ಕರಾವಳಿ

ಡಿ.8 : ಮಂಜುನಾಥನಗರ ಶಾಲಾ ವಾರ್ಷಿಕೋತ್ಸವ

Newskadaba.in ಸವಣೂರು:  ಪಾಲ್ತಾಡಿ ಗ್ರಾಮದ  ಮಂಜುನಾಥನಗರ ಸ.ಹಿ.ಪ್ರಾ ಶಾಲೆ ಮತ್ತು ಸರಕಾರಿ ಪ್ರೌಢಶಾಲೆಯ ಜಂಟಿ ವಾರ್ಷಿಕೋತ್ಸವ ಡಿ.೮ ರಂದು ನಡೆಯಲಿದೆ. ಬೆಳಿಗ್ಗೆ ನಡೆಯುವ ಧ್ವಜಾರೋಹಣವನ್ನು ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ನೆರವೇರಿಸುವರು.ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ ಪುಸ್ತಕ ಪ್ರದರ್ಶನ ಉದ್ಘಾಟಿಸುವರು.ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಸ್ತು ಪ್ರದರ್ಶನ ಉದ್ಘಾಟಿಸುವರು.ಕೆಯ್ಯೂರು ಕ್ಲಸ್ಟರ್ ಸಿಆರ್‌ಪಿ ಅಬ್ದುಲ್ ಬಶೀರ್ ಕೆ  ಶುಭಾಶಂಸನೆ ಮಾಡುವರು. ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ  ಪ್ರವೀಣ್ ಬಂಬಿಲದೋಳ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪದ್ಮಪ್ರಸಾದ್ ಆರಿಗ ಪಂಚೋಡಿ,ವಿವೇಕಾನಂದ ಯುವಕ ಮಂಡಲದ […]

ಡಿ.8 : ಮಂಜುನಾಥನಗರ ಶಾಲಾ ವಾರ್ಷಿಕೋತ್ಸವ Read More »

ಕರಾವಳಿ

ಬೆದ್ರೋಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ಪರಿಸರದಲ್ಲಿ ಬೆಂಕಿ ಬಳಸದಂತೆ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.02. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಪಲ್ಟಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿಯ ತೂಗುಸೇತುವೆಯ ತಿರುವಿನಲ್ಲಿ ಶನಿವಾರ ರಾತ್ರಿ ಸಂಭವಿಸಿದ್ದು, ರಸ್ತೆ ತಡೆ ಉಂಟಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಭಾರತ್ ಗ್ಯಾಸ್ ಸಂಸ್ಥೆಗೆ ಸೇರಿದ ಟ್ಯಾಂಕರ್ ಪಲ್ಟಿಯಾಗಿದ್ದು, ಟ್ಯಾಂಕರ್ ನಿಂದ ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆದ್ರೋಡಿ ಆಸುಪಾಸಿನ ಮತ್ತು ಮೊಗೇರಡ್ಕ ನದಿ ಕಿನಾರೆಯಲ್ಲಿ ವಾಸಿಸುವ ಮನೆಗಳಲ್ಲಿ ಬೆಂಕಿ

ಬೆದ್ರೋಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ಪರಿಸರದಲ್ಲಿ ಬೆಂಕಿ ಬಳಸದಂತೆ ಮುನ್ನೆಚ್ಚರಿಕೆ Read More »

ಕರಾವಳಿ

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆ ► ಮೆಸ್ಕಾಂ ಉದ್ಯೋಗಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೆಸ್ಕಾಂ ಉದ್ಯೋಗಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ಕಲ್ಲಾಜೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡಬ ಮೆಸ್ಕಾಂ ಸಬ್ ಸ್ಟೇಷನ್ ನಲ್ಲಿ ವಿದ್ಯುತ್ ಪರಿಕರಗಳ ಓಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂಕದಕಟ್ಟೆ ಮೂಜೂರು ಬೈಲು ನಿವಾಸಿ ಹರೀಶ್ (33) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು ಪತ್ನಿಯ ಮೇಲೆ ನಿರಂತರ ಹಲ್ಲೆಗೈಯ್ಯುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ಪತ್ನಿ ನೀಡಿದ್ದ ದೂರಿನಂತೆ ಶುಕ್ರವಾರದಂದು ಹರೀಶ್ ನನ್ನು ಕಡಬ

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆ ► ಮೆಸ್ಕಾಂ ಉದ್ಯೋಗಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶ ► ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.01. ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಲಾಯ್ಲದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಕಣ್ಣಾಜೆಬೈಲ್ ನಿವಾಸಿ ಯೋಗೀಶ್ (34) ಎಂದು ಗುರುತಿಸಲಾಗಿದೆ. ಯೋಗೀಶ್ ಶನಿವಾರದಂದು ಬೆಳ್ತಂಗಡಿ ತಾಲೂಕಿನ ಲಾಯ್ಲ ಸಮೀಪದ ಓಡದಕರಿಯ ದೇವಸ್ಥಾನದ ಬಳಿಯ ತೋಟವೊಂದರಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡ ಯೋಗೀಶ್ ರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಬೆಳ್ತಂಗಡಿ

ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶ ► ಯುವಕ ಮೃತ್ಯು Read More »

ಕರಾವಳಿ

ಕಡಬ: ವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.30. ಗ್ರಾಮ ಪಂಚಾಯತ್ ಗೆಂದು ತೆರಳಿದ ಮಹಿಳೆಯೋರ್ವರು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ಗುರುವಾರದಂದು ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಕೊಯಿಲ ಗ್ರಾಮದ ಪಲ್ಲತ್ತಾರು ಕುದ್ಲೂರು ನಿವಾಸಿ ಹರೀಶ್ ಎಂಬವರ ಪತ್ನಿ ಶ್ರೀಮತಿ ಕುಸುಮ ಎಂದು ಗುರುತಿಸಲಾಗಿದೆ. ಇವರು ಗುರುವಾರದಂದು ಗ್ರಾಮ ಪಂಚಾಯತ್ ಗೆಂದು ತೆರಳಿದವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದೆ ಇರುವುದರಿಂದ ಅವರ ಪತಿ ಹರೀಶ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ

ಕಡಬ: ವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ

ಕಡಬ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ► ಕ್ಷಣಾರ್ಧದಲ್ಲೇ ಸುಟ್ಟು ಕರಕಲಾದ ಕಾರು

(ನ್ಯೂಸ್ ಕಡಬ) newskadaba.com ಕಡಬ, ನ.28. ಚಲಿಸುತ್ತಿದ್ದ ಮಾರುತಿ ಆಮ್ನಿ ಕಾರೊಂದು ತನ್ನಿಂದ ತಾನೇ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ರಾತ್ರಿ ಕುಟ್ರುಪ್ಪಾಡಿ ಗ್ರಾಮದ ತಲೇಕಿ ಬಳಿ ಸಂಭವಿಸಿದೆ. ಇಲ್ಲಿನ ಬೈದ್ರಿಜಾಲು ನಿವಾಸಿ ಸುಂದರ ಗೌಡ ಎಂಬವರು ಬುಧವಾರ ರಾತ್ರಿ ವೇಳೆಗೆ ಕುಟುಂಬಿಕರೊಂದಿಗೆ ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಕಡಬಕ್ಕೆ ತೆರಳುತ್ತಿದ್ದ ವೇಳೆ ತಲೇಕಿ ಬಳಿ ತಲುಪಿದಾಗ ಕಾರಿನ ಎಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರು ನಿಲ್ಲಿಸಿ ಪರಿಶೀಲಿಸಿದಾಗ ಎಂಜಿನ್ ಬಳಿ ಸಣ್ಣಗೆ

ಕಡಬ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ► ಕ್ಷಣಾರ್ಧದಲ್ಲೇ ಸುಟ್ಟು ಕರಕಲಾದ ಕಾರು Read More »

ಕರಾವಳಿ

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ► ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ವಿಹಾರಕ್ಕೆಂದು ತೆರಳಿದ್ದ ಯುವತಿಯೋರ್ವಳನ್ನು ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಹಾಡುಹಗಲೇ ಸಾಮೂಹಿಕ ಅತ್ಯಾಚಾರಗೈದ ಪೈಶಾಚಿಕ ಘಟನೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಣಂಬೂರು ಇನ್ ಪೆಕ್ಟರ್ ರಫೀಕ್ ಕೆ.ಎಂ ಮತ್ತು ಮಂಗಳೂರು ಉತ್ತರ ಉಪ-ವಿಭಾಗದ ರೌಡಿ ನಿಗ್ರಹ ದಳದ ವಿಶೇಷ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ಬೆಂಗ್ರೆ ನಿವಾಸಿಗಳಾದ ಅಮರನಾಥ ಎಂಬವರ ಪುತ್ರ ಪ್ರಜ್ವಲ್ ಸುವರ್ಣ(25), ಸುರೇಂದ್ರ ಶ್ರೀಯಾನ್ ಎಂಬವರ ಪುತ್ರ ಅರುಣ್

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ► ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಮಂಗಳೂರು: ಖಾಸಗಿ ಬಸ್ ಢಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ಪಾದಚಾರಿಯೋರ್ವರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಪಾದಚಾರಿಯನ್ನು ಹಲವಾರು ವರ್ಷಗಳಿಂದ ಇಲೆಕ್ಟ್ರಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೂಳೂರು ನಿವಾಸಿ ಭೋಜ(45) ಎಂದು ಗುರುತಿಸಲಾಗಿದೆ. ಅವರು ರಾತ್ರಿ ತನ್ನ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಸುರತ್ಕಲ್ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ಭೋಜರವರಿಗೆ ಢಿಕ್ಕಿ ಹೊಡೆದಿದ್ದಲ್ಲದೆ ಅವರ ಮೇಲೆ ಹರಿದು ಈ ದುರ್ಘಟನೆ

ಮಂಗಳೂರು: ಖಾಸಗಿ ಬಸ್ ಢಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಪೈಶಾಚಿಕ ಕೃತ್ಯ ► ಏಳು ಮಂದಿಯ ತಂಡದಿಂದ ಹಾಡುಹಗಲೇ ಯುವತಿಯ ಗ್ಯಾಂಗ್ ರೇಪ್

(ನ್ಯೂಸ್ ಕಡಬ) newskadaba.com ಮಂಗಳೂರು, ನ.27. ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ವಿಹಾರಕ್ಕೆಂದು ತೆರಳಿದ್ದ ಯುವತಿಯೋರ್ವಳನ್ನು ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಹಾಡುಹಗಲೇ ಸಾಮೂಹಿಕ ಅತ್ಯಾಚಾರಗೈದ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕಾರ್ಖಾನೆಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಯೋರ್ವಳು ನವೆಂಬರ್ 18 ರಂದು ಮಧ್ಯಾಹ್ನದ ವೇಳೆಗೆ ವಿಹಾರಕ್ಕೆಂದು ತನ್ನ ಸ್ನೇಹಿತನೊಂದಿಗೆ ತೋಟ ಬೆಂಗರೆಯ ಅಳಿವೆ ಬಾಗಿಲು ಬೀಚ್‌ಗೆ ತೆರಳಿದ್ದಳೆನ್ನಲಾಗಿದ್ದು, ಈ ವೇಳೆ ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅವರಿಬ್ಬರನ್ನು ಬೆದರಿಸಿದ್ದಲ್ಲದೆ ಯುವಕನ ಮೇಲೆ ಹಲ್ಲೆ ನಡೆಸಿ

ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಪೈಶಾಚಿಕ ಕೃತ್ಯ ► ಏಳು ಮಂದಿಯ ತಂಡದಿಂದ ಹಾಡುಹಗಲೇ ಯುವತಿಯ ಗ್ಯಾಂಗ್ ರೇಪ್ Read More »

ಕರಾವಳಿ

ಕದ್ರಿ ಪಾರ್ಕ್‌ಗೆ ಸುತ್ತಾಡಲೆಂದು ಬಂದಿದ್ದ ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.26. ಸುತ್ತಾಡಲೆಂದು ಪಾರ್ಕ್‌ಗೆ ಬಂದಿದ್ದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಸೋಮವಾರ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಪ್ರೇಮಿಗಳನ್ನು ಕಾಸರಗೋಡು ನಿವಾಸಿ ಹರ್ಷಿತ್ ಕುಮಾರ್ ಮತ್ತು ಆತನ ಪ್ರಿಯತಮೆ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ವೇಳೆ ಕದ್ರಿ ಪಾರ್ಕಿಗೆ ಬಂದಿದ್ದ ಪ್ರೇಮಿಗಳು ಕೆಲಕಾಲ ಪಾರ್ಕ್‌ನಲ್ಲಿ ಸುತ್ತಾಡಿದ್ದು, ಆ ಬಳಿಕ ವಿಷ ಸೇವಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ

ಕದ್ರಿ ಪಾರ್ಕ್‌ಗೆ ಸುತ್ತಾಡಲೆಂದು ಬಂದಿದ್ದ ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನ Read More »

ಕರಾವಳಿ
Scroll to Top