ಕರಾವಳಿ

ಉಪ್ಪಿನಂಗಡಿ: ಕಾರು-ಬೈಕ್ ನಡುವೆ ಭೀಕರ ಡಿಕ್ಕಿ; ದ್ವಿಚಕ್ರ ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com, ಮಾ.09 : ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಂಭವಿಸಿದೆ. ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆಯಿತು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ , […]

ಉಪ್ಪಿನಂಗಡಿ: ಕಾರು-ಬೈಕ್ ನಡುವೆ ಭೀಕರ ಡಿಕ್ಕಿ; ದ್ವಿಚಕ್ರ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

(ನ್ಯೂಸ್‌ ಕಡಬ) newskadaba.com, ಮಾ.09 : ಒಂದು ಕಡೆ ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದ ಕಾರ್ಮೋಡ ಹಾಗೂ ರಮ್ಜಾನ್‌ ಉಪವಾಸದ ಸಂಭ್ರಮ ಮನೆಮಾಡಿದ್ದರೆ, ಇನ್ನೊಂದೆಡೆ ಇವೆರಡೂ ಅಂಶಗಳು ಭಾರತದ ಮೊಟ್ಟೆ ಮಾರುಕಟ್ಟೆಯ ಮೇಲೆ ಅನಿರೀಕ್ಷಿತ ಪರಿಣಾಮ ಬೀರಿವೆ. ರಫ್ತು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ ಕಂಡಿದ್ದು, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ. ಮೊಟ್ಟೆ ದರ ಇಳಿಕೆಗೆ ಮುಖ್ಯವಾಗಿ ಎರಡು ಕಾರಣಗಳನ್ನು ಗುರುತಿಸಬಹುದು. ರಫ್ತು ಸ್ಥಗಿತ: ಭಾರತದಲ್ಲಿಉತ್ಪಾದನೆಯಾಗುವ ಒಟ್ಟು ಮೊಟ್ಟೆಗಳಲ್ಲಿಸುಮಾರು ಶೇ.80ರಷ್ಟು ಮೊಟ್ಟೆಗಳು ಕೊಲ್ಲಿರಾಷ್ಟ್ರಗಳಿಗೆ ರಫ್ತಾಗುತ್ತಿದ್ದವು. ಆದರೆ,

ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಾದಕ ದ್ರವ್ಯ ಸಾಗಾಟ ಜಾಲ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಮಾ.09 : ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ. ಬೆಳಪು ಗ್ರಾಮದ ದರ್ಗಾ ಸಮೀಪದ    ನಿವಾಸಿ ಝಹೀರ್ ಅಹ್ಮದ್(66) ಮತ್ತು ಬೆಳಪು ಸ್ಟಡಿ ಸರ್ಕಲ್ ನಿವಾಸಿ ಸಯ್ಯದ್ ಶಮೀಮ್(28) ಬಂಧಿತ ಆರೋಪಿಗಳು. ಇವರಿಂದ 2.83 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಪೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿರುವ

ಉಡುಪಿ: ಮಾದಕ ದ್ರವ್ಯ ಸಾಗಾಟ ಜಾಲ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಾ. 09. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಕಳೆದ ಹಲವಾರು ಸಭೆಗಳಲ್ಲಿ ಮಂಗಳೂರು ಮಾರ್ಗವಾಗಿ ಮೂಡುಜೆಪ್ಪು -ಉಳಾಯಿಬೆಟ್ಟು ಪ್ರದೇಶಕ್ಕೆ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಸ್ತಾವನೆಯಂತೆ ಹೊಸ ಕೆ.ಎಸ್.ಆರ್.ಟಿ.ಸಿ ಪ್ರಾರಂಭಿಸಿರುವುದಕ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕಿ ನಿರ್ಮಲಾ ಅವರನ್ನು ಸಮಿತಿ ಸದಸ್ಯ ನವಾಜ್

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಮಾ.09 : ರಾಜ್ಯದಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಇಂದು ಸಹ ಬಿಸಿಲಿನಿಂದ ಕೂಡಿದ ಒಣಹವೆಯ ವಾತಾವರಣ ಮುಂದುವರೆಯಲಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿತ್ತೀಯ ಶಿಸ್ತಿಲ್ಲದ, ರಾಜ್ಯವನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದ ದೂರದೃಷ್ಟಿಹೀನ ಬಜೆಟ್ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಾ. 09. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಆಯವ್ಯಯವು ರಾಜ್ಯದ ಆರ್ಥಿಕ ಭವಿಷ್ಯವನ್ನು ಅಪಾಯಕ್ಕೆ ತಳ್ಳಿರುವುದು ಮಾತ್ರವಲ್ಲದೆ ಕರಾವಳಿ ಭಾಗದ ಆಶೋತ್ತರಗಳಿಗೂ ತಣ್ಣೀರೆರಚುವ ಕೆಲಸ ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಸಂಸದರು, ಬಜೆಟ್‌ನಲ್ಲಿ ದಾಖಲಾಗಿರುವ 22,000 ಕೋಟಿ ರೂ.ಗಳ ಬೃಹತ್ ರೆವೆನ್ಯೂ ಕೊರತೆಯು ಕಾಂಗ್ರೆಸ್ ಸರ್ಕಾರದ ದಿವಾಳಿತನ ತೋರಿಸುತ್ತಿದ್ದು, ದಿನನಿತ್ಯದ ಆಡಳಿತಾತ್ಮಕ ವೆಚ್ಚಗಳಿಗೂ ಸಾಲದ ಹಣವನ್ನೇ

ವಿತ್ತೀಯ ಶಿಸ್ತಿಲ್ಲದ, ರಾಜ್ಯವನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದ ದೂರದೃಷ್ಟಿಹೀನ ಬಜೆಟ್ ಸಂಸದ ಕ್ಯಾ.ಚೌಟ Read More »

ಕರಾವಳಿ

ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್‌ ಹಾಗೂ 15ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 124 ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಅನುದಾನ ಮಂಜೂರಾಗಿದೆ. ಆ ಪೈಕಿ ಬಂಟ್ವಾಳದಲ್ಲಿ ಇಂದು ಒಟ್ಟು 11 HWC ಕೇಂದ್ರಗಳ ಸ್ಥಾಪನೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಶಾಸಕ ರಾಜೇಶ್ ನಾಯ್ಕ್ ಜೊತೆಗೂಡಿ ಮೂಡುಪಡುಕೋಡಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

ಚಿನ್ನದ ಬೆಲೆ ಇಂದು ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07  ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆ ಇಂದು ಭಾರೀ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ (Gold Price Today On 7th March) ಬೆಲೆಯಲ್ಲಿ ಬರೋಬ್ಬರಿ 230 ರೂ. ಏರಿಕೆಯಾಗಿ 15,000 ರೂ. ಆದರೆ 24 ಕ್ಯಾರಟ್‌ ಚಿನ್ನಕ್ಕೆ 251 ರೂ. ಏರಿಕೆಯಾಗಿ 16,364 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,20,000 ರೂ. 10 ಗ್ರಾಂಗೆ ನೀವು 1,50,000

ಚಿನ್ನದ ಬೆಲೆ ಇಂದು ಭಾರೀ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಲಿಂಡರ್ ಬೆಲೆ ಹೆಚ್ಚಳ

(ನ್ಯೂಸ್ ಕಡಬ) newskadaba.com ಕಡಬ, ಮಾ.07  ಇಸ್ರೇಲ್ ಇರಾನ್ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲದ ದರ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದ್ದು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ೬೦ ರೂ. ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ೧೧೫ ರೂ. ಏರಿಕೆಯಾಗಿದೆ. ಅಡುಗೆ ಅನಿಲದ ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ.ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಎಲ್‌ಪಿಜಿ ದರ ಏರಿಕೆಯಾಗುತ್ತಿರುವುದು ಇದು ೨ನೇ ಭಾರಿ. ಈಗಾಗಲೇ ಅಗತ್ಯ ವಸ್ತಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅಡುಗೆ

ಸಿಲಿಂಡರ್ ಬೆಲೆ ಹೆಚ್ಚಳ Read More »

ಕರಾವಳಿ

ಟೊಮೊಟೊ ದರ ಏಕಾಏಕಿ ಇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07  ಬೆಂಗಳೂರು: ಏಷ್ಯಾದ ಅತೀ ದೊಡ್ಡ ಟೊಮೇಟೊ ಮಾರುಕಟ್ಟೆಗಳಲ್ಲಿ ಒಂದಾದ ನಮ್ಮ ರಾಜ್ಯದ ಕೋಲಾರ ಮಾರುಕಟ್ಟೆಯಲ್ಲಿ ಬೆಲೆಯ ಏರಿಳಿತ ಸಾಮಾನ್ಯವಾದರೂ, ಈ ಬಾರಿಯ ತೀವ್ರ ಬೆಲೆ ಕುಸಿತ ರೈತರನ್ನು ಹೆಚ್ಚು ಸಂಕಷ್ಟಕ್ಕೆ ತಳ್ಳಿದೆ.ಮಹಾರಾಷ್ಟ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಿಗೆ ಕೋಲಾರದಿಂದ ಹೋಗುತ್ತಿದ್ದ ಟೊಮೇಟೊ ಪೂರೈಕೆಯ ಪ್ರಮಾಣ ತೀರಾ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚುವರಿ ಸಂಗ್ರಹ ಉಂಟಾಗಿದೆ. ಸ್ಥಳೀಯ ಉತ್ಪಾದನೆ ಹೆಚ್ಚಾಗಿರುವುದು ಮತ್ತು ಬೇಡಿಕೆ ಕಡಿಮೆಯಾಗಿರುವುದು ಕೋಲಾರ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.

ಟೊಮೊಟೊ ದರ ಏಕಾಏಕಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top