ಕರಾವಳಿ

ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ

(ನ್ಯೂಸ್ ಕಡಬ) newskadaba.com ಸುಳ್ಯ, ಜೂನ್.24.ಮಳೆ ನೀರು ಹರಿದು ಹೋಗಲು ನಗರದ ಚರಂಡಿಗಳು ಸಿದ್ಧ್ದಗೊಳ್ಳದ ಕಾರಣ ಸಣ್ಣ ಮಳೆಗೂ ರಸ್ತೆ ತೋಡಿನಂತಾಗಿದೆ. ರವಿವಾರ ಮಧ್ಯಾಹ್ನ ಮುಕ್ಕಾಲು ತಾಸು ಸುರಿದ ಮಳೆಗೆ ರಸ್ತೆ ಮಳೆ ನೀರಿನಿಂದ ತುಂಬಿ ಹೋಗಿತ್ತು. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ನಗರದ ಮಧ್ಯದಲ್ಲೇ ಹಾದು ಹೋಗಿದೆ. ಇಲ್ಲಿ ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ ಉಂಟಾಗುತ್ತಿದೆ.ಮುಖ್ಯ ರಸ್ತೆ ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿದೆ. ರಸ್ತೆ ಹಾದು ಹೋಗಿರುವ ಪ್ರದೇಶ ನ.ಪಂ. ವ್ಯಾಪ್ತಿಯೊಳಗಿದೆ. […]

ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ Read More »

ಕರಾವಳಿ

ಮೀರಜ್ ರೈಲು ಪುರ್ನ ಆರಂಭಕ್ಕೆ ಪ್ರಯತ್ನ➤ಸಂಸದ ನಳಿನ್ ಕುಮಾರ್

(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.24.ರವಿವಾರ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ದಕ್ಷಿಣ ಕನ್ನಡ ಸಂಸದನಳಿನ್‌ಕುಮಾರ್‌ಕಟೀಲು ಅವರು, ಜಿಲ್ಲೆಯ ರೈಲ್ವೇ ಸಂಪರ್ಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮಂಗಳೂರು – ಗುರುವಾಯೂರು, ಸುಬ್ರಹ್ಮಣ್ಯ – ಕೊಲ್ಲೂರು, ಮಂಗಳೂರು – ತಿರುಪತಿ ನಡುವೆ ನೂತನ ರೈಲುಗಳ ಆರಂಭಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ರೈಲ್ವೇ ಸಚಿವರಿಗೆ ಪ್ರಸ್ತಾವನೆ ರೂಪದಲ್ಲಿ ಸಲ್ಲಿಸಲಾಗಿದೆ ಎಂದು ಹೇಳಿದರು.ಪುತ್ತೂರು ಎಪಿಎಂಸಿ ರಸ್ತೆಯಲ್ಲಿನ ರೈಲ್ವೇ ಗೇಟ್‌ಗೆ ಪರ್ಯಾಯವಾಗಿ ತಳ ಸೇತುವೆ ನಿರ್ಮಾಣವಾಗಲಿದೆ. ವಿವೇಕಾನಂದ ಕಾಲೇಜು ರಸ್ತೆಯ ಅಗಲ ಕಿರಿದಾದ ರೈಲ್ವೇ

ಮೀರಜ್ ರೈಲು ಪುರ್ನ ಆರಂಭಕ್ಕೆ ಪ್ರಯತ್ನ➤ಸಂಸದ ನಳಿನ್ ಕುಮಾರ್ Read More »

ಕರಾವಳಿ

ಪಿಕಪ್ ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂನ್.24.ರವಿವಾರ ದಂದು ಪೆರುವಾಯಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್‌ ಬೈಕಿಗೆ ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪೆರುವಾಯಿ ಜಂಕ್ಷನ್‌ ಕಡೆಯಿಂದ ಮಾಣಿಲಕ್ಕೆ ಹೋಗುತ್ತಿದ್ದ ಪಿಕಪ್‌ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಢಿಕ್ಕಿ ಹೊಡೆದ ಪರಿಣಾಮ ಮುಂದಿನಿಂದ ಬರುತ್ತಿದ್ದ ಬೈಕ್‌ ರಸ್ತೆಯ ಬದಿಯ ಚರಂಡಿಗೆ ಎಸೆಯಲ್ಪಟ್ಟಿದೆ. ಪಿಕಪ್‌ ಸ್ವಲ್ಪ ಮುಂದೆ ಸಾಗಿ ಸೇತುವೆಯ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಪಿಕಪ್‌ ಚಕ್ರ ಒಡೆದು

ಪಿಕಪ್ ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರರು ಗಂಭೀರ Read More »

ಕರಾವಳಿ

ಕಡಬ: ಪಿಕಪ್ ವಾಹನದಲ್ಲಿ ಅಕ್ರಮ ದನ ಸಾಗಾಟ ➤ ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಸಂಘ ಪರಿವಾರದ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಪಿಕಪ್ ವಾಹನವೊಂದರಲ್ಲಿ ದನ ಸಾಗಾಟುತ್ತಿದ್ದುದನ್ನು ಪತ್ತೆ ಹಚ್ಚಿರುವ ಸಂಘ ಪರಿವಾರದ ಕಾರ್ಯಕರ್ತರು ಕಡಬ ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ಮುಂಜಾನೆ ಕೋಡಿಂಬಾಳದಲ್ಲಿ ನಡೆದಿದೆ. ಕಡಬದ ವಿದ್ಯಾನಗರ ನಿವಾಸಿ ಶೇಖರ್ ಎಂಬವರಿಗೆ ಸೇರಿದ ಗಜಕೇಸರಿ ಹೆಸರಿನ ಪಿಕಪ್ ವಾಹನದಲ್ಲಿ ದನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿಯಿಯ ಮೇರೆಗೆ ತಡೆಹಿಡಿದ ಸಂಘ ಪರಿವಾರದ ಕಾರ್ಯಕರ್ತರು ಪಿಕಪ್ ವಾಹನ, ದನ ಸಹಿತ ಚಾಲಕ ಶೇಖರ್ ಹಾಗೂ ತಂಗಚ್ಚನ್ ಎಂಬವರನ್ನು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಡಬ: ಪಿಕಪ್ ವಾಹನದಲ್ಲಿ ಅಕ್ರಮ ದನ ಸಾಗಾಟ ➤ ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಸಂಘ ಪರಿವಾರದ ಕಾರ್ಯಕರ್ತರು Read More »

ಕರಾವಳಿ

ಕಡ್ಯ-ಕೊಣಾಜೆ: ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.22. ಕೊಣಾಜೆ ಉನ್ನತ ಹಿ.ಪ್ರಾ. ಶಾಲಾ ವತಿಯಿಂದ ಕಡ್ಯ-ಕೊಣಾಜೆ ಶ್ರೀ ದುರ್ಗಾಂಬಿಕಾ ಭಜನಾ ಮಂದಿರದಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ಯೋಗ ಶಿಕ್ಷಕರಾದ ವಾಸುದೇವ ಭಟ್ ಕಡ್ಯ ಯೋಗ ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಕೆ. ಯೋಗದ ಮಹತ್ವವನ್ನು ವಿವರಿಸಿದರು. ಶಿಕ್ಷಕರಾದ ಹಾಲೇಶ್, ನಾಗವೇಣಿ, ಪ್ರಮೀಳಾ, ಲತಾ ಸಹಕರಿಸಿದರು. ಅಜಿತ್ ಜೈನ್ ವಂದಿಸಿದರು.

ಕಡ್ಯ-ಕೊಣಾಜೆ: ಯೋಗ ದಿನಾಚರಣೆ Read More »

ಕರಾವಳಿ

ಅಡೆಂಜ ಶಾಲೆ: ಯೋಗದಿನಾಚರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.22.ನೂಜಿಬಾಳ್ತಿಲ ಗ್ರಾಮದ ಅಡೆಂಜ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಶುಕ್ರವಾರ ಆಚರಿಸಾಯಿತು. ಶಾಲಾ ಮಕ್ಕಳು ಸಾಮೂಹಿಕವಾಗಿ ಯೋಗಾಸನಗಳನ್ನು ಮಾಡಿದರು. ಮುಖ್ಯ ಶಿಕ್ಷಕಿ ಏಲಿಯಮ್ಮ ಯೋಗದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕರಾದ ರವಿಕುಮಾರ್ ಜಿ.ಆರ್. ಸ್ವಾಗತಿಸಿ ವಂದಿಸಿದರು. ಶಿಕ್ಷಕಿ ವೀಣಾ ಸಹಕರಿಸಿದರು.

ಅಡೆಂಜ ಶಾಲೆ: ಯೋಗದಿನಾಚರಣೆ Read More »

ಕರಾವಳಿ

ಎಂ. ಗೋಪಾಲ ಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಎಂ. ಗೋಪಾಲ ಸ್ವಾಮಿ ಮಾನ್ಯ ಸಂಸದೀಯ ಕಾರ್ಯದರ್ಶಿಗಳು, ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 24 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಮಂಗಳೂರಿನಿಂದ ಉಡುಪಿಗೆ ತೆರಳುವರು.

ಎಂ. ಗೋಪಾಲ ಸ್ವಾಮಿ ಪ್ರವಾಸ Read More »

ಕರಾವಳಿ

ಪೆರ್ನಾಲ್ ಸಂದೋಲ ಮತ್ತು ಕಿನಾದಿ ಬ್ಯಾರಿ ಘಝಲ್ ➤ಸಿಡಿ ಬಿಡುಗಡೆ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ 2019 ಜೂನ್ 24 ರಂದು ಸಂಜೆ 4.30 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ “ಪೆರ್ನಾಲ್ ಸಂದೋಲ” ಮತ್ತು “ಕಿನಾದಿ” ಬ್ಯಾರಿ ಘಝಲ್ ಸಿಡಿ ಬಿಡುಗಡೆ’ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ನಗರಾಭಿವೃದ್ದಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಕಾಡೆಮಿಯ ಅಧ್ಯಕ್ಷರಾದ ಕರಂಬಾರ್ ಮಹಮದ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು. ಬೋಳಂಗಡಿ ಹವ್ವಾ ಜುಮಾ ಮಸ್ಜಿದ್

ಪೆರ್ನಾಲ್ ಸಂದೋಲ ಮತ್ತು ಕಿನಾದಿ ಬ್ಯಾರಿ ಘಝಲ್ ➤ಸಿಡಿ ಬಿಡುಗಡೆ ಸಮಾರಂಭ Read More »

ಕರಾವಳಿ

ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷ ಡಾ ಕೆ ಅನ್ನದಾನಿ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 22 ರಂದು ಬೆಳಿಗ್ಗೆ 8.40 ಗಂಟೆಗೆ ವಿಮಾನದ ಮೂಲಕ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ಶ್ರೀ ಧರ್ಮಸ್ಥಳ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 3.30 ಗಂಟೆಗೆ ಉಡುಪಿಗೆ ತೆರಳಿ ವಾಸ್ತವ್ಯ. ಜೂನ್ 24 ರಂದು ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಸ್ಥಾನಕ್ಕೆ

ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ Read More »

ಕರಾವಳಿ

ಬಹಿರಂಗ ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಮಂಗಳೂರು ನಗರ ಪೊಲೀಸ್ ಘಟಕಕ್ಕೆ ಸೇರಿದ ಹಳೇಯ ನಾಲ್ಕು ವಾಹನಗಳನ್ನು ಹರಾಜಿನ ಮೂಲಕ ವಿಲೇವಾರಿ ಮಾಡಲು ಜೂನ್ 27 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಬಹಿರಂಗ ಹರಾಜು ಮಾಡುವ ವಾಹನಗಳು – ಕೆ.ಎ. 19 ಜಿ-237 ಮಹೇಂದ್ರ ಕಮಾಂಡರ್ ಮಾದರಿ 2002, ಕೆ.ಎ. 19 ಜಿ-238 ಮಹೇಂದ್ರ ಕಮಾಂಡರ್ ಮಾದರಿ 2002, ಕೆ.ಎ. 19 ಜಿ-220 ಮಹೇಂದ್ರ ಕಮಾಂಡರ್ ಮಾದರಿ

ಬಹಿರಂಗ ಹರಾಜು ಪ್ರಕಟಣೆ Read More »

ಕರಾವಳಿ
Scroll to Top