ಕರಾವಳಿ

ಶ್ರೀ ಭಾರತೀ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ

(ನ್ಯೂಸ್ ಕಡಬ)newskadaba.com ಅ. 21. ಕಡಬ: ವಿದ್ಯಾ ಮಂದಿರ ಮತ್ತು ದೇವಾಲಯಗಳು ಸಮಾಜದಲ್ಲಿ ಸಂಸ್ಕಾರ ಸಂಸ್ಕ್ರಿತಿಯನ್ನು ಬೆಳೆಸುವ ಕೇಂದ್ರಗಳು. ಪ್ರತಿ ಊರಿನಲ್ಲಿ ನಮ್ಮ ಹಿರಿಯರು ಸುದುದ್ದೇಶವಿಟ್ಟುಕೊಂಡು ಸಂಸ್ಕಾರ ಕೇಂದ್ರಗಳನ್ನು ತೆರೆದು ದೇಶಿ ಸೊಗಡನ್ನು ಉಳಿಸುವ ಕಾರ್ಯ ಮಾಡಿದ್ದಾರೆ. ಸಂಸ್ಕಾರ ಶಿಕ್ಷಣ ನೀಡಿ ನಮ್ಮ ಮಕ್ಕಳನ್ನು ದೇಶದ ಆಸ್ತಿಗಳನ್ನಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕಾಗಿದೆ ಎಂದು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನುಡಿದರು. ಕಡಬ ವಿದ್ಯಾನಗರದ ಸರಸ್ವತೀ ವಿದ್ಯಾಲಯದ ವಠಾರದಲ್ಲಿರುವ ಶ್ರೀ ಭಾರತೀ ಶಿಶುಮಂದಿರದ ನೂತನ ಕುಟೀರ […]

ಶ್ರೀ ಭಾರತೀ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ Read More »

ಕರಾವಳಿ

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.21. ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ. 50 ರಷ್ಟು ಸಹಾಯಧನದೊಂದಿಗೆ 2019-20ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ Read More »

ಕರಾವಳಿ

ಪುತ್ತೂರು: ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿ ➤ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.20. ಇಲ್ಲಿನ ಲಾಡ್ಜ್ ವೊಂದರಲ್ಲಿ‌ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಜೊತೆಗಿರುವುದನ್ನು ಕಂಡ ಭಜರಂಗದಳದ ಮುಖಂಡರು ನೀಡಿದ ಮಾಹಿತಿಯಂತೆ ಪೊಲೀಸರು ಜೋಡಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಭಾನುವಾರದಂದು ಪುತ್ತೂರಿನಲ್ಲಿ ನಡೆದಿದೆ. ಮೂಲತಃ ರಾಜಸ್ತಾನ ನಿವಾಸಿಯಾಗಿದ್ದು, ಸಾಮೆತ್ತಡ್ಕದಲ್ಲಿ ವಾಸಿಸುತ್ತಿರುವ ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣದ ಮೂಲಕ ಮುಂಬಯಿ ಮೂಲದ ಮುಸ್ಲಿಂ ಯುವಕನ ಪರಿಚಯವಾಗಿದ್ದು, ಶನಿವಾರದಂದು ಪುತ್ತೂರಿಗೆ ಆಗಮಿಸಿದ ಯುವಕ ಲಾಡ್ಜ್ ವೊಂದರಲ್ಲಿ‌ ರೂಂ ಬುಕ್‌ ಮಾಡಿದ್ದಾನೆ ಎನ್ನಲಾಗಿದೆ. ಭಾನುವಾರದಂದು

ಪುತ್ತೂರು: ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿ ➤ ಪೊಲೀಸ್ ವಶಕ್ಕೆ Read More »

ಕರಾವಳಿ

Breaking – ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ➤ ಶಿಕ್ಷಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ.19. ಪಾದಚಾರಿ ಶಿಕ್ಷಕಿಯೋರ್ವರಿಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಸುಳ್ಯದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುಳ್ಯದ ಶಾಲಾ ಶಿಕ್ಷಕಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ಮೃತ‌ ಮೀನಾಕ್ಷಿಯವರು ಸುಳ್ಯದ ಹಳೇಗೇಟು ಸಮೀಪದ ವಿದ್ಯಾನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಗಮಿಸಿದ ಬಸ್ಸೊಂದು ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ಸು ಚಾಲಕನ ವಿರುದ್ಧ

Breaking – ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ➤ ಶಿಕ್ಷಕಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕೇಂದ್ರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ರದ್ದುಗೊಳಿಸುವಂತೆ ಆಗ್ರಹ ➤ ಎಸ್‍ಡಿಪಿಐ ವತಿಯಿಂದ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.19. ಕೇಂದ್ರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ರದ್ದುಗೊಳಿಸಿ, ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಶುಕ್ರವಾರ ಕಡಬ ತಹಶೀಲ್ದಾರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಆನಂದ ಮಿತ್ತಬೈಲ್, ದೇಶದ್ಯಾಂತ ಆರ್ಥಿಕ ಹಿಂಜರಿತದಿಂದಾಗಿ ಉತ್ಪಾದನಾ ಕ್ಷೇತ್ರ

ಕೇಂದ್ರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ರದ್ದುಗೊಳಿಸುವಂತೆ ಆಗ್ರಹ ➤ ಎಸ್‍ಡಿಪಿಐ ವತಿಯಿಂದ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ

ಕಡಬ: ಭಿಕ್ಷುಕನಿಂದ ಹಣ ದೋಚಿ ಪರಾರಿಗೆ ಯತ್ನಿಸಿದ ಮಧ್ಯ ವಯಸ್ಕ ➤ ಸಾರ್ವಜನಿಕರಿಂದಾಗಿ ಹಣ ವಾಪಸ್ – ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕಡಬ, ಅ.19. ಅಂಗವಿಕಲ ಭಿಕ್ಷುಕನೋರ್ವ ಕೂಡಿಟ್ಟ ಹಣವನ್ನು ದೋಚಲು ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಹಣವನ್ನು ವಾಪಾಸ್ ಕೊಡಿಸಿದ ಘಟನೆ ಶನಿವಾರದಂದು ಕಡಬದಲ್ಲಿ ನಡೆದಿದೆ. ಕಡಬ ಪರಿಸರದಲ್ಲಿ ಸಾಧಾರಣವಾಗಿ ಕಾಣಸಿಗುವ ಅಂಗವಿಕಲ ಭಿಕ್ಷುಕನೋರ್ವನಿಂದ ಶನಿವಾರ ಬೆಳಿಗ್ಗೆ ಕಡಬದ ಮಧ್ಯ ವಯಸ್ಕ ವ್ಯಕ್ತಿಯೋರ್ವರು ಹಣವನ್ನು ಲಪಟಾಯಿಸಿ ಪರಾರಿಯಾಗುತ್ತಿದ್ದುದನ್ನು ಕಂಡ ಸಾರ್ವಜನಿಕರು ಹಿಡಿದಿಟ್ಟಿದ್ದಾರೆ‌. ನಂತರ ಕದ್ದ ಹಣವನ್ನು ಹಿಂತಿರುಗಿಸಿದ ವ್ಯಕ್ತಿ ಹಣವನ್ನು ಹಿಂತಿರುಗಿಸಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಡಬ: ಭಿಕ್ಷುಕನಿಂದ ಹಣ ದೋಚಿ ಪರಾರಿಗೆ ಯತ್ನಿಸಿದ ಮಧ್ಯ ವಯಸ್ಕ ➤ ಸಾರ್ವಜನಿಕರಿಂದಾಗಿ ಹಣ ವಾಪಸ್ – ವೀಡಿಯೋ ವೈರಲ್ Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ಗುಡುಗು ಸಹಿತ ಭಾರೀ ಮಳೆ ➤ ಹಲವೆಡೆ ಹಾನಿ, ಆರೆಂಜ್ ಅಲೆರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.18. ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಗುಡುಗು-ಮಿಂಚಿನಿಂದ ಕೂಡಿದ ಭಾರೀ ಹಿಂಗಾರು ಮಳೆ ಸುರಿಯುತ್ತಿದ್ದು, ಕೆಲವೆಡೆ ಹಾನಿ ಸಂಭವಿಸಿದೆ. ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರಬೆಟ್ಟು ಎಂಬಲ್ಲಿನ ನಿವಾಸಿ ಬುದ್ದ ನಾಯ್ಕ ಎಂಬವರ ಮನೆಗೆ ಸಿಡಿಲು ಬಡಿದು ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಸಿಡಿಲ ಆರ್ಭಟಕ್ಕೆ ಮನೆಯ ಹಂಚು ಹಾರಿಹೋಗಿದ್ದು, ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿವೆ. ಮನೆಯ ಪೀಠೋಪಕರಣಗಳು, ಕಿಟಕಿ, ಬಾಗಿಲು, ಟಿವಿ, ಡಿಶ್ ಆಂಟೆನಾ ಮೊದಲಾದ ಸಾಮಾಗ್ರಿಗಳು

ಕರಾವಳಿಯಲ್ಲಿ ಮುಂದುವರಿದ ಗುಡುಗು ಸಹಿತ ಭಾರೀ ಮಳೆ ➤ ಹಲವೆಡೆ ಹಾನಿ, ಆರೆಂಜ್ ಅಲೆರ್ಟ್ ಘೋಷಣೆ Read More »

ಕರಾವಳಿ

ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಜಗಳ ➤ ಓರ್ವನ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಆಸ್ತಿಯ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ತನ್ನ ಸಹೋದರನಿಂದ ಚೂರಿ ಇರಿತಕ್ಕೊಳಗಾಗಿ ಕೊಲೆಯಾದ ವ್ಯಕ್ತಿಯನ್ನು ಮಂಗಳೂರಿನ ಬೆಂಗ್ರೆ ನಿವಾಸಿ ಮುಸ್ತಫಾ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಆಸ್ತಿ ಮತ್ತು ಮನೆಯ ವಿಚಾರಕ್ಕೆ ಮುಸ್ತಫಾ ಹಾಗೂ ಅಬ್ದುಲ್ ರಹಿಮಾನ್ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಆರೋಪಿ ಅಬ್ದುಲ್ ರಹ್ಮಾನ್ ಚೂರಿಯಿಂದ ಮುಸ್ತಾಫರಿಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಮುಸ್ತಾಫರನ್ನು

ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಜಗಳ ➤ ಓರ್ವನ ಕೊಲೆಯಲ್ಲಿ ಅಂತ್ಯ Read More »

ಕರಾವಳಿ

ಕಡಬ: ಕುಮಾರಧಾರ ನದಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.16. ಗಾಳ ಹಾಕಲೆಂದು ಹೋದ ವ್ಯಕ್ತಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರದಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಹುಡುಕಾಡಿದಾಗ ಕಡಬ ಸಮೀಪದ ಕೋಡಿಂಬಾಳದ ಮಜ್ಜಾರು ಬಳಿ ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಬಳ್ಪ ಗ್ರಾಮದ ಕೊನ್ನಡ್ಕ ನಿವಾಸಿ ಪುಟ್ಟವೇರ ಎಂಬವರು ಪುತ್ರ ಗುರುರಾಜ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 14ರಂದು ಗಾಳ ಹಾಕಿ ಮೀನು ಹಿಡಿಯಲೆಂದು ಕುಮಾರಧಾರ ನದಿಗೆ ತೆರಳಿದ್ದ ಗುರುರಾಜ್ ರಾತ್ರಿಯಾದರೂ

ಕಡಬ: ಕುಮಾರಧಾರ ನದಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ
Scroll to Top