ಕರಾವಳಿ

ಕಡಬದ ಹಿರಿಯ ಉದ್ಯಮಿ, ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಸಿ.ಫಿಲಿಪ್ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಮೇ.17. ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ, ಹಿರಿಯ ಉದ್ಯಮಿ, ಸಾಮಾಜಿಕ ಮುಂದಾಳು ಸಿ.ಫಿಲಿಪ್ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಸೈಂಟ್ ಜೋಕಿಮ್ಸ್ ವುಡ್ ಇಂಡಸ್ಟ್ರೀಸ್, ಅನುಗ್ರಹ ಸಭಾಭವನ, ಅನುಗ್ರಹ ಕಾಂಪ್ಲೆಕ್ಸ್ ಸೇರಿದಂತೆ ಕಡಬದಲ್ಲಿ ವಿವಿಧ ಸಂಸ್ಥೆಗಳನ್ನು ಸ್ಥಾಪಿಸಿ ಉದ್ಯಮ ರಂಗಕ್ಕೆ ಮಹತ್ತರ ಕೊಡುಗೆ ನೀಡಿದ್ದ ಅವರು ಕೆಲವು ಸಮಯಗಳಿಂದ ಕ್ಯಾನ್ಸರ್ ಗೆ ತುತ್ತಾಗಿದ್ದರು. ಕಳೆದ ಮೂರು ದಿನಗಳಿಂದ ಮಂಗಳೂರಿನ ಕೊಲಾಸೊ ಆಸ್ಪತ್ರೆಯಲ್ಲಿ […]

ಕಡಬದ ಹಿರಿಯ ಉದ್ಯಮಿ, ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಸಿ.ಫಿಲಿಪ್ ವಿಧಿವಶ Read More »

ಕರಾವಳಿ

ಜೂನ್ 8 ಮತ್ತು 9 ರಂದು ಹಣ್ಣುಗಳ ಉತ್ಸವ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17.ಮಂಗಳೂರಿನ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಜೂನ್ 8 ಮತ್ತು 9 (ಶನಿವಾರ ಮತ್ತು ಆದಿತ್ಯವಾರ) ರಂದು ‘ಹಣ್ಣುಗಳ ಉತ್ಸವ’ ವನ್ನು ತೋಟಗಾರಿಕಾ ಇಲಾಖಾ ಸಹಯೋಗದೊಂದಿಗೆ ಆಚರಿಸಲಾಗುವುದು.ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ಇತರೆ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ವಿವಿಧ ಹಣ್ಣುಗಳು, ಔಷದೀಯ ಸಸಿಗಳು, ಕಸಿ ಗಿಡಗಳು, ಬೀಜಗಳು, ಖಾದಿ ಬಟ್ಟೆಗಳು, ಸಹಜ ಬಣ್ಣದ ಕೈಮಗ್ಗದ ವಸ್ತ್ರಗಳು, ಸಾವಯವ

ಜೂನ್ 8 ಮತ್ತು 9 ರಂದು ಹಣ್ಣುಗಳ ಉತ್ಸವ Read More »

ಕರಾವಳಿ

ಕಡಬ: ಬಲಾತ್ಕಾರವಾಗಿ ಅತ್ಯಾಚಾರಗೈದುದರಿಂದ ಗರ್ಭಿಣಿಯಾದ 13ರ ಹರೆಯದ ಬಾಲಕಿ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಬಲಾತ್ಕಾರದಿಂದ ಅತ್ಯಾಚಾರಗೈದುದರಿಂದ ಬಾಲಕಿ ಇದೀಗ ಗರ್ಭಿಣಿಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜದಿಂದ ತಡವಾಗಿ ಬೆಳಕಿಗೆ ಬಂದಿದೆ. ಕಡಬ ತಾಲೂಕು ರಾಮಕುಂಜ ಗ್ರಾಮದ ಮಾರಂಗ ನಿವಾಸಿ ಬಾಬು ಎಂಬವರ ಪುತ್ರ ರಮೇಶ(20) ಎಂಬಾತ ಕಡಬ ಠಾಣಾ ವ್ಯಾಪ್ತಿಯ13 ರ ಹರೆಯದ ಬಾಲಕಿಯ ಮೇಲೆ ಸುಮಾರು ಎರಡು ತಿಂಗಳ ಹಿಂದೆ ಅತ್ಯಾಚಾರ ಎಸಗಿ, ಈ ವಿಚಾರವನ್ನು ಹೊರಗಡೆ ತಿಳಿಸದಂತೆ ಜೀವ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ. ಬಾಲಕಿಯು ಇದೀಗ

ಕಡಬ: ಬಲಾತ್ಕಾರವಾಗಿ ಅತ್ಯಾಚಾರಗೈದುದರಿಂದ ಗರ್ಭಿಣಿಯಾದ 13ರ ಹರೆಯದ ಬಾಲಕಿ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ Read More »

ಕರಾವಳಿ

ಸೇನಾ ನೇಮಕಾತಿ ರ್ಯಾಲಿ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.16. ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಸೇನಾ ನೇಮಕಾತಿ ರ್ಯಾಲಿ ಮೇ 28 ರಿಂದ ಜೂನ್ 6 ರವರೆಗೆ ಜಿಲ್ಲಾ ಕ್ರೀಡಾಂಗಣ ಗದಗ ಜಿಲ್ಲೆಯಲ್ಲಿ ನಡೆಯಲಿದ್ದು ಸಿಪಾಯಿ ಜಿ.ಡಿ. ಸಿಪಾಯಿ ಕ್ಲರ್ಕ್ ಮತ್ತು ಎಸ್.ಕೆ.ಟಿ. ಸಿಪಾಯಿ ಟೆಕ್ನಿಕಲ್, ಸಿಪಾಯಿ ಟ್ರೇಡ್ಸಮೆನ್ ಹುದ್ದೆಗಳಿಗಾಗಿ ಸೇನಾ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದ್ದು ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ವಿದ್ಯಾರ್ಹತೆ 8ನೇ ಅಥವಾ 10ನೇ ತರಗತಿ ಉತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ www.joinindianarmy.nic.in ಹಾಗೂ ಸೇನಾ

ಸೇನಾ ನೇಮಕಾತಿ ರ್ಯಾಲಿ Read More »

ಕರಾವಳಿ

ಉದ್ಯೋಗ ಸಂದರ್ಶನಕ್ಕೆ ತೆರಳುವ ಮಹಿಳೆಯರು ಇನ್ಮುಂದೆ ವಾಸ್ತವ್ಯದ ಬಗ್ಗೆ ಚಿಂತೆ ಬಿಡಿ ➤ ಪ್ರಮುಖ ನಗರದಲ್ಲಿ ಎಲ್ಲಾ ಮಹಿಳೆಯರಿಗಾಗಿ ಲಭ್ಯವಿದೆ ಉಚಿತ ಟ್ರಾನ್ಸಿಟ್ ಹಾಸ್ಟೆಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.16. 2018-19ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಬೆಂಗಳೂರು ನಗರಕ್ಕೆ ಉದ್ಯೋಗ ಸಂದರ್ಶನ ಪ್ರವೇಶ ಪರೀಕ್ಷೆಗಳಿಗೆ ಒಂಟಿಯಾಗಿ ಬರುವಂತಹ ಎಲ್ಲಾ ವರ್ಗದ ಮಹಿಳೆಯರಿಗೆ ವರಮಾನ ಮಿತಿಯಿಲ್ಲದೇ 3 ದಿನಗಳವರೆಗೂ ಉಚಿತ ಊಟೋಪಹಾರ ಮತ್ತು ಸುರಕ್ಷಿತ ವಾಸ್ತವ್ಯವನ್ನು ಟ್ರಾನ್ಸಿಟ್ ಹಾಸ್ಟೆಲ್‍ಗಳಲ್ಲಿ ಕಲ್ಪಿಸಲಾಗುವುದು ಎಂದು ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಇವರು ತಿಳಿಸಿರುತ್ತಾರೆ.   ಬೆಂಗಳೂರಿನಲ್ಲಿ ಲಭ್ಯವಿರುವ 13 ಟ್ರಾನ್ಸಿಟ್ ಹಾಸ್ಟೆಲ್‍ಗಳು : ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್,

ಉದ್ಯೋಗ ಸಂದರ್ಶನಕ್ಕೆ ತೆರಳುವ ಮಹಿಳೆಯರು ಇನ್ಮುಂದೆ ವಾಸ್ತವ್ಯದ ಬಗ್ಗೆ ಚಿಂತೆ ಬಿಡಿ ➤ ಪ್ರಮುಖ ನಗರದಲ್ಲಿ ಎಲ್ಲಾ ಮಹಿಳೆಯರಿಗಾಗಿ ಲಭ್ಯವಿದೆ ಉಚಿತ ಟ್ರಾನ್ಸಿಟ್ ಹಾಸ್ಟೆಲ್ Read More »

ಕರಾವಳಿ

ಚೆನ್ನೈ ಕ್ರಿಕೆಟಿಗನ ಕ್ರೀಡಾ ಸ್ಪೂರ್ತಿ ಕೊಂಡಾಡಿದ ಕ್ರಿಕೆಟ್ ಜಗತ್ತು:ಕಾಲಲ್ಲಿ ರಕ್ತ ಸುರಿಯುತ್ತಿದ್ದರೂ ಹೋರಾಡಿದ ವ್ಯಾಟ್ಸನ್

(ನ್ಯೂಸ್ ಕಡಬ) newskadaba.com,ಹೈದರಾಬಾದ್,ಮೇ.14. ಇದು ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಶೇನ್ ವ್ಯಾಟ್ಸನ್ ರ ಫೈನಲ್ ಪಂದ್ಯದ ಸಾಹಸಗಾಥೆ. ಫೈನಲ್ ಪಂದ್ಯದ ಒತ್ತಡ, ಒಂದೆಡೆ ವಿಕೆಟ್ ಗಳು ಬೀಳುತ್ತಿದೆ, ರನ್ ಔಟ್ ತಪ್ಪಿಸಲು ಹಾಕಿದ ಡೈವ್ ನಿಂದ ಮೊಣ ಕಾಲಿಂದ ರಕ್ತ ಸುರಿಯುತ್ತಿದೆ, ಹರಿದ ನೆತ್ತರಿಂದಾಗಿ ಹಳದಿ ಪ್ಯಾಂಟ್ ಕೆಂಪಾಗಿದೆ, ಆದರೆ ಛಲ ಬಿಡದ ಹೋರಾಟ.ಬ್ಯಾಟಿಂಗ್ ಮಾಡುತ್ತಿದ್ದ ಶೇನ್ ವ್ಯಾಟ್ಸನ್ ಡೈವ್ ಹಾಕುವ ವೇಳೆ ಗಾಯಗೊಂಡಿದ್ದರು. ಆದರೆ ಈ ವಿಷಯ ಯಾರಿಗೂ ಹೇಳದ ವ್ಯಾಟ್ಸನ್ ಬ್ಯಾಟಿಂಗ್ ಮುಂದುವರಿಸಿದರು. ಕಾಲಿನಲ್ಲಿ

ಚೆನ್ನೈ ಕ್ರಿಕೆಟಿಗನ ಕ್ರೀಡಾ ಸ್ಪೂರ್ತಿ ಕೊಂಡಾಡಿದ ಕ್ರಿಕೆಟ್ ಜಗತ್ತು:ಕಾಲಲ್ಲಿ ರಕ್ತ ಸುರಿಯುತ್ತಿದ್ದರೂ ಹೋರಾಡಿದ ವ್ಯಾಟ್ಸನ್ Read More »

ಕರಾವಳಿ

ನನ್ನ ಯೋಜನೆಗಳು ಶಾಶ್ವತ,ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ!:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

(ನ್ಯೂಸ್ ಕಡಬ) newskadaba.com,ಬೆಂಗಳೂರು,ಮೇ.14. ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಯಾವ ಕಾರ್ಯಕ್ರಮವೂ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ,ಕ್ಷೀರಭಾಗ್ಯ,ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ….ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ. ಎಂದು ಮಂಗಳವಾರ ಟ್ವೀಟ್‌ ಮೂಲಕ ಎಚ್ಚರಿಕೆ ನೀಡಿದ್ದಾರೆ.ಇನ್ನೊಂದು ಟ್ವೀಟ್‌ನಲ್ಲಿ ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ

ನನ್ನ ಯೋಜನೆಗಳು ಶಾಶ್ವತ,ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ!:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ Read More »

ಕರಾವಳಿ

ಶುಶ್ರೂಷಣಾಧಿಕಾರಿ ಹುದ್ದೆಗೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.ಜಿಲ್ಲಾ ತರಬೇತಿ ಕೇಂದ್ರ, ಸುರತ್ಕಲ್, ಮಂಗಳೂರು, ಇಲ್ಲಿ 2019-20ನೇ ಸಾಲಿಗೆ ಶುಶ್ರೂಷಣಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೆಲೆಯಲ್ಲಿ ನೇಮಿಸಿಕೊಳ್ಳಲು ಮೇ 18 ರಂದು ನೇರ ಸಂದರ್ಶನ ನಡೆಸಲಾಗುವುದು. ಶುಶ್ರೂಷಣಾಧಿಕಾರಿ (ಗುತ್ತಿಗೆ) ಹಿರಿಯ ಆರೋಗ್ಯ ಸಹಾಯಕಿ, ಜನರಲ್ ನರ್ಸಿಂಗ್, ಡಿಪಿಹೆಚ್‍ಎನ್ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು ತರಬೇತಿ ಬಗ್ಗೆ ಟಿ.ಓ.ಟಿ ಹೊಂದಿದ ದಾಖಲೆಗಳನ್ನು ಲಗ್ತೀಕರಿಸುವುದು. ಬಿ.ಎಸ್‍ಸಿ ನರ್ಸಿಂಗ್ ಪದವಿ ಹೊಂದಿರಬೇಕು, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಹಾಗೂ ಪ್ರತ್ಯೇಕವಾಗಿ ತರಬೇತಿ ನೀಡಿದ ಅನುಭವ

ಶುಶ್ರೂಷಣಾಧಿಕಾರಿ ಹುದ್ದೆಗೆ ನೇರ ಸಂದರ್ಶನ Read More »

ಕರಾವಳಿ

ಗ್ರಾಮ ಪಂಚಾಯತ್‍ಗಳ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.14. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್‍ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ, ನಾಮಪತ್ರ ಪರಿಶೀಲಿಸುವ ದಿನ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುಲು ಕೊನೆಯ ದಿನ ಮೇ 20, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 29 ರಂದು ಪೂರ್ವಾಹ್ನ 7 ರಿಂದ ಸಂಜೆ

ಗ್ರಾಮ ಪಂಚಾಯತ್‍ಗಳ ಉಪ ಚುನಾವಣೆ Read More »

ಕರಾವಳಿ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ಸಾಲ ಸೌಲಭ್ಯ – ಆನ್‍ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.14.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಇವರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು 2019-20ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿ.ಇ.ಟಿ)ಹಾಜರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕೈಗೊಳ್ಳಲು ನಿಗಮದಿಂದ ಇಂಜಿನಿಯರಿಂಗ್ ಕೋರ್ಸಿಗೆ ವಾರ್ಷಿಕ ಗರಿಷ್ಠ ರೂ 56,000/- ಹಾಗೂ ಬಿ.ಡಿ.ಎಸ್ ಮತ್ತು ಎಂ.ಬಿ.ಬಿ.ಎಸ್ ಕೋಸ್ರ್ಮಗಳಿಗೆ ನೀಟ್ ಮೂಲಕ ವಾರ್ಷಿಕ ಗರಿಷ್ಟ ರೂ. 3,50,000/- ಶೇ 2%ರ ಸೇವಾ ಶುಲ್ಕದ ಆಧಾರದ ಮೇಲೆ ಸಾಲ ಸೌಲಭ್ಯ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ಸಾಲ ಸೌಲಭ್ಯ – ಆನ್‍ಲೈನ್ ಅರ್ಜಿ ಆಹ್ವಾನ Read More »

ಕರಾವಳಿ
Scroll to Top