ಕರಾವಳಿ

ಆನೆ ದಾಳಿಗೆ ಬಲಿಯಾದ ಪತ್ನಿ; ಸಾವಿನಲ್ಲೂ ಸಾರ್ಥಕತೆ ಮೆರೆದು ಕಣ್ಣು ದಾನ ಮಾಡಿದ ಪತಿ!

(ನ್ಯೂಸ್‌ ಕಡಬ) newskadaba.com,ಮೇ.19: ದುಬಾರೆ ಸಾಕಾನೆಗಳ ಕಾದಾಟಕ್ಕೆ ಬಲಿಯಾದ ತುಳಸಿ ಅವರ ಅಂಗಾಂಗ ದಾನ ಮಾಡಲು ಪತಿ ಜೋಯೆಲ್ ಮುಂದಾಗಿದ್ದಾರೆ. ದೇಹ ನಜ್ಜುಗುಜ್ಜಾಗಿರುವುದರಿಂದ ಕಣ್ಣುಗಳನ್ನು ಮಾತ್ರ ದಾನ ಮಾಡಲು ವೈದ್ಯರು ಸೂಚಿಸಿದ್ದಾರೆ. ಬೇರೆಯವರ ಮೂಲಕ ನನ್ನ ಪತ್ನಿ ಬದುಕಿರಲಿ” ಎಂದು ಜೋಯೆಲ್ ಭಾವುಕರಾಗಿದ್ದಾರೆ. ಇದೇ ವೇಳೆ, ಸ್ಥಳದಲ್ಲಿ ಪ್ರವಾಸಿಗರಿಗೆ ಸುರಕ್ಷತೆ ಇಲ್ಲ ಹಾಗೂ ಸಮಯಕ್ಕೆ ಆಂಬ್ಯುಲೆನ್ಸ್ ಸಿಗಲಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೆ ದಾಳಿಗೆ ಬಲಿಯಾದ ಪತ್ನಿ; ಸಾವಿನಲ್ಲೂ ಸಾರ್ಥಕತೆ ಮೆರೆದು ಕಣ್ಣು ದಾನ ಮಾಡಿದ ಪತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: :ಅಪ್ರಾಪ್ತ ಬಾಲಕರಿಂದ ದ್ವಿಚಕ್ರ ವಾಹನ ಚಾಲನೆ – ವಾಹನಗಳ ಮಾಲೀಕರಿಗೆ ತಲಾ 25 ಸಾವಿರ ದಂಡ!

(ನ್ಯೂಸ್‌ ಕಡಬ) newskadaba.com,ಮೇ.19: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ ಮಾಲೀಕರಿಗೆ ತಲಾ ರೂ 25,000 ದಂಡವನ್ನು ವಿಧಿಸಿ ನ್ಯಾಯಾಲಯವು ಆದೇಶಿಸಿದೆ. ಏಪ್ರಿಲ್‌ 06 2026 ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ ನಲ್ಲಿ KA-19-HT-9694 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಹಾಗೂ ಏಪ್ರಿಲ್‌ 28. 2026 ರಂದು ಬಿಸಿ ರೋಡ್‌ ನಲ್ಲಿ ಬಳಿ, KA05KG6785 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕರು ಚಾಲನೆ ಮಾಡಿರುವುದು

ಬಂಟ್ವಾಳ: :ಅಪ್ರಾಪ್ತ ಬಾಲಕರಿಂದ ದ್ವಿಚಕ್ರ ವಾಹನ ಚಾಲನೆ – ವಾಹನಗಳ ಮಾಲೀಕರಿಗೆ ತಲಾ 25 ಸಾವಿರ ದಂಡ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಇಟಿ – ಮೇ 21 ರವರೆಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ದಾಖಲೆ ಪರಿಶೀಲನೆ- ಕರ್ನಾಟಕ ಪರೀಕ್ಷಾ ಪ್ರಾಧಿಕಾರ

(ನ್ಯೂಸ್‌ ಕಡಬ) newskadaba.com,  ಮೇ.18: :ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿ, ಇನ್ನೂ ದಾಖಲೆ ಪರಿಶೀಲನೆ ಮಾಡಿಕೊಳ್ಳದ ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳ ಸಮೇತ ಹತ್ತಿರದ ಸರ್ಕಾರಿ ಪಿಯು ಕಾಲೇಜುಗಳಿಗೆ ಮೇ 21 ರ ಒಳಗೆ ಹೋಗಿ ಪರಿಶೀಲನೆ ಮಾಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. ಅಭ್ಯರ್ಥಿಗಳ ಕ್ಲೇಮ್ಸ್ ಸರ್ಟಿಫಿಕೇಟ್ ನಲ್ಲಿ ಕ್ಲೇಮ್ಸ್ ನಾಟ್ ವೆರಿಫೈಯ್ಡ್ ಎಂದು ಮುದ್ರಿತವಾಗಿದ್ದಲ್ಲಿ ಅಂತಹವರು ಮಾತ್ರ ಸರ್ಕಾರಿ ಪಿಯು ಕಾಲೇಜಿಗೆಹೋಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ

ಸಿಇಟಿ – ಮೇ 21 ರವರೆಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ದಾಖಲೆ ಪರಿಶೀಲನೆ- ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : 3 ಕಾರುಗಳ ನಡುವೆ ಸರಣಿ ಅಪಘಾತ – ಕಾರುಗಳು ಜಖಂ

(ನ್ಯೂಸ್‌ ಕಡಬ) newskadaba.com,  ಮೇ.18: ದೇವರಕೊಲ್ಲಿ ಬಳಿ 3 ಕಾರುಗಳ ನಡುವೆ ಸರಣಿ ಅಪಘಾತ ಉಂಟಾಗಿ ಕಾರುಗಳು ಜಖಂಗೊಂಡಿರುವ ಘಟನೆ ಸಂಭವಿಸಿದೆ. ಸುಳ್ಯ ಕಡೆಯಿಂದ ಮಡಿಕೇರಿಯತ್ತ ಹೋಗುತ್ತಿದ್ದ ಕಾರಿಗೆ ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಈ ಸಂದರ್ಭದಲ್ಲಿ ಚಾಲಕ ಬ್ರೇಕ್ ಹಾಕಿದಾಗ ಅದರ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಈ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೂರೂ ಕಾರುಗಳು ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : 3 ಕಾರುಗಳ ನಡುವೆ ಸರಣಿ ಅಪಘಾತ – ಕಾರುಗಳು ಜಖಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಲಸ ಮಾಡದಿದ್ರೆ ವೇತನ ಇಲ್ಲ: ಮುಷ್ಕರಕ್ಕೆ ಸಿದ್ಧವಾಗಿರೋ ಸಾರಿಗೆ ನೌಕರರಿಗೆ KSRTC ವಾರ್ನಿಂಗ್‌

(ನ್ಯೂಸ್‌ ಕಡಬ) newskadaba.com,  ಮೇ.18:  ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರಕ್ಕೆ ಸಿದ್ಧವಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ (KSRTC) ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ. ನಾಡಿದ್ದು ಕೆಲಸ ಮಾಡದಿದ್ದರೆ ‘ನೋ ವರ್ಕ್‌, ನೋ ಪೇ’ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಮೇ 20 ರಂದು ಹೋರಾಟದಲ್ಲಿ ಭಾಗಿಯಾಗಲು ಸಿದ್ಧವಾಗಿರುವ ಸಾರಿಗೆ ನೌಕರರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್‌ ಪಾಷಾ ಎಚ್ಚರಿಸಿದ್ದಾರೆ. ಎಲ್ಲಾ ಸಾರಿಗೆ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಪ್ರತಿಭಟನೆಯಲ್ಲಿ ಭಾಗಿಯಾದರೆ ಸೇವಾ ನಿಯಮಗಳ ಅನ್ವಯ ಕಠಿಣ

ಕೆಲಸ ಮಾಡದಿದ್ರೆ ವೇತನ ಇಲ್ಲ: ಮುಷ್ಕರಕ್ಕೆ ಸಿದ್ಧವಾಗಿರೋ ಸಾರಿಗೆ ನೌಕರರಿಗೆ KSRTC ವಾರ್ನಿಂಗ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬಾವಿ ನೀರಲ್ಲಿ ಡೀಸೆಲ್‌ – ನಿವಾಸಿಗಳು ಕಂಗಾಲು!

(ನ್ಯೂಸ್‌ ಕಡಬ) newskadaba.com,  ಮೇ.18: ಈ ಭಾಗದಲ್ಲಿ ಇರೋದು ಬಾವಿಗಳಾ ಅಥವಾ ಡೀಸೆಲ್ ಗುಂಡಿಗಳಾ ಅನ್ನೋ ಅನುಮಾನ ಈಗ ಶುರುವಾಗಿದೆ. ಯಾಕಂದ್ರೆ ಬಾವಿಯಿಂದ ನೀರು ಸೇದಿದರೆ ನೀರಿನ ಬದಲು ಡೀಸೆಲ್ ವಾಸನೆ ಮೂಗಿಗೆ ಅಪ್ಪಳಿಸುತ್ತದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋ ಹಾಗೆ ಕುಳಿತಿದ್ದಾರೆ. ಇದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಬಲಿಪಗುರಿ ರಸ್ತೆಯ ನಿವಾಸಿಗಳಿಗೆ ಈಗ ಕುಡಿಯುವ ನೀರಿನದ್ದೇ ದೊಡ್ಡ ಚಿಂತೆಯಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲಿ ಇಲ್ಲಿನ ಕೆಲವು ಮನೆಗಳ ಬಾವಿ

ಮಂಗಳೂರು : ಬಾವಿ ನೀರಲ್ಲಿ ಡೀಸೆಲ್‌ – ನಿವಾಸಿಗಳು ಕಂಗಾಲು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೈಟೆಕ್‌ ಟಚ್‌; 1,000ಕ್ಕೂ ಹೆಚ್ಚು ನೂತನ ಕೊಠಡಿಗಳ ನಿರ್ಮಾಣ!

(ನ್ಯೂಸ್‌ ಕಡಬ) newskadaba.com ಮೇ.18: ಸುಬ್ರಹ್ಮಣ್ಯ: ದೇಶದ ಪ್ರಸಿದ್ಧ ನಾಗಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಭಕ್ತರಿಗೆ ಇನ್ನಷ್ಟು ಆಧುನಿಕ ಸೌಲಭ್ಯಗಳನ್ನು ಒದಗಿಸುವ ದಿಸೆಯಲ್ಲಿ ಭಾರೀ ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದೆ. ಕ್ಷೇತ್ರಕ್ಕೆ ಬರುವ ಲಕ್ಷಾಂತರ ಯಾತ್ರಾರ್ಥಿಗಳ ಅನುಕೂಲಕ್ಕಾಗಿ 1,000ಕ್ಕೂ ಹೆಚ್ಚು ಅತ್ಯಾಧುನಿಕ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ರೂಪಿಸಿದೆ. ಇದರ ಜೊತೆಗೆ, ಸುಮಾರು ₹77.25 ಕೋಟಿ ವೆಚ್ಚದಲ್ಲಿ ಏಕಕಾಲದಲ್ಲಿ 6,000 ಭಕ್ತರು ಪ್ರಸಾದ ಸ್ವೀಕರಿಸಬಹುದಾದ ‘ಜಿ+2’ ಮಾದರಿಯ ಬೃಹತ್ ಅನ್ನದಾಸೋಹ ಭವನ ನಿರ್ಮಾಣವಾಗಲಿದೆ. ಭಕ್ತರಿಗೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೈಟೆಕ್‌ ಟಚ್‌; 1,000ಕ್ಕೂ ಹೆಚ್ಚು ನೂತನ ಕೊಠಡಿಗಳ ನಿರ್ಮಾಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಔಷಧಗಳ ಬೆಲೆ 15% ಏರಿಕೆ

(ನ್ಯೂಸ್‌ ಕಡಬ) newskadaba.com ಮೇ.18: ಮಧ್ಯಪ್ರಾಚ್ಯ ಯುದ್ಧದ ಬಿಸಿ ಪೆಟೋಲ್, ಡೀಸೆಲ್‌ಗೆ ಅಷ್ಟೇ ಅಲ್ಲದೆ ಔಷಧಗಳಿಗೂ ತಟ್ಟಿದೆ. ಔಷಧಗಳ ಬೆಲೆ ಶೇ. 15 ರಷ್ಟು ಏರಿಕೆಯಾಗುತ್ತಿದೆ.ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಸಪ್ಲೈ ಚೈನ್ ಮೇಲೆ ಯುದ್ಧದ ಪರಿಣಾಮ ಬೀರಿದ ಕಾರಣ ಔಷಧಗಳ ದರ ಸರಾಸರಿ 15 ರಷ್ಟು ಔಷಧ ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ ಮಾತ್ರೆಗಳ ಬೆಲೆ ಏರಿಕೆಯಾಗಿದೆ. ಪ್ಯಾರಸಿಟಮಲ್, ಕಾರ್ಡಿಯಾಕ್ ಡ್ರಗ್ಸ್, ಡಯಾಬಿಟಿಸ್ ಡ್ರಗ್ಸ್, ಗ್ಯಾಸ್ಟ್ರಿಕ್ ಟ್ಯಾಬ್ಲೆಟ್, ಕಾಫ್

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಔಷಧಗಳ ಬೆಲೆ 15% ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು – ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com ಮೇ.18: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೊ ಕಾರೊಂದು ಕಾರ್ಕಳದ ಮುನಿಯಾಲಿನ ರಾಜ್ಯ ಹೆದ್ದಾರಿಯ ಸಮೀಪದ ಚರಂಡಿಗೆ ಮಗುಚಿ ಬಿದ್ದ ಘಟನೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಹಾಗೂ ಇಬ್ಬರು ಪುರುಷರು ಸೇರಿ ಒಟ್ಟು ಏಳು ಮಂದಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದರು. ಅನಂತರ ಕ್ರೇನ್ ಸಹಾಯದಿಂದ ಅಪಘಾತಕ್ಕೊಳಗಾದ ಕಾರನ್ನು ಮೇಲಕ್ಕೆತ್ತಲಾಯಿತು. ಘಟನೆಯಲ್ಲಿ ಕಾರು ಜಖಂಗೊಂಡಿದೆ ಎಂದು ತಿಳಿದುಬಂದಿದೆ.

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು – ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

1-5ನೇ ತರಗತಿ ಮಕ್ಕಳಿಗೆ ಗುಡ್‌ನ್ಯೂಸ್; ಟಿಸಿ ಕಡ್ಡಾಯವಿಲ್ಲ

(ನ್ಯೂಸ್‌ ಕಡಬ) newskadaba.com ಮೇ.18: ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನುಮುಂದೆ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಟ್ಯಾಬ್‌ ಪ್ರಮಾಣಪತ್ರ (TC) ಕಡ್ಡಾಯವಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳ ಪ್ರವೇಶ ಹಾಗೂ ವರ್ಗಾವಣೆಯ ವೇಳೆ ಅನಗತ್ಯ ದಾಖಲೆಗಳನ್ನು ಕೇಳಬಾರದು ಎಂದು ತಿಳಿಸಲಾಗಿದೆ. ಶಿಕ್ಷಣ ಹಕ್ಕು

1-5ನೇ ತರಗತಿ ಮಕ್ಕಳಿಗೆ ಗುಡ್‌ನ್ಯೂಸ್; ಟಿಸಿ ಕಡ್ಡಾಯವಿಲ್ಲ Read More »

ಕರಾವಳಿ
Scroll to Top