ಕರಾವಳಿ

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸತ್ವಾ ಬಾಯ್ಸ್ ದುಬಾಯಿ ಪ್ರಾಯೋಜಕತ್ವದಲ್ಲಿ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಅಳವಡಿಸಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶನಿವಾರ ನಡೆಯಿತು. ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಎಚ್.ಆರ್. ಅವರು ನೂತನ ಘಟಕ ಉದ್ಘಾಟಿಸಿ, ಅತ್ಯಂತ ಬಡವರು ಚಿಕಿತ್ಸೆಗೆ ಬರುವ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವ […]

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ Read More »

ಕರಾವಳಿ

ಆಲಂಕಾರು ಸಿ.ಎ ಬ್ಯಾಂಕಿನ ದೀನ ದಯಾಳು ರೈತ ಸಭಾಭವನ ಉದ್ಘಾಟನೆ ➤ಸಹಕಾರಿ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅಭಿಮತ

(ನ್ಯೂಸ್ ಕಡಬ) newskadaba.com, ಆಲಂಕಾರು, ಡಿ.9  ಗ್ರಾಮೀಣ ಭಾಗದ ಶಸಸ್ತೀಕರಣದ ರುವಾರಿಗಳಾಗಿರುವ ಸಹಕಾರಿ ಸಂಘಗಳಲ್ಲಿ ಇತ್ತೀಚೆಗೆ ರಾಜಕೀಯ ಹಸ್ತಕ್ಷೇಪಗಳು ನಡೆಯುವುದರಿಂದ ಸಹಕಾರಿ ರಂಗಕ್ಕೆ ಹಿನ್ನೆಡೆಯಾಗುತ್ತಿದೆ ಇದು ಸರಿಯಲ್ಲ ಎಂದು ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಹೇಳಿದರು. ಅವರು ಶನಿವಾರ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಪ್ರಾಂಗಣದಲ್ಲಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ದೀನ ದಯಾಳು ರೈತ ಸಭಾಭವನದ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ

ಆಲಂಕಾರು ಸಿ.ಎ ಬ್ಯಾಂಕಿನ ದೀನ ದಯಾಳು ರೈತ ಸಭಾಭವನ ಉದ್ಘಾಟನೆ ➤ಸಹಕಾರಿ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅಭಿಮತ Read More »

ಕರಾವಳಿ

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸರಕಾರಿ, ಸರಕಾರೇತರ ನೌಕರರ ಸ್ನೇಹಕೂಟ-ಸಮಿತಿ ರಚನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.9  ಕಡಬ ಒಕ್ಕಲಿಗ ಗೌಡ ಸೇವಾ ಇದರ ವತಿಯಿಂದ ಗೌಡ ಸಮುದಾಯದ ಸರಕಾರಿ ಮತ್ತು ಸರಕಾರೇತರ ನೌಕರರ ಸ್ನೇಹಕೂಟ ಕಾರ್ಯಕ್ರಮ ಡಿ.8ರಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಅವರು ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಗೌಡ ಸಂಘದ ಕಾರ್ಯದರ್ಶಿ ಮಂಜುನಾಥ ಗೌಡ ಕೊಲಂತ್ತಾಡಿ,

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸರಕಾರಿ, ಸರಕಾರೇತರ ನೌಕರರ ಸ್ನೇಹಕೂಟ-ಸಮಿತಿ ರಚನೆ Read More »

ಕರಾವಳಿ

ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬಿದ್ದು ಗಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ನಡೆದುಕೊಂಡು ಹೋಗುತ್ತಿದ್ದ ವೇಳೆ ಹಗ್ಗವೊಂದನ್ನು ಎಡವಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಂಬಾರು ನಿವಾಸಿ ಮೋನಪ್ಪ ಗೌಡ ಎಂಬವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಎಡವಿ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಹೈದರ್ ಹಿಂದುಸ್ತಾನ್ ಹಾಗೂ ರಿಕ್ಷಾ ಚಾಲಕ ಸಿದ್ದೀಕ್ ಎಂಬವರು ಗಾಯಾಳುವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಬಳಿಕ ಅವರ ಕೊಂಬಾರಿನ ಮನೆಗೆ ಕರೆದೊಯ್ದಿದ್ದಾರೆ.

ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬಿದ್ದು ಗಾಯ Read More »

ಕರಾವಳಿ

ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08. ಉತ್ತಮ ಹವ್ಯಾಸಗಳು, ಒಳ್ಳೆಯ ಸ್ನೇಹಿತರು ಹಾಗೂ ಪರಿಸರ ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆ, ಭಾವಾದೇಶಗಳಿಗೆ ಸೂಕ್ತ ಪರಿಹಾರ ಎಂದು ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಪರಿಣಾಮ ಎಂಬ ಕಾರ್ಯಗಾರದಲ್ಲಿ ಭಾಗವಹಿಸಿದ ಅಕ್ಷತ ಕಾಮತ್, ಆಪ್ತ ಸಮಾಲೋಚಕಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹದಿಹರೆಯದ ವಯಸ್ಸಿನ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬದಲಾವಣೆಗಳು ಹಾರ್ಮೋನ್‍ಗಳ ಕಾರಣದಿಂದ ಉಂಟಾಗುವವು.  ಉತ್ತಮ ಆಹಾರ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸೇವನೆಯ ಮೂಲಕ

ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಕಾರ್ಯಾಗಾರ Read More »

ಕರಾವಳಿ

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.08. ಅಕ್ರಮವಾಗಿ ಗೋವನ್ನು ವಧಿಸಿ ಕಂಟೈನರ್ ನಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿ, ಕಂಟೈನರ್ ಸಹಿತ 800 ಕೆಜಿ ಗೋ ಮಾಂಸವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ಉಪ್ಪಿನಂಗಡಿ ಪೊಲೀಸರು ತಪಾಸಣೆ ನಿರತರಾಗಿದ್ದ ವೇಳೆ ಕಂಟೈನರ್ ಲಾರಿಯೊಂದರಲ್ಲಿ ಯಾರಿಗೂ ಅನುಮಾನ ಬಾರದಂತೆ ಭಾರೀ ಪ್ರಮಾಣದ ದನದ ಮಾಂಸ ಸಾಗಾಟ ಮಾಡಲಾಗುತ್ತಿರುವುದು ಕಂಡು ಬಂದಿದೆ. ಕಂಟೈನರ್

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ Read More »

ಕರಾವಳಿ

ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳ್ತಂಗಡಿ, ಡಿ.8: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಇದೇ ಸಂದರ್ಭ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲು ಧರ್ಮಸ್ಥಳಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು. ಉಪಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಿಗೆ ನಾನು ಮತ್ತು ನಮ್ಮ ಸಚಿವರು ಎರಡು ಬಾರಿ ಭೇಟಿ ನೀಡಿ ಪ್ರಚಾರ ನಡೆಸಿದ್ದೇವೆ. ಇನ್ನೂ ಮೂರುವರೆ ವರ್ಷ ಬಿಜೆಪಿ ಸ್ಥಿರ

ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ Read More »

ಕರಾವಳಿ

ಸ್ಕೂಟರ್‌ಗೆ ಬಸ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ  ರವಿವಾರ ನಡೆದಿದೆ. ಮೃತರನ್ನು  ಅಡ್ಡೂರು ನಿವಾಸಿ ಹಮೀದ್  ಎಂದು ಗುರುತಿಸಲಾಗಿದೆ. ಅರ್ಕುಳದ ಹಾಲ್‌ವೊಂದರಲ್ಲಿ ರವಿವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿ ಹಮೀದ್  ವಾಪಸಾಗುತ್ತಿದ್ದ ಸಂದರ್ಭ ಈ ಅವಘಡ ನಡೆದಿದೆ. ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ನೊಂದಿಗೆ ರಸ್ತೆಗೆಸೆಯಲ್ಪಟ್ಟ ಸವಾರ

ಸ್ಕೂಟರ್‌ಗೆ ಬಸ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ

ಇಂದು ಬೆಳ್ತಂಗಡಿಗೆ ಮುಖ್ಯಮಂತ್ರಿ: ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ, ಡಿ.8: ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಡಿ.8ರಂದು ಮುಖ್ಯಮಂತ್ರಿ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ  ವಿವಿಧ ಡಿಪೊದ 250 ಕೆಎಸ್ಸಾರ್ಟಿಸಿ ಬಸ್‌ಗಳನ್ನು ನಿಯೋಜಿಸಲಾಗಿದ್ದು, ಇದರಿಂದ ಬಂಟ್ವಾಳ, ಪುತ್ತೂರು, ಕಡಬ, ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಬಸ್ ಸಂಖ್ಯೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇಂದು ಬೆಳ್ತಂಗಡಿಗೆ ಮುಖ್ಯಮಂತ್ರಿ: ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ

ಉಳ್ಳಾಲ: ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ

ಉಳ್ಳಾಲ, ಡಿ.8: ಶಂಕಿತ ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉಳ್ಳಾಲದ ಕುತ್ತಾರಿನ ತೇವುಲ ನಿವಾಸಿ ಮನೋಜ್ ಕುಮಾರ್(28) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮನೋಜ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ್ವರ ಗುಣವಾಗದ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಳ್ಳಾಲ: ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ Read More »

ಕರಾವಳಿ
Scroll to Top