ಕರಾವಳಿ

ಮುಳ್ಳೇರಿಯಾದಲ್ಲಿ ಭೀಕರ ರಸ್ತೆ ಅಪಘಾತ: ದಂಪತಿ ಸ್ಥಳದಲ್ಲೇ ಮೃತ್ಯು

ಕಾಸರಗೋಡು, ಜ.6: ಬೈಕ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಮುಳ್ಳೇರಿಯಾ ಸಮೀಪ ದ ಕಾರಡ್ಕದಲ್ಲಿ ನಡೆದಿದೆ.       ಮೃತಪಟ್ಟವರನ್ನು ಗೋವಿಂದ ರಾಜ್ ( 53) ಮತ್ತು ಪತ್ನಿ ಉಮಾವತಿ ( 42 ) ಎಂದು ಗುರುತಿಸಲಾಗಿದೆ. ಗೋವಿಂದರಾಜ್ ಮತ್ತು ಪತ್ನಿ ಸಂಚರಿಸುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಇನ್ನೋವಾ ಕಾರು ಢಿಕ್ಕಿ ಹೊಡೆದಿದ್ದು, ಬೈಕನ್ನು ಮೀಟರ್ ಗಳಷ್ಟು ದೂರ ಕಾರು ಎಳೆದೊಯ್ದಿದೆ. ದಂಪತಿಗಳು […]

ಮುಳ್ಳೇರಿಯಾದಲ್ಲಿ ಭೀಕರ ರಸ್ತೆ ಅಪಘಾತ: ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಸಚಿವ ವಿ ಸೋಮಣ್ಣ  ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4     ವಸತಿ ತೋಟಗಾರಿಕೆ & ರೇಷ್ಮೆ ಸಚಿವ ವಿ ಸೋಮಣ್ಣ ಇವರು ದ.ಕ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಜನವರಿ 8 ರಂದು ಬೆಳಿಗ್ಗೆ 8.35 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 8.45 ಗಂಟೆಗೆ ರಸ್ತೆ ಮೂಲಕ ಉಡುಪಿಗೆ ತೆರಳುವರು. ಸಂಜೆ 4.30 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಕೇಂದ್ರಸ್ಥಾನ ಬೆಂಗಳೂರಿಗೆ ತೆರಳುವರು.

ಸಚಿವ ವಿ ಸೋಮಣ್ಣ  ಪ್ರವಾಸ Read More »

ಕರಾವಳಿ

ಜ.14 ರಂದು ಪುತ್ತೂರು ಸಾರಿಗೆ ಅದಾಲತ್

(ನ್ಯೂಸ್ ಕಡಬ) newskadaba.com, ಪುತ್ತೂರು, ಜ.4   ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 14 ರಂದು ಮಧ್ಯಾಹ್ನ 3.30 ಗಂಟೆಗೆ ಸಾರಿಗೆ ಅದಾಲತ್ ನಡೆಯಲಿದೆ. ಸಭೆಯಲ್ಲಿ ಸಾರ್ವಜನಿಕರು ಸಾರಿಗೆ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಅಹವಾಲುಗಳು ಮತ್ತು ಸಲಹೆ ಸೂಚನೆಗಳನ್ನು ಸಲ್ಲಿಸಬಹುದು  ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪುತ್ತೂರು ಇವರ ಪ್ರಕಟಣೆ ತಿಳಿಸಿದೆ.

ಜ.14 ರಂದು ಪುತ್ತೂರು ಸಾರಿಗೆ ಅದಾಲತ್ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4  ದಕ್ಷಿಣ ಕನ್ನಡ ಜಿಲ್ಲೆಯ 2020ನೇ ಜನವರಿ ಮಾಹೆಯಲ್ಲಿ ನಡೆಯುವ ಪರಿಷ್ಕೃತ ಉದರ ದರ್ಶಕ ಶಸ್ತ್ರಚಿಕಿತ್ಸೆಯ ವಿವರ ಹೀಗಿವೆ, ಜನವರಿ 07 ರಂದು ಪುತ್ತೂರು ತಾಲೂಕಿನ  ಸರಕಾರಿ ಆರೋಗ್ಯ ಕೇಂದ್ರ ಕಡಬ ಮತ್ತು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಗಂಜಿಮಠ, 10 ರಂದು ಬಂಟ್ವಾಳ  ತಾಲೂಕಿನ  ತಾಲೂಕು ಆಸ್ಪತ್ರೆ ಮತ್ತು ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, 13 ರಂದು ಪುತ್ತೂರು ಸಾರ್ವಜನಿಕ ಆಸ್ಪತ್ರೆ, 14 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ

ಉದರ ದರ್ಶಕ ಶಸ್ತ್ರಚಿಕಿತ್ಸೆ Read More »

ಕರಾವಳಿ

ಕರಾವಳಿ ಉತ್ಸವಕ್ಕೆ ಮೆರುಗು : ಬಾನಂಗಳದಲ್ಲಿ ಹಾರಾಡಲಿದೆ ಚಿತ್ತಾಕರ್ಷಕ ಗಾಳಿಪಟ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4  ಈ ಸಾಲಿನ ಕರಾವಳಿ ಉತ್ಸವವು ಜನವರಿ 10ರಿಂದ ಪ್ರಾರಂಭವಾಗಲಿದ್ದು, ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವ ನಡೆಯಲಿದೆ. ಕರಾವಳಿ ಉತ್ಸವದ ಕೊನೆಯ ಮೂರು ದಿನ ಜನವರಿ 17ರಿಂದ 19ರವರೆಗೆ ಪಣಂಬೂರು ಬೀಚ್‍ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗಿದೆ. ದೇಶದ ನುರಿತ ಗಾಳಿಪಟ ಕ್ರೀಡಾಳುಗಳೊಂದಿಗೆ ಹಲವು ವಿದೇಶೀ ರಾಷ್ಟ್ರಗಳ ಗಾಳಿಪಟ ಕ್ರೀಡಾಳುಗಳೂ ಭಾಗವಹಿಸಿ, ಉತ್ಸವದ ಮೆರುಗು ಹೆಚ್ಚಿಸಲಿದ್ದಾರೆ. ಈಗಾಗಲೇ ಹಲವು ರಾಷ್ಟ್ರಗಳ ಗಾಳಿಪಟ ಕ್ರೀಡಾಳುಗಳು ಮಂಗಳೂರಿನಲ್ಲಿ ನಡೆಯಲಿರುವ

ಕರಾವಳಿ ಉತ್ಸವಕ್ಕೆ ಮೆರುಗು : ಬಾನಂಗಳದಲ್ಲಿ ಹಾರಾಡಲಿದೆ ಚಿತ್ತಾಕರ್ಷಕ ಗಾಳಿಪಟ Read More »

ಕರಾವಳಿ

ಜ.9 ರಂದು  ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4  ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ 2019-20ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜನವರಿ 9 ರಂದು ಬೆಳಿಗ್ಗೆ 10 ಗಂಟೆಗೆ  ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಸ್ಪರ್ಧೆ ಜನವರಿ 10 ರಂದು ಬೆಳಿಗ್ಗೆ 9.30

ಜ.9 ರಂದು  ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ Read More »

ಕರಾವಳಿ

ಜ.18 ರಂದು ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4     ಜನವರಿ 18 ರಂದು ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾ ಬಾಲಭವನ ಕದ್ರಿ ಮಂಗಳೂರು ಇಲ್ಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ 5-8, 9-12, 13-16 ವರ್ಷದ ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆಯನ್ನು ಏರ್ಪಡಿಸಲಿದ್ದು ಆಸಕ್ತಿಯುಳ್ಳ ಮಕ್ಕಳು ಸ್ಪರ್ಧೆಯಲ್ಲಿ  ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು ದೂರವಾಣಿ ಸಂಖ್ಯೆ 0824-2451254 ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಮಹಿಳಾ

ಜ.18 ರಂದು ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆ Read More »

ಕರಾವಳಿ

ವಿದ್ಯಾರ್ಥಿ ವೇತನ ತಂತ್ರಾಂಶ ಅರ್ಜಿ – ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4   ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್‍ಎಸ್‍ಪಿ)ನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜನವರಿ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಆನ್‍ಲೈನ್ ವೆಬ್‍ಸೈಟ್ ನ್ನು ವೀಕ್ಷಿಸಬಹುದು ಎಂದು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ವೇತನ ತಂತ್ರಾಂಶ ಅರ್ಜಿ – ಅವಧಿ ವಿಸ್ತರಣೆ Read More »

ಕರಾವಳಿ

ಕರಾವಳಿ ಉತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4   2019-20ನೇ ಸಾಲಿನ ಕರಾವಳಿ ಉತ್ಸವದ ಅಂಗವಾಗಿ ದ. ಕ. ಜಿಲ್ಲಾಡಳಿತ, ಕರಾವಳಿ ಉತ್ಸವ ಕ್ರೀಡಾ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ  ಜಿಲ್ಲಾ ಮಟ್ಟದ ಕ್ರೀಡೋತ್ಸವ ಜನವರಿ 11 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಮಂಗಳೂರು ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಪ್ರೌಢ ಶಾಲಾ ಬಾಲಕರಿಗೆ ಫುಟ್‍ಬಾಲ್ ಪಂದ್ಯಾಟ, ಮಂಗಳಾ ಕ್ರೀಡಾಂಗಣದಲ್ಲಿ ಜಿಲ್ಲಾ ಪದವಿ ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ವಾಲಿಬಾಲ್ ಪಂದ್ಯಾಟ ಮತ್ತು ಜಿಲ್ಲಾ  ಪ್ರೌಢ ಶಾಲಾ ಬಾಲಕಿಯರಿಗೆ

ಕರಾವಳಿ ಉತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆ Read More »

ಕರಾವಳಿ

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿದ ಬಸ್

ಉಪ್ಪಿನಂಗಡಿ, ಜ.4: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಅಮೈ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.           ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಅಮೈ ಕಿರು ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಉರುಳಿದ್ದು, ಘಟನೆಯಿಂದಾಗಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ ಒಟ್ಟು 27 ಮಂದಿ ಪ್ರಯಾಣಿಕರಿದ್ದು ಯಾವುದೇ ಪ್ರಾಣಾಪಾಯ

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿದ ಬಸ್ Read More »

ಕರಾವಳಿ
Scroll to Top