ಕರಾವಳಿ

ಕರ್ನಾಟಕದ 50 ಸರ್ಕಾರಿ ಹೈಸ್ಕೂಲ್‌ಗಳಿಗೆ ಪಿಯುಸಿ ಸ್ಟೇಟಸ್‌! 40 ವಿದ್ಯಾರ್ಥಿಗಳಿದ್ದರೆ ಸಾಕು, ಪ್ರೌಢಶಾಲೆ ಇನ್ಮುಂದೆ ಪಿಯು ಕಾಲೇಜು

 (ನ್ಯೂಸ್‌ ಕಡಬ) newskadaba.com,  ಮಾ.16: ಎಸ್ಸೆಸ್ಸೆಲ್ಸಿ ಬಳಿಕ ದೂರದ ಪ್ರದೇಶಗಳಲ್ಲಿರುವ ಕಾಲೇಜುಗಳಿಗೆ ತೆರಳಲಾಗದೆ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವ ವಿದ್ಯಾರ್ಥಿನಿಯರಿಗೆ ಸರಕಾರ ಹೊಸ ಯೋಜನೆ ಮೂಲಕ ಸಿಹಿ ಸುದ್ದಿ ನೀಡಿದೆ. ರಾಜ್ಯದ 50 ಸರಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಪರಿವರ್ತಿಸಲು ಅನುಮೋದನೆ ನೀಡಿದೆ. ಈ ಬಾರಿ 100 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಣಗೊಳಿಸಿರುವ ಸರಕಾರ ಈಗ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲು ಹಸಿರು ನಿಶಾನೆ ನೀಡಿದೆ. ಬೆಂಗಳೂರು ಸೇರಿದಂತೆ ನಾನಾ ಜಿಲ್ಲೆಗಳ ಆಯ್ದ 50 ಪ್ರೌಢಶಾಲೆಗಳಲ್ಲಿ ಮೊದಲ ಹಂತದಲ್ಲಿ ಒಂದೆರಡು […]

ಕರ್ನಾಟಕದ 50 ಸರ್ಕಾರಿ ಹೈಸ್ಕೂಲ್‌ಗಳಿಗೆ ಪಿಯುಸಿ ಸ್ಟೇಟಸ್‌! 40 ವಿದ್ಯಾರ್ಥಿಗಳಿದ್ದರೆ ಸಾಕು, ಪ್ರೌಢಶಾಲೆ ಇನ್ಮುಂದೆ ಪಿಯು ಕಾಲೇಜು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಲ್ಲೇ ಮೊಟ್ಟಮೊದಲು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣೆ

 (ನ್ಯೂಸ್‌ ಕಡಬ) newskadaba.com,  ಮಾ.16: ದೇಶದಲ್ಲೇ ಪ್ರಥಮವಾಗಿ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ (CBG) ಘಟಕವನ್ನು ಆರಂಭಿಸಲಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿದ್ದು, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ನಗರದಲ್ಲಿ ಉತ್ಪತ್ತಿಯಾಗುವ ಜೈವಿಕ ತ್ಯಾಜ್ಯವನ್ನು ಉಪಯೋಗಿಸಿ ಕಂಪ್ರೆಸ್ಡ್ ಬಯೋ ಗ್ಯಾಸ್ ಉತ್ಪಾದಿಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪಿಸಲಾಗಿದೆ. ಈ ಯೋಜನೆಯ ಮೂಲಕ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ ಪರ್ಯಾಯ ಇಂಧನ ಉತ್ಪಾದನೆಗೂ

ದೇಶದಲ್ಲೇ ಮೊಟ್ಟಮೊದಲು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಿಲ ಸಿಲಿಂಡರ್ ಕೊರತೆ ಹಿನ್ನೆಲೆ: ಗ್ಯಾಸ್ ಕಂಪನಿಗಳ ಜೊತೆ ಇಂದು ಸಭೆ – ಸಚಿವ ಕೆ.ಎಚ್. ಮುನಿಯಪ್ಪ

(ನ್ಯೂಸ್‌ ಕಡಬ) newskadaba.com,  ಮಾ.16:  ರಾಜ್ಯದಲ್ಲಿ ಉಂಟಾಗಿರುವ ಅನಿಲ ಸಿಲಿಂಡರ್ ಕೊರತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸೋಮವಾರ ಅನಿಲ ಕಂಪನಿಗಳೊಂದಿಗೆ ಸಭೆ ನಡೆಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K. H. Muniyappa ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆಗೆ ಮುಖ್ಯ ಕಾರ್ಯದರ್ಶಿ Shalini Rajneesh ಅವರ ನೇತೃತ್ವದಲ್ಲಿ ಗ್ಯಾಸ್ ಕಂಪನಿಗಳೊಂದಿಗೆ ಮಹತ್ವದ ಸಭೆ ನಡೆಯಲಿದೆ ಎಂದರು. ಈ ಸಭೆಯಲ್ಲಿ ಹೋಟೆಲ್‌ಗಳಿಗೆ ಅಗತ್ಯವಿರುವಷ್ಟು ಅನಿಲ ಸಿಲಿಂಡರ್ ಪೂರೈಕೆ ಮಾಡುವ ಬಗ್ಗೆ

ಅನಿಲ ಸಿಲಿಂಡರ್ ಕೊರತೆ ಹಿನ್ನೆಲೆ: ಗ್ಯಾಸ್ ಕಂಪನಿಗಳ ಜೊತೆ ಇಂದು ಸಭೆ – ಸಚಿವ ಕೆ.ಎಚ್. ಮುನಿಯಪ್ಪ Read More »

ಕರಾವಳಿ

ಕಡಬದ ಯುವಕ ಐರ್ಲೆಂಡ್ ನಲ್ಲಿ ನಿಗೂಢವಾಗಿ ಮೃತಪಟ್ಟ ಪ್ರಕರಣ ನ್ಯಾಯಕ್ಕಾಗಿ ಆಗ್ರಹಿಸಿ ಮೊಂಬತ್ತಿ ಮೆರವಣಿಗೆ

(ನ್ಯೂಸ್‌ ಕಡಬ) newskadaba.com ಮಾ. 16. ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿ ಕೇವಲ 28 ದಿನಗಳಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕಡಬ ಮೂಲದ ಯುವಕನ ಸಾವಿನ ಹಿಂದಿರುವ ರಹಸ್ಯ ಬಯಲಾಗಬೇಕು ಮತ್ತು ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಭಾನುವಾರದಂದು ಕಡಬದಲ್ಲಿ ಮೊಂಬತ್ತಿ ಮೆರವಣಿಗೆಯ ಮೂಲಕ ಪ್ರತಿಭಟಿಸಲಾಯಿತು.   ಕಡಬ ತಾಲೂಕಿನ ಕುಟ್ರುಪಾಡಿ ನಿವಾಸಿ ಸ್ಯಾಂಜೋ ಸುನಿಲ್ (31) ಎಂಬಾತ ಕಳೆದ ಫೆಬ್ರವರಿ ತಿಂಗಳಲ್ಲಿ ಐರ್ಲೆಂಡ್‌ನ ಡಬ್ಲಿನ್‌ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದರು. ಮೃತದೇಹವು ಕಳೆದ ವಾರವಷ್ಟೇ ತಾಯ್ನಾಡಿಗೆ ತಲುಪಿ ಅಂತ್ಯಕ್ರಿಯೆ ನಡೆದಿದ್ದರೂ,

ಕಡಬದ ಯುವಕ ಐರ್ಲೆಂಡ್ ನಲ್ಲಿ ನಿಗೂಢವಾಗಿ ಮೃತಪಟ್ಟ ಪ್ರಕರಣ ನ್ಯಾಯಕ್ಕಾಗಿ ಆಗ್ರಹಿಸಿ ಮೊಂಬತ್ತಿ ಮೆರವಣಿಗೆ Read More »

ಕರಾವಳಿ

ಸುಳ್ಯ–ಕಡಬ ಭಾಗದಲ್ಲಿ ಮಳೆಗಾಳಿ ತೀವ್ರತೆ: ಬಾಳುಗೋಡು, ಐನೆಕಿದು ಪ್ರದೇಶದಲ್ಲಿ ಭಾರೀ ಗಾಳಿ

(ನ್ಯೂಸ್‌ ಕಡಬ) newskadaba.com,  ಮಾ.16: ನಿನ್ನೆ((ಮಾ.15) ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ಭಾಗಗಳಲ್ಲಿ ಸಂಜೆಯ ವೇಳೆಗೆ ಮಳೆಯಾಗಿದ್ದು, ಬಾಳುಗೋಡು ಹಾಗೂ ಐನೆಕಿದು ಪರಿಸರದಲ್ಲಿ ಮಳೆಯ ಜೊತೆಗೆ ಬಾರೀ ಪ್ರಮಾಣದಲ್ಲಿ ಗಾಳಿ ಕೂಡ ಬೀಸಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ ಎಂದು ತಿಳಿದುಬಂದಿದ್ದು, ಹಲವೆಡೆ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿವೆ ಎಂದು ತಿಳಿದುಬಂದಿದೆ. ಅದೇ ರೀತಿ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ

ಸುಳ್ಯ–ಕಡಬ ಭಾಗದಲ್ಲಿ ಮಳೆಗಾಳಿ ತೀವ್ರತೆ: ಬಾಳುಗೋಡು, ಐನೆಕಿದು ಪ್ರದೇಶದಲ್ಲಿ ಭಾರೀ ಗಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ 24/7 ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯ ಆರಂಭ

(ನ್ಯೂಸ್‌ ಕಡಬ) newskadaba.com ಮಾ. 16. ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ನಿಲ್ದಾಣದ ಸೌಮ್ಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಪ್ರಯಾಣಿಕರಿಗೆ ಇನ್ನು ಮುಂದೆ ಡಿಜಿಟಲ್ ಮತ್ತು ಸ್ವಯಂಚಾಲಿತ ಲಗೇಜ್ ಲಾಕರ್ ಸೌಲಭ್ಯ ಲಭ್ಯವಿರಲಿದೆ. ಇದರಿಂದ ಪ್ರಯಾಣಿಕರು ಮತ್ತು ಯಾತ್ರಾರ್ಥಿಗಳಿಗೆ ಆಧುನಿಕ ಮಾದರಿಯ ಸುರಕ್ಷಿತ ಲಗೇಜ್ ಶೇಖರಣಾ ವ್ಯವಸ್ಥೆಯನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಲಾಕರ್ ವ್ಯವಸ್ಥೆಯು ಮಧ್ಯಮ, ದೊಡ್ಡದು ಮತ್ತು ಅತಿ ದೊಡ್ಡ ಗಾತ್ರಗಳಲ್ಲಿ ಲಭ್ಯವಿರಲಿದೆ. ಆರಂಭಿಕ ದರವು ಆರು ಗಂಟೆಗಳ

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ 24/7 ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯ ಆರಂಭ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.16:  ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ….

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಳಿ ಅಂಕಕ್ಕೆ ದಾಳಿ- ಐವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 15. ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 4 ಹುಂಜಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಎಂಬಲ್ಲಿ ನಡೆದಿದೆ. ಕೊಡಂಬೆಟ್ಟು ಗ್ರಾಮದ ಮುಗೇರ ಮನೆಯ ಅಂಕಿತ್, ಉರುಡಾಯಿ ನಿವಾಸಿ ಯಶೋಧರ, ಮುಗೇರ ಮನೆಯ ಶಿವಪ್ಪ, ತಣ್ಣೀರುಪಂಥ ಗ್ರಾಮದ ಮುಂದಿ ಮನೆಯ ಕರುಣಾಕರ ಪೂಜಾರಿ, ಮಚ್ಚಿನ ಗ್ರಾಮದ ಮಡಕ್ಕಿಲ ಮನೆಯ ಉಮೇಶ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಥಳದಿಂದ

ಕೋಳಿ ಅಂಕಕ್ಕೆ ದಾಳಿ- ಐವರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಇಬ್ಬರು ಯುವಕರಿಗೆ ಚೂರಿ ಇರಿತ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 15. ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಸುಳ್ಯದ ಶ್ರೀರಾಂಪೇಟೆಯಲ್ಲಿ ಶನಿವಾರ ಸಂಜೆ ನಡೆದಿದೆ. ಚೂರಿ ಇರಿತಕ್ಕೊಳಗಾದ ಯುವಕರನ್ನು ಸುಳ್ಯ ಬೀರಮಂಗಲ ಬಂಗ್ಲಗುಡ್ಡೆ ನಿವಾಸಿಗಳಾದ ಹರೀಶ್ ಬಂಗ್ಲಗುಡ್ಡೆ ಹಾಗೂ ನಿತೇಶ್ ಕೆ.ಆರ್. ಬಂಗ್ಲಗುಡ್ಡೆ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಾದ ಅಜ್ಜಾವರ ಗ್ರಾಮದ ಕಾಂತಮಂಗಲ ಗಂಧದಗುಡ್ಡೆ ನಿವಾಸಿಗಳಾದ ದಯಾನಂದ ಮತ್ತು ರಾಜೇಶ್ ಬಿ.ಆರ್. ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ

ಇಬ್ಬರು ಯುವಕರಿಗೆ ಚೂರಿ ಇರಿತ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ ಭಾಷೆಯನ್ನು ಪ್ರೀತಿಸಿದಾಗ ಬದುಕು ಸುಂದರ – ಯು. ರಾಮರಾವ್

(ನ್ಯೂಸ್ ಕಡಬ) newskadaba.com ಮಾ. 15. ನಮ್ಮ ತಾಯಿ ಭಾಷೆ ನಮ್ಮ ಅಮ್ಮನಂತೆ ಪೂಜ್ಯನೀಯ. ಅದನ್ನು ಪ್ರೀತಿಸುತ್ತಾ ಬದುಕುವುದು ಸಂತಸ ಮತ್ತು ನೆಮ್ಮದಿ ನೀಡುತ್ತದೆ ಎಂದು ರೇಡಿಯೋ ಕೇಳುಗರ ಸಂಘದ ಸ್ಥಾಪಕಾಧ್ಯಕ್ಷ ಹಾಗೂ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ಅಧ್ಯಕ್ಷ  ಯು. ರಾಮರಾವ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು – ಮಂಗಳೂರು ತಾಲೂಕು ಘಟಕ ಅವರ ಮನೆಗೆ ಭೇಟಿ ನೀಡಿ ಗೌರವಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಾ ಆಂಟಿ- ಅಂಕಲ್ ಬೇಡ ; ಅತ್ತೆ- ಮಾವ,

ತಾಯಿ ಭಾಷೆಯನ್ನು ಪ್ರೀತಿಸಿದಾಗ ಬದುಕು ಸುಂದರ – ಯು. ರಾಮರಾವ್ Read More »

ಕರಾವಳಿ
Scroll to Top