ಕರಾವಳಿ

ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದಕ್ಕೆ ಜೀವ ಬೆದರಿಕೆ ಪ್ರಕರಣ

(ನ್ಯೂಸ್ ಕಡಬ) newskadaba.com ಪುತ್ತೂರು ನಗರ ಪೊಲೀಸ್ ಠಾಣೆ ,ಡಿ. 26.  ದಿನಾಂಕ: 24-12-2018 ರಂದು  ಪುತ್ತೂರು ತಾಲೂಕು ಬನ್ನೂರು ಗ್ರಾಮ ಕುಮೆರಡ್ಕ ದ ಶ್ರೀ ಲಕ್ಷ್ಮೀ ನಿಲಯದ ನೇಮಣ್ಣಗೌಡರ  ಪುತ್ರರಾದ  ಪುನೀತ್ ಕುಮಾರ್ ತನ್ನ ಬಾಬ್ತು ದ್ವಿಚಕ್ರ ಕೆ.ಎ 12 ಇ-5071 ರಲ್ಲಿ ಪುತ್ತೂರು ನಗರದಿಂದ ಹಾರಾಡಿ ಎಂಬಲ್ಲಿರುವ ಸ್ವಾಮಿಗಳ ಆಶ್ರಮದ ಕಡೆಗೆ ಹೋಗುತ್ತಿರುವಾಗ ಬೊಳ್ವಾರು ಎಂಬಲ್ಲಿ ತನ್ನ ಎದುರಿಗಿದ್ದ ಮಾರುತಿ ಓಮಿನಿ ಕಾರು ಕೆ ಎ 19-ಎಂ -9188 ನೇಯದನ್ನು ಓವರ್ ಟೇಕ್ ಮಾಡಿ ಮುಂದೆ ಹೋದರು. […]

ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದಕ್ಕೆ ಜೀವ ಬೆದರಿಕೆ ಪ್ರಕರಣ Read More »

ಕರಾವಳಿ

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ.

(ನ್ಯೂಸ್ ಕಡಬ) newskadaba.com .ಕೊಕ್ಕಡ, ಡಿ. 26 . ಸುಮಾರು 2,000 ವರ್ಷಗಳ ಹಿಂದೆ ಸರಳ ಜೀವನಕ್ಕೆ ಬಹುದೊಡ್ಡ ಮಾದರಿಯಾಗಿ ಹಟ್ಟಿಯಲ್ಲಿ ಹುಟ್ಟಿ ಮನುಕುಲದ ಉದ್ಧಾರಕ್ಕೆ ಆಗಮಿಸಿದ ಪ್ರಭು ಯೇಸುಕ್ರಿಸ್ತರ ಜನನದ ಆಚರಣೆಯೇ ಕ್ರಿಸ್ಮಸ್‌. ಸಿಹಿ ಹಂಚುತ್ತಾ ಮನೆ ಮನೆಗೆ ತಿರುಗುವ ಸಾಂತಾಕ್ಲಾಸ್‌ ಪ್ರೀತಿಯ ಸಂಕೇತ. ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನು ಹಂಚುವಂತಾಗಲಿ. ಕ್ರಿಸ್ಮಸ್‌ ಶಾಂತಿ ಸಹಬಾಳ್ವೆಯ – ಪ್ರೀತಿ, ಸಂತೋಷದ ಬದುಕಿಗೆ ಪ್ರಚೋದನೆಯಾಗಲಿ ಎಂದು ಮಲಂಕರ ಕ್ಯಾಥೋಲಿಕ್‌ ಪುತ್ತೂರು ಧರ್ಮ ಪ್ರಾಂತ್ಯದ ವಿಕಾರ್‌ ಜನರಲ್‌

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ. Read More »

ಕರಾವಳಿ

ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ,  ಡಿ. 26.  ಸರಕಾರಿ ಸ್ವಾಮ್ಯದ ಸಂಸ್ಥೆಯ ಕಚೇರಿ ಮತ್ತು ದೂರವಾಣಿ ಕೇಂದ್ರದಲ್ಲಿ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿಂದ ಸಂಸ್ಥೆ ವೇತನ ಪಾವತಿಸಿಲ್ಲ. ಈ ಕುರಿತು ಈ ಸಂಸ್ಥೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ನೌಕರರು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ರವಿವಾರ ಭೇಟಿಯಾಗಿ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಸಲ್ಲಿಸಿದರು. ಸುದೀರ್ಘ‌ ಅವಧಿಯಿಂದ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಇದುವರೆಗೆ ಮೂಲ ಸೌಕರ್ಯ ವಂಚಿತರಾಗಿ ಸೇವೆ ನೀಡಿರುವ ನಮಗೆ

ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ Read More »

ಕರಾವಳಿ

ಬರಿಮಾರು ಸಂತ ಜೋಸೆಫ್ ಚರ್ಚ್ ಆಶ್ರಯದಲ್ಲಿ ಸೌಹಾರ್ದ ಕ್ರಿಸ್ಮಸ್-2018 ► ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ವಿಶ್ವಕ್ಕೆ ಉತ್ತಮ ಸಂದೇಶ ಸಾರುತ್ತಿದೆ: ಕನ್ಯಾನ ಮಠದ ಡಾ. ಶಶಿಕಾಂತ ಸ್ವಾಮಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.26. ಏಸು ಸ್ವಾಮಿಯ ಸಂದೇಶಗಳು ಕೇವಲ ಕ್ರೈಸ್ತರಿಗೆ ಮಾತ್ರ ಸೀಮಿತವಾಗಿಲ್ಲ, ಅದನ್ನು ಎಲ್ಲಾ ಸಮುದಾಯಕ್ಕೆ ತಲುಪಿಸುವ ಜವಬ್ದಾರಿ ಕ್ರೈಸ್ತ ಸಮುದಾಯದವರ ಮೇಲಿದೆ ಎಂದು ಪುತ್ತೂರಿನ ಸಿರೋ ಮಲಂಕರ ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಹೇಳಿದರು. ಅವರು ಬರಿಮಾರು ಸಂತ ಜೋಸೆಫರ ದೇವಾಲಯದ ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮ ಹಾಗೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮಾಣಿಯ ಗಾಂಧಿ ಮೈದಾನದಲ್ಲಿ ಮಂಗಳವಾರ ಸಂಜೆ ನಡೆದ ಸೌಹಾರ್ದ ಕ್ರಿಸ್ಮಸ್ -2018 ಕಾರ್ಯಕ್ರಮದಲ್ಲಿ ಆಶೀರ್ವಚನ

ಬರಿಮಾರು ಸಂತ ಜೋಸೆಫ್ ಚರ್ಚ್ ಆಶ್ರಯದಲ್ಲಿ ಸೌಹಾರ್ದ ಕ್ರಿಸ್ಮಸ್-2018 ► ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ವಿಶ್ವಕ್ಕೆ ಉತ್ತಮ ಸಂದೇಶ ಸಾರುತ್ತಿದೆ: ಕನ್ಯಾನ ಮಠದ ಡಾ. ಶಶಿಕಾಂತ ಸ್ವಾಮಿ Read More »

ಕರಾವಳಿ

ಯುವವಾಹಿನಿ(ರಿ.) ಕಡಬ: ದಿ| ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ 11 ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಮಂಗಳೂರು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಕಥೆ, ನಾಟಕಕಾರ, ನಟ, ಕಾದಂಬರಿಕಾರ, ಸಾಹಿತಿ ದಿವಂಗತ ವಿಶು ಕುಮಾರ್ ಅವರ ಪರಿಚಯ ಸರಣಿ ಕಾರ್ಯಕ್ರಮದ ಮಾಲಿಕೆ 11 ಕಾರ್ಯಕ್ರಮವು ಕಡಬ ಘಟಕದ ಆತಿಥ್ಯದಲ್ಲಿ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ವಿಶುಕುಮಾರ್ ನೆನಪಿನಲ್ಲಿ ಯುವ ವಾಹಿನಿ ನಡೆಸುತ್ತಿರುವ ಕಾರ್ಯಕ್ರಮಗಳು ಹಾಗೂ ಮುಂದೆ

ಯುವವಾಹಿನಿ(ರಿ.) ಕಡಬ: ದಿ| ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ 11 ಕಾರ್ಯಕ್ರಮ Read More »

ಕರಾವಳಿ

ಕಡಬ: ಉಪ್ಪಿನಂಗಡಿ ಪೇಟೆಗೆಂದು ತೆರಳಿದ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.25. ಉಪ್ಪಿನಂಗಡಿಗೆಂದು ತೆರಳಿದ ವ್ಯಕ್ತಿಯೋರ್ವರು ಮನೆಗೆ ಬಾರದೆ ನಾಪತ್ತೆಯಾಗಿರುವ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಹೊಸಮಜಲು ಆನೆಗುಂಡಿ ನಿವಾಸಿ ಡಿಂಬಯ್ಯ ಮುಗೇರ ಎಂಬವರು ಭಾನುವಾರದಂದು ಉಪ್ಪಿನಂಗಡಿ ಪೇಟೆಗೆಂದು ಹೋದವರು ಹಿಂತಿರುಗದೆ ನಾಪತ್ತೆಯಾಗಿದ್ದು, ಈ ಬಗ್ಗೆ ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಕಾರಣ ಅವರ ಪುತ್ರ ದುರ್ಗಾ ಪ್ರಸಾದ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ: ಉಪ್ಪಿನಂಗಡಿ ಪೇಟೆಗೆಂದು ತೆರಳಿದ ವ್ಯಕ್ತಿ ನಾಪತ್ತೆ Read More »

ಕರಾವಳಿ

ಪೆರಾಬೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com .ಪೆರಾಬೆ,  ಡಿ. 25  ಯಾವುದೇ ಸಂಸ್ಥೆಯ ಇತಿಹಾಸ ತಿಳಿದು ಕೆಲಸ ನಿರ್ವಹಿಸಿದರೆ ಇತಿಹಾಸ ನಿರ್ಮಿಸಲು ಸಾಧ್ಯ ಎಂದು ಸುಳ್ಯ ಶಾಸಕ ಎಸ್ ಅಂಗಾರ ನುಡಿದರು. ಅವರು ಸೋಮವಾರ ರಾತ್ರಿ ಪೆರಾಬೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಟಾಟಿಸಿ ಮಾತನಾಡುತ್ತಿದ್ದರು. ಸ್ವಾರ್ಥ ಬಿಟ್ಟು ಸಮರ್ಪಣಾ ಭಾವದಿಂದ ಸೇವೆ ಮಾಡಿದಾಗ ಭವಿಷ್ಯದಲ್ಲಿ ಇತಿಹಾಸ ನಿರ್ಮಿಸ ಬಹುದು. ಸರಕಾರಿ ಶಾಲೆಗಳನ್ನು ಕ್ಷೇತ್ರದ ಶಾಸಕರಿಂದ ಉಳಿಸಿಕೊಳ್ಳಲು ಅಸಾಧ್ಯವಾದರೂ ಗ್ರಾಮದ ಜನತೆಯಿಂದ ಮಾತ್ರ ಸಾಧ್ಯ. ಇದಕ್ಕಾಗಿ ಗ್ರಾಮದ

ಪೆರಾಬೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭ Read More »

ಕರಾವಳಿ

ಗಂಡಿಬಾಗಿಲು: ಖುತುಬಿಯ್ಯತ್ ನೇರ್ಚೆ 45ನೇ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,  ಡಿ. 25.  ಊರು, ಸಮಾಜದ ಅಭಿವೃದ್ಧಿಯ ಚಿಂತನೆಯೊಂದಿಗೆ ಒಳ್ಳೆಯ ಕೆಲಸ ಮಾಡಿದರೆ ಅಂತಹವರಿಗೆ ಅಲ್ಲಾಹುವಿನ ಕಡೆಯಿಂದ ಸಹಾಯ ದೊರಕುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಎನ್.ಪಿ.ಎಂ. ಜಲಾಲುದ್ದೀನ್ ತಂಙಳ್ ಕುನ್ನುಂಗೈ ಹೇಳಿದರು.ಅವರು ಡಿ. 23ರಂದು ಗಂಡಿಬಾಗಿಲು ಹಿಮಾಯತುಲ್ ಇಸ್ಲಾಂ ಕಮಿಟಿ, ಖುತುಬಿಯ್ಯಾ ಜುಮಾ ಮಸೀದಿ ಗಂಡಿಬಾಗಿಲು ಇಲ್ಲಿ ಪ್ರತಿ ತಿಂಗಳು ಆಚರಿಸಿಕೊಂಡು ಬರುತ್ತಿರುವ ಖುತುಬಿಯ್ಯತ್ ನೇರ್ಚೆಯ 45ನೇವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗಂಡಿಬಾಗಿಲು ಖುತುಬಿಯ್ಯಾ ಜುಮಾ ಮಸೀದಿ ಖತೀಬ್ ಸೈಯ್ಯದ್ ಅನಸ್ ಅಲ್‍ಹಾದಿ ತಂಙಳ್

ಗಂಡಿಬಾಗಿಲು: ಖುತುಬಿಯ್ಯತ್ ನೇರ್ಚೆ 45ನೇ ವಾರ್ಷಿಕೋತ್ಸವ Read More »

ಕರಾವಳಿ

ಕಡಬದಲ್ಲಿ ಮದ್ಯವರ್ಜನ ಶಿಬಿರ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ,  ಡಿ.25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪುತ್ತೂರು ತಾಲೂಕಿನಲ್ಲಿ ನಡೆಯುವ 51ನೇ ಮದ್ಯವರ್ಜನ ಶಿಬಿರ ಕಡಬ ಒಕ್ಕಲಿಗ ಗೌಡ ಸಂಘದ ಸಭಾಭವನದಲ್ಲಿ ಜ.29ರಿಂದ ಫೆ.5ರ ತನಕ ನಡೆಯಿದ್ದು ಇದರ ಪೂರ್ವಭಾವಿ ಸಭೆ ಸೋಮವಾರ ಒಕ್ಕಲಿಗ ಸಭಾಭವನದಲ್ಲಿ ನಡೆಯಿತು.ನೂತನವಾಗಿ ಆಯ್ಕೆಯಾದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮಾತನಾಡಿ ಕುಡಿತದ ಚಟಕ್ಕೆ ಬಲಿಯಾಗಿ ಜೀವನವನ್ನು ಕಳೆದುಕೊಂಡಿರುವ ಅನೇಕ ಬಡ ಕುಟುಂಬಗಳಿಗೆ ಬದುಕಿನ ಬೆಳಕನ್ನು ನೀಡುವ ಶ್ರೀ ಕ್ಷೇತ್ರ

ಕಡಬದಲ್ಲಿ ಮದ್ಯವರ್ಜನ ಶಿಬಿರ – ಪೂರ್ವಭಾವಿ ಸಭೆ Read More »

ಕರಾವಳಿ

ಕೋಡಿಂಬಾಳ: ಸ.ಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ  ► ಊರವರ ಸಹಕಾರವಿದ್ದಾಗ ಸರಕಾರಿ ಶಾಲೆಗಳ ಉಳಿವು ಸಾಧ್ಯ – ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ,  ಡಿ.25.ಕೋಡಿಂಬಾಳ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ದ.22ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಪುಟಾಣಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು ಸರಕಾರ ಇಂದು ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಅವರಿಗೆ ಬೇಕಾದ ಪೌಷ್ಠಿಕ ಆಹಾರ ವಿತರಿಸುತ್ತಿದೆ. ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದ್ದು, ಸರಕಾರ ಈ ರೀತಿಯಾಗಿ

ಕೋಡಿಂಬಾಳ: ಸ.ಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ  ► ಊರವರ ಸಹಕಾರವಿದ್ದಾಗ ಸರಕಾರಿ ಶಾಲೆಗಳ ಉಳಿವು ಸಾಧ್ಯ – ಪಿ.ಪಿ.ವರ್ಗೀಸ್ Read More »

ಕರಾವಳಿ
Scroll to Top