ಕರಾವಳಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2018′ ► ಮಾನಸಿಕ ಆರೋಗ್ಯ ಜಾಗೃತಿ ಇಂದಿನ ಅಗತ್ಯ:ಕಾಡ್ಲೂರು ಸತ್ಯನಾರಾಯಣಾಚಾರ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ಮಾಹಿತಿ ತಂತ್ರಜ್ಞಾನಗಳ ವಿನೂತನ ಆವಿಷ್ಕಾರದಿಂದಾಗಿ ಯುವ ಜನಾಂಗ ವ್ಯಸನ ಹಾಗೂ ಖಿನ್ನತೆಗೆ ಒಳಗಾಗುತ್ತಿದ್ದು, ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವು ಅತಿ ಅಗತ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾಡ್ಲೂರು ಸತ್ಯನಾರಾಯಣಾಚಾರ್ಯ ಹೇಳಿದರು. ಅವರಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, (ಮಾನಸಿಕ ಆರೋಗ್ಯ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2018′ ► ಮಾನಸಿಕ ಆರೋಗ್ಯ ಜಾಗೃತಿ ಇಂದಿನ ಅಗತ್ಯ:ಕಾಡ್ಲೂರು ಸತ್ಯನಾರಾಯಣಾಚಾರ್ಯ Read More »

ಕರಾವಳಿ

ಕೊಯಿಲ: ಸಾಲಬಾಧೆಗೆ ತುತ್ತಾಗಿ ರೈತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ.10. ಸಾಲಬಾಧೆಯಿಂದ ಬೇಸತ್ತ ರೈತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ಬುಧವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಪುತ್ತೂರು ತಾಲೂಕಿನ ಕೊಯಿಲ ಗ್ರಾಮದ ಓಕೆ ಕೊಲ್ಯ ನಿವಾಸಿ ದಿ| ಸೋಮಪ್ಪ ಗೌಡ ಎಂಬವರ ಪುತ್ರ ಕುಶಾಲಪ್ಪ ಗೌಡ (53) ಎಂದು ಗುರುತಿಸಲಾಗಿದೆ. ಬ್ಯಾಂಕ್ ಹಾಗೂ ಕೈ ಸಾಲಗಳಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಇವರು ಈ ಬಗ್ಗೆ ಮನನೊಂದು ಬುಧವಾರದಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ

ಕೊಯಿಲ: ಸಾಲಬಾಧೆಗೆ ತುತ್ತಾಗಿ ರೈತ ಆತ್ಮಹತ್ಯೆ Read More »

ಕರಾವಳಿ

ತಿತ್ಲಿ ಚಂಡಮಾರುತಕ್ಕೆ ಉಳ್ಳಾಲ, ಉಚ್ಚಿಲದಲ್ಲಿ ಪ್ರಕ್ಷುಬ್ಧಗೊಂಡ ಕಡಲು ► ಪಣಂಬೂರಿನಲ್ಲಿ ಹೈ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಒರಿಸ್ಸಾದಲ್ಲಿ ಕಾಣಿಸಿಕೊಂಡ ತಿತ್ಲಿ ಚಂಡಮಾರುತದ ಪ್ರಭಾವದಿಂದ ಉಳ್ಳಾಲ, ಸೋಮೇಶ್ವರ, ಉಚ್ಚಿಲ, ಪಣಂಬೂರು ಸೇರಿದಂತೆ ಕರಾವಳಿಯಲ್ಲಿ ಕಡಲಿನ ಅಬ್ಬರ ಜೋರಾಗಿದೆ. ಬುಧವಾರ ಮುಂಜಾನೆಯಿಂದ ಕಡಲು ಪ್ರಕ್ಷುಬ್ಧಗೊಂಡಿದ್ದು, ಸಮುದ್ರದ ಅಲೆಗಳು ಭಾರೀ ಎತ್ತರಕ್ಕೆ ಅಪ್ಪಳಿಸುತ್ತಿವೆ. ಉಳ್ಳಾಲ ಪರಿಸರದಲ್ಲಿ ರಸ್ತೆಯನ್ನೂ ದಾಟಿದ ಸಮುದ್ರದ ನೀರು ಕೆಲವು ಮನೆಗಳಿಗೆ ಮುನ್ನುಗ್ಗಿವೆ. ಪಣಂಬೂರು ಬೀಚ್‌ನಲ್ಲಿ ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಘೋಷಿಸಲಾಗಿದೆ.

ತಿತ್ಲಿ ಚಂಡಮಾರುತಕ್ಕೆ ಉಳ್ಳಾಲ, ಉಚ್ಚಿಲದಲ್ಲಿ ಪ್ರಕ್ಷುಬ್ಧಗೊಂಡ ಕಡಲು ► ಪಣಂಬೂರಿನಲ್ಲಿ ಹೈ ಅಲರ್ಟ್ ಘೋಷಣೆ Read More »

ಕರಾವಳಿ

ಕಕ್ಕಿಂಜೆಯ ಎಟಿಎಂ ದರೋಡೆಗೆ ವಿಫಲ ಯತ್ನ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ.10. ಠಾಣಾ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯಲ್ಲಿನ ಸಿಂಡಿಕೇಟ್ ಬ್ಯಾಂಕ್ ಎಟಿಎಂ ದರೋಡೆ ಮಾಡಲು ಪ್ರಯತ್ನಿಸಿದ ಆರೋಪಿಯನ್ನು ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ಗ್ರಾಮದ ಉಜಿರೆಗ್ರಾಮದ ಕಕ್ಕೆಜಾಡು‌ ನಿವಾಸಿ ಮೊಯಿದ್ದೀನ್ ಎಂಬವರ ಪುತ್ರ ಮಹಮ್ಮದ್ ಆಸೀಫ್(25) ಎಂದು ಗುರುತಿಸಲಾಗಿದೆ. ಆರೋಪಿಯು ಎಟಿಎಂನ್ನು ದರೋಡೆಗೈಯಲು ವಿಫಲ ಯತ್ನ ನಡೆಸಿದ್ದನಲ್ಲದೆ ಚಾರ್ಮಾಡಿ ಮಸೀದಿಯಲ್ಲಿನ ಕಾಣಿಕೆ ಹುಂಡಿಯನ್ನು ಒಡೆದು 2000 ನಗದನ್ನು ದೋಚಿದ್ದನು. ಈ ಬಗ್ಗೆ

ಕಕ್ಕಿಂಜೆಯ ಎಟಿಎಂ ದರೋಡೆಗೆ ವಿಫಲ ಯತ್ನ ► ಆರೋಪಿಯ ಬಂಧನ Read More »

ಕರಾವಳಿ

ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗುವ ಸಂಭವದ ಹಿನ್ನೆಲೆ ► ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.09. ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವ ಇರುವುದರಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯವರು ನೀಡಿದ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಎಲ್ಲಾ ಮೀನುಗಾರರು  ಅಕ್ಟೋಬರ್ 13 ರವರೆಗೆ ಪಶ್ಚಿಮ ಮಧ್ಯ ಅರಬ್ಬಿ ಸಮುದ್ರದ ಆಳ ಪ್ರದೇಶದಲ್ಲಿ ಮತ್ತು ಅಕ್ಟೋಬರ್ 10 ರವರೆಗೆ ನೈರುತ್ಯ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗುವ ಸಂಭವದ ಹಿನ್ನೆಲೆ ► ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ Read More »

ಕರಾವಳಿ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2018’ರ ಸಮಾರೋಪದ ಹಿನ್ನೆಲೆ ► ಇಂದು ರಾತ್ರಿ ಕಡಬದ ಅನುಗ್ರಹ ಹಾಲ್‌ನಲ್ಲಿ ಕೆಎಸ್ಎಸ್ ವಿದ್ಯಾರ್ಥಿಗಳಿಂದ ‘ನೃತ್ಯ ವೈಭವ’

(ನ್ಯೂಸ್ ಕಡಬ) newskadaba.com ಕಡಬ, ಅ.07. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.)ನ ಜೇಸಿ ಸಪ್ತಾಹ ‘ಕದಂಬೋತ್ಸವ-2018’ ರ ಸಮಾರೋಪ ಸಮಾರಂಭವು ಭಾನುವಾರ ಸಂಜೆ 6.30 ಕ್ಕೆ ಸರಿಯಾಗಿ ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ. ಜೇಸಿಐ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ರಾಷ್ಟ್ರೀಯ ನಿರ್ದೇಶಕರಾದ ಚಂದ್ರಶೇಖರ್ ನಾಯರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ‌. ಜೇಸಿಐ ಕಡಬ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2018’ರ ಸಮಾರೋಪದ ಹಿನ್ನೆಲೆ ► ಇಂದು ರಾತ್ರಿ ಕಡಬದ ಅನುಗ್ರಹ ಹಾಲ್‌ನಲ್ಲಿ ಕೆಎಸ್ಎಸ್ ವಿದ್ಯಾರ್ಥಿಗಳಿಂದ ‘ನೃತ್ಯ ವೈಭವ’ Read More »

ಕರಾವಳಿ

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ► ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.07. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು – ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಎಂಬಲ್ಲಿ ಭಾನುವಾರದಂದು ನಡೆದಿದೆ. ಮೃತ ಸವಾರರನ್ನು ಬಂಟ್ವಾಳ ವಾಮದಪದವು ನಿವಾಸಿ ಮುಹಮ್ಮದ್ ನೌಶಾದ್ (18) ಹಾಗೂ ಮಂಗಳೂರಿನ ಕುಡುಪು ನಿವಾಸಿ ಚರಣ್(18) ಎಂದು ಗುರುತಿಸಲಾಗಿದೆ. ಮೃತರಿಬ್ಬರು ಭಾನುವಾರದಂದು ಬಿ.ಸಿ.ರೋಡಿನಿಂದ ಧರ್ಮಸ್ಥಳ ರಸ್ತೆಯಲ್ಲಿ ಕಾರಿಂಜ ಕಡೆಗೆ ತೆರಳುತ್ತಿದ್ದಾಗ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ► ಸವಾರರಿಬ್ಬರು ಮೃತ್ಯು Read More »

ಕರಾವಳಿ

ಬೆಳ್ಳಾರೆ: ಶಾಲೆಗೆಂದು ತೆರಳಿದ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.06. ಶಾಲೆಗೆಂದು ತೆರಳಿದ ವಿದ್ಯಾರ್ಥಿಯೋರ್ವ ಶಾಲೆಗೂ ತೆರಳದೆ ಮನೆಗೂ ಬಾರದೆ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಎಂಬಲ್ಲಿ ಅಕ್ಟೋಬರ್ 01 ರಂದು ನಡೆದಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಆಲೆಟ್ಟಿ ಗ್ರಾಮದ ಅಡಿಂಜ ನಿವಾಸಿ ಸೀತಾರಾಮ ಎಂಬವರ ಪುತ್ರ ಮೋಕ್ಷಿತ್(15) ಬೆಳ್ಳಾರೆಯ ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಅಕ್ಟೋಬರ್ 01 ರಂದು ಶಾಲೆಗೆ ಹೋಗುವುದಾಗಿ ಜೀಪಿನಲ್ಲಿ ತೆರಳಿದ್ದು, ಶಾಲೆಗೂ ಹೋಗದೇ ವಾಪಸ್ಸು ಮನೆಗೂ ಬಾರದೇ ಕಾಣೆಯಾಗಿದ್ದಾನೆ. ಸ್ನೇಹಿತರಲ್ಲಿ,

ಬೆಳ್ಳಾರೆ: ಶಾಲೆಗೆಂದು ತೆರಳಿದ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಕಡಬ: ಮುಖ್ಯ ಪೇಟೆಯಲ್ಲೇ ಸಾರ್ವಜನಿಕವಾಗಿ ಇಸ್ಪೀಟು ಆಡುತ್ತಿದ್ದಾಗ ಪೊಲೀಸ್ ದಾಳಿ ► ನಾಲ್ವರ ಬಂಧನ, ಓರ್ವ ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಅ.05. ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಆಡುತ್ತಿರುವಾಗ ದಾಳಿ‌ ನಡೆಸಿದ ಕಡಬ ಪೊಲೀಸರು ನಾಲ್ವರನ್ನು ಬಂಧಿಸಿದ್ದು, 4220 ರೂ.ಗಳನ್ನು ವಶಪಡಿಸಿಕೊಂಡ ಘಟನೆ ಶುಕ್ರವಾರ ರಾತ್ರಿ ಕಡಬದಲ್ಲಿ ನಡೆದಿದೆ.   ಕಡಬ ಠಾಣಾ ವ್ಯಾಪ್ತಿಯ ಹಳೆಯ ನಿರೀಕ್ಷಣಾ ಮಂದಿರದ ಮುಂಭಾಗದ ಸಾರ್ವಜನಿಕ ಸ್ಧಳದಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಆಟವನ್ನು ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಬಂಟ್ರ ಗ್ರಾಮದ ಶಿವಣ್ಣ ಗೌಡ ಎಂಬವರ ಪುತ್ರ ಹರೀಶ್(41), ಕುಟ್ರುಪಾಡಿ ಗ್ರಾಮದ ಅಮೈ

ಕಡಬ: ಮುಖ್ಯ ಪೇಟೆಯಲ್ಲೇ ಸಾರ್ವಜನಿಕವಾಗಿ ಇಸ್ಪೀಟು ಆಡುತ್ತಿದ್ದಾಗ ಪೊಲೀಸ್ ದಾಳಿ ► ನಾಲ್ವರ ಬಂಧನ, ಓರ್ವ ಪರಾರಿ Read More »

ಕರಾವಳಿ

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.05. ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಹಚ್ಚಿರುವ ಪೊಲೀಸರು ಆಕೆಯನ್ನು ಪೋಷಕರ ಅನುಮತಿ ಮೇರೆಗೆ ತನ್ನ ಪ್ರಿಯಕರನೊಂದಿಗೆ ಕಳುಹಿಸಿಕೊಟ್ಟ ಘಟನೆ ಶುಕ್ರವಾರದಂದು ಕಡಬ ಠಾಣೆಯಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ನಿವಾಸಿ ಕುಂಞ ಎಂಬವರ ಪುತ್ರಿ ಶ್ವೇತಾ(20) ಎಂಬಾಕೆ ಕಾಣೆಯಾಗಿದ್ದ ಬಗ್ಗೆ ಇತ್ತೀಚೆಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ ಕಡಬ ಪೊಲೀಸರು ಕಾಣೆಯಾದ ಹುಡುಗಿ ತನ್ನ ಪ್ರಿಯಕರ ಪುರಂದರ ಎಂಬಾತನ ಜೊತೆ ರೆಂಜಿಲಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ Read More »

ಕರಾವಳಿ
Scroll to Top