‘ಪೌರತ್ವ’ ಕೆಂಡದಲ್ಲಿ ಹೊತ್ತಿ ಉರಿದ ಮಂಗಳೂರು ➤ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಗರದಲ್ಲಿ ಗುರುವಾರದಂದು ನಡೆದ ಹಿಂಸಾಚಾರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸರಕಾರವು ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ನಡುವೆ ಗುರುವಾರದಂದು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದನ್ನು ಉಲ್ಲಂಘಿಸಿ ಕೆಲವರು ಪ್ರತಿಭಟನೆಗೆ ಮುಂದಾಗಿದ್ದು, ಈ ವೇಳೆ ಗುಂಪು ಚದುರಿಸಲು ಪೊಲೀಸರು […]




