ಕರಾವಳಿ

ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುತ್ತಿರುವ ಮಂಗಳೂರು ಪೊಲೀಸ್ ಕಮಿಷನರ್: ಎಸ್‌ಡಿಪಿಐ ಆರೋಪ

ಮಂಗಳೂರು, ಡಿ.19: ಕೇಂದ್ರ  ಸರಕಾರದ ಜನವಿರೋಧಿ ನೀತಿಯಾದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಸಂಧರ್ಭದಲ್ಲೂ ಕೂಡಾ ವಿವಾದಾತ್ಮಕವಾದ ಕಾಯ್ದೆಗಳನ್ನು ಜಾರಿ ಮಾಡಿರುವ ಕೇಂದ್ರ ಸರಕಾರದ ವಿರುದ್ಧವಾಗಿ ಜನರು ಆಕ್ರೋಶಗೊಂಡು ಬೀದಿಗಿಳಿದು ಸಂವಿಧಾನ ಬದ್ದವಾಗಿ ಶಾಂತಿಯುತವಾಗಿ ಹೋರಾಟ ಮಾಡುವ ಸಂಧರ್ಭದಲ್ಲಿ ಮಂಗಳೂರು ಪೊಲೀಸ್ ಇಲಾಖೆ ಜಿಲ್ಲಾಧ್ಯಂತ ಸಿಆರ್ ಪಿಸಿ ಸೆಕ್ಷನ್ 144 ಪ್ರಕಾರ ನಿಷೇದಾಜ್ಞೆ ಜಾರಿ ಮಾಡಿ ಜನರ ಸಂವಿಧಾನ ಬದ್ದ ಹಕ್ಕುಗಳನ್ನು ಕಸಿಯುವ […]

ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುತ್ತಿರುವ ಮಂಗಳೂರು ಪೊಲೀಸ್ ಕಮಿಷನರ್: ಎಸ್‌ಡಿಪಿಐ ಆರೋಪ Read More »

ಕರಾವಳಿ

ದ.ಕ., ಉಡುಪಿ ಜಿಲ್ಲೆಯಲ್ಲಿ ಡಿ.21ರವರೆಗೆ ನಿಷೇಧಾಜ್ಞೆ

ಮಂಗಳೂರು,/ ಉಡುಪಿ, ಡಿ.19: ಪೌರತ್ವ ಕಾಯ್ದೆ ವಿರುದ್ಧ ಹಲವು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ ನೀಡಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಡಿ.21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.   ಡಿ.19 ರಿಂದ ಡಿ.20 ರ ರಾತ್ರಿ12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ. ಅಲ್ಲದೆ

ದ.ಕ., ಉಡುಪಿ ಜಿಲ್ಲೆಯಲ್ಲಿ ಡಿ.21ರವರೆಗೆ ನಿಷೇಧಾಜ್ಞೆ Read More »

ಕರಾವಳಿ

ಬೈಕ್ ಅಪಘಾತ: ಕನ್ಯಾನ ಗ್ರಾಪಂ ಸದಸ್ಯ ಸಹಿತ ಇಬ್ಬರ ಮೃತ್ಯು

  ಬಂಟ್ವಾಳ, ಡಿ 18: ನಿಯಂತ್ರಣ ಕಳೆದುಕೊಂಡು ಬೈಕ್ ರಸ್ತೆಗೆ ಉರುಳಿದ ಪರಿಣಾಮ ಕನ್ಯಾನ ಗ್ರಾಮ ಪಂಚಾಯತ್ ಸದಸ್ಯ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ  ಘಟನೆ ವಿಟ್ಲದ ಕನ್ಯಾನ ಗ್ರಾಮದ ಕೆಳಗಿನಪೇಟೆಯಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ, ಕನ್ಯಾನ ಗ್ರಾಮ ಪಂಚಾಯಿತಿ ಸದಸ್ಯ ವಾಲ್ಟರ್ ಡಿಸೋಜ(45) ಹಾಗೂ ಕನ್ಯಾನ ಗ್ರಾಮದ ಪಂಜಾಜೆ ನಿವಾಸಿ ವಿಲ್ಸನ್ ಡಿಸೋಜ(52) ಎಂದು ಗುರುತಿಸಲಾಗಿದೆ. ಇವರು ಕನ್ಯಾನ ಸರ್ಕಾರಿ ಆಸ್ಪತ್ರೆಯಿಂದ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದು

ಬೈಕ್ ಅಪಘಾತ: ಕನ್ಯಾನ ಗ್ರಾಪಂ ಸದಸ್ಯ ಸಹಿತ ಇಬ್ಬರ ಮೃತ್ಯು Read More »

ಕರಾವಳಿ

ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಅಡಿಕೆ ತೆಗೆಯಲೆಂದು ಅಡಿಕೆ ಮರಕ್ಕೆ ಏರಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ದೊಡ್ಡಕೊಪ್ಪ ನಿವಾಸಿ ರುಕ್ಮಯ್ಯ ಕುಂಬಾರ(54) ಎಂದು ಗುರುತಿಸಲಾಗಿದೆ. ಮೃತರು ಬುಧವಾರದಂದು ತನ್ನ ತೋಟದಲ್ಲಿ ಅಡಿಕೆ ಮರಕ್ಕೆ ಏರಿದ್ದಾಗ ಆಯತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹದ

ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಡಿಸೆಂಬರ್ 20 ರ ವರೆಗೆ ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ ➤ ಕಾರಣ ಏನೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಕೇಂದ್ರ ಸರಕಾರದ ಪೌರತ್ವ ನೀತಿಯ ವಿರುದ್ಧ ವಿವಿಧ ಸಂಘಟನೆಗಳು ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆ ನಡೆಸುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆಯನ್ನು ಮುಂದಿಟ್ಟುಕೊಂಡು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದಿನಿಂದ ಡಿ.20 ರ ರಾತ್ರಿ12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಆದೇಶಿಸಿದ್ದಾರೆ. ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ

ಡಿಸೆಂಬರ್ 20 ರ ವರೆಗೆ ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ ➤ ಕಾರಣ ಏನೆಂದು ಗೊತ್ತೇ..? Read More »

ಕರಾವಳಿ

ಅನಾರು-ಪಟ್ರಮೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

(ನ್ಯೂಸ್ ಕಡಬ) newskadaba.com, ಕೊಕ್ಕಡ, ಡಿ.18  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ ಟ್ರಸ್ಟ್ ಬೆಳ್ತಂಗಡಿ. ಇದರ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅನಾರು-ಪಟ್ರಮೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಮರ್ಪಣಾ ಸಭಾಭವನ ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಡಿ.15 ರಂದು ನಡೆಯಿತು. ಕಾರ್ಯಕ್ರಮವನ್ನು ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು ಇವರು ಉದ್ಘಾಟಿಸಿದರು. ಪಟ್ರಮೆ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ಕಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ

ಅನಾರು-ಪಟ್ರಮೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ Read More »

ಕರಾವಳಿ

ಮಳವೂರು ಗ್ರಾ.ಪಂ ಗ್ರಾಮಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18  ಮಳವೂರು ಗ್ರಾಮ ಪಂಚಾಯತ್‍ನ  2019-20 ನೇ ಸಾಲಿನ ದ್ವಿತೀಯ ಹಂತದ ಕೆಂಜಾರು-1, ಕೆಂಜಾರು-4 ವಾರ್ಡ್ ಸಭೆ ಡಿಸೆಂಬರ್ 18 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ಭವನ, ಅಂಬೇಡ್ಕರ್ ನಗರ, ಪೇಜಾವರ ಕೆಂಜಾರು ಗ್ರಾಮ, ಮಳವೂರು-3 ವಾರ್ಡ್ ಸಭೆ 20 ರಂದು ಬೆಳಿಗ್ಗೆ 10.30 ಗಂಟೆಗೆ, ಅಂಗನವಾಡಿ ಕೇಂದ್ರದ ವಠಾರ ಮರವೂರು,  ಕೆಂಜಾರು-3 ವಾರ್ಡ್ ಸಭೆ 23 ರಂದು ಬೆಳಿಗ್ಗೆ 11.30 ಗಂಟೆಗೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನ

ಮಳವೂರು ಗ್ರಾ.ಪಂ ಗ್ರಾಮಸಭೆ Read More »

ಕರಾವಳಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ ಧನ್ ಯೋಜನೆ-ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18   ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಯಾದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆಯಡಿ ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಟೋ ಚಾಲಕರು, ವಾಣಿಜ್ಯ ವಾಹನ ಚಾಲಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಮಂಡಕ್ಕಿ ಭಟ್ಟಿಯಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಬಿಸಿಯೂಟ ಸಿದ್ದಪಡಿಸುವ ಅಡುಗೆ ಸಹಾಯಕರು, ಬೀದಿ ಬದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ ಧನ್ ಯೋಜನೆ-ನೋಂದಣಿ Read More »

ಕರಾವಳಿ

ವಿಶೇಷ ಘಟಕ ಯೋಜನೆಯಡಿ ಯಕ್ಷಗಾನ ತರಬೇತಿ ನೀಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18    ಕರ್ನಾಟಕ ಯಕ್ಷಗಾನ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ  ಜಾತಿಯ ಪ್ರತಿಭಾವಂತ ಶಿಬಿರಾರ್ಥಿಗಳಿಗೆ 2019-20 ನೇ ಸಾಲಿನಲ್ಲಿ 5 ತಿಂಗಳ ಯಕ್ಷಗಾನ ತರಬೇತಿ ಶಿಬಿರಗಳನ್ನು ನಡೆಸಲು ಹಾಗೂ  ಪರಿಕರಗಳೊಂದಿಗೆ ಪ್ರದರ್ಶನ ನೀಡಲಿದೆ. ಯಕ್ಷಗಾನ ಕಲಾಪ್ರಕಾರಗಳಲ್ಲಿ (ತೆಂಕಿತಿಟ್ಟು/ಬಡಗತಿಟ್ಟು ಯಕ್ಷಗಾನ, ಬಡಾಬಡಗುತಿಟ್ಟು ಯಕ್ಷಗಾನ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ, ಯಕ್ಷಗಾನ ಗೊಂಬೆಯಾಟತಾಳಮದ್ದಲೆ) ತರಬೇತಿ ನೀಡಬಯಸುವ  ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ಹಿರಿಯ ಪ್ರತಿಷ್ಠಿತ ಯಕ್ಷಗಾನದ ಗುರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಕಾಡೆಮಿಯಲ್ಲಿ  ಸ್ವೀಕೃತವಾದ ಅರ್ಜಿಗಳನ್ನು

ವಿಶೇಷ ಘಟಕ ಯೋಜನೆಯಡಿ ಯಕ್ಷಗಾನ ತರಬೇತಿ ನೀಡಲು ಅರ್ಜಿ ಆಹ್ವಾನ Read More »

ಕರಾವಳಿ

ಅಸಮರ್ಪಕ ಒಳಚರಂಡಿ ಕಾಮಗಾರಿ : ಉಸ್ತುವಾರಿ ಕಾರ್ಯದರ್ಶಿ ಅಸಮಾಧಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18    ಮಂಗಳೂರು ನಗರದಲ್ಲಿ ನಡೆಯುತ್ತಿರುವ ವಿವಿಧ ಒಳಚರಂಡಿ ಯುಜಿಡಿ ಕಾಮಗಾರಿಗಳನ್ನು ಅಸಮರ್ಪಕವಾಗಿ ನಡೆಸಲಾಗುತ್ತಿದ್ದು, ಇದನ್ನು ಸರಿಪಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ಒಳಚರಂಡಿ ಪೈಪ್‍ಲೇನ್ ಹಾಕುವ ಸಂದರ್ಭದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿರುವ ಮನೆ, ಸಂಕೀರ್ಣ ಸೇರಿದಂತೆ ಕಟ್ಟಡ ಸ್ವತ್ತುಗಳ ಮಾಹಿತಿ ಕಲೆ ಹಾಕಬೇಕಿದೆ. ಇದರಿಂದ ಯುಜಿಡಿ ಲೇನ್‍ಗೆ ಭವಿಷ್ಯದಲ್ಲಿ ಸಂಪರ್ಕ ಕಲ್ಪಿಸುವ

ಅಸಮರ್ಪಕ ಒಳಚರಂಡಿ ಕಾಮಗಾರಿ : ಉಸ್ತುವಾರಿ ಕಾರ್ಯದರ್ಶಿ ಅಸಮಾಧಾನ Read More »

ಕರಾವಳಿ
Scroll to Top