ಕರಾವಳಿ

ಕೇನ್ಯ ಕಯಂಬಾಡಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ► ಜೀರ್ಣೋದ್ಧಾರ ಬಗ್ಗೆ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.17. ಸುಬ್ರಹ್ಮಣ್ಯ ಸಂಪುಟ ಶ್ರೀ ಲಕ್ಷ್ಮೀ ನರಸಿಂಹ ಮಠದ 16ನೇ ಮಠಾಧಿಪತಿ ಪೂಜ್ಯ ಶ್ರೀ ವೇದ ಪೂಜ್ಯ ತೀರ್ಥಶ್ರೀ ಆರಾಧಿಸಿಕೊಂಡು ಬಂದಿರುವ ಕಯಂಬಾಡಿ ಶ್ರೀ ಲಕ್ಷ್ಮೀ ನರಸಿಂಹ ದೇವರ ಹಾಗೂ ಕ್ಷೇತ್ರದ ದೈವಗಳ ಜೀರ್ಣೋದ್ಧಾರದ ಬಗ್ಗೆ ಕಯಂಬಾಡಿ ಬನ್ನಿಂತ್ತಾಯ ಕುಟುಂಸ್ಥರು ಹಾಗೂ ಕ್ಷೇತ್ರದ ಭಕ್ತಾದಿಗಳ ಸಭೆಯು ಕಡಬ ತಾಲೂಕಿನ ಕೇನ್ಯ ಗ್ರಾಮದ ಕಯಂಬಾಡಿ ಕ್ಷೇತ್ರದಲ್ಲಿ ನಡೆಯಿತು. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥರ ಗೌರವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೀರ್ಣೋದ್ದಾರ ಸಮಿತಿಯನ್ನು […]

ಕೇನ್ಯ ಕಯಂಬಾಡಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ► ಜೀರ್ಣೋದ್ಧಾರ ಬಗ್ಗೆ ಪೂರ್ವಭಾವಿ ಸಭೆ Read More »

ಕರಾವಳಿ

ಮಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ದಾಳಿ ► ಓರ್ವ ದಳ್ಳಾಳಿಯ ಬಂಧನ, ಮೂವರು ಯುವತಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17. ಲಾಡ್ಜ್ ವೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿ(ಪಿಂಪ್) ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ನೊಂದ ಯುವತಿಯರನ್ನು ರಕ್ಷಿಸಿದ ಘಟನೆ ಭಾನುವಾರದಂದು ನಡೆದಿದೆ. ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಕಂಫರ್ಟ್ ಲಾಡ್ಜ್ ನಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ವೇಶ್ಯಾವಾಟಿಕೆಗೆ ಯುವತಿಯರನ್ನು ಒದಗಿಸುತ್ತಿದ್ದ ದಲ್ಲಾಳಿ (ಪಿಂಪ್) ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ

ಮಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ದಾಳಿ ► ಓರ್ವ ದಳ್ಳಾಳಿಯ ಬಂಧನ, ಮೂವರು ಯುವತಿಯರ ರಕ್ಷಣೆ Read More »

ಕರಾವಳಿ

ಇಂದು ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿ ಕಡಬಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಗೌಡ ಸಮಾಜದ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮವು ಇಂದು (ಸೆಪ್ಟೆಂಬರ್ 16) ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿರುವ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಪೂರ್ವಾಹ್ನ ಗಂಟೆ 10.00ಕ್ಕೆ ಪಂಜ ಕ್ರಾಸ್ ಬಳಿಯಿಂದ ಪೂರ್ಣಕುಂಭ ಸ್ವಾಗತದ

ಇಂದು ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿ ಕಡಬಕ್ಕೆ Read More »

ಕರಾವಳಿ

ಕಡಬ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಟ್ಟಡ ತೆರಿಗೆ ಹೆಚ್ಚಳ ► ವಾಣಿಜ್ಯ ಕಟ್ಟಡ ಮಾಲಕರಿಂದ ವಿರೋಧ

(ನ್ಯೂಸ್ ಕಡಬ) newskadaba.com ಕಡಬ, ಸೆ.14. ಕಡಬ ಗ್ರಾ.ಪಂ.ನಿಂದ 2018-19ನೇ ಸಾಲಿನ ತೆರಿಗೆ ಪರಿಷ್ಕರಿಸಿ ವಾಣಿಜ್ಯ ಕಟ್ಟಡ ಹಾಗೂ ವಾಸ್ತವ್ಯ ಕಟ್ಟಡಕ್ಕೆ ತೆರಿಗೆ ಹೆಚ್ಚಿಸಿದ ಬಗ್ಗೆ ಹೆಚ್ಚುವರಿ ತೆರಿಗೆ ವಿರೋಧಿಸಿ ಸೆ.14ರಂದು ಗ್ರಾ.ಪಂ.ಗೆ ಮನವಿ ನೀಡಿ ಯಾವುದೇ ಕಾರಣಕ್ಕೂ ತೆರಿಗೆ ಹೆಚ್ಚಿಸಬಾರದೆಂದು ಮನವಿ ಮಾಡಲಾಯಿತು. ಜಿ.ಪ.ಮಾಜಿ ಸದಸ್ಯ ಸೈಯದ್ ಮೀರಾ ಸಾಹೇಬರ ನೇತೃತ್ವದಲ್ಲಿ ಕಡಬ ವರ್ತಕ ಸಂಘದ ಪದಾಧಿಕಾರಿಗಳು, ಕಟ್ಟಡ ಮಾಲಕರು, ಮನೆ ಮಾಲಕರು ಗ್ರಾ.ಪಂ.ಗೆ ತೆರಳಿ ಕಟ್ಟಡ ತೆರಿಗೆ ಹೆಚ್ಚಿಸಬಾರದೆಂದು ವಿನಂತಿಸಿಕೊಂಡರಲ್ಲದೆ ತಾವು ಪಂಚಾಯತ್‍ನಿಂದ ಈಗಾಗಲೇ

ಕಡಬ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಟ್ಟಡ ತೆರಿಗೆ ಹೆಚ್ಚಳ ► ವಾಣಿಜ್ಯ ಕಟ್ಟಡ ಮಾಲಕರಿಂದ ವಿರೋಧ Read More »

ಕರಾವಳಿ

ವಿಟ್ಲ: ಯುವಕನನ್ನು ಅಟ್ಟಾಡಿಸಿ ರಾಡಿನಿಂದ ಹಲ್ಲೆ ► ನಾಲ್ವರ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ.14. ಯುವಕನೋರ್ವನನ್ನು ಅಟ್ಟಾಡಿಸಿ ರಾಡಿನಿಂದ ಬಡಿದು ಕೊಲೆಗೆ ಯತ್ನಿಸಿದ ಘಟನೆ ವಿಟ್ಲದ ಕನ್ಯಾನ ಕೆಳಗಿನ ಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಿತ್ತನಡ್ಕ ನಿವಾಸಿ ನವಾಫ್(23), ಹಲ್ಲೆಗೊಳಗಾದ ಯುವಕ. ಕನ್ಯಾನದ ಕುಖ್ಯಾತ ಕ್ರಿಮಿನಲ್ ಇಕ್ಕು ಯಾನೆ ಇಕ್ಬಾಲ್ ಮತ್ತು ಹಾರೀಸ್ ಹಾಗೂ ಕೇರಳ ಮೂಲದ ಇಬ್ಬರು ಶುಕ್ರವಾರ ರಾತ್ರಿ ಆಲ್ಟೋ 800 ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದು ಹಲ್ಲೆ ನಡೆಸಿದ್ದಾರೆ. ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ವಿಟ್ಲ ಠಾಣಾ

ವಿಟ್ಲ: ಯುವಕನನ್ನು ಅಟ್ಟಾಡಿಸಿ ರಾಡಿನಿಂದ ಹಲ್ಲೆ ► ನಾಲ್ವರ ತಂಡದಿಂದ ಕೃತ್ಯ Read More »

ಕರಾವಳಿ

ಕಡಬ: ಹೆತ್ತ ತಾಯಿಯನ್ನೇ ಕತ್ತಿಯಿಂದ ಕಡಿದ ಮಗ

(ನ್ಯೂಸ್ ಕಡಬ) newskadaba.com ಕಡಬ, ಸೆ.14. ಹೆತ್ತ ತಾಯಿಯನ್ನೇ ತನ್ನ ಸ್ವಂತ ಮಗನೋರ್ವ ಕತ್ತಿಯಿಂದ ಕಡಿದು ಗಾಯಗೊಳಿಸಿದ ಅಮಾನವೀಯ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ರಬ್ಬರ್ ತೋಟ ನಿವಾಸಿ ಹೊನ್ನಪ್ಪ ಗೌಡ ಎಂಬವರ ಪುತ್ರ ಪರಮೇಶ್ವರ(26) ಎಂಬಾತನೇ ತನ್ನ ತಾಯಿಗೆ ಹಲ್ಲೆ ನಡೆಸಿದ ಆರೋಪಿ. ಮಂಗಳೂರಿನ ಹೋಟೆಲೊಂದರಲ್ಲಿ ಉದ್ಯೋಗದಲ್ಲಿರುವ ಆರೋಪಿಯು ತನ್ನ ತಾಯಿ ಹೊನ್ನಮ್ಮ ಎಂಬಾಕೆಗೆ ಶುಕ್ರವಾರದಂದು ಕತ್ತಿಯಿಂದ ಕಾಲಿಗೆ ಕಡಿದಿದ್ದಲ್ಲದೆ ಕೈಯಿಂದ ಹೊಡೆದಿದ್ದಾನೆ ಎನ್ನಲಾಗಿದೆ. ಬಳಿಕ

ಕಡಬ: ಹೆತ್ತ ತಾಯಿಯನ್ನೇ ಕತ್ತಿಯಿಂದ ಕಡಿದ ಮಗ Read More »

ಕರಾವಳಿ

ಔಷಧ ಸಿಂಪಡಣೆಗೆ ಸಿಗುತ್ತಿಲ್ಲ ಸುಣ್ಣ..!! ► ಕೊಳೆ ರೋಗದಿಂದಾಗಿ ಅಡಿಕೆಗೆ ಹಳದಿ ಬಣ್ಣ..!!

(ನ್ಯೂಸ್ ಕಡಬ) newskadaba.com ಸವಣೂರು, ಸೆ.16. ಕೊಳೆರೋಗ ಹೆಸರು ಕೇಳಿದರೇನೇ ಬೆಚ್ಚಿಬೀಳುತ್ತಾರೆ ಕರಾವಳಿಯ ಕೃಷಿಕರು. ಅಡಿಕೆಗೆ ಬರುವ ಅತ್ಯಂತ ಭಯಾನಕ ರೋಗದಲ್ಲಿ ಕೊಳೆರೋಗ ಒಂದಾಗಿದೆ. ಕೊಳೆರೋಗ ಬಾಧಿತ ಕೃಷಿಕರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕ ಸೆ.11. ಕೊನೆಯ ದಿನವಾಗಿದ್ದು, ಅವಧಿ ವಿಸ್ತರಿಸುವಂತೆ ಕೃಷಿಕರು ಒತ್ತಾಯಿಸಿದ್ದಾರೆ. ಅರ್ಜಿ ಸಲ್ಲಿಸಲು ಇನ್ನೂ ಹಲವು ಕೃಷಿಕರು ಬಾಕಿಯಾಗಿದ್ದು ಇದರಿಂದಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸುವಂತೆ ಕೃಷಿಕರು ಮನವಿ ಮಾಡಿದ್ದಾರೆ. ಸರಕಾರ ಸೇರಿದಂತೆ ವಿವಿಧ ಸಹಕಾರಿ ಸಂಘಗಳು, ರೈತಪರ ವಿಜ್ಞಾನಿಗಳು, ಚಿಂತಕರು ಕೊಳೆರೋಗದ

ಔಷಧ ಸಿಂಪಡಣೆಗೆ ಸಿಗುತ್ತಿಲ್ಲ ಸುಣ್ಣ..!! ► ಕೊಳೆ ರೋಗದಿಂದಾಗಿ ಅಡಿಕೆಗೆ ಹಳದಿ ಬಣ್ಣ..!! Read More »

ಕರಾವಳಿ

ಪುರುಷರಕಟ್ಟೆಯಲ್ಲಿ 18ನೇ ವರ್ಷದಸಾರ್ವಜನಿಕ ಗಣೇಶೋತ್ಸವ

ನರಿಮೊಗರು : ಇಲ್ಲಿನ ಪುರುಷರಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸೆ.೧೩ರಿಂದ ಸೆ.೧೫ರವರೆಗೆ ಪುರುಷರಕಟ್ಟೆಯ ಮಹಾಲಿಂಗೇಶ್ವರ ದೇವರ ಕಟ್ಟೆಯ ಎದುರು ನಡೆಯಲಿದೆ.

ಪುರುಷರಕಟ್ಟೆಯಲ್ಲಿ 18ನೇ ವರ್ಷದಸಾರ್ವಜನಿಕ ಗಣೇಶೋತ್ಸವ Read More »

ಕರಾವಳಿ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕಾಣಿಯೂರು :ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.13ಮತ್ತು ಸೆ.14 ರಂದು ನಡೆಯಿತು. ಸೆ.13ರಂದು ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ,  ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ಶಾಂತಿಮೊಗರು :  16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 16ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು. ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ ೮ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಶಾಂತಿಮೊಗರು :  16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ
Scroll to Top