ಕ್ರೈಮ್ ನ್ಯೂಸ್

ಭಾರತೀಯ ಮೂಲದ ಖ್ಯಾತ ವೈದ್ಯನ ಗುಂಡಿಕ್ಕಿ ಹತ್ಯೆ..!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಆ. 26. ಭಾರತೀಯ ಮೂಲದ ಖ್ಯಾತ ವೈದ್ಯರೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಕುರಿತು ಅಮೇರಿಕಾದಿಂದ ವರದಿಯಾಗಿದೆ. ಹತ್ಯೆಗೊಳಗಾದವರನ್ನು ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯವರಾದ ಡಾ. ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ರವರು ಕ್ರಿಮ್ಸನ್ ನೆಟ್‌ ವರ್ಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ವೈದ್ಯಕೀಯ ಅಧಿಕಾರಿಗಳ ಗುಂಪಿನ ಸಂಸ್ಥಾಪಕರು ಮತ್ತು ವೈದ್ಯಕೀಯ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಅಲಬಾಮಾದ ಟಸ್ಕಲೂಸಾ ಎಂಬ ನಗರದಲ್ಲಿ ಭಾರತೀಯ ಮೂಲದ ವೈದ್ಯರ ಮೇಲೆ ಅಮೆರಿಕದಲ್ಲಿ ಗುಂಡು ಹಾರಿಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.

ಭಾರತೀಯ ಮೂಲದ ಖ್ಯಾತ ವೈದ್ಯನ ಗುಂಡಿಕ್ಕಿ ಹತ್ಯೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Death, deadbody, Waterfall

ಈಜಲು ಹೋದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಈಜಲೆಂದು ಕೆರೆಗೆ ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ಕರಂಬಳಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಮೃತ ಸಿದ್ದಾರ್ಥ್ ಮತ್ತಿಬ್ಬರೊಂದಿಗೆ ಕರಂಬಳಿ ಕೆರೆಗೆ ಈಜಲೆಂದು ತೆರಳಿದ್ದ. ಆದರೆ ಸಿದ್ದಾರ್ಥ್ ಮಾತ್ರ ನೀರಿಗಿಳಿದಿದ್ದು, ಇನ್ನಿಬ್ಬರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ. ಸ್ಥಳೀಯರು ಕೂಡಲೇ ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಈಜಲು ಹೋದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದೇವಾಸ್ಥಾನದ ವಿಗ್ರಹ ವಿರೂಪ..! 12 ಮನೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..!   

(ನ್ಯೂಸ್ ಕಡಬ) newskadaba.c0m ಅಗರ್ತಲಾ, ಆ. 26.  ಪಶ್ಚಿಮ ತ್ರಿಪುರಾದ ರಾಣೀರ್ ಬಜಾರ್ ಪ್ರದೇಶದ ದೇವಸ್ಥಾನವೊಂದರಲ್ಲಿ ವಿಗ್ರಹವನ್ನು ವಿರೂಪಗೊಳಿಸಿರುವ ವಿಚಾರ ತಿಳಿದ ನಂತರ ಅಪರಿಚಿತ ವ್ಯಕ್ತಿಗಳು ಕನಿಷ್ಠ 12 ಮನೆಗಳು ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿರಾನಿಯಾ ಉಪವಿಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಈ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಮತ್ತು ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. “ಕೈತೂರ್ಬಾರಿಯಲ್ಲಿ ಕಾಳಿ ದೇವಿಯ ವಿಗ್ರಹವು ವಿರೂಪಗೊಂಡಿರುವುದು ಕಂಡುಬಂದ ನಂತರ

ದೇವಾಸ್ಥಾನದ ವಿಗ್ರಹ ವಿರೂಪ..! 12 ಮನೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..!    Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 26.  ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು ನೀರಿನ ಟ್ಯಾಂಕಿ ಬಳಿ ನಡೆದಿದೆ. ಮೃತರನ್ನು ಕೆಂಚನೂರು ಗ್ರಾಮದ ಮೈಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರಿ ಎಂಬುವರ ಪತ್ನಿ ಸುಜಾತ ಆಚಾರ್ತಿ (53) ಎಂದು ಗುರುತಿಸಲಾಗಿದೆ. ಮರ ಬಿದ್ದ ಪರಿಣಾಮ ದನ ಸ್ಥಳದಲ್ಲಿಯೇ ಸಾವನ್ನಪ್ಪಿದೆ ಹಾಗೂ ಸುಜಾತ

ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 26. ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ಎಂಬಲ್ಲಿ ನಡೆದಿದೆ. ಮೃತರನ್ನು ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ ನಿವಾಸಿ ಪಿ. ಶ್ರೀನೇಶ್ (39) ಎಂದು ಗುರುತಿಸಲಾಗಿದೆ. ಕಾಞಂಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿ ನಿಂದ ಬೇಡಡ್ಕಕ್ಕೆ ಬೈಕಿನಲ್ಲಿ

ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನ ತಪಾಸಣೆಯ ನೆಪದಲ್ಲಿ ವೃದ್ಧನ ಕಾರು ತಡೆದು ಚಿನ್ನಾಭರಣ ದೋಚಿದ ನಕಲಿ ಪೊಲೀಸರು…!

(ನ್ಯೂಸ್ ಕಡಬ) newskadaba.com ಥಾಣೆ, ಆ. 26. ಕ್ರೈಂ ಬ್ರಾಂಚ್ ಪೊಲೀಸರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು 70 ವರ್ಷದ ವೃದ್ಧರೊಬ್ಬರನ್ನು ಮೋಸ ಮಾಡಿ, ಅವರ ಬಳಿಯಿದ್ದ 70,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಥಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಚಿನ್ನಾಭರಣ ಕಳೆದುಕೊಂಡವರನ್ನು ದಾಮೋದರ್ ಪಾಟೀಲ್ ಎಂದು ಗುರುತಿಸಲಾಗಿದೆ. ಇವರು ನಾಸಿಕ್- ಮುಂಬೈ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಭದ್ರತಾ ತಪಾಸಣೆಯ ನೆಪದಲ್ಲಿ ಪಾಟೀಲ್ ಅವರ

ವಾಹನ ತಪಾಸಣೆಯ ನೆಪದಲ್ಲಿ ವೃದ್ಧನ ಕಾರು ತಡೆದು ಚಿನ್ನಾಭರಣ ದೋಚಿದ ನಕಲಿ ಪೊಲೀಸರು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆತ್ಮಹತ್ಯೆಗೆ ಶರಣಾದ ಮಗ..!  ಶವದ ಮುಂದೆ ಕಣ್ಣೀರಿಡುತ್ತಾ ಮೃತಪಟ್ಟ ತಾಯಿ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಮಗ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ ತಾಯಿ ಆ ನೋವಿನಲ್ಲೇ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದಿರುವ ಮನಕಲಕುವ ಘಟನೆ ನಡೆದಿದೆ. ಬೆಂಗಳೂರಿನ ಕಾವೇರಿಪುರದಲ್ಲಿ ನೆಲೆಸಿದ್ದ ಕ್ಯಾಬ್ ಚಾಲಕನಾಗಿದ್ದ ಅರುಣ್ ಕುಮಾರ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದನು. ಕೋಣೆಯಲ್ಲಿ ಮಲಗಿದ್ದ ಮಗನಿಗೆ ಕಾಫಿ ಕೊಡಲು ಹೋಗಿದ್ದ ತಾಯಿಗೆ ಮಗು ನೇಣು ಬಿಗಿದುಕೊಂಡಿರುವುದನ್ನು ನೋಡಿ ಬರಸಿಡಿಲು ಬಡಿದಂತಾಗಿತ್ತು. ಮಗನ ಶವ ಮುಂದೆ ಕುಳಿತು ರೋದಿಸುತ್ತಿದ್ದ 78 ವರ್ಷದ ಸರಸ್ವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಆತ್ಮಹತ್ಯೆಗೆ ಶರಣಾದ ಮಗ..!  ಶವದ ಮುಂದೆ ಕಣ್ಣೀರಿಡುತ್ತಾ ಮೃತಪಟ್ಟ ತಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 26. ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ್ ಶಿವಾಜಿನಗರ (40) ಮೃತ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿದ್ದ ರಮೇಶ್ ರವರು ಬಾಡಿಗೆ ಮನೆಯಲ್ಲಿ ವಾಸವಿದ್ದು, ರಮೇಶ್ ರವರ ಮನೆಯ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ವಂಚನೆ- ಇಬ್ಬರ ಬಂಧನ; 13.95 ಲಕ್ಷ ರೂ. ನಗದು ವಶಕ್ಕೆ

 (ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಗುಜರಾತ್ ರಾಜ್ಯದ ಸೂರತ್ ನ ನವಾದಿಯಾ ಮುಖೇಶ್ ಭಾಯಿ ಗಣೇಶ್‌ಬಾಯಿ(44) ಹಾಗೂ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯ ಧರಮ್ಮಿತ್ ಕಮಲೇಶ್ ಚೌಹಾನ್(28) ಎಂದು ಗುರುತಿಸಲಾಗಿದೆ. ಬಂಧಿತರಿಂದ 5 ಮೊಬೈಲ್  ಗಳು ಹಾಗೂ 13,95,000ರೂ.

ಆನ್ ಲೈನ್ ವಂಚನೆ- ಇಬ್ಬರ ಬಂಧನ; 13.95 ಲಕ್ಷ ರೂ. ನಗದು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಮೃತ್ಯು

(ನ್ಯೂಸ್ ಕಡಬ) newskadaba.c0m ಆಂಧ್ರಪ್ರದೇಶ, ಆ. 26.  ಹೈದರಾಬಾದ್‌ ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಕೊನೆಯುಸಿರೆಳೆದಿದ್ದಾರೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ. ಚವಾಣ್, ಆರಂಭದಲ್ಲಿ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು ಮತ್ತು ಲೋ ಬಿಪಿ ಕೂಡ ಇತ್ತು ಎನ್ನಲಾಗಿದೆ.  

ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top