ಕರಾವಳಿ

ಸರಕಾರಿ ಯೋಜನೆಗಳ ಜನಜಾಗೃತಿ ➤ ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಸರಕಾರದ ಜನಪರ ಯೋಜನೆಗಳ ಕುರಿತು ಸಾಂಸ್ಕøತಿಕ ಕಲೆಗಳ ಮೂಲಕ ಜನ ಜಾಗೃತಿ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷ ಹಮ್ಮಿಕೊಂಡಿರುವ ಗ್ರಾಮ ಸಂಪರ್ಕ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ. ಖ್ಯಾತ ಯಕ್ಷಗಾನ ಕಲಾವಿದ ಗಿರೀಶ್ ನಾವಡ ನೇತೃತ್ವದ ಕರಾವಳಿ ಜಾನಪದ ಕಲಾವೇದಿಕೆ ಸುರತ್ಕಲ್ ತಂಡದ ಕಲಾವಿದರು ಬೀದಿನಾಟಕಗಳನ್ನು ಹಾಗೂ ಸಂಗೀತ ಕಲಾವಿದ ಮನೋಜ್ ನೇತೃತ್ವದಲ್ಲಿ ಗಣೇಶಪುರ ಶ್ರೀ ಸಿದ್ಧಿವಿನಾಯಕ ತಂಡದ ಕಲಾವಿದರು ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತ […]

ಸರಕಾರಿ ಯೋಜನೆಗಳ ಜನಜಾಗೃತಿ ➤ ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ Read More »

ಕರಾವಳಿ

ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ವಿಶ್ವಸಂಸ್ಥೆ ಅಭಿವೃದ್ಧಿ ಯೋಜನೆ ಹಾಗೂ ಭಾರತ ಸರಕಾರದ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ಇದರ ನೇತೃತ್ವದಲ್ಲಿ ಯುವ ಸಂಸತ್ 2019ರ ಕಾರ್ಯಕ್ರಮದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮವು ಜುಲೈ 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿರುವುದು. ಕಾರ್ಯಕ್ರಮದಲ್ಲಿ ಸಂಸತ್ತಿನ ಕಾರ್ಯವಿಧಾನ ಹಾಗೂ ಜವಾಬ್ದಾರಿ ಮತ್ತು ಸರಕಾರದ ಆಡಳಿತ ಅಭಿವೃದ್ಧಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿಯನ್ನು ನೀಡಿ ರಾಜಕೀಯ ವಿಚಾರಧಾರೆಗಳ

ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ Read More »

ಕರಾವಳಿ

ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ➤ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದವತತಿಯಿಂದ ಮೂರನೇ ರೋಜ್ ಗಾರ್ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಪ್ರಧಾನಮಂತ್ರಿ ಕೌಶಲ್ಯ ಕೇಂದ್ರವನ್ನು ತೆರೆದಿದ್ದು ನಿರುದ್ಯೋಗಿ ಯುವಕ ಹಾಗು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರಕಿಸುವಲ್ಲಿ ತೊಡಗಿಸಿಕೊಂಡಿದೆ. ಸದರಿ ಕೇಂದ್ರವು ಎರಡೂವರೆ ವರ್ಷದಿಂದ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತಿದ್ದು, ಈ ಕೇಂದ್ರದಲ್ಲಿ 1186 ಅಭ್ಯರ್ಥಿಗಳು ತರಬೇತಿಯನ್ನು ಮುಗಿಸಿದ್ದು 742 ಅಭ್ಯರ್ಥಿಗಳು ಮಂಗಳೂರು, ಬೆಂಗಳೂರು ಹಾಗು ಮುಂಬೈಯಲ್ಲಿ ಉದ್ಯೋಗಾವಕಾಶಗಳನ್ನು ಪಡೆದುಕೊಂಡಿದ್ದಾರೆ.2019-20ನೇ ಸಾಲಿನ ತರಬೇತಿಗಾಗಿ ಈಗಾಗಲೇ 300 ಕ್ಕೂ ಹೆಚ್ಚಿನ ಅಭ್ಯರ್ಥಿಗಳು ನೊಂದಾಯಿಸಿ ಕೊಂಡಿರುತ್ತಾರೆ. ಇದೀಗ

ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ➤ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದವತತಿಯಿಂದ ಮೂರನೇ ರೋಜ್ ಗಾರ್ ಮೇಳ Read More »

ಕರಾವಳಿ

ಪುನರೂರು ➤ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ಅಂಗ ಸಂಸ್ಥೆಯಾದಂತಹ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮುಲ್ಕಿ ಪಂಚಾಯತಿಯ ಪುನರೂರು ಗ್ರಾಮದಲ್ಲಿ ಬುಧವಾರದಂದು ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರದ ಹಿರಿಯ ವಿಜ್ಞಾನಿ ಹಾಗು ಮುಖ್ಯಸ್ಥರಾದ ಡಾ|| ಟಿ. ಜೆ. ರಮೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮೀನು ಕೃಷಿಕರ ದಿನಾಚರಣೆ ಬಗ್ಗೆ ಮಾಹಿತಿ ನೀಡಿದರು. ಎರಡನೇ ವಿಶ್ವಯುಧ್ಧದ ಸಮಯದಲ್ಲಿ ಪೌಷ್ಟಿಕ ಅಹಾರಕ್ಕಾಗಿ ಯೆದುರಿಸಿದ ಸಮಸ್ಯೆಗಳು, ಆಹಾರಪೂರೈಕೆಗಾಗಿ ವಿವಿಧ ಯೊಜನೆಗಳ ಅನುಷ್ಟಾನದ ಹೊರತಾಗಿಯು

ಪುನರೂರು ➤ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ Read More »

ಕರಾವಳಿ

ಸುಬ್ರಹ್ಮಣ್ಯ: ಲಾಡ್ಜ್ ನಲ್ಲಿ ಜೊತೆಗಿದ್ದ ಭಿನ್ನ ಕೋಮಿನ ಜೋಡಿ ➤ ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು‌.12. ಇಲ್ಲಿನ ಖಾಸಗಿ ವಸತಿ ಗೃಹವೊಂದರಲ್ಲಿ ಕೊಠಡಿ ಪಡೆದು ಜೊತೆಗಿದ್ದ ಭಿನ್ನ ಕೋಮಿನ ಜೋಡಿಯನ್ನು ಪತ್ತೆ ಹಚ್ಚಿರುವ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಗುರುವಾರ ರಾತ್ರಿ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಭಿನ್ನ ಕೋಮಿನ ಯುವಕ ಹಾಗೂ ಯುವತಿ ಜೊತೆಗಿರುವುದರಿಂದ ಅನುಮಾನಗೊಂಡ ಸ್ಥಳೀಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅವರನ್ನು ಸುಬ್ರಹ್ಮಣ್ಯ ಠಾಣೆಗೆ ಒಪ್ಪಿಸಿದ್ದಾರೆ. ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಮುಚ್ಚಳಿಕೆ ಬರೆದು ಹೆತ್ತವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

ಸುಬ್ರಹ್ಮಣ್ಯ: ಲಾಡ್ಜ್ ನಲ್ಲಿ ಜೊತೆಗಿದ್ದ ಭಿನ್ನ ಕೋಮಿನ ಜೋಡಿ ➤ ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು Read More »

ಕರಾವಳಿ

ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರಿನಲ್ಲಿ ನಡೆದ ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕಿಯರು ಭಾಗವಹಿಸಿದ್ದರು. ಅದರಲ್ಲಿ ನಮ್ಮ ದಕ್ಷಿಣ ಕನ್ನಡದ ಇಬ್ಬರು ಗೃಹರಕ್ಷಿಯರಾದ  ಶುಭ ಮತ್ತು ರೇಷ್ಮಾ, ಪಾಲ್ಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿ Read More »

ಕರಾವಳಿ

ಜನಸಂಖ್ಯೆ: ಸ್ಥಿರತೆ ಕಾಪಾಡುವುದು ಅಗತ್ಯ ➤ ಡಾ. ಸೆಲ್ವಮಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಸಂಪನ್ಮೂಲದ ಉಳಿವಿಗಾಗಿ ಜನಸಂಖ್ಯೆ ಸ್ಪೋಟದಲ್ಲಿ ಸ್ಥಿರತೆ ಕಾಪಾಡುವುದು ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಹೇಳಿದರು. ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರಾಷ್ಟ್ರೀಯ ಸೇವಾಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ “ವಿಶ್ವ ಜನಸಂಖ್ಯಾ ದಿನಾಚರಣೆ-2019”

ಜನಸಂಖ್ಯೆ: ಸ್ಥಿರತೆ ಕಾಪಾಡುವುದು ಅಗತ್ಯ ➤ ಡಾ. ಸೆಲ್ವಮಣಿ Read More »

ಕರಾವಳಿ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಇದರ ಸಹಯೋಗದೊಂದಿಗೆ ➤ ಜುಲೈ 15ರಂದು ಬೃಹತ್ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಕಾಂಕ್ಷಿಗಳ ಸೇವಾ (YES) ಕೇಂದ್ರ, ತಾಲೂಕು ಪಂಚಾಯತ್ ಪುತ್ತೂರು, ಈಶ ವಿದ್ಯಾಲಯ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ, ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಹಾಗೂ ವಾಣಿಯನ್ ಗಾಣಿಗ ಸಮಾಜ ಪುತ್ತೂರು ಇವರ ಸಂಯುಕ್ತಾಶ್ರಯದಲ್ಲಿ ಈ ಉದ್ಯೋಗಮೇಳ ನಡೆಯಲಿದೆ.   ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 15 ರಂದು ಬೆಳಿಗ್ಗೆ 10 ರಿಂದ 4 ಗಂಟೆವರೆಗೆ ಶ್ರೀ ಮಹಾಲಿಂಗೇಶ್ವರ ಸಭಾಭವನ, ಪುತ್ತೂರು ಇಲ್ಲಿ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಇದರ ಸಹಯೋಗದೊಂದಿಗೆ ➤ ಜುಲೈ 15ರಂದು ಬೃಹತ್ ಉದ್ಯೋಗ ಮೇಳ Read More »

ಕರಾವಳಿ

ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಜಿಲ್ಲಾಡಳಿತ ದ.ಕ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸ್ಮಾರ್ಟ್ ಸಿಟಿ ಲಿ., ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ , ಭಾರತ್ ಸ್ಕೌಟ್ ಎಂಡ್ ಗೈಡ್ಸ್ ದ.ಕ ಜಿಲ್ಲೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ-2019, ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಇಂದು ನಡೆಯಲಿದೆ. ಪರಿಸರ ಜಾಥಾ ಬೆಳಿಗ್ಗೆ 9 ಗಂಟೆಗೆ ಮಂಗಳಾ

ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ವಿಶ್ವ ಪರಿಸರ ದಿನಾಚರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಇಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಪರಿಸರ ದಿನಾಚರಣೆ-2019 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಮಂಗಳೂರಿನ ಟಿ.ಎಂ.ಎ ಪೈ ಕನ್ವೆನ್ಷನ್ ಹಾಲ್‍ನಲ್ಲಿ ಜರುಗಲಿದೆ. ಈ ಕಾರ್ಯಕ್ರಮದ ಪ್ರಯುಕ್ತ ಪರಿಸರ ಜಾಥಾ ಬೆಳಿಗ್ಗೆ 9 ಗಂಟೆಗೆ ಮಂಗಳ ಕ್ರೀಡಾಂಗಣದಿಂದ ಆರಂಭವಾಗಲಿದೆ.

ವಿಶ್ವ ಪರಿಸರ ದಿನಾಚರಣಾ ಕಾರ್ಯಕ್ರಮ Read More »

ಕರಾವಳಿ
Scroll to Top