ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಯುವಕನೋರ್ವ ಮೃತಪಟ್ಟ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ಕ್ರಿಕೆಟ್ ಆಡುತ್ತಿದ್ದ ಸಂದರ್ಭ ಪ್ರದೀಪ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್​ ಬಳಿ ಸಂಭವಿಸಿದೆ. ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ

ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ- ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ‌ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ‌ಹಲ್ಲೆ ನಡೆಸಿದ ಘಟನೆ ಸೋಮವಾರದಂದು ಬೆಳಗ್ಗೆ ನಾಗುರಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹಲ್ಲೆಗೊಳಗಾದವ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ. ಮೂವರು ವಿದ್ಯಾರ್ಥಿಗಳು ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಅದೇ ಬಸ್ಸಿನಲ್ಲಿ ‌ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಪಂಪ್‌ ವೆಲ್‌ ನಲ್ಲಿ ಬಸ್ಸಿನಿಂದ ಇಳಿದು ಹೋಗಿರುವುದಾಗಿ ಆರೋಪಿಸಲಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ- ಆರೋಪ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಸೆ. 02. ದೈಹಿಕ ಪರೀಕ್ಷೆಯನ್ನು ಕೈಗೊಳ್ಳುತ್ತಿದ್ದ ವೇಳೆ ಸುಮಾರು 11 ಅಬಕಾರಿ ಕಾನನ‍ಸ್ಟೇಬಲ್ ಅಭ್ಯರ್ಥಿಗಳು ಮೃತಪಟ್ಟ ಘಟನೆ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಪೊಲೀಸ್ ಮೂಲಗಳ ಪ್ರಕಾರ ಅಬಕಾರಿ ಕಾನ್ಸ್ ಟೇಬಲ್‌‍ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ಆಗಸ್ಟ್ 22ರಂದು ರಾಂಚಿ, ಗಿರಿದಿಹ್‌‍, ಹಜಾರಿಬಾಗ್‌‍, ಪಲಮು, ಪೂರ್ವ ಸಿಂಗ್‌ಭೂಮ್‌‍ ಮತ್ತು ಸಾಹೇಬ್‌ಗಂಜ್‌‍ ಜಿಲ್ಲೆಗಳಾದ್ಯಂತ 7 ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆಗಳು ನಡೆಸಲಾಗಿತ್ತು. ಈ ಸಂದರ್ಭ ಪಲಮು ಎಂಬಲ್ಲಿ ನಾಲ್ವರು ಮೃತಪಟ್ಟರೆ, ಗಿರಿದಿಹ್‌ ಮತ್ತು ಹಜಾರಿಬಾಗ್‌

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 02.  ಇ-ಸಿಗರೇಟ್ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಆದಗ್ಯೂ ಮಣಿಪಾಲ ಭಾಗದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್(25) ಹಾಗೂ ಸಾವಿರಾರು ರೂ.ಮೌಲ್ಯದ ಇ-ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಇ-ಸಿಗರೇಟ್‌ಗಳನ್ನು ಮುಂಬೈಯಿಂದ ಖರೀದಿ ಮಾಡುತ್ತಿದ್ದರು. ಹೀಗೆ ಖರೀದಿಸಿದ ಇ-ಸಿಗರೇಟ್‌ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರ ದೂರದಿಂದ ಗುಂಡಿನ ದಾಳಿ ಒಬ್ಬ ಸೇನಾ ಯೋಧನಿಗೆ ಗಾಯ  

(ನ್ಯೂಸ್ ಕಡಬ) newskadaba.com ಜಮ್ಮು, ಸೆ. 02.  ಅತಿದೊಡ್ಡ ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರು ಸ್ಟ್ಯಾಂಡ್-ಆಫ್ ದೂರದಿಂದ ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಸೇನಾ ಯೋಧ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಮಚ್ಚಲ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರೆ, ತಂಗ್ ಧರ್ ಸೆಕ್ಟರ್‌ ನಲ್ಲಿ ಮತ್ತೊಬ್ಬರು ಹತರಾಗಿದ್ದಾರೆ. ಏತನ್ಮಧ್ಯೆ, ನೆರೆಯ ಜಮ್ಮುವಿನಲ್ಲಿ,

ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರ ದೂರದಿಂದ ಗುಂಡಿನ ದಾಳಿ ಒಬ್ಬ ಸೇನಾ ಯೋಧನಿಗೆ ಗಾಯ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ, ತೀವ್ರ ಪ್ರವಾಹ 19 ಜನರ ಸಾವು- 140 ರೈಲುಗಳು ರದ್ದು    

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 02.  ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಪ್ರವಾಹ, ಆಸ್ತಿ ಹಾನಿ ಮತ್ತು ಜೀವಹಾನಿ ಉಂಟಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಅವರಿಗೆ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿವಿಧ ಭಾಗಗಳಿಂದ 17,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ, ನಿರಂತರ ಮಳೆಯು ರಾಜ್ಯಗಳಾದ್ಯಂತ ವಿನಾಶವನ್ನು ಉಂಟುಮಾಡುತ್ತಿದೆ, ಇದು ವ್ಯಾಪಕವಾದ ಪ್ರವಾಹಕ್ಕೆ

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ, ತೀವ್ರ ಪ್ರವಾಹ 19 ಜನರ ಸಾವು- 140 ರೈಲುಗಳು ರದ್ದು     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದಿನಾಯಿ ಹಾವಳಿಗೆ ರಾಜಧಾನಿ ತತ್ತರ – ಕೇವಲ 8 ತಿಂಗಳಲ್ಲಿ ಬರೋಬ್ಬರಿ 16,888 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ರಾಜಧಾನಿ ನಗರದಲ್ಲಿ ರಕ್ಕಸ ಬೀದಿನಾಯಿಗಳ ಹುಚ್ಚಾಟ ಮಿತಿ ಮೀರಿದ್ದು, ಕೇವಲ ಎಂಟು ತಿಂಗಳಲ್ಲಿ 16,888 ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿದ್ದು, ಇದರ ಜೊತೆಗೆ ನಾಯಿ ಕಡಿತದಿಂದಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಬೀದಿನಾಯಿ ಕಚ್ಚಿರುವ ಪ್ರಕರಣಗಳಲ್ಲಿ ಶೇ. 40 ರಷ್ಟು ನಾಯಿಗಳು ಸಾಕು ನಾಯಿಗಳಾಗಿರುವುದರಿಂದ ಜನ ಬೀದಿಯಲ್ಲಿ ಓಡಾಡಬೇಕಾದರೆ ಎಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ನಾಯಿ ಕಡಿತಕ್ಕೆ ಒಳಗಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಎಂಟು ತಿಂಗಳಲ್ಲಿ 16,888 ಮಂದಿಗೆ ನಾಯಿ

ಬೀದಿನಾಯಿ ಹಾವಳಿಗೆ ರಾಜಧಾನಿ ತತ್ತರ – ಕೇವಲ 8 ತಿಂಗಳಲ್ಲಿ ಬರೋಬ್ಬರಿ 16,888 ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಡವೆ ಬೇಟೆ- ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 02. ಕಡವೆಯನ್ನು ಬೇಟೆಯಾಡಿದ ಅರೋಪದಡಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಬಂಧಿತರನ್ನು ಭದ್ರಾವತಿ ತಾಲೂಕಿನ ಗೋಂದಿ ಗ್ರಾಮದ ನಿವಾಸಿ ಶಿವ ಬಿನ್ ರಾಜಪ್ಪ, ವೆಂಕಟೇಶ ಬಿನ್ ಮುನಿಯಪ್ಪ, ಚಿಕ್ಕಮಗಳೂರು ಚೌಡಿಕಟ್ಟೆ ಭೈರಾಪುರ ಗ್ರಾಮ ವಾಸಿಗಳಾದ ಮಂಜಪ್ಪ ಬಿನ್ ನಾಗಪ್ಪ ಹಾಗೂ ವಿನೋದ ಬಿನ್ ಮಂಜಪ್ಪ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್‌ ನ ಚೌಡಿಕಟ್ಟೆಯ ಬಳಿ ಕಡವೆಯನ್ನು ಬೇಟೆಯಾಡಿ

ಕಡವೆ ಬೇಟೆ- ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು 

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02.  ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಅನುಸಾರ, “ನಾನು ಅರುಣ್ ಕುಮಾರ್ ಪುತ್ತಿಲ ಅವರ ಹಿಂದುತ್ವ ಸಿದ್ಧಾಂತದಿಂದ ಪ್ರಭಾವಿತನಾಗಿದ್ದೆ ಮತ್ತು ಅವರ ಅಭಿಮಾನಿಯಾಗಿದ್ದೇನೆ. ನಾನು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಬೆಂಬಲ ನೀಡುತ್ತಿದ್ದೆ. 2023ರ ಜೂನ್ ನಲ್ಲಿ ಬೆಂಗಳೂರಿನ ಹೋಟೆಲ್‌ ಗೆ ಬರುವಂತೆ ಹೇಳಿ ಲೈಂಗಿಕ ದೌರ್ಜನ್ಯ ನಡೆದಿದೆ.

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top