ಕರಾವಳಿ

ದ.ಕ ಜಿಲ್ಲೆ ಗೃಹರಕ್ಷಕ ದಳ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.26  ಗೃಹರಕ್ಷಕ ದಳದಲ್ಲಿ ಖಾಲಿಯಿರುವ ಗೃಹರಕ್ಷಕರನ್ನು ಭರ್ತಿ ಮಾಡಲು ಮೂಡಬಿದ್ರಿ, ಸುರತ್ಕಲ್, ಪಣಂಬೂರು, ಮಂಗಳೂರು, ಮೂಲ್ಕಿ ಘಟಕಗಳಲ್ಲಿ ಪುರುಷರಿಂದ ಅರ್ಜಿ ಆಹ್ವಾನಿಸಲಾಗಿದ್ದು, 20 ವರ್ಷ ವಯಸ್ಸು ಮೇಲ್ಪಟ್ಟ  ಆಸಕ್ತ ಪುರುಷ ಅಭ್ಯರ್ಥಿಗಳು ಅರ್ಜಿ ನೀಡಬಹುದು. ಅರ್ಜಿಯನ್ನು ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು, ಕಚೇರಿ ದೂರವಾಣಿ ಸಂಖ್ಯೆ 0824-2220562 ಇಲ್ಲಿ ಪಡೆಯಬಹುದು ಎಂದು ದ.ಕ ಜಿಲ್ಲೆ ಸಮಾದೇಷ್ಟರ  ಪ್ರಕಟಣೆ ತಿಳಿಸಿದೆ.

ದ.ಕ ಜಿಲ್ಲೆ ಗೃಹರಕ್ಷಕ ದಳ – ಅರ್ಜಿ ಆಹ್ವಾನ Read More »

ಕರಾವಳಿ

ಜ.3 ರಂದು ಬಂಟ್ವಾಳ ತಾ. ಕೆ.ಡಿ.ಪಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.26   ಬಂಟ್ವಾಳ ತಾಲೂಕು ಪಂಚಾಯತ್‍ನ 2019-20 ನೇ ಸಾಲಿನ ತ್ರೈಮಾಸಿಕ ಕೆ.ಡಿ.ಪಿ ಸಭೆ ಜನವರಿ 3 ರಂದು ಬೆಳಿಗ್ಗೆ 10.30 ಗಂಟೆಗೆ  ತಾಲೂಕು ಪಂಚಾಯತ್  ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಜ.3 ರಂದು ಬಂಟ್ವಾಳ ತಾ. ಕೆ.ಡಿ.ಪಿ ಸಭೆ Read More »

ಕರಾವಳಿ

ಕೇಂದ್ರ ಸರಕಾರಿ ಉದ್ಯೋಗ – ಉಚಿತ ಪರೀಕ್ಷಾ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.26   ಕೇಂದ್ರ ಸರಕಾರದ ವಿವಿಧ ಇಲಾಖೆಗಳ ಸಿಬ್ಬಂದಿ ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗವು ನಡೆಸುವ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ 6 ರಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಇಚ್ಛಿಸುವ  ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಬೇಕು. ದೂರವಾಣಿ ಸಂಖ್ಯೆ  0824-2457139 ಸಂಪರ್ಕಿಸಬಹುದು ಎಂದು  ಉದ್ಯೋಗಾಧಿಕಾರಿ ಜಿಲ್ಲಾ ಉದ್ಯೋಗ ವಿನಿಮಯ

ಕೇಂದ್ರ ಸರಕಾರಿ ಉದ್ಯೋಗ – ಉಚಿತ ಪರೀಕ್ಷಾ ಪೂರ್ವ ತರಬೇತಿ Read More »

ಕರಾವಳಿ

ಚಾಕಲೇಟ್ ತಯಾರಿ ತರಬೇತಿ- ದಿನ ಮುಂದೂಡಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.26    ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 21  ರಂದು ನಡೆಯಬೇಕಿದ್ದ ಚಾಕಲೇಟ್ ತಯಾರಿ (ಹುಟ್ಟುಹಬ್ಬ, ಹೊಸವರ್ಷ, ಕ್ರಿಸ್‍ಮಸ್ ಆಚರಣೆಗಳಲ್ಲಿ ಉಪಯೋಗಿಸುವ ಚಾಕಲೇಟ್ ತಯಾರಿ) ತರಬೇತಿ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ತರಬೇತಿಯನ್ನು ಡಿಸೆಂಬರ್ 27 ರಂದು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್‍ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 26 ರೊಳಗೆ  ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ  ರುಕ್ಮಯ ದೂರವಾಣಿ ಸಂಖ್ಯೆ 9845523944

ಚಾಕಲೇಟ್ ತಯಾರಿ ತರಬೇತಿ- ದಿನ ಮುಂದೂಡಿಕೆ Read More »

ಕರಾವಳಿ

ಎಣ್ಮೂರು :ಕೆಮ್ಮಲೆ (ಹೇಮಳ) ನಾಗಬ್ರಹ್ಮ ದೇವಸ್ಥಾನಕ್ಕೆ ಸರಕಾರದಿಂದ 45 ಲಕ್ಷ ಬಿಡುಗಡೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.26   ಕಡಬ ತಾಲೂಕು ಎಣ್ಮೂರು ಗ್ರಾಮದ ಹೇಮಳ ಶ್ರೀ ನಾಗಬ್ರಹ್ಮ ದೇವಸ್ಥಾನದ ಜೀರ್ಣೊದ್ಧಾರವು ಊರ-ಪರವೂರ ಭಕ್ತರ ಸಹಕಾರದಿಂದ ನಡೆಯುತ್ತಿದ್ದು, ಆರ್ಥಿಕ ಅಡಚಣೆಯುಂಟಾದ ಸಂದರ್ಭದಲ್ಲಿ ಗ್ರಾಮಸ್ಥರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೇಟಿಯಾಗಿ ಸಮಸ್ಯೆ ಹೇಳಿದಾಗ ತಕ್ಷಣ ಸ್ಪಂದಿಸಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಬೇಟಿ ಮಾಡಿಸಿ ಅನುದಾನದ ಭರವಸೆ ನೀಡಿದ್ದರು. ಇದೀಗ ಸರಕಾರದಿಂದ ಕೆಲವೇ ದಿನಗಳಲ್ಲಿ ರೂ. 45 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ದೇವಾಲಯಕ್ಕೆ ಅನುದಾನ ಒದಗಿಸಿಕೊಟ್ಟ ಮುಖ್ಯಮಂತ್ರಿಗಳಾದ ಬಿ. ಎಸ್.

ಎಣ್ಮೂರು :ಕೆಮ್ಮಲೆ (ಹೇಮಳ) ನಾಗಬ್ರಹ್ಮ ದೇವಸ್ಥಾನಕ್ಕೆ ಸರಕಾರದಿಂದ 45 ಲಕ್ಷ ಬಿಡುಗಡೆ Read More »

ಕರಾವಳಿ

ಕೊಣಾಜೆ: ಉಚಿತ ಕಣ್ಣಿನ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.26  ಕಡ್ಯ ಕೊಣಾಜೆ ಗ್ರಾ.ಪಂ. ನೇತೃತ್ವದಲ್ಲಿ ಸಂಭವ್ ಫೌಂಡೇಶನ್ 2.5 ಎನ್‍ವಿಜಿ ಐ ಮಿತ್ರ ಸುರತ್ಕಲ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಡಾ. ಪಿ. ದಯಾನಂದ ಪೈ ಮತ್ತು ಟಿ ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಕಡ್ಯ ಕೊಣಾಜೆ ಶ್ರೀ ದುರ್ಗಾಂಬಿಕಾ ಸಭಾಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಬೇಬಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಕೊಣಾಜೆ: ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಕರಾವಳಿ

ಗುಣಮಟ್ಟದ ಸೈಕಲ್ ವಿತರಿಸಿ; ನೂಜಿಬಾಳ್ತಿಲದಲ್ಲಿ 9, 10ನೇ ತರಗತಿ ಪ್ರಾರಂಭಿಸಿ ➤ ನೂಜಿಬಾಳ್ತಿಲ ಮಕ್ಕಳ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.26  ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ಮಕ್ಕಳ ಗ್ರಾಮಸಭೆಯು ನೂಜಿಬಾಳ್ತಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ವಿನಿತ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮದ ವಿವಿಧ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳು ಪ್ರಶ್ನಿಸಲು ಮುಂದಾದಂತೆ ಶಾಲೆಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಪ್ರಶ್ನಿಸುವಂತೆ ಸೂಚಿಸಿದ ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಅವರು, ನಿಮ್ಮ ಶಾಲೆಯಲ್ಲಿ ಕೊಠಡಿ ಸಮಸ್ಯೆ, ನೀರಿನ ಸಮಸ್ಯೆ, ಪುಸ್ತುಕ ಪರಿಕರಗಳ, ಆಟಿಕೆಗಳ ಸಮಸ್ಯೆ ಇದ್ದಲ್ಲಿ ತಿಳಿಸಿ ಎಂದು ಸೂಚಿಸಿದರು. 8ನೇ ತರಗತಿ ವಿದ್ಯಾರ್ಥಿಗಳಿಗೆ ಸರಕಾರದಿಂದ

ಗುಣಮಟ್ಟದ ಸೈಕಲ್ ವಿತರಿಸಿ; ನೂಜಿಬಾಳ್ತಿಲದಲ್ಲಿ 9, 10ನೇ ತರಗತಿ ಪ್ರಾರಂಭಿಸಿ ➤ ನೂಜಿಬಾಳ್ತಿಲ ಮಕ್ಕಳ ಗ್ರಾಮ ಸಭೆ Read More »

ಕರಾವಳಿ

ನೂಜಿಬಾಳ್ತಿಲ: ಮಾತೃ ವಂದನಾ ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.26  ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ನೂಜಿಬಾಳ್ತಿಲ ಗ್ರಾ.ಪಂ. ನಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಅವರು ಯೋಜನೆಯ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮಾರಾಮ್‍ದಾಸ್ ಮಾತೃ ವಂದನಾ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ ಸದಸ್ಯರಾದ ಪುಷ್ಪಲತಾ, ಜಾನಕಿ, ಹೊನ್ನಮ್ಮ ಉಪಸ್ಥಿತರಿದ್ದರು. ಪಂ.ಅಭಿವೃದ್ಧಿ ಅಧಿಕಾರಿ ಆನಂದ ಎ.

ನೂಜಿಬಾಳ್ತಿಲ: ಮಾತೃ ವಂದನಾ ಅರಿವು ಕಾರ್ಯಕ್ರಮ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ: ಹೆಣ್ಣು ಶಿಶುಪ್ರದರ್ಶನ

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.26   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಇದರ ವತಿಯಿಂದ ನೂಜಿಬಾಳ್ತಿಲ ಗ್ರಾ.ಪಂ. ಸಹಯೋಗದಲ್ಲಿ ಹೆಣ್ಣು ಮಗು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಅಂಗವಾಗಿ ಆರೋಗ್ಯವಂತ ಹೆಣ್ಣು ಶಿಶುಪ್ರದರ್ಶನ ಕಾರ್ಯಕ್ರಮವು ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲಾ ಸಭಾಂಗಣದಲ್ಲಿ ನಡೆಯಿತು. ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವರೆಂದು ಪೂಜಿಸಲ್ಪಡುವ ಹೆಣ್ಣಿನ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದೇವೆ. ದೇಶದ ಕಣ್ಣಾಗಿರುವ ಹೆಣ್ಣು

ನೂಜಿಬಾಳ್ತಿಲ ಗ್ರಾ.ಪಂ: ಹೆಣ್ಣು ಶಿಶುಪ್ರದರ್ಶನ Read More »

ಕರಾವಳಿ
Scroll to Top