ಕರಾವಳಿ

ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವಕೇಂದ್ರ, ಮಂಗಳೂರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ (SBSI 2.0) ವನ್ನು ಯುವಜನರ ಮೂಲಕ ಮಾಡಿಸಲು ನಿರ್ಣಯಿಸಲಾಗಿದೆ. ಈ ಕಾರ್ಯಕ್ರಮವು ಜೂನ್ 10 ರಿಂದ ಜುಲೈ 31 ರ ವರೆಗೆ ದಿನ ಒಂದಕ್ಕೆ 1 ಗಂಟೆಯಂತೆ 50 ಗಂಟೆಗಳ ಕಾಲ […]

ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ನೀರುಮಾರ್ಗ ಗ್ರಾಮಸಭೆ ಹಾಗೂ ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಮಂಗಳೂರು ತಾಲೂಕು ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರುಮಾರ್ಗ-ಬೊಂಡಂತಿಲ ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 11 ರಂದು ಪೂರ್ವಾಹ್ನ 10.30 ಗಂಟೆಗೆ ಸುಬ್ರಹ್ಮಣ್ಯ ಭಜನಾ ಮಂದಿರ ನೀರುಮಾರ್ಗದಲ್ಲಿ ನಡೆಯಲಿದೆ. ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರುಮಾರ್ಗ, ಬೊಂಡಂತಿಲ ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; ಬೊಂಡಂತಿಲ ಗ್ರಾಮದ 1 ನೇ ವಾರ್ಡ್ ಸಭೆ ಜುಲೈ 8 ರಂದು ಬೆಳಿಗ್ಗೆ 10.30 ಗಂಟೆಗೆ

ನೀರುಮಾರ್ಗ ಗ್ರಾಮಸಭೆ ಹಾಗೂ ವಾರ್ಡು ಸಭೆ Read More »

ಕರಾವಳಿ

ಪುತ್ತೂರು: ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಪುತ್ತೂರು, ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಇಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.04. ನೆಟ್ಲ ಮುಡ್ನೂರು – ಪುತ್ತೂರು 110 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ನಿಯತಕಾಲಿಕ ಪಾಲನಾ ಕಾರ್ಯವು ನಡೆಯಲಿರುವುದರಿಂದ ಇಂದು ಪೂರ್ವಾಹ್ನ 10.30ರಿಂದ ಅಪರಾಹ್ನ 2.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ, ಕುಂಬ್ರ, ಬೆಳ್ಳಾರೆ, ಸುಳ್ಯ, ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ಸರಬರಾಜು

ಪುತ್ತೂರು: ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಪುತ್ತೂರು, ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಇಂದು ವಿದ್ಯುತ್ ನಿಲುಗಡೆ Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ➤ ವಿದ್ಯಾರ್ಥಿನಿಯ ಮಾಹಿತಿ ಪ್ರಚಾರ ಪಡಿಸುವವರ ವಿರುದ್ಧ ಸೂಕ್ತ ಕ್ರಮ ➤ ವಾಟ್ಸ್ಅಪ್ ಗ್ರೂಪ್‌ನ ಅಡ್ಮಿನ್ ಗೂ ಕಾದಿದೆ ಶಿಕ್ಷೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರದಂದು ದಾಖಲಾಗಿರುವ ಕಾಲೇಜು ವಿದ್ಯಾರ್ಥಿನಿಯೋರ್ವಳ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಹುಡುಗಿಯ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಪ್ರಸಾರವಾಗುತ್ತಿದ್ದು, ಇಂತಹ ಮಾಹಿತಿಗಳನ್ನು ಪ್ರಸಾರಪಡಿಸುವುದು ಕಾನೂನಿನ ಉಲ್ಲಂಘನೆಯಾಗಿರುತ್ತದೆ. ಅತ್ಯಾಚಾರದ ವೀಡಿಯೊವನ್ನು ವಾಟ್ಸ್ಅಪ್ ಮೂಲಕ ಪ್ರಸಾರ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸು-ಮೋಟು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ. ಉಲ್ಲೇಖಿತ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಮತ್ತು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ➤ ವಿದ್ಯಾರ್ಥಿನಿಯ ಮಾಹಿತಿ ಪ್ರಚಾರ ಪಡಿಸುವವರ ವಿರುದ್ಧ ಸೂಕ್ತ ಕ್ರಮ ➤ ವಾಟ್ಸ್ಅಪ್ ಗ್ರೂಪ್‌ನ ಅಡ್ಮಿನ್ ಗೂ ಕಾದಿದೆ ಶಿಕ್ಷೆ Read More »

ಕರಾವಳಿ

ಕೈಮಗ್ಗದ ಉಡುಪಿ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿ

(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.3.ತೆರೆಮರೆಗೆ ಸರಿದಿದ್ದ ಉಡುಪಿ ಕೈಮಗ್ಗ ಉದ್ಯಮ ಮತ್ತೆ ಚಿಗುರಿದ್ದು, ಇಲ್ಲಿನ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿಯಾಗತೊಡಗಿದೆ. ಪ್ರಸ್ತುತ ಕಾರ್ಕಳದ ಕದಿಕೆ ಟ್ರಸ್ಟ್‌ ಹಾಗೂ ಸಾಗರದ ಚರಕ ಗ್ರಾಮೋದ್ಯೋಗ ಸಂಸ್ಥೆ ಜತೆಯಾಗಿ ಜಿಐ ಮಾನ್ಯತೆಯ ನೈಸರ್ಗಿಕ ಬಣ್ಣದ ಉಡುಪಿ ಸೀರೆಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಹೊಸ ಬಗೆಯ ಅವಕಾಶಕ್ಕೆ ತೆರೆದುಕೊಳ್ಳುತ್ತಿದೆ.ನೈಸರ್ಗಿಕ ಬಣ್ಣದ ಕೈಮಗ್ಗ ಸೀರೆಗಳು ಎಲ್ಲಾ ಕಾಲಕ್ಕೂ ಹೊಂದಿಕೊಳ್ಳುವುದರಿಂದ ಹಾಗೂ ಚರ್ಮಕ್ಕೆ ಹಾನಿಕಾರಕವಲ್ಲ. ಇದರಿಂದಾಗಿ ಯುವಜನತೆ ಸೀರೆ ಖರೀದಿಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ತಾಳಿಪಾಡಿ

ಕೈಮಗ್ಗದ ಉಡುಪಿ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿ Read More »

ಕರಾವಳಿ

ಗ್ಯಾಸ್ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.3.ಗ್ಯಾಸ್‌ಟ್ಯಾಂಕರ್‌ ಒಂದು ಮಂಗಳೂರಿನಿಂದ ಕಾರವಾರದತ್ತ ತೆರಳುತ್ತಿದ್ದ ವೇಳೆ  ಪಲ್ಟಿಯಾಗಿದ್ದು, ಆತಂಕಕ್ಕೆ ಕಾರಣವಾಯಿತು. ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರ ಬಲಾಯಿಪಾದೆ ಎಂಬಲ್ಲಿ ಈ ಘಟನೆ ನಡೆದಿದೆ. ಮೊದಲಿಗೆ ಹೆದ್ದಾರಿಯಲ್ಲಿ ಸಂಚಾರವನ್ನು ತಡೆಯಲಾಗಿದ್ದು , ಗ್ಯಾಸ್‌ ಲೀಕ್‌ ಆಗುತ್ತಿಲ್ಲ ಎನ್ನುವುದು ಖಚಿತವಾದ ಬಳಿಕ ಇನ್ನೊಂದು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಯಿತು.ಅಗ್ನಿ ಶಾಮಕದಳ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಗ್ಯಾಸ್‌ ಟ್ಯಾಂಕರ್‌ ತೆರವುಗೊಳಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉದ್ಯಾವರ ಬಂಕ್‌ನಲ್ಲಿ ಡಿಸೇಲ್‌ ತುಂಬಿಸಿ ಹೋದ ಚಾಲಕ

ಗ್ಯಾಸ್ ಟ್ಯಾಂಕರ್ ಪಲ್ಟಿ Read More »

ಕರಾವಳಿ

ಅಂಧ ಅಭ್ಯರ್ಥಿಗಳ ಷರತ್ತು ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ರೈಲ್ವೆ ಇಲಾಖೆ ಮತ್ತು ಎಲ್.ಐ.ಸಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಅದರಲ್ಲಿ ಅಂಧ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ನೀಡುವ ಬರಹಗಾರರ ಸೇವೆಯನ್ನು ಪಡೆಯಲು ವಿಧಿಸಿದ್ದ ಷರತ್ತುಗಳನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಅಂಧ ಅಭ್ಯರ್ಥಿಗಳ ಷರತ್ತು ರದ್ದು Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣ ➤ ಜುಲೈ 11 – ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ 2019ನೇ ಸಾಲಿನ ಜೂನ್ ತಿಂಗಳ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ  ಸಭೆ ಜುಲೈ 11 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣ ➤ ಜುಲೈ 11 – ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.2019-20ನೇ ಸಾಲಿನಲ್ಲಿ ತಾಲೂಕು ಮಟ್ಟದ ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ ಬಂಟ್ವಾಳ ತಾಲೂಕು ಪಂಚಾಯತ್ ನ ಕಾರ್ಯ ನಿರ್ವಾಹಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜುಲೈ 3 ರಂದು ಅಪರಾಹ್ನ 3 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.ತಮ್ಮ ಸಲಹೆ ಸೂಚನೆಗಳನ್ನು ಮತ್ತು ಅಹವಾಲುಗಳನ್ನು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಬಿ.ಸಿ ರೋಡ್, ಬಂಟ್ವಾಳ ತಾಲೂಕು ಇಲ್ಲಿಗೆ ಮುಂಚಿತವಾಗಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ Read More »

ಕರಾವಳಿ

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇಲ್ಲಿನ ಜುಲೈ -2019 ನೇ ಸಾಲಿನಲ್ಲಿ ನಡೆಸಲ್ಪಡುವ ನೇತ್ರ ಪರೀಕ್ಷಾ ಶಿಬಿರಗಳು ಇಂತಿವೆ. ಜುಲೈ 9 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಖೆ, ಕುಕ್ಕೇರಿ ಮಾದೇವಿ, ನೆಲ್ಯಾಡಿ ಗ್ರಾಮ ಜುಲೈ 23 ರಂದು ಕರಪಾಡಿ, ಬಂಟ್ವಾಳ ತಾಲೂಕು. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯಲು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ
Scroll to Top