ಕರಾವಳಿ

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,ಫೆ,03 – ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.ಈ ಬಾರಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭಗೊಂಡು ಮಾರ್ಚ್‌ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ […]

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ

(ನ್ಯೂಸ್‌ ಕಡಬ) newskadaba.com,ಫೆ,03 ಮಂಗಳೂರು-ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಅರಸು ಪದವು ಗುಡ್ಡದಲ್ಲಿ ಮತ್ತೆ ಬೆಂಕಿ – ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com,ಫೆ,03 ಮಂಗಳೂರು: ಬಜಪೆಯ ಎಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅರಸುಪದವಿನಲ್ಲಿನ ಗುಡ್ಡಕ್ಕೆ ಸೋಮವಾರ ಮುಂಜಾನೆ ಪುನಃ ಬೆಂಕಿ ಕಾಣಿಸಿಕೊಂಡಿದೆ. ಫೆ. 1ರಂದು ಗುಡ್ಡದಲ್ಲಿ ಹರಡಿದ ಬೆಂಕಿಯನ್ನು ಆಗ್ನಿಶಾಮಕದಳದ ಸತತ ಕಾರ್ಯಾಚರಣೆ ಮೂಲಕ ಹತೋಟಿಗೆ ತಂದು ನಂದಿಸಲಾಗಿತ್ತು. ಸೋಮವಾರ ಮುಂಜಾನೆಯೇ ಬೆಂಕಿ ಕಂಡು ಬಂದ ಕಾರಣ ಇದು ಗುಡ್ಡದ ಸಮೀಪದಲ್ಲಿಯೇ ಹಾಗೂ ಕೆಳಗಡೆಗೆ ವ್ಯಾಪಿಸುವ ಭೀತಿ ಇದ್ದು ,ಅಲ್ಲಿನ ಮನೆ ಗಳಿಗೆ ನಿವಾಸಿಗಳಿಗೆ ಅಪಾಯ ತಂದಿದೆ. ಈ ಬಗ್ಗೆ ಅಗ್ನಿಶಾಮಕ ದಳ ಆಗಮಿಸಿದ್ದು ಬೆಂಕಿಯನ್ನು ನಂದಿಸಲಾಗಿತ್ತು.

ಮಂಗಳೂರು : ಅರಸು ಪದವು ಗುಡ್ಡದಲ್ಲಿ ಮತ್ತೆ ಬೆಂಕಿ – ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ತಂದೆಯಿಂದಲೇ ಮಗಳ ಕೊಲೆ ಪ್ರಕರಣ ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು

(ನ್ಯೂಸ್‌ ಕಡಬ) newskadaba.com,ಫೆ,03 ಕಾಸರಗೋಡು: ಮಂಜೇಶ್ವರದ ಕುಂಜತ್ತೂರಿನ ತೂಮಿನಾಡಿನಲ್ಲಿ ತಂದೆಯಿಂದಲೇ ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಶೇಕುಂಞ(50) ಮೃತಪಟ್ಟಿದ್ದಾರೆ. ಕುಟುಂಬ ಕಲಹದ ನಡುವೆ ಕತ್ತಿ ಕಾಳಗ ನಡೆಯುವ ಸಂದರ್ಭದಲ್ಲಿ ಅಡ್ಡ ಬಂದ ಪುತ್ರಿ ಜುಮೈರಾಳನ್ನೆ ತಂದೆ ಕಡಿದಿದ್ದು, ಜುಮೈರಾ ಸ್ಥಳದಲ್ಲಿ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡಿದ್ದ ಜುಮೇರಾಳ ದೊಡ್ಡಪ್ಪ ಶೇಕುಂಞ(50) ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಕರಣದ ಕೊಲೆ ಆರೋಪಿ ಉಮರ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ 18

ಕಾಸರಗೋಡು: ತಂದೆಯಿಂದಲೇ ಮಗಳ ಕೊಲೆ ಪ್ರಕರಣ ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ,03: ರಾಜ್ಯದಲ್ಲಿ ಚಳಿಯ ವಾತಾವರಣವಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಮುಂಜಾನೆ, ಸಂಜೆಯ ವೇಳೆ ಚಳಿ ಹಾಗೂ ಮಂಜಿನ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲವೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಪ್ರತಿಷ್ಠಾ ಮಹೋತ್ಸವ – ಶ್ರೀ ದೈವಗಳ ನೇಮೋತ್ಸವ

(ನ್ಯೂಸ್‌ ಕಡಬ) newskadaba.com,ಫೆ,02 ಸುಳ್ಯ: ಮಂಡೆಕೋಲು ಗ್ರಾಮದ ಮಂಡೆಕೋಲು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೊಳಪಡುವ ಕಳೇರಿ ಶ್ರೀ ಉಳ್ಳಾಕುಲು, ಧೂಮಾವತಿ ಮತ್ತು ರುದ್ರಚಾಮುಂಡಿ ಹಾಗೂ ಸಪರಿವಾರ ದೈವಗಳ ದೈವಸ್ಥಾನದ 10 ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ದೈವಗಳ ನೇಮೋತ್ಸವವು ಜ.30 ರಿಂದ ಫೆ.1ರ ವರೆಗೆ ನಡೆಯಿತು. ಜ.30ರಂದು ಸಂಜೆ ದೇವತಾ ಪ್ರಾರ್ಥನೆಯೊಂದಿಗೆ, ಉಗ್ರಾಣ ತುಂಬಿಸಲಾಯಿತು. ಜ.31ರಂದು ಪೂರ್ವಾಹ್ನ ಗಣಪತಿ ಹವನ, ನವಕ ಕಲಶಾಭಿಷೇಕ ಬಳಿಕ ಸಾರ್ವಜನಿಕರಿಂದ ಭಜನೆ ನಡೆಯಿತು. 1 ಗಂಟೆಯಿಂದ ಶ್ರೀ ದೈವಗಳಿಗೆ ತಂಬಿಲ,

ಸುಳ್ಯ : ಪ್ರತಿಷ್ಠಾ ಮಹೋತ್ಸವ – ಶ್ರೀ ದೈವಗಳ ನೇಮೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

(ನ್ಯೂಸ್‌ ಕಡಬ) newskadaba.com,ಫೆ,02 ಬೆಂಗಳೂರು: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ. ಗ್ರಾಮ್​ಗೆ

ಇಂದು ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ

(ನ್ಯೂಸ್‌ ಕಡಬ) newskadaba.com,ಫೆ,02 ಮಂಗಳೂರು: ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಹಾಕಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಸುರುವಾಗಿದ್ದು ಮೃಗಾಲಯಕ್ಕೆ ಬೀಗ ಹಾಕಲು ಸೂಚಿಸಿದ್ದಾರೆ. ಪಿಳಿಕುಲ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಹಾಗಿದ್ದು ಉದ್ಯಾನವನದ

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ಆಟೋ ಚಾಲಕನಿಗೆ ತಂಡದಿಂದ ಹಲ್ಲೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಫೆ,02 ವಿಟ್ಲ: ಕಸಬಾ ಗ್ರಾಮದ ಮಾರ್ನೆಮಿಗುಡ್ಡೆ ಎಂಬಲ್ಲಿ ರಿಕ್ಷಾ ಚಾಲಕರೊಬ್ಬರು ಹೋಗುತ್ತಿದ್ದ ವೇಳೆ ಮೂವರು ಮುಸುಕುದಾರಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಡ್ನೂರು ಗ್ರಾಮದ ನಿವಾಸಿ, ಆಟೋ ಚಾಲಕ ಇಸುಬು ಎಂಬವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಹಲ್ಲೆ ನಡೆಸಿದ್ದಾರೆ ಎಂದು ಇಸುಬು ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆಗೆ ಸಂಬಂಧಿಸಿ ವಿಟ್ಲ ಕಸಬಾ ಗ್ರಾಮದ ಕೆ ರವೀಶ್ ಕುಲಾಲ್(40),

ವಿಟ್ಲ : ಆಟೋ ಚಾಲಕನಿಗೆ ತಂಡದಿಂದ ಹಲ್ಲೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ

(ನ್ಯೂಸ್‌ ಕಡಬ) newskadaba.com,ಫೆ,02: ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ. ಈ ಮೂಲಕ ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.ಗೃಹಲಕ್ಷ್ಮಿ

ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top