ಕರಾವಳಿ

ಕೇರಳದಲ್ಲಿ ಪತ್ತೆಯಾದ ನಿಫಾ ವೈರಸ್ ➤ದಕ್ಷಿಣ ಕನ್ನಡದಲ್ಲೂ ಮುಂಜಾಗ್ರತಾಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಕೇರಳದ ವಿದ್ಯಾರ್ಥಿಯೊಬ್ಬರಲ್ಲಿ ನಿಫಾ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಗಡಿಯ ದಕ್ಷಿಣ ಕನ್ನಡದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕೇರಳದಿಂದ ಮಂಗಳೂರಿಗೆ ಪ್ರತಿದಿನ ಹಲವರು ಸಂಚರಿಸುತ್ತಿರುತ್ತಾರೆ. ಅಲ್ಲದೆ ಇಲ್ಲಿನ ಆಸ್ಪತ್ರೆಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಅದ್ದರಿಂದ ಶಂಕಿತ ನಿಫಾ ವೈರಸ್‌ ಲಕ್ಷಣ ಗಳು ಕಂಡುಬಂದರೆ ತತ್‌ಕ್ಷಣ ಆರೋಗ್ಯ ಇಲಾಖೆಗೆ ತಿಳಿಸಬೇಕು ಎಂಬುದಾಗಿ ಜಿಲ್ಲೆಯ ಎಲ್ಲ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.ಹಾಗೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ.ಕೇರಳದಿಂದ ಮಂಗಳೂರಿಗೆ ಬಹುತೇಕ ಮಂದಿ ರೈಲಿನಲ್ಲೇ […]

ಕೇರಳದಲ್ಲಿ ಪತ್ತೆಯಾದ ನಿಫಾ ವೈರಸ್ ➤ದಕ್ಷಿಣ ಕನ್ನಡದಲ್ಲೂ ಮುಂಜಾಗ್ರತಾಕ್ರಮ Read More »

ಕರಾವಳಿ

ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು, 2019-20ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ, ಮತ್ತು ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ. ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಇಂತಿವೆ: ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು

ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರವ ಸೇತುವೆ ಶಿಥಿಲಾವಸ್ಥೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಮಂಗಳೂರು ತಾಲೂಕಿನ ಕೂಳೂರು ಎಂಬಲ್ಲಿರುವ ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಮಾನು ಸೇತುವೆಯು ತುಂಬ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವುದರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯುವವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ. ಸದ್ರಿ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸುವುದು ಅನಿವಾರ್ಯವೆಂದು ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 115 ಹಾಗೂ 1989 ರ ನಿಯಮ 221 ಎ(5) ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿಪರ್ಯಾಯ ಮಾರ್ಗವಾಗಿ ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುವ ಮತ್ತು ಬೆಂಗಳೂರಿನಿಂದ

ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರವ ಸೇತುವೆ ಶಿಥಿಲಾವಸ್ಥೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ Read More »

ಕರಾವಳಿ

ಕರ್ನಾಟಕ ರಾಜ್ಯ ಸರ್ಕಾರಿ ಗ್ರೂಪ್ ಡಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5. 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತ್ಯುನ್ನತ ಅಂಕಗಳನ್ನು ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ಗ್ರೂಪ್ ಡಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30 ಆಗಿದೆ. ಅರ್ಜಿ ನಮೂನೆ ಪತ್ರವನ್ನು ಸಂಘದ ಕಚೇರಿಯಲ್ಲಿ ಪಡೆಕೊಳ್ಳಬೇಕು ಎಂದು ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘ(ರಿ) ಪ್ರಾಂಕಿ ಫ್ರಾನ್ಸಿಸ್ ಕುಟಿನ್ಹ ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಗ್ರೂಪ್ ಡಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಲೋಕಸಭಾ ಚುನಾವಣೆಯ ಅವಧಿಯಲ್ಲಿ ಅಮಾನತಿನಲ್ಲಿರಿಸಿದ ಆಯುಧಗಳ ಬಿಡುಗಡೆಗೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5. ಲೋಕಸಭಾ ಚುನಾವಣೆಯ ಸಂಬಂಧ ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ಆಯುಧ ಪರವಾನಿಗೆದಾರರು ದಿನಾಂಕ:11-03-2019 ರಿಂದ 31-05-2019 ರವರೆಗೆ ಆಯುಧಗಳನ್ನು ಅಮಾನತಿನಲ್ಲಿರಿಸಿ ನಂತರ ಬಿಡುಗಡೆಗೊಳಿಸಲು ಆದೇಶಿಸಲಾಗಿರುತ್ತದೆ. ಸದ್ರಿ ಅವಧಿಯಲ್ಲಿ ನಗರ ಸ್ಥಳೀಯ ಸಂಸ್ಥೆ, ಹಾಗೂ ಗ್ರಾಮ ಪಂಚಾಯತಿ ಚುನಾವಣೆಯ ಪ್ರಕ್ರಿಯೆಯೂ ಜ್ಯಾರಿಯಲ್ಲಿರುವುದರಿಂದ ಸದ್ರಿ ಚುನಾವಣೆಯ ಸಂಬಂಧ ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತು ಪಡಿಸಿ ಪುತ್ತೂರು(1 ಕಬಕ ಮತ್ತು 5 ನೆಕ್ಕಿಲಾಡಿ) ಹಾಗೂ ಬೆಳ್ತಂಗಡಿ (28

ಲೋಕಸಭಾ ಚುನಾವಣೆಯ ಅವಧಿಯಲ್ಲಿ ಅಮಾನತಿನಲ್ಲಿರಿಸಿದ ಆಯುಧಗಳ ಬಿಡುಗಡೆಗೆ ಆದೇಶ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ವಾಸವಿರುವ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.  ಪ್ರಸಕ್ತ 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಎಸ್.ಎಸ್.ಎಲ್.ಸಿ. – ರೂ.10,000, ಪಿ.ಯು.ಸಿ ಮತ್ತು ತತ್ಸಮಾನ ಕೋರ್ಸುಗಳು (ಪ್ರತಿ ವರ್ಷಕ್ಕೆ) – ರೂ.12,000, ಎಲ್ಲಾ ಪದವಿ ಕೋರ್ಸುಗಳು (ಪ್ರತಿ ವರ್ಷಕ್ಕೆ)ರೂ. 15,000, ಎಲ್ಲಾ ಸ್ನಾತಕೋತ್ತರ ಕೋರ್ಸುಗಳು (ಪ್ರತಿ ವರ್ಷಕ್ಕೆ) ರೂ.

ದ.ಕ ಜಿಲ್ಲೆಯಲ್ಲಿ ವಾಸವಿರುವ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ Read More »

ಕರಾವಳಿ

ವಿಶ್ವ ಚಿತ್ತವಕಲತೆ ದಿನಾಚರಣೆ-2019

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಇಂದು ಪೂರ್ವಾಹ್ನ 11.00 ಗಂಟೆಗೆ ವಿಶ್ವ ಚಿತ್ತವಿಕಲತೆ ದಿನ-2019 ಕಾರ್ಯಕ್ರಮವು ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಆಡಿಟೊರಿಯಂನಲ್ಲಿ ನಡೆಯಲಿದೆ.ಪತ್ರ ಕರ್ತರು ಆಗಮಿಸಲು ಕೋರಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿದೇರ್ಶಕರಾದ ಫಾ.ಮೈಖಲ್ ಸಾಂತುಮೆಯರ್

ವಿಶ್ವ ಚಿತ್ತವಕಲತೆ ದಿನಾಚರಣೆ-2019 Read More »

ಕರಾವಳಿ

ನೆಟ್ಟಣ ರೈಲ್ವೇ ಹಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ➤ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಇಲ್ಲಿನ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದ ಸಮೀಪದ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ರುಂಡ – ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬುಧವಾರದಂದು ಪತ್ತೆಯಾಗಿದೆ. ರೈಲ್ವೇ ನಿಲ್ದಾಣದಿಂದ ಅನತಿ ದೂರದಲ್ಲಿ ಮೃತದೇಹವು ಕಂಡುಬಂದಿದ್ದು, ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸ್ಥಳೀಯ ವ್ಯಕ್ತಿಯೋರ್ವರು ಬುಧವಾರದಂದು ಬೆಳಿಗ್ಗೆ ರೈಲ್ವೇ ಮಾರ್ಗದಲ್ಲಿ ತೆರಳುತ್ತಿದ್ದಾಗ ಅಪರಿಚಿತ ಮೃತದೇಹ ಕಂಡುಬಂದಿದ್ದು, ಅವರು ರೈಲ್ವೇ ನಿಲ್ದಾಣದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ನೆಟ್ಟಣ ರೈಲ್ವೇ ಹಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ➤ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಶಂಕೆ Read More »

ಕರಾವಳಿ

ಕಡಬ: ಅಕ್ರಮ ಮರಳುಗಾರಿಕೆಯ ವರದಿಗೆ ತೆರಳಿದ್ದ ಟಿವಿ ವರದಿಗಾರನಿಗೆ ಹಲ್ಲೆ ➤ ಕಡಬ ತಾಲೂಕು ಪತ್ರಕರ್ತರ ಸಂಘ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಕೋರಿಯಾರ್ ಎಂಬಲ್ಲಿ ಅಕ್ರಮ ಮರಳುಗಾರಿಕೆಯ ವರದಿಗೆ ತೆರಳಿದ್ದ ಖಾಸಗಿ ಸುದ್ದಿವಾಹಿನಿಯ ವರದಿಗಾರರೊಬ್ಬರಿಗೆ ಮರಳು ದಂಧೆಯಲ್ಲಿ ತೊಡಸಿಕೊಂಡಿದ್ದ ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದ್ದು ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಹಳೆ ನ್ಯೂಸ್ ಚಾನೆಲ್ ಕಡಬ ವರದಿಗಾರ ಗಣೇಶ್ ಇಡಾಳ(24) ಎಂಬವರಿಗೆ ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಐತ್ತೂರು ಗ್ರಾಮದ ಕೇನ್ಯ ನಿವಾಸಿ ಗಣೇಶ್ ಮತ್ತು 102 ನೇ ನೆಕ್ಕಿಲಾಡಿ ಗ್ರಾಮದ ಮಾಯಿಪಾಜೆ

ಕಡಬ: ಅಕ್ರಮ ಮರಳುಗಾರಿಕೆಯ ವರದಿಗೆ ತೆರಳಿದ್ದ ಟಿವಿ ವರದಿಗಾರನಿಗೆ ಹಲ್ಲೆ ➤ ಕಡಬ ತಾಲೂಕು ಪತ್ರಕರ್ತರ ಸಂಘ ಖಂಡನೆ Read More »

ಕರಾವಳಿ

ದಾಸವಾಳ ಒಂದು ಔಷಧಿ ಗಿಡ

(ನ್ಯೂಸ್ ಕಡಬ) newskadaba.com  ಆರೋಗ್ಯ ಮಾಹಿತಿ:ದಾಸವಾಳದ ಎಲೆಗಳು ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ಅನುಕೂಲಕಾರಿ ಗುಣಗಳನ್ನು ಹೊಂದಿವೆ. ಬಾಹ್ಯ ಹಾಗೂ ಆಂತರ್ಯರೂಪದಲ್ಲಿ ದಾಸವಾಳದ ಎಲೆಯನ್ನು ಬಳಕೆ ಮಾಡಬಹುದಾಗಿದ್ದು, ಇದು ಅನೇಕ ವಿಟಮಿನ್ನುಗಳು ಹಾಗೂ ಮಿನರಲ್​ಗಳಿಂದ ಭರಿತವಾಗಿದೆ. ಇದರಲ್ಲಿ ಆಂಟಿ ಆಕ್ಸಿಡೆಂಟ್​ಗಳು ಹೆಚ್ಚಿನ ಪ್ರಮಾಣದಲ್ಲಿದೆ. ದೇಹಕ್ಕೆ ಹಾನಿ ಮಾಡಬಹುದಾದ ಪದಾರ್ಥಗಳನ್ನು ಹೊರಹಾಕಲು ಉಪಯುಕ್ತ.ದಾಸವಾಳದ ಎಲೆಯನ್ನು ಬಳಸಿ ಕಷಾಯ ಮಾಡಿ ಸೇವಿಸುವುದರಿಂದ ಈ ಉಪಯುಕ್ತತೆ ಸಿಗುತ್ತದೆ. ಇದರಲ್ಲಿನ ಆಂಟಿ ಆಕ್ಸಿಡೆಂಟ್​ಗಳು ಕ್ಯಾನ್ಸರ್ ವಿರುದ್ಧ ಹೋರಾಡಲು, ತೂಕ ಕಡಿಮೆ ಮಾಡಿಕೊಳ್ಳಲು, ಕೊಲೆಸ್ಟರಾಲ್​ನ ಪ್ರಮಾಣವನ್ನು

ದಾಸವಾಳ ಒಂದು ಔಷಧಿ ಗಿಡ Read More »

ಕರಾವಳಿ
Scroll to Top