ಕರಾವಳಿ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್‍ ಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಸಹ ಗಾಬರಿ/ ಆತಂಕಪಡಬಾರದೆಂದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರ್‍ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯ ಬೀಳುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆ […]

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ Read More »

ಕರಾವಳಿ

ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು ಶಿಕ್ಷೆ, ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಅಪ್ರಾಪ್ತ ವಯಸ್ಕ ಬಾಲಕನನ್ನು ದುಡಿಸುತ್ತಿದ್ದ ಮಾಲೀಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡಬಿದ್ರೆ ನ್ಯಾಯಾಲಯ ತೀರ್ಪು ನೀಡಿದೆ. 2024 ರ ಸೆ. 19 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮೂಡಬಿದ್ರೆ ಕಡಲಕೆರೆಯಲ್ಲಿ ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯೊಂದರಲ್ಲಿ 16 ವಯಸ್ಸಿನ ಕಿಶೋರ ಕಾರ್ಮಿಕನು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು, ನಂತರ ಬಾಲಕನನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿತ್ತು. ಪ್ರಕರಣದ

ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು ಶಿಕ್ಷೆ, ದಂಡ Read More »

ಕರಾವಳಿ

ಗುಂಡ್ಯ: ಕಾರು – ಬಸ್ ಮಧ್ಯೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬಸ್ ನಡುವೆ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗುಂಡ್ಯ: ಕಾರು – ಬಸ್ ಮಧ್ಯೆ ಭೀಕರ ಅಪಘಾತ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.13: ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಬಿಸಿಲಿನಿಂದ ಕೂಡಿದ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಮಾ.12, ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು ಗ್ರಾಹಕರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್‌, ಸರ್ವೀಸ್ ಅಪಾರ್ಟ್‌ಮೆಂಟ್‌, ಪೇಯಿಂಗ್‌ ಗೆಸ್ಟ್‌, ಕಚೇರಿ ಮುಂತಾದ ಉದ್ದೇಶಗಳಿಗೆ (ಎಲ್‌ಟಿ 1 ಸಂಪರ್ಕ) ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದ್ದಿದ್ದು, ಇಂತಹ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ. ಗೃಹ ಬಳಕೆಯ ಉದ್ದೇಶಕ್ಕೆ ಪಡೆದ ವಿದ್ಯುತ್‌ ಸಂಪರ್ಕವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಗ್ರಾಹಕರು,

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.12, ಕಡಬ: ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. . ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಜೀವನಾಡಿ- ಡಾ. ಪುಷ್ಪಾ ಅಮರನಾಥ್

(ನ್ಯೂಸ್‌ ಕಡಬ) newskadaba.com,  ಮಾ.12, ಕಡಬ:ಗ್ಯಾರಂಟಿ ಯೋಜನೆಯು ಬಡವರ, ಮಧ್ಯಮ ವರ್ಗದವರ ಜೀವನಾಡಿಯಾಗಿದ್ದು, ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು. ಅವರು ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಗ್ರಾಮ ಪಂಚಾಯತ್ ಬಿಳಿನೆಲೆ ಸಂಯುಕ್ತ ಆಶ್ರಯದಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ  ನಡೆದ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಮತ್ತು ಮಹಿಳಾ

ಕಡಬ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಜೀವನಾಡಿ- ಡಾ. ಪುಷ್ಪಾ ಅಮರನಾಥ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.12: ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಒಣ ಹವೆ ಹಾಗೂ ಬಿಸಿಲಿನಿಂದ ಕೂಡಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಾದಕ ವಸ್ತು ಸೇವನೆ- ಒಬ್ಬ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಮಾ.11: ಬಿಕರ್ನಕಟ್ಟೆ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪಿಯನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಕೋಯಿಕ್ಕೋಡ್ ಜಿಲ್ಲೆಯ ಪೆರಂಬರ ಕೋರನ್ಕಂಡಿ ಮೀಥಲ್ ನಿವಾಸಿ ಮೊಹಮ್ಮದ್ ಶಾಮಿಲ್ (21) ಬಂಧಿತ ಆರೋಪಿ. ಪೊಲೀಸರು ಗಸ್ತಿನಲ್ಲಿರುವಾಗ ಸೋಮವಾರ ರಾತ್ರಿ 10 ಗಂಟೆ ವೇಳೆಗೆ ಬಿಕರ್ನಕಟ್ಟೆ ಬಳಿ ಮಾದಕ ವಸ್ತು ಸೇವಿಸಿದಂತೆ ಕಂಡು ಬಂದ ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಈತನ ವಿರುದ್ಧ ಕದ್ರಿ ಠಾಣೆಯಲ್ಲಿ

ಮಂಗಳೂರು: ಮಾದಕ ವಸ್ತು ಸೇವನೆ- ಒಬ್ಬ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

13 ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಗೆ ದಯಾ ಮರಣ ದಯಪಾಲಿಸಿದ ಸುಪ್ರೀಂ ಕೋರ್ಟ್‌

(ನ್ಯೂಸ್‌ ಕಡಬ) newskadaba.com,  ಮಾ.11:  ಕಳೆದ ಸುಮಾರು 13 ವರ್ಷಗಳಿಂದ ಶಾಶ್ವತ ಕೋಮಾ ಸ್ಥಿತಿಯಲ್ಲಿದ್ದ ಗಾಜಿಯಾಬಾದ್‌ನ ಹರೀಶ್‌ ರಾಣಾ ಎಂಬ ವ್ಯಕ್ತಿಗೆ ದಯಾ ಮರಣ ಕಲ್ಪಿಸಲು ಸರ್ವೋಚ್ಚ ನ್ಯಾಯಲಯ ಅನುಮತಿ ನೀಡಿದೆ. ಆತನ ಕುಟುಂಬವು ಜೀವರಕ್ಷಕ ವೈದ್ಯಕೀಯ ಸಹಾಯವನ್ನು ಹಿಂಪಡೆಯಲು ಮತ್ತು ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ನೀಡಲು ಅನುಮತಿ ಕೋರಿ ನ್ಯಾಲಯಲದ ಮೆಟ್ಟಿಲು ಏರಿದ್ದರು. ರಾಣಾ ವಿದ್ಯಾರ್ಥಿಯಾಗಿದ್ದಾಗ ನಾಲ್ಕನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಪೆಟ್ಟು ಮಾಡಿಕೊಂಡ ನಂತರ 2013 ರಿಂದ ಹಾಸಿಗೆ ಹಿಡಿದಿದದ್ದರು. ಅವರ ಕುರಿತಾದ

13 ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಗೆ ದಯಾ ಮರಣ ದಯಪಾಲಿಸಿದ ಸುಪ್ರೀಂ ಕೋರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top