ಚಿಕ್ಕಮ್ಮನ ಮದುವೆಗೆಂದು ಬಂದಿದ್ದ ಪುಟ್ಟ ಮಗು ಕೆರೆಗೆ ಬಿದ್ದು ಮೃತ್ಯು ➤ ಮದುವೆ ಮನೆಯಲ್ಲಿ ಆವರಿಸಿದ ಸೂತಕದ ಛಾಯೆ
(ನ್ಯೂಸ್ ಕಡಬ) newskadaba.com ಕಡಬ, ಡಿ.13. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಮಗುವೊಂದು ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ನಗ್ರಿ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತ ಮಗುವನ್ನು ಪುತ್ತೂರು ತಾಲೂಕು ಆರ್ಲಪದವು ನಿವಾಸಿ ಗುರುರಾಜ್ ಹಾಗೂ ಗೀತಾ ದಂಪತಿಗಳ ಪುತ್ರಿ ಚಿಂತನಾ(3ವ) ಎಂದು ಗುರುತಿಸಲಾಗಿದೆ. ಮಗುವಿನ ತಾಯಿಯ ಸಹೋದರಿಯ ಮದುವೆಯು ಗುರುವಾರದಂದು ಆಲಂಕಾರು ಗ್ರಾಮದ ನಗ್ರಿಯಲ್ಲಿ ನಡೆದಿತ್ತು. ಮದುವೆ ಸಮಾರಂಭದಲ್ಲಿ ಕುಟುಂಬ ಸಮೇತರಾಗಿ ಗುರುರಾಜ್ ದಂಪತಿಗಳು ಆಗಮಿಸಿದ್ದರು. ಶನಿವಾರ ನಗ್ರಿಯಲ್ಲಿ […]




