲಿ ಶನಿವಾರ ಸಂಜೆ ನಡೆದಿದೆ. ಚೂರಿ ಇರಿತಕ್ಕೊಳಗಾದ ಯುವಕರನ್ನು ಸುಳ್ಯ ಬೀರಮಂಗಲ ಬಂಗ್ಲಗುಡ್ಡೆ ನಿವಾಸಿಗಳಾದ ಹರೀಶ್ ಬಂಗ್ಲಗುಡ್ಡೆ ಹಾಗೂ ನಿತೇಶ್ ಕೆ.ಆರ್. ಬಂಗ್ಲಗುಡ್ಡೆ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಾದ ಅಜ್ಜಾವರ ಗ್ರಾಮದ ಕಾಂತಮಂಗಲ ಗಂಧದಗುಡ್ಡೆ ನಿವಾಸಿಗಳಾದ ದಯಾನಂದ ಮತ್ತು ರಾಜೇಶ್ ಬಿ.ಆರ್. ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ

ಇಬ್ಬರು ಯುವಕರಿಗೆ ಚೂರಿ ಇರಿತ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗಳ್ಳತನ ಪ್ರಕರಣ- 12 ಗಂಟೆಯೊಳಗೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಾ. 14. ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಘಟನೆ ನಡೆದ ಕೇವಲ 12 ಗಂಟೆಗಳ ಒಳಗೆ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ವಿಜಯಪುರ ಮೂಲದ ಸಂತೋಷ್ (20) ಮತ್ತು ಬಡನಿಡಿಯೂರು ನಿವಾಸಿ ಚಿರಂತನ್ (21) ಎಂದು ಗುರುತಿಸಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಕೂಡಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. 80 ಬಡಗಬೆಟ್ಟು ಗ್ರಾಮದ ಶಾಂತಿನಗರ ನಿವಾಸಿ ಸಂಗೀತ ಮಡಿವಾಳ ಎಂಬವರು ಮಾರ್ಚ್ 12ರಂದು ಬೆಳಗ್ಗೆ ತಮ್ಮ ಮನೆಗೆ ಬೀಗ

ಮನೆಗಳ್ಳತನ ಪ್ರಕರಣ- 12 ಗಂಟೆಯೊಳಗೆ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

LPG ಸಿಲಿಂಡರ್ ಬಿಕ್ಕಟ್ಟು- ಸೈಬರ್ ವಂಚಕರ ತಂತ್ರಕ್ಕೆ 4 ಲಕ್ಷ ರೂ. ಕಳೆದುಕೊಂಡ ಮಹಿಳೆಯರು

(ನ್ಯೂಸ್ ಕಡಬ) newskadaba.com ಮಾ. 14. ದೇಶಾದ್ಯಂತ LPG ಕೊರತೆ ಎದುರಾದ ಬೆನ್ನಲ್ಲೇ ಅನಿಲ ಮಾಹಿತಿಯ ನವೀಕರಣವನ್ನು ಪಡೆಯುವ ನೆಪದಲ್ಲಿ ಆನ್ಲೈನ್ ವಂಚಕರು ಮಹಿಳೆಯರಿಬ್ಬರಿಗೆ ವಂಚಿಸಿದ ಘಟನೆ ಮಹಾರಾಷ್ಟ್ರದ ಕಲ್ಯಾಣ-ಡೊಂಬಿವಲಿ ಪ್ರದೇಶದಿಂದ ವರದಿಯಾಗಿದೆ.     ದೂರಿನ ಪ್ರಕಾರ, ಇಬ್ಬರು ಮಹಿಳೆಯರು ಅಪರಿಚಿತ ವ್ಯಕ್ತಿಯ ಕರೆಯನ್ನು ಸ್ವೀಕರಿಸಿದ್ದರು. ತಾನು ಮಹಾನಗರ ಗ್ಯಾಸ್ ಲಿಮಿಟೆಡ್ ನಿಂದ ಮಾತನಾಡುತ್ತಿರುವುದಾಗಿ ಹೇಳಿಕೊಂಡಿದ್ದ ವ್ಯಕ್ತಿ ತಮ್ಮ ಫೋನ್‌ ನಲ್ಲಿ ಫಾರಂ ಭರ್ತಿ ಮಾಡಲು ಎಪಿಕೆ ಫೈಲ್ ಒಂದನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ತೆರೆಯುವಂತೆ

LPG ಸಿಲಿಂಡರ್ ಬಿಕ್ಕಟ್ಟು- ಸೈಬರ್ ವಂಚಕರ ತಂತ್ರಕ್ಕೆ 4 ಲಕ್ಷ ರೂ. ಕಳೆದುಕೊಂಡ ಮಹಿಳೆಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top