ಕರಾವಳಿ

ವಿಶ್ವ ದಾಖಲೆ ಪಟ್ಟಿಗೆ ಕಮಲ್ ರಾಜ್

(ನ್ಯೂಸ್‌ ಕಡಬ) newskadaba.com,  ಎ.17: ಹುಮುಖ ಪ್ರತಿಭೆಯ ನಟ ಕಮಲ್ ರಾಜ್ (ಕಲೀಂ ಪಾಷ) ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ‘ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕಮಲ್ ರಾಜ್, ಕಳೆದ ಎರಡೂವರೆ ದಶಕಗಳಿಂದ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದಾರೆ. ಕನ್ನಡ, ಹಿಂದಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಗೀತ ಆಲ್ಬಮ್‌ಗಳನ್ನು ನಿರ್ಮಿಸಿ, ಡಿಜಿಟಲ್ ವೇದಿಕೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಆಧ್ಯಾತ್ಮ, […]

ವಿಶ್ವ ದಾಖಲೆ ಪಟ್ಟಿಗೆ ಕಮಲ್ ರಾಜ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.17: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರನ್ನು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ, ವೀಣಾ (42), ಸುನೀಲ್ (40), ಪುಟ್ಟಮ್ಮ(55), ಲೋಲಾಕ್ಷಿ,

ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ, ಸಂಚಾರ ಮಾರ್ಗ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಎ.17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ   ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ, ಸಂಚಾರ ಮಾರ್ಗ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಋತುಸ್ರಾವ ರಜೆ’ ಕಡ್ಡಾಯ- ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

(ನ್ಯೂಸ್‌ ಕಡಬ) newskadaba.com,  ಎ.17 ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ನೀತಿಯನ್ನು ರಾಜ್ಯ ಸರ್ಕಾರವು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಮಹಿಳಾ

‘ಋತುಸ್ರಾವ ರಜೆ’ ಕಡ್ಡಾಯ- ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾರು ಮತ್ತು ಪಿಕಪ್ ನಡುವೆ ಅಪಘಾತ- ಓರ್ವನಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಎ.17 ಕಾರು ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿ ಅಪಘಾತದಲ್ಲಿ ಪಿಕಪ್ ನಲ್ಲಿದ್ದ ಪ್ರಯಾಣಿಕನ ಕೈ ಮುರಿದ ಘಟನೆ ಆಲೆಟ್ಟಿ ಗ್ರಾಮದ ಪಾಲಡ್ಕ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರು ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿತ್ತು.ಪಿಕಪ್ ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು. ಗಾಯಗೊಂಡ ವ್ಯಕ್ತಿಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಸುಳ್ಯ: ಕಾರು ಮತ್ತು ಪಿಕಪ್ ನಡುವೆ ಅಪಘಾತ- ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್

(ನ್ಯೂಸ್‌ ಕಡಬ) newskadaba.com,  ಎ.17 ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಗ್ರೇಡ್ ನೀಡುವ ಬಗ್ಗೆ ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ ಸೇರಿ ಮೂವರು ವಿದ್ಯಾರ್ಥಿಗಳು ತಕರಾರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರ ಏಕಸದಸ್ಯ ಪೀಠವು ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಸರ್ಕಾರಕ್ಕೆ

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ. 93.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಬಾಲಕಿಯರದೇ ಮೇಲುಗೈ

(ನ್ಯೂಸ್‌ ಕಡಬ) newskadaba.com,  ಎ.17 ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು 2026ನೇ ಸಾಲಿನ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ವರ್ಷ ಒಟ್ಟಾರೆ ಶೇ. 93.70ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ. ಕಳೆದ ವರ್ಷಕ್ಕೆ (ಶೇ. 93.66) ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಶೇ. 0.04ರಷ್ಟು ಅಲ್ಪ ಏರಿಕೆ ಕಂಡುಬಂದಿದೆ. ​ಪ್ರಮುಖ ಮುಖ್ಯಾಂಶಗಳು: ​ಬಾಲಕಿಯರ ಸಾಧನೆ: ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ.

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ. 93.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಬಾಲಕಿಯರದೇ ಮೇಲುಗೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.17:  ​ ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇದರ ನಡುವೆ ಸಂಜೆ ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ… ಇಂದಿನಿಂದ ಮಾ.18ರವರೆಗೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಎ.15  ಕಳೆದ ಮಾರ್ಚ್ ಅಂತ್ಯದಿಂದ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹವು ಏಪ್ರಿಲ್ 12 ರಂದು ಮಲ್ಪೆ ಮೀನುಗಾರಿಕಾ ಬಂದರಿನ ಟಿ. ಧಕ್ಕೆಯ ಸಮೀಪದ ನೀರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಸನಾತನ ಕಿಸಾನ್ (35) ಎಂದು ಗುರುತಿಸಲಾಗಿದೆ.ಇವರು ‘ಈಶನಿಧಿ’ ಎಂಬ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಮೀನುಗಾರಿಕಾ ಚಟುವಟಿಕೆಗಳು ಕ್ಷೀಣಿಸಿದ್ದರಿಂದ, ಬೋಟ್ ಅನ್ನು ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿತ್ತು. ಸನಾತನ ಅವರು ಮಾರ್ಚ್ 31 ರಂದು ರಾತ್ರಿ 9:30 ರ ಸುಮಾರಿಗೆ ಬೋಟ್‌ನಲ್ಲಿ

ಉಡುಪಿ: ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲ್‌ಪಿಜಿ ಅಕ್ರಮ ತಡೆಗಟ್ಟಲು ಸರ್ಕಾರದಿಂದ ರಾಷ್ಟ್ರವ್ಯಾಪಿ ಅಭಿಯಾನ!

(ನ್ಯೂಸ್‌ ಕಡಬ) newskadaba.com,  ಎ.15  ದೇಶದಲ್ಲಿ ಎಲ್‌ಪಿಜಿ(LPG) ಅಕ್ರಮ ದಾಸ್ತಾನು ಹಾಗೂ ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡ‌ರ್ ಮಾರಾಟ ತಡೆಗಟ್ಟಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು ದೇಶದಾದ್ಯಂತ ಅಭಿಯಾನ ಕೈಗೊಂಡಿದೆ. ಗ್ರಾಹಕರಿಗೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಜಾಗೃತೆ ವಹಿಸಲು ಈ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರಾದ್ಯಂತ ಕೈಗೊಂಡ ಅಭಿಯಾನದ ಭಾಗವಾಗಿ ಮನೆ ಬಳಕೆ ಎಲ್‌ಪಿಜಿ ಸರಬರಾಜಿನಲ್ಲಿ ವ್ಯತ್ಯಯ ಪತ್ತೆ‌ ಹಚ್ಚುವ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ಪಾರದರ್ಶಕತೆ ಸಾಧಿಸುವ ನಿಟ್ಟಿನಲ್ಲಿ ಏ.11ರಂದು 2700 ತಪಾಸಣೆ ಮತ್ತು ದಾಳಿಯನ್ನು

ಎಲ್‌ಪಿಜಿ ಅಕ್ರಮ ತಡೆಗಟ್ಟಲು ಸರ್ಕಾರದಿಂದ ರಾಷ್ಟ್ರವ್ಯಾಪಿ ಅಭಿಯಾನ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top