ಕರಾವಳಿ

ಸೌದಿಯಲ್ಲಿ ಬಂಧಿತ ಹರೀಶ್ ಹೆಸರಲ್ಲಿ ಮತ್ತೊಂದು ಫೇಸ್‌ಬುಕ್‌ ಖಾತೆ

ಉಡುಪಿ, ಡಿ. 26: ಫೇಸ್‍ಬುಕ್ ಮೂಲಕ ಸೌದಿ ದೊರೆ ಹಾಗೂ ಮಕ್ಕಾದ  ಕುರಿತು ಅವಹೇಳನಕಾರಿ ಬರಹಗಳನ್ನು ಪ್ರಕಟಿಸಿದ್ದಾರೆ ಎಂಬ ಆರೋಪದಲ್ಲಿ ಬಂಧಿತನಾದ ಹರೀಶ್ ಬಂಗೇರ ಪ್ರಕರಣದಲ್ಲಿ ಇದೀಗ ಇನ್ನೊಂದು ನಕಲಿ ಖಾತೆಯನ್ನು ಸೃಷ್ಠಿಸಿರುವುದಾಗಿ ತಿಳಿದು ಬಂದಿದೆ.   ಮೊದಲ ಬಾರಿಗೆ ಡಿ.20ರಂದು ರಾತ್ರಿ 1.35ಕ್ಕೆ ಸೃಷ್ಠಿಸಿದ ನಕಲಿ ಖಾತೆಯಲ್ಲಿ ಕಿಡಿಗೇಡಿಗಳು ಡಿ.22ರಂದು ಸಂಜೆ ಸುಮಾರು 4.30ಕ್ಕೆ ಹರೀಶ್ ಬಂಧನಕ್ಕೆ ಕಾರಣರಾಗಿದ್ದರು. ಈ ನಕಲಿ ಖಾತೆಯನ್ನು ಅದೇ ದಿನ ರಾತ್ರಿ 8.30ಕ್ಕೆ ಡಿಲೀಟ್ ಮಾಡಲಾಗಿತ್ತು. ಇದೀಗ ಡಿ.24ರಂದು ಮಧ್ಯಾಹ್ನ […]

ಸೌದಿಯಲ್ಲಿ ಬಂಧಿತ ಹರೀಶ್ ಹೆಸರಲ್ಲಿ ಮತ್ತೊಂದು ಫೇಸ್‌ಬುಕ್‌ ಖಾತೆ Read More »

ಕರಾವಳಿ

ದ.ಕ, ಉಡುಪಿಯ ಹಲವು ಮಸೀದಿಗಳಲ್ಲಿ ಗ್ರಹಣ ನಮಾಝ್

ಮಂಗಳೂರು, ಡಿ.26: ಈ ವರ್ಷದ ಕೊನೆಯ ಸೂರ್ಯಗ್ರಹಣ ಗುರುವಾರ ಗೋಚರಿಸಿದೆ. ಈ ಹಿನ್ನಲೆಯಲ್ಲಿ ವಿಶೇಷವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮಸೀದಿಗಳಲ್ಲಿ ಗ್ರಹಣ ಸಂಬಂಧ ವಿಶೇಷ ನಮಾಝ್ ನಡೆಯಿತು. ಮಂಗಳೂರಿನ ಬಂದರು ಕೇಂದ್ರ ಜುಮಾ ಮಸೀದಿಯಲ್ಲಿ ಬೆಳಗ್ಗೆ 9 ಗಂಟೆಗೆ ಖತೀಬ್ ಸ್ವದಕತುಲ್ಲಾಹ್ ಫೈಝಿ ನೇತೃತ್ವದಲ್ಲಿವಿಶೇಷ ನಮಾಝ್ ನಡೆಯಿತು. ಉಡುಪಿ ಜಿಲ್ಲೆಯ ಕುಂದಾಪುರ ಗಂಗೊಳ್ಳಿ ಜುಮಾ ಮಸೀದಿಯಲ್ಲಿ ಎರಡು ಗಂಟೆಗಳ ಕಾಲ ವಿಶೇಷ ಪ್ರಾರ್ಥನೆ ನಡೆಯಿತು. ಜುಮಾ ಮಸೀದಿಯ ಖತೀಬರಾಗಿರುವ ಮೌಲಾನಾ ಮಝಮ್ಮಿಲ್ ಸಾಹಬ್ ನದ್ವಿ

ದ.ಕ, ಉಡುಪಿಯ ಹಲವು ಮಸೀದಿಗಳಲ್ಲಿ ಗ್ರಹಣ ನಮಾಝ್ Read More »

ಕರಾವಳಿ

ಮಂಗಳೂರು:ಕಂಕಣ ಸೂರ್ಯಗ್ರಹಣ ವಿಕ್ಷೀಸಿದ ಆಸಕ್ತರು

ಮಂಗಳೂರು, ಡಿ.26: ಸೂರ್ಯಗ್ರಹಣ ಗುರುವಾರ ಬೆಳಗ್ಗೆ 8:04ಕ್ಕೆ ಆರಂಭಗೊಂಡಿದ್ದು, ರಾಜ್ಯಾದ್ಯಂತ ಖಗೋಳಾಕ್ತರು, ವಿಜ್ಞಾನಿಗಳು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಸೌರ ಕನ್ನಡಕ, ಮಸೂರ, ದೂರದರ್ಶಕದ ಮೂಲಕ ಗ್ರಹಣ ವಿಕ್ಷೀಸಿದರು. ಮಂಗಳೂರಿನ ಪಾದುವಾ ಕಾಲೇಜಿನಲ್ಲಿ ಕಂಕಣ ಸೂರ್ಯ ಗ್ರಹಣ ವೀಕ್ಷಣೆಗೆ ಟೆಲಿಸ್ಕೋಪ್ ಮತ್ತು ಕಾಲೇಜಿನ ಕೊಠಡಿಯಲ್ಲಿ ಬೃಹತ್ ಪರದೆಯ ಮೇಲೆ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆಯ ಮಾಡಲಾಗಿತ್ತು.    

ಮಂಗಳೂರು:ಕಂಕಣ ಸೂರ್ಯಗ್ರಹಣ ವಿಕ್ಷೀಸಿದ ಆಸಕ್ತರು Read More »

ಕರಾವಳಿ

“ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಪರಾಧಿಗಳಾದಲ್ಲಿ ಒಂದು ರೂ. ಪರಿಹಾರ ನೀಡಲ್ಲ”

ಮಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರು, ಡಿ.25: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ.9ರಂದು ಮಂಗಳೂರಿನಲ್ಲಿ ನಡೆದಿದ್ದ  ಪ್ರತಿಭಟನೆಯಲ್ಲಿ ಪೊಲೀಸ್‌ ಗುಂಡೇಟಿಗೆ ಬಲಿಯಾದ ಮೃತರಿಬ್ಬರು ಅಪರಾಧಿಗಳು ಎಂದು ಸಾಬೀತಾದರೆ ಒಂದು ರೂಪಾಯಿಯು ಪರಿಹಾರ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಪರಾಧ ಸಾಬೀತಾದರೆ, ಒಂದು ರೂಪಾಯಿಯು ಕೊಡಲ್ಲ. ಈ ಕುರಿತು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ಪಟ್ಟವರಿಗೆ ಪರಿಹಾರ ಘೋಷಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

“ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಪರಾಧಿಗಳಾದಲ್ಲಿ ಒಂದು ರೂ. ಪರಿಹಾರ ನೀಡಲ್ಲ” Read More »

ಕರಾವಳಿ

ಮಂಗಳೂರಿನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ಮಂಗಳೂರು, ಡಿ.25: ಯೇಸು ಕ್ರಿಸ್ತರ ಜನನದ ಹಬ್ಬದ ಮುನ್ನಾ ದಿನವಾದ ಮಂಗಳವಾರ ಕ್ರೈಸ್ತರು ಕ್ರಿಸ್ಮಸ್‌ ಜಾಗರಣೆಯ ರಾತ್ರಿಯನ್ನು ಆಚರಿಸಿದರು. ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಚರ್ಚ್‌ ಆವರಣದಲ್ಲಿ ಮತ್ತು ಕ್ರೈಸ್ತರ ಮನೆ ಆವರಣದಲ್ಲಿ ಆಕರ್ಷಕ ನಕ್ಷತ್ರಗಳನ್ನು ಜೋಡಿಸಲಾಗಿತ್ತು. ಚರ್ಚ್‌ಗಳಲ್ಲಿ ರಾತ್ರಿ ವೇಳೆ ಜರುಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ರಿಸ್ಮಸ್‌ ಕ್ಯಾರೊಲ್‌ಗಳನ್ನು ಹಾಡಿ ಯೇಸು ಕ್ರಿಸ್ತರ ಜನನವನ್ನು ಸ್ಮರಿಸಿ ಕಂದ ಯೇಸುವಿಗೆ ನಮಿಸಿದರು. ಮಂಗಳೂರಿನ ರೊಸಾರಿಯ ಕೆಥೆಡ್ರಲ್‌ನಲ್ಲಿ ರಾತ್ರಿ ನಡೆದ ಸಂಭ್ರಮದ ಬಲಿ ಪೂಜೆಯಲ್ಲಿ

ಮಂಗಳೂರಿನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ Read More »

ಕರಾವಳಿ

ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಾ.ವೀರೇಂದ್ರ ಹೆಗ್ಗಡೆ ಆಯ್ಕೆ

ಬೆಂಗಳೂರು, ಡಿ.25: ಪ್ರತಿಷ್ಠಿತ ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಯುಗದ ಸಾಧಕ ಪ್ರಶಸ್ತಿಗೆ ಪ್ರೊ.ಜಿ.ವೆಂಕಟಸುಬ್ಬಯ್ಯ, 2019 ನೇ ಸಾಲಿನ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗಳಿಗೆ ಎಂ.ಸಿದ್ದರಾಜು, ಕೆ.ಸುನೀಲ್ ಪ್ರಸಾದ್, ಕೆ.ಎಚ್.ಸಾವಿತ್ರಿ, ಬಿ.ವಿ.ನಾಗರಾಜು, ರವೀಂದ್ರ ಜಿ. ಭಟ್, ಕೆ.ಎನ್.ಚೆನ್ನೇಗೌಡ, ಬಿ.ಹರಿಶ್ಚಂದ್ರ ಭಟ್, ಎಂ.ಅಬ್ದುಲ್ ಹಮೀದ್, ಇಮ್ರಾನ್ ಖುರೇಶಿ, ಜಿ.ಕೆ.ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್ ಹೂವರ್, ಎನ್.ಎಸ್.ಶಂಕರ್, ಬಿ.ಕೆ.ರವಿ, ರು.ಬಸಪ್ಪ ಹಾಗೂ ಜಯಪ್ರಕಾಶ್ ಶೆಟ್ಟಿ ಅವರನ್ನು ಆಯ್ಕೆ

ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಾ.ವೀರೇಂದ್ರ ಹೆಗ್ಗಡೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಗೋಲಿಬಾರ್ ಪ್ರಕರಣ: ಕಮಿಷನರ್, ಇನ್ಸ್ ಸ್ಪೆಕ್ಟರ್ ಅಮಾನತಿಗೆ ದಿನೇಶ್ ಗುಂಡೂರಾವ್ ಆಗ್ರಹ

ಮಂಗಳೂರು, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗೋಲಿಬಾರ್‌ಗೆ ಇಬ್ಬರ ಸಾವಿಗೆ ಕಾರಣರಾದ ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಹಾಗೂ ಇನ್ ಸ್ಪೆಕ್ಟರ್ ಶಾಂತರಾಮ ಕುಂದರ್ ಅವರನ್ನು ಅಮಾನತುಗೊಳಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಿಐಡಿ ತನಿಖೆ ಸಾಲದು. ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದರು. ಅಲ್ಲದೆ ಕಮಿಷನರ್ ಮತ್ತು ಇನ್ಸ್ ಪೆಕ್ಟರ್ ಸಹಿತ ತಪ್ಪಿತಸ್ಥ

ಮಂಗಳೂರು ಗೋಲಿಬಾರ್ ಪ್ರಕರಣ: ಕಮಿಷನರ್, ಇನ್ಸ್ ಸ್ಪೆಕ್ಟರ್ ಅಮಾನತಿಗೆ ದಿನೇಶ್ ಗುಂಡೂರಾವ್ ಆಗ್ರಹ Read More »

ಕರಾವಳಿ

ಮಂಗಳೂರಿನಲ್ಲಿ ನಿಷೇಧಾಜ್ಞೆ ಇಂದಿಗೆ ಅಂತ್ಯ

ಮಂಗಳೂರು, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುವ ಹಿನ್ನೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಿದ ನಿಷೇಧಾಜ್ಞೆ ಇಂದಿಗೆ ಅಂತ್ಯಗೊಂಡಿದೆ. ಡಿ.19ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ ಹೊರಡಿಸಿದ್ದರು.    

ಮಂಗಳೂರಿನಲ್ಲಿ ನಿಷೇಧಾಜ್ಞೆ ಇಂದಿಗೆ ಅಂತ್ಯ Read More »

ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟ್ರೀಯಲ್  ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಡಿ. 24: ಪೌರತ್ವ ತಿದ್ದುಪತಿ ಕಾಯ್ದೆ  ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್  ತನಿಖೆಗೆ ವಹಿಸಿ ಆದೇಶಿಸಿದೆ. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ ನಡೆಸುವಂತೆ ರಾಜ್ಯ ಸರಕಾರ ಆದೇಶಿಸಿದೆ.

ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟ್ರೀಯಲ್  ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

ಕರಾವಳಿ

ಪುತ್ತೂರು: ಸ್ಫೋಟಕ ತಯಾರಿಸುತ್ತಿರುವ ನಾಲ್ವರ ಬಂಧನ

  ಪುತ್ತೂರು, ಡಿ.24: ಅಕ್ರಮ ಸ್ಫೋಟಕ ತಯಾರಿಸುತ್ತಿರುವ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ನಡೆದಿದೆ. ಬಂಧಿತರನ್ನು ನರೇಂದ್ರ ಅಲಿಯಾಸ್ ಬಾಬು, ಟಿ. ಬಾಬು, ಟಿ. ಕಾಳಿ ರಾಜ್, ಎಂ. ಕಮಲ ಕನ್ನನ್ ಎಂದು ಗುರುತಿಸಲಾಗಿದೆ. ಇವರು ಸ್ಫೋಟಕ ಸಾಮಗ್ರಿಗಳನ್ನು ಉಪಯೋಗಿಸಿ ಸಿಡಿಮದ್ದು ತಯಾರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ

ಪುತ್ತೂರು: ಸ್ಫೋಟಕ ತಯಾರಿಸುತ್ತಿರುವ ನಾಲ್ವರ ಬಂಧನ Read More »

ಕರಾವಳಿ
Scroll to Top