(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 05. ಭಾರತದ ಗ್ರೀನ್ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ (‘ಸಮುದ್ರ ತೀರದ ಪವನ ಶಕ್ತಿ’ Offshore Wind Energy) ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಂಸದ ಕ್ಯಾ. ಚೌಟ ಅವರು, ಕಡಲನಗರಿ ಮಂಗಳೂರು ಸಮುದ್ರ ತೀರದ ಪವನ ಶಕ್ತಿ ಉತ್ಪಾದನೆಗೆ ವಿಪುಲ ಅವಕಾಶವಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ (NIO) ವರದಿಯನ್ನು ಉಲ್ಲೇಖಿಸಿ, ಭಾರತದ ಭರವಸೆಯ ಕಡಲ ಪವನ ಇಂಧನ ‘ವಲಯ-2ರಲ್ಲಿ ಮಂಗಳೂರು ಕರಾವಳಿ’ ಗುರುತಿಸಿಕೊಂಡಿದ್ದು, ಮಂಗಳೂರು ಕರಾವಳಿಯು ಸುಮಾರು 6,490 ಚ.ಕಿಮೀ. ಪ್ರದೇಶವು ಪವನ ಇಂಧನ ಉತ್ಪಾದನೆಗೆ ಹೆಚ್ಚು ಪೂರಕವಾಗಿದೆ. ಇಲ್ಲಿ ಭೂಕಂಪನ, ಚಂಡಮಾರುತ ಮುಂತಾದ ನೈಸರ್ಗಿಕ ವಿಕೋಪಗಳ ಅಪಾಯ ಕಡಿಮೆ ಇರುವುದರಿಂದ ದೀರ್ಘಕಾಲದ ಪವನ ಇಂಧನ ಯೋಜನೆಗಳ ಸ್ಥಾಪನೆಗೆ ಅತ್ಯಂತ ಸೂಕ್ತ ಹಾಗೂ ಸುರಕ್ಷಿತ ಪ್ರದೇಶವಾಗಿದೆ. ಹೀಗಾಗಿ, ಮಂಗಳೂರು ಕಡಲ ತೀರವನ್ನು ಪವನ ಶಕ್ತಿ ಉತ್ಪಾದನೆ ತಾಣವಾಗಿ ಅಭಿವೃದ್ಧಿಪಡಿಸಬೇಕೆಂದು ಕ್ಯಾ. ಚೌಟ ಅವರು ಹೇಳಿದ್ದಾರೆ. ನವ ಮಂಗಳೂರು ಬಂದರಿನ ಕಾರ್ಯತಂತ್ರದ ಪ್ರಯೋಜನವನ್ನು ಒತ್ತಿ ಹೇಳಿದ ಕ್ಯಾ.