ಕರಾವಳಿ

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ 

ಸವಣೂರು,: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸವಣೂರು ವಿನಾಯಕ ಸಭಾಭವನದಲ್ಲಿ 36ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.13 ಆರಂಭಗೊಂಡಿದ್ದು, ಸೆ.15ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.13ರಂದು ಬೆಳಿಗ್ಗೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಧ್ವಜಾರೋಹಣ ಮಾಡಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉದ್ಯಮಿ ಎನ್.ಸುಂದರ ರೈ ಚಾಲನೆ ನೀಡಿದರು.ಈ ಸಂದರ್ಭ  ಸಮಿತಿ ಅಧ್ಯಕ್ಷ  ಶಿವರಾಮ ಗೌಡ ಮೆದು,ಕಾರ್ಯದರ್ಶಿ ಸುಧಾಕರ ರೈ ದೇವಸ್ಯ,ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ನಡುಬಲು,ರಾಘವ ಗೌಡ,ಕೋಶಾಽಕಾರಿ ರಾಮಕೃಷ್ಣ ಪ್ರಭು,ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ,ಶ್ರವಣ ರಂಗ ಪ್ರತಿಷ್ಠಾನದ ಸಂಚಾಲಕ […]

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  Read More »

ಕರಾವಳಿ

ಮಂಜುನಾಥ ನಗರದಲ್ಲಿ 35ನೇ ವರ್ಷದ ಗಣೇಶೋತ್ಸವ

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು. ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು. ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ  ವಹಿಸಿದ್ದರು..ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡಿದರು. ಪ್ರತಿಭಾನ್ವಿತರಿಗೆ ಅಭಿನಂದನೆ ಇದೇ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿ

ಮಂಜುನಾಥ ನಗರದಲ್ಲಿ 35ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಕೊಳೆ ರೋಗ ಅರ್ಜಿ ಸ್ವೀಕರಣೆಯಲ್ಲಿಯೂ ಲಂಚ ತಾಂಡವ..!! ► ಕಡಬ ಗ್ರಾಮ ಕರಣಿಕರ ಕಛೇರಿಯಲ್ಲಿ ಪ್ರತಿ ಅರ್ಜಿಗೆ 40 ರೂ. ವಸೂಲಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ಈ ಬಾರಿ ಪ್ರಕೃತಿ ವಿಕೋಪದಲ್ಲಿ ರೈತರ ಕೃಷಿ ನಷ್ಟವುಂಟಾಗಿ ಜನರು ಸಂಕಷ್ಟದಲ್ಲಿದ್ದರೆ, ಕಂದಾಯ ಇಲಾಖೆಯವರು ಇದನ್ನು ಯಾವುದೇ ಗಣನೆಗೆ ತೆಗೆದುಕೊಂಡಿಲ್ಲ ಎನ್ನುವುದು ಕಾಣುತ್ತಿದೆ. ವಿಪರೀತ ಮಳೆಯಿಂದಾಗಿ ಅಡಿಕೆ, ಕಾಳು ಮೆಣಸಿಗೆ ಕೊಳೆ ರೋಗ ಬಂದಿದ್ದು ಈ ಬಗ್ಗೆ ಸರಕಾರ ಈಗಾಗಲೇ ಅರ್ಜಿ ನೀಡಲು ಸೂಚಿಸಿದ್ದು ಜನತೆ ಸಿಕ್ಕಿದಷ್ಟದರೂ ಪುಣ್ಯ ಎಂಬಂತೆ ಬಹಳ ಕಷ್ಟಪಟ್ಟು ಅರ್ಜಿ ನೀಡುತ್ತಿದ್ದಾರೆ. ಆದರೆ ಜನರ ಕಷ್ಟ, ನಷ್ಟ ಯಾವುದನ್ನು ಗಣನೆಗೆ ತೆಗೆದುಕೊಳ್ಳದ ಕಡಬ ಗ್ರಾಮಕರಣಿಕರ ಕಚೇರಿಯ ಸಿಬ್ಬಂದಿಗಳು

ಕೊಳೆ ರೋಗ ಅರ್ಜಿ ಸ್ವೀಕರಣೆಯಲ್ಲಿಯೂ ಲಂಚ ತಾಂಡವ..!! ► ಕಡಬ ಗ್ರಾಮ ಕರಣಿಕರ ಕಛೇರಿಯಲ್ಲಿ ಪ್ರತಿ ಅರ್ಜಿಗೆ 40 ರೂ. ವಸೂಲಿ..!! Read More »

ಕರಾವಳಿ

ಆಲಂಕಾರು: ಬೆಂಕಿ ರೋಗಕ್ಕೆ ನಲುಗಿದ ಭತ್ತ ಕೃಷಿ ► ಸಂಪೂರ್ಣ ನಾಶವಾಗುವ ಭೀತಿಯಲ್ಲಿ ರೈತರು

(ನ್ಯೂಸ್ ಕಡಬ) newskadaba.com ಆಲಂಕಾರು, ಸೆ.14. ಇಪ್ಪತ್ತು ದಿನದ ಮೊದಲು ಸುರಿದ ಭಾರಿ ಮಳೆಗೆ ರೈತರ ಭತ್ತ ಕೃಷಿಯು ನೆರೆ ನೀರಿನಿಂದಾಗಿ ಅಪಾರ ಪ್ರಮಾಣದಲ್ಲಿ ಕೊಳೆತು ಹೋದರೆ, ಇದೀಗ ಅಳಿದುಳಿದ ಭತ್ತದ ಗದ್ದೆಯು ಬೆಂಕಿ ರೋಗದಿಂದ ಸಂಪೂರ್ಣ ನಾಶವಾಗುವ ಭೀತಿ ರೈತರನ್ನು ಕಾಡುತ್ತಿದೆ. ನಾಟಿ ಮಾಡಿ ಕಾಯಿ ಕಟ್ಟುವ ಹಂತದಲ್ಲಿರುವ ಸುಮಾರು ಎರಡು ತಿಂಗಳ ಅವಧಿಯ ಪ್ಶೆರಿಗೆ ಇದೀಗ ಬೆಂಕಿ ರೋಗ ಕಾಣಿಸಿಕೊಂಡಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ನಡುಮನೆ, ಸೇರಿದಂತೆ ಕುಮಾರಧಾರ ನದಿ ತಟದಲ್ಲಿರುವ ಬುಡೇರಿಯಾ, ಪಜ್ಜಡ್ಕ,

ಆಲಂಕಾರು: ಬೆಂಕಿ ರೋಗಕ್ಕೆ ನಲುಗಿದ ಭತ್ತ ಕೃಷಿ ► ಸಂಪೂರ್ಣ ನಾಶವಾಗುವ ಭೀತಿಯಲ್ಲಿ ರೈತರು Read More »

ಕರಾವಳಿ

ಸೆ.16: ಕಡಬ ವಲಯ ಒಕ್ಕಲಿಗ ಗೌಡ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ► ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಗೌಡ ಸಮಾಜದ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮವು ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸೆ. 16 ರಂದು ಜರಗಲಿದೆ ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲು ತಿಳಿಸಿದ್ದಾರೆ. ಅವರು ಬುಧವಾರದಂದು ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಪೂರ್ವಾಹ್ನ ಗಂಟೆ

ಸೆ.16: ಕಡಬ ವಲಯ ಒಕ್ಕಲಿಗ ಗೌಡ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ► ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ Read More »

ಕರಾವಳಿ

ಮರ್ಧಾಳ: ಜೀಪ್ ಬೈಕ್ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಜೀಪು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರದಂದು ಮರ್ಧಾಳದಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಸುಂಕದಕಟ್ಟೆ ಮೂಜೂರು ನಿವಾಸಿ ತುಕಾರಾಮ್ ಎಂದು ಗುರುತಿಸಲಾಗಿದೆ. ಕಡಬ ಕೇವಳ ನಿವಾಸಿಯೋರ್ವರು ಚಲಾಯಿಸುತ್ತಿದ್ದ ಜೀಪ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದೆ. ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ‌ನೆಲ್ಯಾಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮರ್ಧಾಳ: ಜೀಪ್ ಬೈಕ್ ಢಿಕ್ಕಿ ► ಸವಾರನಿಗೆ ಗಾಯ Read More »

ಕರಾವಳಿ

ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ನಾಲ್ಕು ದಿನಗಳ ಹಿಂದೆ ತನ್ನ ಮನೆಯಲ್ಲೇ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪಂಬೆತ್ತಾಡಿ ಗ್ರಾಮದ ಕಲ್ಚಾರು ಸುಬ್ರಹ್ಮಣ್ಯ ಭಟ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್ 08 ರಂದು ಸುಬ್ರಹ್ಮಣ್ಯ ಭಟ್ ರವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಪ್ರಕರಣದ ಆರೋಪಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಪಡ ನಿವಾಸಿ ಶೀನಪ್ಪ ಗೌಡ ಎಂಬವರ

ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ Read More »

ಕರಾವಳಿ

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡುಬಿದಿರೆ, ಸೆ.12. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ಬೆಂಗಳೂರಿನ ವಿನುತಾ(18) ಎಂದು ಗುರುತಿಸಲಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ವಿನುತಾ ಬುಧವಾರದಂದು ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ‌ ಎನ್ನಲಾಗಿದೆ. ಸ್ಥಳಕ್ಕೆ ಮೂಡುಬಿದಿರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ

ಮುಕ್ಕೂರಿನಲ್ಲಿ 9 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ

ಪರಂಪರೆ,ಪರಿಸರ,ಪರಿಶ್ರಮ ಪ್ರಜ್ಞೆ ಸಂಘಟನೆ ಜೀವಾಳ : ನಾಯರ್‌ಕೆರೆ ಮುಕ್ಕೂರು : ಹಿರಿಯರು ತೋರಿಸಿದ ಪರಂಪರೆ ಪ್ರಜ್ಞೆ, ಪ್ರಕೃತಿ ಸಹಜ ಮೌಲ್ಯಗಳನ್ನು ಬೆಳೆಸುವ ಪರಿಸರ ಪ್ರಜ್ಞೆ, ಎಲ್ಲರನ್ನು ಒಗ್ಗೂಡಿಸಿ ಊರನ್ನು ಬೆಳಗಿಸುವ ಪರಿಶ್ರಮ ಪ್ರಜ್ಞೆ. ಈ ಮೂರನ್ನು ಹೊಂದಿರುವ ಸಂಘಟನೆ ಚಿರಾಯಿಯಾಗುತ್ತದೆ ಎಂದು ಪತ್ರಕರ್ತ, ಸಂಪನ್ಮೂಲ ವಕ್ತಿ ದುರ್ಗಾಕುಮಾರ್ ನಾಯರ್‌ಕೆರೆ ಹೇಳಿದರು. ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಮುಕ್ಕೂರು ಶಾಲಾ ವಠಾರದಲ್ಲಿ ನಡೆದ ೯ ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಮ್ಮಾನ ನೆರವೇರಿಸಿ

ಮುಕ್ಕೂರಿನಲ್ಲಿ 9 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ Read More »

ಕರಾವಳಿ

►► ಕವರ್ ಸ್ಟೋರಿ ► ಸವಣೂರಿನಿಂದ ಪ್ರತ್ಯೇಕವಾಗಲಿದೆಯೇ ಪಾಲ್ತಾಡಿ ಗ್ರಾಮ..!! ► ಈಡೇರುವುದೇ ಪಾಲ್ತಾಡಿ ಪ್ರತ್ಯೇಕ ಗ್ರಾಮ ಪಂಚಾಯತ್ ನ ಬೇಡಿಕೆ..??

ಸವಣೂರು, ಸೆ.13. ಸವಣೂರು ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟಿರುವ ಪಾಲ್ತಾಡಿ ಗ್ರಾಮವನ್ನು ಪ್ರತ್ಯೇಕ ಗ್ರಾ.ಪಂ.ಮಾಡಬೇಕೆಂಬ ಬೇಡಿಕೆ ಈ ಬಾರಿಯಾದರೂ ಈಡೇರುತ್ತಾ ಎಂಬ ಆಶಾ ಭಾವನೆ ಗ್ರಾಮಸ್ಥರದ್ದು. ಕಳೆದ ಬಾರಿ ಗ್ರಾಮ ಪಂಚಾಯತ್ ಪುನರ್ವಿಂಗಡನೆ ಸಮಯದಲ್ಲಿಯೇ ಈ ಕುರಿತು ಗ್ರಾಮಸ್ಥರಿಂದ ಬೇಡಿಕೆ ವ್ಯಕ್ತವಾಗಿತ್ತು.ಬಳಿಕ ಗ್ರಾಮಸ್ಥರಿಂದ ಕಂದಾಯ ಇಲಾಖೆಯ ಸಚಿವರಿಗೆ, ಗ್ರಾ.ಪಂ.ಪುನರ್ವಿಂಗಡನಾ ಸಮಿತಿಗೆ, ಇಲಾಖೆಯ ನಿರ್ದೇಶಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಪ್ರತ್ಯೇಕ ಗ್ರಾ.ಪಂ.ಕನಸು ಕನಸಾಗಿಯೇ ಉಳಿಯಿತು. ಪಾಲ್ತಾಡಿ ಗ್ರಾಮದ ಒಟ್ಟು ವಿಸ್ತೀರ್ಣ ೨೬೬೮.೧೦ ಎಕ್ರೆ ಆಗಿದ್ದು ,ಒಟ್ಟು ೫೮೦ ಕುಟುಂಬಗಳನ್ನು ಹೊಂದಿದ್ದು

►► ಕವರ್ ಸ್ಟೋರಿ ► ಸವಣೂರಿನಿಂದ ಪ್ರತ್ಯೇಕವಾಗಲಿದೆಯೇ ಪಾಲ್ತಾಡಿ ಗ್ರಾಮ..!! ► ಈಡೇರುವುದೇ ಪಾಲ್ತಾಡಿ ಪ್ರತ್ಯೇಕ ಗ್ರಾಮ ಪಂಚಾಯತ್ ನ ಬೇಡಿಕೆ..?? Read More »

ಕರಾವಳಿ
Scroll to Top