ಕರಾವಳಿ

ಹೊಸ್ಮಠ: ನದಿ ತಟದಲ್ಲಿ ಗುಂಡು-ತುಂಡು ಪಾರ್ಟಿ ➤ ಭಾಗವಹಿಸಿದ್ದ ವ್ಯಕ್ತಿ ನಿಗೂಢ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.16. ಯುವಕರ ತಂಡವೊಂದು ಮದ್ಯ ಸೇವನೆಯ ಪಾರ್ಟಿ ಮಾಡಿದ್ದು, ಈ ತಂಡದಲ್ಲಿದ್ದ ವ್ಯಕ್ತಿಯೋರ್ವರು ನಿಗೂಢವಾಗಿ ನಾಪತ್ತೆಯಾಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಠಾಣಾ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದ ಉಳಿಪ್ಪು ಕುಮಾರಧಾರ ನದಿ ತಟದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉಳಿಪ್ಪು ನಿವಾಸಿ ಕುರಿಯನ್ (60ವ.) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಸ್ಥಳೀಯ ಯುವಕರು ಎಣ್ಣೆ ಪಾರ್ಟಿ ಮಾಡಿದ್ದರೆನ್ನಲಾಗಿದ್ದು, ಮೃತ ಕುರಿಯನ್ ಅವರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಈ ವಿಚಾರ ಕುರಿಯನ್ ಅವರ ಪತ್ನಿಗೂ ತಿಳಿದಿದ್ದು, […]

ಹೊಸ್ಮಠ: ನದಿ ತಟದಲ್ಲಿ ಗುಂಡು-ತುಂಡು ಪಾರ್ಟಿ ➤ ಭಾಗವಹಿಸಿದ್ದ ವ್ಯಕ್ತಿ ನಿಗೂಢ ಮೃತ್ಯು Read More »

ಕರಾವಳಿ

ಸುಳ್ಯ: ಬೈಕ್ – ಕಾರು ಮಧ್ಯೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.16. ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರಾಜೆ ಸಮೀಪದ ಕಲ್ಚರ್ಪೆ ಎಂಬಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಕುಂದಲ್ಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ಸುಳ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಅದೇ ದಾರಿಯಿಂದಾಗಿ ಸಾಗುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಬೈಕ್ ಸವಾರ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುಳ್ಯ: ಬೈಕ್ – ಕಾರು ಮಧ್ಯೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಾರಿನ ಗಾಜುಗಳಿಗೆ ಹಾಕುವ ಟಿಂಟ್ ವಿರುದ್ಧ ಮುಂದುವರಿದ ಪೊಲೀಸರ ಕಾರ್ಯಾಚರಣೆ ➤ ಮಂಗಳೂರಿನಲ್ಲಿ 2500 ಕ್ಕೂ ಹೆಚ್ಚು ವಾಹನಗಳ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.10. ವಾಹನಗಳ ಟಿಂಟ್ ಫಿಲಂ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ನಗರ ಪೊಲೀಸರು ಕಳೆದೆರಡು ತಿಂಗಳಿನಲ್ಲಿ 2500ಕ್ಕೂ ಹೆಚ್ಚು ಕೇಸುಗಳನ್ನು ದಾಖಲಿಸಿ, ದಂಡ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದರು. ಮಂಗಳೂರು ಮಹಾನಗರದಲ್ಲಿ ವಾಹನಗಳ ಗಾಜಿಗೆ ಕಪ್ಪು ಟಿಂಟ್ ಅಳವಡಿಕೆಯ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಿರಂತರ

ಕಾರಿನ ಗಾಜುಗಳಿಗೆ ಹಾಕುವ ಟಿಂಟ್ ವಿರುದ್ಧ ಮುಂದುವರಿದ ಪೊಲೀಸರ ಕಾರ್ಯಾಚರಣೆ ➤ ಮಂಗಳೂರಿನಲ್ಲಿ 2500 ಕ್ಕೂ ಹೆಚ್ಚು ವಾಹನಗಳ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಕಡಬ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ ಗುಡ್ಡಪ್ಪ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ಇಲ್ಲಿನ ಮುಖ್ಯ ರಸ್ತೆಯ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ, ಹಿರಿಯ ವಾಹನ ಚಾಲಕ, ಪರಿವಾರ ಬಂಟರ ಸಂಘದ ಮುಂದಾಳು ಗುಡ್ಡಪ್ಪ ನಾಯ್ಕ್ ಅಗ್ರಸಾಲೆ ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಡಬದಲ್ಲಿ ಪಿಕಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತರು ಶನಿವಾರ ರಾತ್ರಿ ಊಟ ಮಾಡಿ ಮಲಗಿದ್ದು ಬಾನುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದರು.ಮೃತರು ಮೂವರು ಪುತ್ರರನ್ನು ಅಗಲಿದ್ದಾರೆ.

ಕಡಬ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ ಗುಡ್ಡಪ್ಪ ನಾಯ್ಕ್ ನಿಧನ Read More »

ಕರಾವಳಿ

ವಿಟ್ಲ: ಅಪ್ರಾಪ್ತ ಸಹೋದರನಿಂದ ನಿರಂತರ ಅತ್ಯಾಚಾರ ► 13 ವರ್ಷದ ಬಾಲಕಿ ಗರ್ಭಿಣಿ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ.10. ತನ್ನ ಸಹೋದರನಿಂದಲೇ ಅತ್ಯಾಚಾರಕ್ಕೆ ಒಳಗಾದ 13 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಗರ್ಭಿಣಿಯಾದ ವಿಚಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷ ಪ್ರಾಯದ ಬಾಲಕಿ ಸದ್ಯ ನಾಲ್ಕು ತಿಂಗಳ ಗರ್ಭಿಣಿ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ವಿಟ್ಲ ಸಮೀಪದ ಆರೋಗ್ಯ ಕೇಂದ್ರವೊಂದರ ವತಿಯಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸುವ ವೇಳೆ ಓರ್ವ ಬಾಲಕಿಯು ವಿಭಿನ್ನವಾಗಿರುವುದನ್ನು ಗಮನಿಸಿದ

ವಿಟ್ಲ: ಅಪ್ರಾಪ್ತ ಸಹೋದರನಿಂದ ನಿರಂತರ ಅತ್ಯಾಚಾರ ► 13 ವರ್ಷದ ಬಾಲಕಿ ಗರ್ಭಿಣಿ Read More »

ಕರಾವಳಿ

ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.09. ತೀವ್ರ ಜ್ವರಕ್ಕೆ ತುತ್ತಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಮೃತ ಯುವಕನನ್ನು ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಹುಕ್ರ ಎಂಬವರ ಪುತ್ರ, ಕಡಬದ ಹೆಚ್.ಪಿ‌. ಪೆಟ್ರೋಲ್ ಬಂಕ್ ಉದ್ಯೋಗಿ ಅಭಿಜಿತ್ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಜ್ವರ ಬಾಧಿಸಿದಾಗ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದ ಈತ ಮನೆಯಲ್ಲೇ ಉಳಿದುಕೊಂಡಿದ್ದ ಎನ್ನಲಾಗಿದೆ. ತೀವ್ರ ಅನಾರೋಗ್ಯ ಕಾಡಿದಾಗ ಪುತ್ತೂರು

ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು Read More »

ಕರಾವಳಿ

ಕಡಬ: ಕಾಲೇಜಿಗೆಂದು ತೆರಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಬುಧವಾರ ಬೆಳಿಗ್ಗೆ ಕಾಲೇಜಿಗೆಂದು ಮನೆಯಿಂದ ತೆರಳಿದ ಯುವಕನೋರ್ವ ಮನೆಗೆ ತೆರಳದೆ ನಾಪತ್ತೆಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ನಾಪತ್ತೆಯಾಗಿರುವ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ಜಾಣಮನೆ ನಿವಾಸಿ ದೇವಣ್ಣ ಕುಂಬಾರ ಎಂಬವರ ಪುತ್ರ ಧನಂಜಯ(19) ಎಂದು ಗುರುತಿಸಲಾಗಿದೆ. ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಬುಧವಾರದಂದು ಕಾಲೇಜಿನಿಂದ ಕಡಬಕ್ಕೆ ಹಿಂತಿರುಗಿದ್ದು, ಆ ಬಳಿಕ ಮನೆಗೆ ತೆರಳದೆ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಸಂಬಂಧಿಕರಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಗುರುವಾರದಂದು ಆತನ

ಕಡಬ: ಕಾಲೇಜಿಗೆಂದು ತೆರಳಿದ ಯುವಕ ನಾಪತ್ತೆ Read More »

ಕರಾವಳಿ

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡಿರುವ ನೆಕ್ಕಿತ್ತಡ್ಕ‌ ಮಖಾಂ ಉರೂಸ್ ಹಾಗೂ ಸೌಹಾರ್ದ ಸಂಗಮ ಇಂದು ಸಂಜೆ‌ ನಡೆಯಲಿದೆ. ಸಂಜೆ ಗಂಟೆ 7 ರಿಂದ ಆರಂಭವಾಗುವ ಸೌಹಾರ್ದ ಸಂಗಮದಲ್ಲಿ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ Read More »

ಕರಾವಳಿ

ಮಾರುಕಟ್ಟೆಗೆ ಲಗ್ಗೆಯಿಟ್ಟ ವಿವೋ ವಿ 15 ಪ್ರೊ ಆಂಡ್ರಾಯ್ಡ್ ಮೊಬೈಲ್ ► ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ದುರ್ಗಾಂಬಾ ಮೊಬೈಲ್ಸ್ ನಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಹೊಸದಾಗಿ ಮಾರುಕಟ್ಟೆಗೆ ಆಗಮಿಸಿದ ವಿವೊ ಕಂಪೆನಿಯ ವಿ15 ಪ್ರೊ ಮಾಡೆಲನ್ನು ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ಶ್ರೀ ದುರ್ಗಾಂಬ ಮೊಬೈಲ್ ಸ್ಟೋರ್‌ನಲ್ಲಿ ಬಿಡುಗಡೆಗೊಳಿಸಲಾಯಿತು. ಸ್ಮಾರ್ಟ್ ಪೋನ್‌ಗಳಲ್ಲಿ ಅತ್ಯಾಧುನಿಕ ವೈಶಿಷ್ಠವನ್ನೊಳಗೊಂಡಿರುವ ವಿವೋ ಕಂಪೆನಿಯ ವಿ15 ಪ್ರೊ ಹ್ಯಾಂಡ್‌ಸೆಟ್ ಮಾರುಕಟ್ಟೆಗೆ ಆಗಮಿಸಿದ್ದು, ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಕಡಬದ ಪ್ರತಿಷ್ಠಿತ ಶ್ರೀ ದುರ್ಗಾಂಬ ಮೊಬೈಲ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ಮಿತದರದಲ್ಲಿ ದೊರೆಯುವಂತಾಗಿದೆ. ಇನ್‌ಡಿಸ್‌ಪ್ಲೇ ಪಿಂಗರ್ ಪ್ರಿಂಟ್ ಹೊಂದಿರುವ ಈ ಮೊಬೈಲ್ 6.39 ಸೂಪರ್ ಎಮೊಎಲ್‌ಇಡಿ ಅಲ್ಟ್ರಾ ಫುಲ್

ಮಾರುಕಟ್ಟೆಗೆ ಲಗ್ಗೆಯಿಟ್ಟ ವಿವೋ ವಿ 15 ಪ್ರೊ ಆಂಡ್ರಾಯ್ಡ್ ಮೊಬೈಲ್ ► ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ದುರ್ಗಾಂಬಾ ಮೊಬೈಲ್ಸ್ ನಲ್ಲಿ ಬಿಡುಗಡೆ Read More »

ಕರಾವಳಿ
Scroll to Top