ಕರಾವಳಿ

ಸವಿತಾ ಸಮಾಜ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 4 ರೊಳಗೆ ಆಯಾ […]

ಸವಿತಾ ಸಮಾಜ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ Read More »

ಕರಾವಳಿ

ಕದ್ರಿ ಪಾರ್ಕ್‍ನಲ್ಲಿ ಮಾವು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ದಕ್ಷಿಣ ಕನ್ನಡ ಜಿಲ್ಲೆ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ (ನಿ.), ಬೆಂಗಳೂರುರವರ ಸಹಯೋಗದಲ್ಲಿ ಮಾವು ಬೆಳೆಗಾರರಿಂದ ನೇರವಾಗಿ ಬಳಕೆದಾರರಿಗೆ ಮಾರಾಟ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೇ 24 ರಿಂದ 26 ರವರೆಗೆ ಕದ್ರಿ ಉದ್ಯಾನವನ ಮಂಗಳೂರಿನಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ಇಲ್ಲಿ ರೈತರಿಂದ ನೇರವಾಗಿ ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಮಾವು ಪ್ರಿಯರಿಗೆ ವಿವಿಧ ಮಾವು ತಳಿಗಳನ್ನು

ಕದ್ರಿ ಪಾರ್ಕ್‍ನಲ್ಲಿ ಮಾವು ಮೇಳ Read More »

ಕರಾವಳಿ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಮೇ.24. ಇಲ್ಲಿನ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 18 ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ನಾಲ್ಕು ಮಹಡಿಗಳ ಕಟ್ಟಡದ ಮೇಲಿನ ಮಹಡಿಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆಯೊಂದಿಗೆ ಬೆಂಕಿಯ ಕೆನ್ನಾಲಿಗೆ ಜೋರಾಗುತ್ತಿರುವುದನ್ನು ನೋಡಿ ಗಾಬರಿಯಾದ ವಿದ್ಯಾರ್ಥಿಗಳು ಜೀವ ಭಯದಿಂದ ಕಟ್ಟಡದ ಕಿಟಕಿಗಳಿಂದ ಕೆಳಕ್ಕೆ ಜಿಗಿದಿದ್ದಾರೆ. ಇದರಿಂದಾಗಿ 18 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಂಭೀರ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ Read More »

ಕರಾವಳಿ

ಕಡಬ: ಮದುವೆಯಾಗಿ ತಿಂಗಳಾಗಿಲ್ಲ..! ➤ ಒಲ್ಲದ ಗಂಡನಿಗೆ ಚೂರಿಯಿಂದ ಇರಿದ ಹೆಂಡತಿ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ನೂತನ ವಧುವೊಬ್ಬಳು ಗಂಡನನ್ನು ಕೊಲೆ ಮಾಡುವ ಉದ್ದೇಶದಿಂದ ಪತಿಗೆ ಚೂರಿಯಿಂದ ಇರಿದು ಪೊಲೀಸರ ಅತಿಥಿಯಾದ ಘಟನೆ ಗುರುವಾರ ರಾತ್ರಿ ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಏಣಿತಡ್ಕ ಅತ್ರೇಲು ನಿವಾಸಿ ಗೋಪಾಲಕೃಷ್ಣ ನಾಯ್ಕ ಎಂಬವರ ಪತ್ನಿ ಸುಪ್ರಿಯಾ(30) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳ ನಿವಾಸಿಯಾಗಿರುವ ಈಕೆಯನ್ನು ಇಪ್ಪತೈದು ದಿನಗಳ ಹಿಂದೆಯಷ್ಟೇ ಗೋಪಾಲಕೃಷ್ಣ ನಾಯ್ಕ ಮದುವೆಯಾಗಿದ್ದರು. ಆದರೆ ಈಕೆಗೆ ಈ ಮದುವೆ ಇಷ್ಟವಿರಲಿಲ್ಲ ಎಂದು ಹೇಳಲಾಗಿದೆ.

ಕಡಬ: ಮದುವೆಯಾಗಿ ತಿಂಗಳಾಗಿಲ್ಲ..! ➤ ಒಲ್ಲದ ಗಂಡನಿಗೆ ಚೂರಿಯಿಂದ ಇರಿದ ಹೆಂಡತಿ Read More »

ಕರಾವಳಿ

ಬಾಳೆಕಾಯಿಯ ಸೇವನೆಯಂದ ದೇಹದಲ್ಲಿ ಹೆಚ್ಚುತ್ತದೆ ರೋಗನಿರೋಧಕ ಶಕ್ತಿ

(ನ್ಯೂಸ್ ಕಡಬ) newskadaba.com , ಆರೋಗ್ಯಮಾಹಿತಿ.ಸಾಮಾನ್ಯವಾಗಿ ನಾವೆಲ್ಲ ಬಾಳೆಹಣ್ಣನ್ನು ಸೇವಿಸುತ್ತೇವೆ. ಸುಲಭವಾಗಿ ಕಡಿಮೆ ದರದಲ್ಲಿ ಎಲ್ಲರ ಕೈಗೆಟುಕುವಂಥದ್ದು ಬಾಳೆಹಣ್ಣು. ಇದು ಅನೇಕ ಆರೋಗ್ಯ ಸಹಕಾರಿ ಗುಣಗಳನ್ನು ಹೊಂದಿದೆ. ಆದರೆ ಬಾಳೆಹಣ್ಣು ಮಾತ್ರವೇ ಅಲ್ಲ; ಬಾಳೆಕಾಯಿ ಸಹ ಅನೇಕ ಆರೋಗ್ಯ ಅನುಕೂಲಕಾರಿ ಗುಣಗಳನ್ನು ಹೊಂದಿರುವುದು ವಿಶೇಷ.ನಾರಿನಾಂಶವನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವಂತಹ ಬಾಳೆಕಾಯಿಯು ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿ ಮಾಡುತ್ತದೆ. ಹೃದಯವನ್ನು ಆರೋಗ್ಯಯುತವಾಗಿ ನೋಡಿಕೊಳ್ಳಲು ಕೂಡ ಸಹಕಾರಿ. ಬಾಳೆಕಾಯಿಯು ನಮ್ಮ ದೇಹಕ್ಕೆ ಬೇಕಾದ ಅಗತ್ಯ ವಿಟಮಿನ್ನುಗಳು ಹಾಗೂ ಖನಿಜಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ

ಬಾಳೆಕಾಯಿಯ ಸೇವನೆಯಂದ ದೇಹದಲ್ಲಿ ಹೆಚ್ಚುತ್ತದೆ ರೋಗನಿರೋಧಕ ಶಕ್ತಿ Read More »

ಕರಾವಳಿ

ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಹಳ್ಳಿಯ ಯುವ ಪ್ರತಿಭೆ➤ ದಿಲೀಪ್ ವೇದಿಕ್

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಮೇ.23. ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ದಿಲೀಪ್ ವೇದಿಕ್17ನೇ ವಯಸ್ಸಿಗೆ 800ಕ್ಕೂ ಹೆಚ್ಚು ಕೃತಿ, ಹಲವು ಪ್ರಶಸ್ತಿಗಳ ಸರದಾರ ಕಲ್ಲುಗುಡ್ಡೆ, ಎ. 4: ತನ್ನ 17ನೇ ವಯಸ್ಸಿನಲ್ಲಿಯೇ ಸಾಹಿತ್ಯ ಕ್ಷೇತ್ರದಲ್ಲಿ ಕವಿ, ಕಥೆಗಾರ, ಗಾಯಕ, ವಾಗ್ಮಿಯಾಗಿ, ಕರ್ನಾಟಕ ಹಾಗೂ ಕೇರಳ ಸಾಹಿತ್ಯದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಹಲವಾರು ಕೃತಿ, ಕವನಗಳನ್ನು ರಚಿಸಿ, ಹಲವಾರು ಸನ್ಮಾನ, ಬಿರುದು, ಪ್ರಶಸ್ತಿಗಳ ಸರದಾರನಾಗಿರುವ ನೂಜಿಬಾಳ್ತಿಲ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಲೀಪ್ ವೇದಿಕ್ ಎಂಬ ಯುವ ಸಾಹಿತಿಯ ಸಾಧನೆಯಿದು.

ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಹಳ್ಳಿಯ ಯುವ ಪ್ರತಿಭೆ➤ ದಿಲೀಪ್ ವೇದಿಕ್ Read More »

ಕರಾವಳಿ

ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಮೇ.23.34 ನೇ ನೆಕ್ಕಿಲಾಡಿ ಗ್ರಾ.ಪಂ.ನ ವಾರ್ಡ್ ನಂ. 2ರಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಮೇ 29ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿ ಮಿನೇಜಸ್ ಪರ ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ ಅವರು ಬುಧವಾರ ಕರ್ವೇಲು ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತುವವರು ಗ್ರಾಮ ಪಂಚಾಯತ್‍ನೊಳಗೆ ಪ್ರವೇಶಿಸಿದಾಗ ಮಾತ್ರ ಉತ್ತಮ ಆಡಳಿತದೊಂದಿಗೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಸಮಾಜಮುಖಿ

ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ Read More »

ಕರಾವಳಿ

ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಸುಮಾರು 150 ವರ್ಷಗಳ ಇತಿಹಾಸವಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ 2015ನೇ ಸಾಲಿನಿಂದ ಸ್ಥಾಪನೆಗೊಂಡ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಗಲು ಹೊತ್ತಿನಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ (CA Foundation Course/ ICS / ACS) ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ, ಆರ್ಥಿಕವಾಗಿ ಹಿಂದುಳಿದ, ಹಗಲು ಹೊತ್ತಿನಲ್ಲಿ ಕೆಲಸ ನಿರ್ವಹಿಸಿ ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಈ

ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ 1 ಲಕ್ಷ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರ ಕಾಯ್ದುಕೊಂಡ ಬಿಜೆಪಿ ➤ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 1 ಲಕ್ಷದ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಆರಂಭದಲ್ಲಿ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುನ್ನಡೆಯನ್ನು ಸಾಧಿಸಿದ್ದರು. ಆದರೆ ಇಲೆಕ್ಟ್ರಾನಿಕ್ ಮತಪೆಟ್ಟಿಗೆಯ ಮತ ಎಣಿಕೆಯಲ್ಲಿ ನಳಿನ್ ಕುಮಾರ್ ಪರ ಮತಗಳ ಅಂತರ ಹೆಚ್ಚಾಗುತ್ತಿದೆ.

ದಕ್ಷಿಣ ಕನ್ನಡದಲ್ಲಿ 1 ಲಕ್ಷ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರ ಕಾಯ್ದುಕೊಂಡ ಬಿಜೆಪಿ ➤ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆ Read More »

ಕರಾವಳಿ

ಯುವಸ್ಪಂದನ ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಯುವಜನತೆ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನ ಸಿಗದೆ ತಮ್ಮ ಗುರಿಯಿಂದ ವಿಮುಕ್ತರಾಗುತ್ತಿದ್ದಾರೆ, ದೇಶದ ಅಗಾಧ ಯುವ ಸಂಪತ್ತಿನ ಸದ್ಬಳಕೆ ಸರಿಯಾದ ಮಾರ್ಗದರ್ಶನದಿಂದ ಮಾತ್ರವೇ ಸಾಧ್ಯವಾಗಬಹುದು. ಅದಕ್ಕಾಗಿ ಸರಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಳೆದ 4 ವರ್ಷಗಳಿಂದ ಯುವಸ್ಪಂದನ ಕೇಂದ್ರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ತೆರೆದಿದ್ದು, ಯುವಸ್ಪಂದನ ಅರಿವು ಕಾರ್ಯಕ್ರಮವನ್ನು ಪರಿಣಿತ ಯುವ ಪರಿವರ್ತಕರ ಮೂಲಕ ಎಲ್ಲಾ ಶಾಲಾ-ಕಾಲೇಜು, ಸಮುದಾಯಗಳಲ್ಲಿ ಯಶಸ್ವಿಯಾಗಿ ನಡೆಸುತ್ತಾ ಬಂದಿದೆ. ಇದರ ಸದುಪಯೋಗವನ್ನು 15 ರಿಂದ

ಯುವಸ್ಪಂದನ ಅರಿವು ಕಾರ್ಯಕ್ರಮ Read More »

ಕರಾವಳಿ
Scroll to Top