ಕರಾವಳಿ

ಕಡಬ: ಮನೆಯ ಅಂಗಳಕ್ಕೆ ಉರುಳಿ ಬಿದ್ದ ಓಮ್ನಿ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮೇ.19. ಮಾರುತಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಭಾನುವಾರದಂದು ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರದಲ್ಲಿ ಸಂಭವಿಸಿದೆ. ಕಡಬದ ಬಸ್ ನಿಲ್ದಾಣದ ಬಳಿ ವ್ಯಾಪಾರ ನಡೆಸುತ್ತಿರುವ ಅಬ್ಬಾಸ್ ಎಂಬವರು ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುತ್ತಿದ್ದಾಗ ಕಳಾರ ಸಮೀಪ ಬೇರೊಂದು ವಾಹನವು ಇವರ ಓಮ್ನಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭದಲ್ಲಿ ರಸ್ತೆ ಬಿಟ್ಟು ಕೊಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ […]

ಕಡಬ: ಮನೆಯ ಅಂಗಳಕ್ಕೆ ಉರುಳಿ ಬಿದ್ದ ಓಮ್ನಿ ಕಾರು ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ

ಕಡಬ: ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ ➤ ಮಳೆಯಿಂದಾಗಿ ತಂಪಾದ ಇಳೆ

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಕಡಬ ಪರಿಸರದಲ್ಲಿ ಶನಿವಾರ ರಾತ್ರಿ ಗುಡುಗು, ಮಿಂಚು ಮಿಶ್ರಿತ ಭಾರೀ ಗುಡುಗು ಮಳೆ ಸುರಿದಿದ್ದು, ಬಿಸಿಲಿನ ತಾಪದಿಂದ ಕಾದು ಕೆಂಪಾಗಿದ್ದ ಇಳೆಯನ್ನು ತಂಪೆರೆದಿದೆ. ಕಡಬ, ಹೊಸ್ಮಠ, ಕುದ್ಮಾರು, ಪಂಜ, ಕೋಡಿಂಬಾಳ, ಮರ್ಧಾಳ, ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಗುಡುಗು – ಮಿಂಚಿನ ಆರ್ಭಟದೊಂದಿಗೆ ಭಾರೀ ಗಾಳಿ ಮಳೆಯಾಗಿದ್ದು, ಕೊಯಿಲ, ಆತೂರು ಪರಿಸರದಲ್ಲಿ ಸಾಧಾರಣ ಗುಡುಗಿನೊಂದಿಗೆ ತುಂತುರು ಮಳೆಯಾಗಿದೆ. ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಪ್ರಾಣಿ – ಪಕ್ಷಿಗಳು ನಿಟ್ಟುಸಿರು ಬಿಡುವಂತಾಗಿದೆ.

ಕಡಬ: ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ ➤ ಮಳೆಯಿಂದಾಗಿ ತಂಪಾದ ಇಳೆ Read More »

ಕರಾವಳಿ

ರಾಜ್ಯ ಸರ್ಕಾರಿ ನೌಕರರ ಸಂಘ – ಜಿಲ್ಲಾ ಶಾಖೆ ಚುನಾವಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.18.  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಕಾರ್ಯಾಕಾರಿ ಸಮಿತಿ ಸದಸ್ಯರು, ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು ಚುನಾವಣಾಧಿಕಾರಿಯಾಗಿ ಎನ್. ಎಸ್. ಶೋಭಾ ಮಾರಾಟಾಧಿಕಾರಿ ಸಹಕಾರ ಸ0ಘಗಳ ಸಹಾಯಕ ನಿಬ0ಧಕರ ಕಚೇರಿ, ಪುತ್ತೂರು ಇವರನ್ನು ನೇಮಕ ಮಾಡಲಾಗಿದೆ. ಅರ್ಹ ಮತದಾರರ ಪಟ್ಟಿಯನ್ನು ಹಾಗೂ ಚುನಾವಣಾ ವೇಳಾಪಟ್ಟಿಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ. ಜಿಲ್ಲಾ ಶಾಖೆ ಕಚೇರಿಯ ಸೂಚನಾ

ರಾಜ್ಯ ಸರ್ಕಾರಿ ನೌಕರರ ಸಂಘ – ಜಿಲ್ಲಾ ಶಾಖೆ ಚುನಾವಣೆ Read More »

ಕರಾವಳಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಮೆನ್ನಬೆಟ್ಟು ಗ್ರಾಮದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿಭಾಗದಲ್ಲಿನ ಗಣಿತ, ವಿಜ್ಞಾನ, ಕನ್ನಡ ಸಹಶಿಕ್ಷಕರ ಹುದ್ದೆಗಳಿಗೆ ಹಾಗೂ ಕಾಲೇಜು ವಿಭಾಗದ ಗಣಿತ, ಭೌತಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಕ ವಿಜ್ಞಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ಗೌರವಧನದ ಮೇರೆಗೆ ನಿಗದಿತ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅತಿಥಿü ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಮೇ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟವರ್ಗ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮತ್ತು ಪರಿಶಿಷ್ಟವರ್ಗ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ ವಿದ್ಯಾರ್ಥಿನಿಲಯಗಳಿಗೆ 2019-20 ನೇ ಸಾಲಿಗೆ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಪ.ಜಾತಿ ವಿದ್ಯಾರ್ಥಿಗಳು www://admissions.kar.nic.in/hosteladmission ವೆಬ್‍ಸೈಟ್ ಮೂಲಕ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು www:kar.nic.in/hosteladmission  ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಹೆತ್ತವರ ಆದಾಯ ರೂ. 2 ಲಕ್ಷ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಹೆತ್ತವರ

ಪರಿಶಿಷ್ಟವರ್ಗ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮೇ.21ರಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸುಳ್ಯ ಮತ್ತು ಕಡಬಕ್ಕೆ..!! ➤ ಸರಕಾರಿ ಕಛೇರಿಗಳಲ್ಲಿ ನಡೆಯುವ ಲಂಚದ ಬಗ್ಗೆ ದೂರು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ 21 ರಂದು ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ ಅಪರಾಹ್ನ 2 ಗಂಟೆಯಿಂದ 4 ಗಂಟೆಯ ವರೆಗೆ ಡಾ ಅಂಬೇಡ್ಕರ್ ಭವನ ಕಡಬ ಇಲ್ಲಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ನಿರೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ

ಮೇ.21ರಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸುಳ್ಯ ಮತ್ತು ಕಡಬಕ್ಕೆ..!! ➤ ಸರಕಾರಿ ಕಛೇರಿಗಳಲ್ಲಿ ನಡೆಯುವ ಲಂಚದ ಬಗ್ಗೆ ದೂರು ಸ್ವೀಕಾರ Read More »

ಕರಾವಳಿ

ಲೋಕಾಯುಕ್ತರ ಭೇಟಿ – ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಮೇ 27 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಮೇ 28 ರಂದು ಪೂರ್ವಾಹ್ನ 11 ಗಂಟೆಯಿಂದ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಮೇ 29 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ

ಲೋಕಾಯುಕ್ತರ ಭೇಟಿ – ದೂರು ಅರ್ಜಿ ಸ್ವೀಕಾರ Read More »

ಕರಾವಳಿ

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಮದರಸ ಅಧ್ಯಾಪಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.18. ಅಪ್ರಾಪ್ತ ವಿದ್ಯಾರ್ಥಿಯೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿ ಮದರಸ ಅಧ್ಯಾಪಕನನ್ನು ಬಂಧಿಸಿರುವ ಪುತ್ತೂರು ಮಹಿಳಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ದಿ.ಅಬ್ದುಲ್ಲಾ ಎಂಬವರ ಪುತ್ರ ಪುತ್ತೂರಿನ ಮದರಸವೊಂದರಲ್ಲಿ ಅಧ್ಯಾಪಕನಾಗಿದ್ದ ಅನ್ವರ್ ಮೌಲವಿ(41) ಎಂದು ಗುರುತಿಸಲಾಗಿದೆ. ಆರೋಪಿಯು ಮಾರ್ಚ್ ಮತ್ತು ಎಪ್ರಿಲ್ ತಿಂಗಳಿನಲ್ಲಿ ಬಾಲಕನಿಗೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಮದರಸ ಅಧ್ಯಾಪಕನ ಬಂಧನ Read More »

ಕರಾವಳಿ

ಪೇರಡ್ಕ-ಕಾಯರಡ್ಕ ರಸ್ತೆ:

(ನ್ಯೂಸ್ ಕಡಬ) newskadaba.com,ಕಲ್ಲುಗುಡ್ಡೆ,ಮೇ.17. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ತಾಲೂಕು ಕೇಂದ್ರ ಕಡಬವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಪೇರಡ್ಕದಿಂದ ಕಾಯರಡ್ಕ ವರೆಗೆ ಡಾಮಾರು ಕಿತ್ತು ಹೋಗಿ ಹೊಂಡ ಗುಂಡಿಗಳು ನಿರ್ಮಾಣವಾಗಿ ತೀರಾ ಹದಗೆಟ್ಟಿದ್ದು, ಸರ್ವಋತುವಿನಲ್ಲಿ ಸಂಚಾರ ಕಷ್ಟಕರವಾಗಿದ್ದು, ಹಲವು ವರ್ಷಗಳಿಂದ ದುರಸ್ಥಿಗೊಳಿಸುವಂತೆ ಆಗ್ರಹಿಸುತ್ತಿದ್ದರೂ ದುರಸ್ಥಿ ಮಾಡದೇ ಇರುವುದಕ್ಕೆ ನಿತ್ಯ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಪೂರ್ಣ ಪ್ರಮಾಣದಲ್ಲಿ ದುರಸ್ಥಿಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿ.ಪಂ. ಇಂಜಿನೀಯರ್ ರೋಹಿದಾಸ್ ರವರು ಅನುದಾನ ಲಭ್ಯವಿದ್ದು 3-4 ದಿನಗಳಲ್ಲಿ ಕಾಮಗಾರಿ

ಪೇರಡ್ಕ-ಕಾಯರಡ್ಕ ರಸ್ತೆ: Read More »

ಕರಾವಳಿ

ಪುತ್ರಿ ಜತೆ ಶಬರಿಮಲೆಗೆ ತೆರಳಿದ್ದ ಯುವ ಉದ್ಯಮಿ ಸಾವು

(ನ್ಯೂಸ್ ಕಡಬ) newskadaba.com,ಪುತ್ತೂರು,ಮೇ.17. ನಗರದ ಯುವ ಉದ್ಯಮಿಯೋರ್ವರು ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ತನ್ನ 8 ವರ್ಷದ ಪುತ್ರಿ ಜತೆ ಮಾಲಾಧಾರಿಯಾಗಿ ಶಬರಿಮಲೆಗೆ ತೆರಳಿದ್ದ ವೇಳೆಯಲ್ಲಿ ಈ ಘಡನೆ ನಡೆದಿದೆ.ನರಿಮೊಗರು ಗ್ರಾಮದ ವೀರಮಂಗಲ ಗುತ್ತು ನಿವಾಸಿ, ಜನಾರ್ದನ ಗೌಡ (36) ಮೃತಪಟ್ಟವರು. ಪುತ್ತೂರಿನ ತೆಂಕಿಲದಲ್ಲಿ ಶ್ರೀ ಮಹಾಲಿಂಗೇಶ್ವರ ಎಂಟರ್‌ಪ್ರೈಸಸ್‌ ಸಂಸ್ಥೆಯನ್ನು ನಡೆಸುತ್ತಿದ್ದರು. ಅವರು ಪುತ್ರಿ, ಭಾವ ಹಾಗೂ ಇನ್ನಿಬ್ಬರ ಜತೆ ಮೇ 15ರಂದು ಪೂರ್ವಾಹ್ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇರುಮುಡಿ ಕಟ್ಟಿ ಮಧ್ಯಾಹ್ನ ರೈಲಿನ ಮೂಲಕ ಮಂಗಳೂರಿನಿಂದ ಶಬರಿಮಲೆ ಯಾತ್ರೆ ತೆರಳಿದ್ದರು.

ಪುತ್ರಿ ಜತೆ ಶಬರಿಮಲೆಗೆ ತೆರಳಿದ್ದ ಯುವ ಉದ್ಯಮಿ ಸಾವು Read More »

ಕರಾವಳಿ
Scroll to Top