ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ 01: ​ ರಾಜ್ಯದ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!

(ನ್ಯೂಸ್‌ ಕಡಬ) newskadaba.com,  ಎ.29  ಕರ್ನಾಟಕದಿಂದ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸುವವರಿಗೆ ಹಾಗೂ ವಿದೇಶದಿಂದ ಮರಳುವವರಿಗೆ ಒಂದು ಭರ್ಜರಿ ಸಿಹಿಸುದ್ದಿ. ವಿಮಾನ ನಿಲ್ದಾಣಗಳಲ್ಲಿ ಶಾಪಿಂಗ್ ಮಾಡುವುದನ್ನು ಇನ್ನಷ್ಟು ಸುಲಭವಾಗಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ‘ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ.’ (ಎಎಎಚ್‌ಎಲ್‌) ಮತ್ತು ಪ್ರಮುಖ ಆನ್‌ಲೈನ್ ಟ್ರಾವೆಲ್ ಕಂಪನಿ ‘ಮೇಕ್‌ ಮೈ ಟ್ರಿಪ್’ ಹೊಸ ಒಪ್ಪಂದವೊಂದನ್ನು ಮಾಡಿಕೊಂಡಿವೆ. ಈ ಪಾಲುದಾರಿಕೆಯ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ‘ಆನ್‌ಲೈನ್ ಡ್ಯೂಟಿ-ಫ್ರೀ ಪ್ರೀ-ಬುಕಿಂಗ್’ ಸೇವೆಯನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ದರ್ಶನ್‌

(ನ್ಯೂಸ್‌ ಕಡಬ) newskadaba.com,  ಎ.29  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ

ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ದರ್ಶನ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಎ.29 ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ ಸುಬ್ರಹ್ಮಣ್ಯ: ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಸುಮಾರು ಒಂದು ವರ್ಷದ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದ ಅವರು, ಕರ್ತವ್ಯದ ಅವಧಿಯಲ್ಲಿ ಜನಾನುರಾಗಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಏಕಾಏಕಿ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಪ್ರಸ್ತುತ

ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಎ.29 ಇಂದಿನ ಚಿನ್ನದ ದರ ಅಂತರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆಗಳು ಮತ್ತು ಡಾಲರ್ ಮೌಲ್ಯದ ಏರಿಳಿತದಿಂದಾಗಿ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಶುದ್ಧ ಚಿನ್ನ (24 ಕ್ಯಾರೆಟ್) 10 ಗ್ರಾಂ ಬೆಲೆ: ₹1,51,370 (ಇಂದು ₹440 ಏರಿಕೆ) 1 ಗ್ರಾಂ ಬೆಲೆ: ₹15,137 (ಇಂದು ₹44 ಏರಿಕೆ) ಆಭರಣ ಚಿನ್ನ (22 ಕ್ಯಾರೆಟ್) 10 ಗ್ರಾಂ ಬೆಲೆ: ₹1,38,750 (ಇಂದು ₹400 ಏರಿಕೆ) 1 ಗ್ರಾಂ ಬೆಲೆ: ₹13,875 (ಇಂದು ₹40 ಏರಿಕೆ)

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಎ.29 ಮದುವೆಯಾಗದೇ ಹೆಣ್ಣು ಸಿಗದೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.ವಿನಯ್‌ (35) ಆತಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಗುಡ್ದೂರು ಗ್ರಾಮದವರಾದ ಈತ ಕಳೆದ ಹತ್ತು ವರ್ಷಗಳಿಂದ ಬೇಲೂರಿನಲ್ಲಿ ವಾಸವಾಗಿದ್ದು, ಎಲೆಕ್ಟ್ರೀಷಿಯನ್‌ ಆಗಿ ಕೆಲಸ ಮಾಡುತ್ತಿದ್ದರು. ಮದುವೆಯಾಗಲು ಹಲವು ವರ್ಷಗಳಿಂದ ಕನ್ಯೆ ಹುಡುಕಾಟ ನಡೆಸುತ್ತಿದ್ದ ವಿನಯ್‌ ಅವರಿಗೆ ಹೊಂದಾಣಿಕೆಯ ಹೆಣ್ಣು ಸಿಗದ ಕಾರಣ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಕಳೆದ ವಾರದಿಂದ ಕೆಲಸಕ್ಕೂ ತೆರಳದೆ

ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶ್ಚಿಮ ಬಂಗಾಳದಲ್ಲಿ ದ್ವಿತೀಯ ಹಂತದ ಮತದಾನ ಆರಂಭ

(ನ್ಯೂಸ್‌ ಕಡಬ) newskadaba.com,  ಎ.29 ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಈ ಹಂತದಲ್ಲಿ ರಾಜ್ಯದ 7 ಜಿಲ್ಲೆಗಳ ಒಟ್ಟು 142 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಸುಮಾರು 3.22 ಕೋಟಿ ಮತದಾರರು 1,448 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಉತ್ತರ 24 ಪರಗಣ (33 ಕ್ಷೇತ್ರಗಳು), ದಕ್ಷಿಣ 24 ಪರಗಣ (31), ಹೂಗ್ಲಿ (18), ನಡಿಯಾ (17),

ಪಶ್ಚಿಮ ಬಂಗಾಳದಲ್ಲಿ ದ್ವಿತೀಯ ಹಂತದ ಮತದಾನ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಮಶಾನದಲ್ಲೇ ಸಪ್ತಪದಿ – ವಿವಾದಕ್ಕೆ ಕಾರಣವಾದ ವಿಚಿತ್ರ ಮದುವೆ!

(ನ್ಯೂಸ್‌ ಕಡಬ) newskadaba.com,  ಎ.29 ಮದುವೆ ಸಾಮಾನ್ಯವಾಗಿ ಎರಡು ಜೀವಗಳು ಹೊಸ ಜೀವನಕ್ಕೆ ಕಾಲಿಡುವ ಶುಭಘಳಿಗೆ. ಆದರೆ ಈ ಒಂದು ಶುಭ ಸಮಾಚಾರಕ್ಕೆ ಯಾವುದೇ ವಿಘ್ನ ಬರಬಾರದು ಎಂಬ ಕಾರಣಕ್ಕೆ ಉತ್ತಮ ಸ್ಥಳವನ್ನು ಆರಿಸಿ ವಿವಾಹವಾಗುತ್ತಾರೆ. ಆದರೆ ಅಲ್ಮೋರಾದಲ್ಲಿ ವಿಚಿತ್ರ ಮದುವೆ ಸಮಾರಂಭ ಇದೀಗ ಚರ್ಚೆಗೆ ಗ್ರಾಸವಾಗಿದೆ.ಅಂತ್ಯಕ್ರಿಯೆ ನಡೆಯುವ ಸ್ಮಶಾನದಲ್ಲೇ ನವ ಜೋಡಿ ಮದುವೆಯಾಗಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದಿದೆ. ಉರಿಯುವ ಚಿತೆಗಳ ನಡುವೆ ಸಪ್ತಪದಿ ತುಳಿದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸ್ಮಶಾನದಲ್ಲೇ ಸಪ್ತಪದಿ – ವಿವಾದಕ್ಕೆ ಕಾರಣವಾದ ವಿಚಿತ್ರ ಮದುವೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

SSLC ಫಲಿತಾಂಶ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣ; ಪರೀಕ್ಷೆ-2ಕ್ಕೆ ಸರ್ಕಾರದ ವತಿಯಿಂದಲೇ ಶುಲ್ಕ ಪಾವತಿ

(ನ್ಯೂಸ್‌ ಕಡಬ) newskadaba.com,  ಎ.29:​ SSLC ಫಲಿತಾಂಶ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣ; ಪರೀಕ್ಷೆ-2ಕ್ಕೆ ಸರ್ಕಾರದ ವತಿಯಿಂದಲೇ ಶುಲ್ಕ ಪಾವತಿ ಬೆಂಗಳೂರು: ರಾಜ್ಯ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಸುಮಾರು 45,415 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ. ಈ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಪ್ರಮುಖ ಅಂಶಗಳು: ಉಚಿತ ಪರೀಕ್ಷಾ ಶುಲ್ಕ: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹೊರೆಯಾಗಬಾರದು ಎಂಬ ಉದ್ದೇಶದಿಂದ ‘ಪರೀಕ್ಷೆ-2’ಕ್ಕೆ ಬೇಕಾಗುವ ಸಂಪೂರ್ಣ ಶುಲ್ಕವನ್ನು

SSLC ಫಲಿತಾಂಶ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣ; ಪರೀಕ್ಷೆ-2ಕ್ಕೆ ಸರ್ಕಾರದ ವತಿಯಿಂದಲೇ ಶುಲ್ಕ ಪಾವತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಹೆಚ್ಚುತ್ತಿದೆ ತಾಪಮಾನ – ಬಿಸಿಲಾಘಾತದ ಆತಂಕ

(ನ್ಯೂಸ್‌ ಕಡಬ) newskadaba.com,  ಎ.29:​ ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನಕ್ಕಾಗುವಾಗ ಜನರು ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಮಧ್ಯಾಹ್ನ ವೇಳೆ ಸುಮಾರು 38 ಡಿ.ಸೆ.ಗೂ ಅಧಿಕ ತಾಪಮಾನ ದಾಖಲಾಗುತ್ತಿದೆ.. ಕೆಲವು ಕಡೆ ಮಳೆ ಬಂದರೂ ತಾಪಮಾನದಲ್ಲಿ ಇಳಿಕೆ ಕಾಣುತ್ತಿಲ್ಲ. ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ಮೋಡದ ಜತೆಗೆ ಬಿಸಿಲಿನ ಬೇಗೆ ಹೆಚ್ಚುತ್ತಿದೆ. ಈ ನಡುವೆ ಜನರು ಕುಸಿದು ಬೀಳುತ್ತಿರುವ, ಮಲಗಿದ್ದಲ್ಲೇ ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಎ.22ರಂದು ಕಾರ್ಕಳದ ಕುಕ್ಕುಂದೂರಿನ

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಹೆಚ್ಚುತ್ತಿದೆ ತಾಪಮಾನ – ಬಿಸಿಲಾಘಾತದ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top