ಕರಾವಳಿ

ಇಂದಿನಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕೃತಿಕ ಮೆರವಣಿಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಉತ್ಸವ ಕರಾವಳಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರಕಲಿದೆ. ಉತ್ಸವದ ಪ್ರಯುಕ್ತ ವೈಭವಯುತ ಸಾಂಸ್ಕೃತಿಕ ಮೆರವಣಿಗೆ ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಮಧ್ಯಾಹ್ನ 3.30 ಕ್ಕೆ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಾಂಸ್ಕೃತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಲಾತಂಡಗಳು ವೈವಿಧ್ಯಮಯ ಕಲಾ ಪ್ರದರ್ಶನದೊಂದಿಗೆ ಭಾಗವಹಿಸಲಿದ್ದು, ನಗರದ ಜನತೆಗೆ ವಿವಿಧ ಕಲಾ ಪ್ರಕಾರಗಳನ್ನು […]

ಇಂದಿನಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕೃತಿಕ ಮೆರವಣಿಗೆ Read More »

ಕರಾವಳಿ

ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು

➤➤ ವೀಡಿಯೋ ನ್ಯೂಸ್ ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹನಿಟ್ರ್ಯಾಪ್ ಮಾಡಿದ ರೀತಿ ನೋಡಿದರೆ ನಿಮಗೇ ಶಾಕ್..!! ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು ವೀಡಿಯೋ ಗಾಗಿ??ಕ್ಲಿಕ್ ಮಾಡಿ

ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು Read More »

ಕರಾವಳಿ

ಬಂಟ್ವಾಳದಲ್ಲಿ ನಾಮಫಲಕ ಹಾಕದೆ ರಸ್ತೆ ಕಾಮಗಾರಿ: ಕಿರು ಸೇತುವೆ ನಿರ್ಮಾಣ ಗುಂಡಿಗೆ ಬಿದ್ದ ಕಾರು, ಚಾಲಕನಿಗೆ ಗಾಯ

ಬಂಟ್ವಾಳ, ಜ.9: ಯಾವುದೇ ನಾಮಫಲಕ ಹಾಕದೆ ರಸ್ತೆಯ ಕಾಮಗಾರಿ ನಡೆಸುತ್ತಿರುವ ಪರಿಣಾಮ ಕಾರೊಂದು ಕಿರು ಸೇತುವೆಯ ನಿರ್ಮಾಣದ ಗುಂಡಿಗೆ ಬಿದ್ದು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರು ಚಾಲಕ ರಾಜೇಶ್ ಎಂದು ಗುರುತಿಸಲಾಗಿದೆ. ಕಾರು ಚಾಲಕ ರಾಜೇಶ್ ಬಂಟ್ವಾಳ ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ರಸ್ತೆ ಕಾಣದೆ ಕಾರು ಗುಂಡಿಗೆ ಬಿದ್ದಿದೆ. ಬಿ.ಸಿರೋಡು – ಪುಂಜಾಲಕಟ್ಟೆ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿದ್ದು, ರಸ್ತೆಯಲ್ಲಿ ಯಾವುದೇ ಮುನ್ಸೂಚನೆಯ ಫಲಕ ಹಾಕದೇ

ಬಂಟ್ವಾಳದಲ್ಲಿ ನಾಮಫಲಕ ಹಾಕದೆ ರಸ್ತೆ ಕಾಮಗಾರಿ: ಕಿರು ಸೇತುವೆ ನಿರ್ಮಾಣ ಗುಂಡಿಗೆ ಬಿದ್ದ ಕಾರು, ಚಾಲಕನಿಗೆ ಗಾಯ Read More »

ಕರಾವಳಿ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ  ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಂದು ಭಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಅರ್ಜಿದಾರರು ಹಿಂದುಳಿದ ವರ್ಗಗಳ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆ Read More »

ಕರಾವಳಿ

ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.9    ನೂಜಿಬಾಳ್ತಿಲ ಗ್ರಾಮದ ಒರುಂಬಾಳು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಗಣಹೋಮ ಕಾರ್ಯಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.11ರಂದು ನಡೆಯಲಿದೆ. ಜ.10ರಂದು ಭಕ್ತಾಧಿಗಳಿಂದ ಕ್ಷೇತ್ರಕ್ಕೆ ಹಸುರುವಾಣಿ ಸಮರ್ಪಣೆ ನಡೆಯಲಿದೆ. ಜ.11ರಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ ಬಳಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ತಂಬಿಲ

ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕರಾವಳಿ

ಬೀದಿ-ಬದಿ ವ್ಯಾಪಾರಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಇಂದು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ಮಹಾನಗರಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾರ್ಯಾಲಯ ದಕ್ಷಿಣ ಕನ್ನಡ ಜಿಲ್ಲೆ, ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಅಡಿಯಲ್ಲಿ  ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆ, ಅತ್ತಾವರ, ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಮಂಗಳೂರು ಮಹಾನಗರಪಾಲಿಕೆ

ಬೀದಿ-ಬದಿ ವ್ಯಾಪಾರಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಇಂದು Read More »

ಕರಾವಳಿ

ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾದ್ಯಂತ ಮಿಂಚಿನ ನೋಂದಣಿ ಕಾರ್ಯಕ್ರಮವು ಪ್ರಾರಂಭವಾಗಿದ್ದು, ಈ ಕಾರ್ಯಕ್ರಮವು ಜನವರಿ 10 ರವರೆಗೆ ವಿಸ್ತರಣೆಗೊಂಡಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜನವರಿ 15ರಂದು ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತರನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನೂಕೂಲಕ್ಕಾಗಿ ವಿಸ್ತರಣೆಗೊಂಡಿದೆ, ನೊಂದಣಿ ಅಭಿಯಾನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ Read More »

ಕರಾವಳಿ

ಜ.10 ರಂದು ಕಾನೂನು ಅರಿವು ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಪರಿಶಿಷ್ಟ  ಜಾತಿ ಮತ್ತು ಪಂಗಡಗಳ ಸಂಘ. ದ.ಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ & ನಿಯಂತ್ರಣ) ಕಾಯ್ದೆ-1986ರಡಿ ಕಾನೂನು ಅರಿವು ಕಾರ್ಯಗಾರ ಜನವರಿ 10 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು

ಜ.10 ರಂದು ಕಾನೂನು ಅರಿವು ಕಾರ್ಯಗಾರ Read More »

ಕರಾವಳಿ

ಚಂದ್ರಗಹಣ ವೀಕ್ಷಣೆ- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮುಕ್ತ ಅವಕಾಶ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಜನವರಿ 10, ಶುಕ್ರವಾರ ರಾತ್ರಿ 10.37ರಿಂದ ಜನವರಿ 11ರ ಮುಂಜಾನೆ 2.42ರವರೆಗೆ ಚಂದ್ರಗಹಣ ಗೋಚರಿಸುತ್ತದೆ. ಈ ವಿದ್ಯಮಾನವನ್ನು ವೀಕ್ಷಿಸಲು ಆಸಕ್ತರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ ರಾವ್ ಪ್ರಕಟಣೆ ತಿಳಿಸಿದೆ.

ಚಂದ್ರಗಹಣ ವೀಕ್ಷಣೆ- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮುಕ್ತ ಅವಕಾಶ Read More »

ಕರಾವಳಿ

ಡಿಪ್ಲೋಮಾ-ಬಾಕಿ ಪರೀಕ್ಷೆಗೆ ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  2003-04ನೇ ಸಾಲಿನಲ್ಲಿ ಸಿ-03 ಪಠ್ಯಕ್ರಮದಲ್ಲಿ ಹಾಗೂ 2009-10ನೇ ಸಾಲಿನಲ್ಲಿ ಸಿ-09 ಪಠ್ಯಕ್ರಮದಲ್ಲಿ ಡಿಪ್ಲೋಮಾ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ಬಾಕಿಯಿರುವ ವಿಷಯಗಳನ್ನು ಪರೀಕ್ಷೆ ಬರೆಯಲು ಏಪ್ರಿಲ್/ಮೇ 2020 ರ ಪರೀಕ್ಷೆಗೆ ಕೊನೆಯ ಅವಕಾಶವಿದೆ. ನಂತರ ಅವಕಾಶವಿರುವುದಿಲ್ಲ ಎಂದು ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಪ್ರಿನ್ಸಿಪಾಲ್ ಪ್ರಕಟಣೆ ತಿಳಿಸಿದೆ.

ಡಿಪ್ಲೋಮಾ-ಬಾಕಿ ಪರೀಕ್ಷೆಗೆ ಕೊನೆಯ ಅವಕಾಶ Read More »

ಕರಾವಳಿ
Scroll to Top