ಕರಾವಳಿ

ಸುಳ್ಯ : ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಸಾಕ್ಷ್ಯಚಿತ್ರ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಮಾ.27 : ದೃಷ್ಟಿ ಮೀಡಿಯಾ ಸಂಸ್ಥೆಯ ನಿರ್ಮಾಣದಲ್ಲಿ ತಯಾರಿಸಿರುವ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಎಂಬ ಸಾಕ್ಷ್ಯಚಿತ್ರದ ಬಿಡುಗಡೆ ಸುಳ್ಯದಲ್ಲಿ ನಡೆಯಿತು. ಪದ್ಮಶ್ರೀ ಪುರಸ್ಕೃತ ಡಾ। ಗಿರೀಶ್ ಭಾರದ್ವಾಜ್ ಅವರು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿ ಮಾತನಾಡಿ, ತೊಡಿಕಾನ ದೇವಸ್ಥಾನದ ಕುರಿತಾದ ಸಾಕ್ಷ್ಯಚಿತ್ರ ಇಲ್ಲಿನ ಸುಂದರ ಪ್ರಕೃತಿ ಸೌಂದರ್ಯವನ್ನು ತೋರಿಸುವ ಜತೆಗೆ ಕ್ಷೇತ್ರದ ಪರಿಚಯ, ವಿಶೇಷತೆಯನ್ನು ನಮಗೆ ತಿಳಿಸಿದೆ. ಇಂತಹ ಸಾಕ್ಷಚಿತ್ರಗಳು ಸುಳ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಕೊಡುಗೆ […]

ಸುಳ್ಯ : ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಸಾಕ್ಷ್ಯಚಿತ್ರ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೋದಯ ಪ್ರವೇಶ ಪರೀಕ್ಷೆಗೆ ಜ್ಞಾನದೀಪದಿಂದ ತರಬೇತಿ – ಸೀಮಿತ ಸೀಟುಗಳಿಗೆ ಮಾತ್ರ ಅವಕಾಶ!

(ನ್ಯೂಸ್‌ ಕಡಬ) newskadaba.com,  ಮಾ.27  ಬೆಳ್ಳಾರೆ: ಗುಣಮಟ್ಟದ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುಳ್ಯದ ‘ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ’ ವತಿಯಿಂದ 2026-27ನೇ ಸಾಲಿನ ನವೋದಯ ಮತ್ತು ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಒಂದು ತಿಂಗಳ ವಿಶೇಷ ಪೂರ್ವ ಸಿದ್ಧತಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ​ಅರ್ಹತೆ: ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸುಸಂದರ್ಭ ಒದಗಿಬಂದಿದೆ. ​ತರಬೇತಿ ವಿಷಯಗಳು: ಗಣಿತ, ಮಾನಸಿಕ ಸಾಮರ್ಥ್ಯ

ನವೋದಯ ಪ್ರವೇಶ ಪರೀಕ್ಷೆಗೆ ಜ್ಞಾನದೀಪದಿಂದ ತರಬೇತಿ – ಸೀಮಿತ ಸೀಟುಗಳಿಗೆ ಮಾತ್ರ ಅವಕಾಶ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ 40,000ನೇ ಹಡಗು ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.27: ನವ ಮಂಗಳೂರು ಬಂದರು ಪ್ರಾಧಿಕಾರವು ಗುರುವಾರ ಸಂಜೆ 4 ಗಂಟೆಗೆ ಬರ್ತ್ ಸಂಖ್ಯೆ 13ಕ್ಕೆ ಎಲ್‌ಪಿಜಿ ಟ್ಯಾಂಕರ್ ಎಂ.ಟಿ. ಅಪೋಲೋ ಓಶನ್ ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿ ಸಿದೆ. ಈ ಹಡಗು ಬಂದರು ಸ್ಥಾಪನೆಯ ನಂತರ ಆಗಮಿಸಿದ 40,000ನೇ ಹಡಗು ಎಂಬ ವಿಶೇಷ ದಾಖಲೆಯನ್ನು ಮಾಡಿದೆ. ಪ್ರಾಧಿಕಾರದ ಉಪಾಧ್ಯಕ್ಷೆ ಎಸ್. ಶಾಂತಿ ಹಡಗಿನ ಕ್ಯಾಪ್ಟನ್ ಅವರನ್ನು ಸನ್ಮಾನಿಸಿ ಹಡಗನ್ನು ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭ ಬಂದರುದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಂ.ಟಿ.

ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ 40,000ನೇ ಹಡಗು ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ

(ನ್ಯೂಸ್‌ ಕಡಬ) newskadaba.com,  ಮಾ.27: ಖ್ಯಾತ ಕವಿ ಹಾಗೂ ಸುಳ್ಯ ತಾಲೂಕಿನ ಚೊಕ್ಕಾಡಿ ನಿವಾಸಿಯಾದ ಸುಬ್ರಾಯ ಚೊಕ್ಕಾಡಿಯವರಿಗೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ ಪ್ರತಿಷ್ಠಿತ “ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ” ಜೀವಮಾನ ಸಾಧನೆಗಾಗಿ ಘೋಷಿಸಲಾಗಿದೆ. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅವರ ದೀರ್ಘಕಾಲದ ಸೇವೆ ಮತ್ತು ಕಾವ್ಯಸಾಧನೆಗೆ ಈ ಗೌರವ ನೀಡಲಾಗಿದೆ ಎಂದು ಸಂಘ ತಿಳಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲೇ ಆಯೋಜಿಸಲಾಗುವುದು ಎಂದು ಕರ್ನಾಟಕ ಸಂಘ

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಪೆಟ್ರೋಲ್-‌ ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಕಡಿತ: ಪೆಟ್ರೋಲ್ ₹3, ಡೀಸೆಲ್ ಶೂನ್ಯ

(ನ್ಯೂಸ್‌ ಕಡಬ) newskadaba.com,  ಮಾ.27:  ದೇಶದ ಜನರಿಗೆ ದೊಡ್ಡ ನಿರಾಳ ನೀಡುವ ಕ್ರಮವಾಗಿ ಕೇಂದ್ರ ಸರ್ಕಾರ ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಭಾರಿ ಪ್ರಮಾಣದಲ್ಲಿ ಕಡಿತ ಮಾಡಿದೆ. ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ ₹13ರಿಂದ ₹3ಕ್ಕೆ ಇಳಿಸಲಾಗಿದ್ದು, ಡೀಸೆಲ್ ಮೇಲಿನ ₹10 ಸುಂಕವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹೇರಿದ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಈ ಕಡಿತ ಸಂಭವಿಸಿದೆ.

ಪೆಟ್ರೋಲ್-‌ ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಕಡಿತ: ಪೆಟ್ರೋಲ್ ₹3, ಡೀಸೆಲ್ ಶೂನ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.27:  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಬೈಕಂಪಾಡಿ ಮಂಗಳೂರು ಇಲ್ಲಿ ಬಿ.ಇ ( ಕಂಪ್ಯೂಟರ್ ಸೈನ್ಸ್) ಅಥವಾ ಬಿ.ಇ (ಇನ್ಫಾರ್ಮೇಶನ್ ಸೈನ್ಸ್) ಮತ್ತು ಬಿ.ಇ ( ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರಿಂದ ಆಫೀಸು ಕ್ಲರ್ಕ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ದೂ.ಸಂ: 9008263660, 8073208137, 0824-2408003 ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಮಾ.27:  ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು, ಜೊತೆಗೆ ಅವರ ಕುಟುಂಬದ ಕೆಲವು ವರ್ಗಗಳಿಗೂ ಈ ಸೌಲಭ್ಯ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ ಹೆಂಡತಿ ಅಥವಾ ಗಂಡ ಹಾಗೂ ಅವರು ಮರುಮದುವೆಯಾಗುವವರೆಗೂ ಪ್ರಯೋಜನ ಪಡೆಯಬಹುದು. ಒಂದು ವೇಳೆ ಮೃತರಾದ ಬಳಿಕ ಪ್ರಶಸ್ತಿ ಘೋಷಣೆಯಾಗಿದ್ದರೆ

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.27:  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ. ಬೆಂಗಳೂರಿನಲ್ಲಿ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 27. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೊಕ್ಕೊಟ್ಟು ಫೈ ಓವರಲ್ಲಿ ಶುಕ್ರವಾರ ನಸುಕಿನ 3.30ರ ಸುಮಾರಿಗೆ ನಡೆದಿದೆ. ಕೊಲೆಯಾದವರನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಎಂದು ಗುರುತಿಸಲಾಗಿದೆ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಆತನ ಮೇಲೆ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ನಲ್ಲಿ ದಾಳಿ

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಏಕಹಾ ಭಜನಾ ಮಹೋತ್ಸವ

(ನ್ಯೂಸ್‌ ಕಡಬ) newskadaba.com,  ಮಾ.26:    ಆತ್ಮೀಯರೇ,,, ದಿನಾಂಕ 03-04-2026 ನೇ ಶುಕ್ರವಾರ ಕಡಬ 65 ನೇ ವರ್ಷದ ಏಕಹಾ ಭಜನಾ ಸಂದರ್ಭದಲ್ಲಿ ಮದ್ಯಾಹ್ನ ಅನ್ನ ಬಡಿಸುವ ಸ್ವಯಂಸೇವಕರಾಗಿ ನಮ್ಮ ಸಮಾಜ ಎಲ್ಲಾ ಸದಸ್ಯರ ಸಹಕಾರವನ್ನು ಕೇಳಿಕೊಂಡಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿ ಮಾಡಿಕೊಡಬೇಕಾಗಿ ತಮ್ಮೆಲ್ಲರಲ್ಲಿ ವಿನಯಪೂರ್ವಕ ವಿನಂತಿ .. ನಮ್ಮ ಬಿಲ್ಲವ ಸಮಾಜದ ಎಲ್ಲಾ ಹೆಚ್ಚಿನ ಕಾರ್ಯಕ್ರಮ ಮತ್ತು ಮೀಟಿಂಗ್ ಇತ್ಯಾದಿ ಚಟುವಟಿಕೆಗಳು ನಡೆಯುವ ಸ್ಥಳ ಶ್ರೀ ದುರ್ಗಾಂಬಿಕಾ ಅಮ್ಮನವರ ಸನ್ನಿದಿ ಹಾಗಾಗಿ ತಾಯಿಯ ಮಡಿಲಿನಲ್ಲಿ

ಕಡಬದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಏಕಹಾ ಭಜನಾ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top