ಕರಾವಳಿ

ಬೆಳ್ತಂಗಡಿ : ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ – ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,ಫೆ,02 ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಕಾರೊಂದು ಢಿಕ್ಕಿಯಾಗಿ ಹೆದ್ದಾರಿ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ರವಿವಾರ ನಡೆದಿದೆ. ಸ್ಥಳೀಯ ನಿವಾಸಿಗಳಾದ ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಗಾಯಗೊಂಡಿದ್ದು, ಇಬ್ಬರೂ ಸಂಬಂಧಿಕರಾಗಿದ್ದಾರೆ. ಅವರು ಕಕ್ಕಿಂಜೆಯ ಆಯಿಲ್ ಮಿಲ್ ಬಳಿ ರವಿವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ತೆರಳಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಹರ್ಷನ್ ಮನೋಜ್ ಎಂಬಾತ […]

ಬೆಳ್ತಂಗಡಿ : ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ – ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ KSEC ಹಾಗೂ Jomz Academy ಸಂಸ್ಥೆಯಲ್ಲಿ ಹಲವು ಉದ್ಯೋಗಗಳು ಪದವೀಧರಿಂದ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಫೆ,02: ಕಡಬದ ಶಿವಗಣೇಶ್ ಕಾಂಪ್ಲೆಕ್ಸನಲ್ಲಿ ಕಳೆದ 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವಂತಹ KSEC ಸಂಸ್ಥೆ ಹಾಗೂ ಪಿ.ಕೆ ಕಾಂಪ್ಲೆಕ್ಸನಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ Jomz Academy ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಕಡಬದ KSEC ಸಂಸ್ಥೆಗೆ Counsellor, Telecaller ಮತ್ತು Documentation ಹುದ್ದೆಗಳಿಗೆ ಅಭ್ಯರ್ಥಿಗಳು ಹಾಗೂ Jomz Academy ಸಂಸ್ಥೆಗೆ 2 Computer Teachers ಹುದ್ದೆಗಳಿಗೆ ಪದವಿ ಹಾಗೂ DCA Course ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಸ್ಥೆಯ

ಕಡಬದ KSEC ಹಾಗೂ Jomz Academy ಸಂಸ್ಥೆಯಲ್ಲಿ ಹಲವು ಉದ್ಯೋಗಗಳು ಪದವೀಧರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫ್ರೆ,02: ರಾಜ್ಯದ ಹವಾಮಾನದಲ್ಲಿ ಏರುಪೇರಾಗುತ್ತಿದ್ದು, ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಒಣ ಹವೆ ಮುಂದುವರಿಯಲಿದ್ದು, ಬೆಳಗಿವ ಜಾವ ಚಳಿ ಹಾಗೂ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಮನೆಯಲ್ಲಿ ಕಳವು

(ನ್ಯೂಸ್‌ ಕಡಬ) newskadaba.com  ಜ.30: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಅವರ ಕಾಪುವಿನ ನಿವಾಸಕ್ಕೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ನಗದನ್ನು ದೋಚಿದ್ದಾರೆ….. “ದಿವಾಕರ್ ಶೆಟ್ಟಿ ಅವರು ಸಂಬಂಧಿಕರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಂಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಪುರಸಭಾ ಸದಸ್ಯ ಸುರೇಶ್ ಶೇರಿಗಾರ್ ಅವರಿಗೆ ವಹಿಸಲಾಗಿತ್ತು. ಸುರೇಶ್ ಶೇರಿಗಾರ್ ಅವರು ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದಾಗ ಈ ಕಳ್ಳತನ ನಡೆದಿದೆ

ಕಾಪು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಮನೆಯಲ್ಲಿ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಇಳಿಕೆ

(ನ್ಯೂಸ್‌ ಕಡಬ) newskadaba.com,ಜ.30 ಬೆಂಗಳೂರು: ಕಳೆದೊಂದು ತಿಂಗಳಿಂದ ಭಾರೀ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿಂದ ಭಾರೀ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 755 ರೂ. ಇಳಿಕೆ ಕಂಡು ಬಂದು, 15,640 ರೂ. ಆಗಿದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 823 ರೂ. ಇಳಿಕೆಯಾಗಿ 17,062 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,25,120 ರೂ. ಹಾಗೂ 10 ಗ್ರಾಂಗೆ 1,56,400 ರೂ. ಹಾಗೂ 100

ಚಿನ್ನದ ದರದಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ

(ನ್ಯೂಸ್‌ ಕಡಬ) newskadaba.com,ಜ.30 ಸುಳ್ಯ: ಜ.28ರಂದು ಅಪರಾಹ್ನ ಕೊಡಗು ಸಂಪಾಜೆಯಲ್ಲಿ ರಿಕ್ಷಾಕ್ಕೆ ಹಿಂದಿನಿಂದ ಗುದ್ದಿ ಪಲ್ಟಿಯಾದ ರಿಕ್ಷಾದ ಚಾಲಕ ಸುಂದರ ಅವರ ಸಾವಿಗೆ ಕಾರಣವಾದ ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ. ವಿಚಾರಣೆ ಮುಂದುವರಿದಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿತ್ತು.

ಸುಳ್ಯ : ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಚಿನ್ನದ ಬೆಲೆ ಇಳಿಕೆಗಾಗಿ ದೇವಿಗೆ ಭಕ್ತನ ವಿಭಿನ್ನ ಹರಕೆ!

(ನ್ಯೂಸ್‌ ಕಡಬ) newskadaba.com,ಜ.30  : ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ಸಲ್ಲಿಸಿದ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು, “ಚಿನ್ನದ ದರ ಇಳಿಯಲಿ, ಬಡವರು ಹಾಗೂ ಸಾಮಾನ್ಯ ಜನರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಅಪರೂಪದ ಆಶಯದೊಂದಿಗೆ ದೇವಿಯ ಮುಂದೆ ಹರಕೆ ಸಲ್ಲಿಸಿದರು. ತಾಯಿಯ ರಥೋತ್ಸವದ ವೇಳೆ, ನಾಗರಾಜ

ಗಗನಕ್ಕೇರಿದ ಚಿನ್ನದ ಬೆಲೆ ಇಳಿಕೆಗಾಗಿ ದೇವಿಗೆ ಭಕ್ತನ ವಿಭಿನ್ನ ಹರಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.30  ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಜಿಸಿಯ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ

(ನ್ಯೂಸ್‌ ಕಡಬ) newskadaba.com,ಜ.29  ದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವ ವಿದ್ಯಾಲಯ ಧನಸಹಾಯ ಆಯೋಗ ಹೊರಡಿಸಿರುವ ನಿಯಮಾವಳಿಯನ್ನು ಸುಪ್ರೀಂ ಕೋರ್ಟ್‌ ತಡೆ ಹಿಡಿದಿದೆ .. ನಿಯಮಾವಳಿ ವಿರುದ್ಧ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ವ್ಯಾಪಕ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಈ ಕ್ರಮ ಕೈಗೊಂಡಿದೆ. ಹೊಸ ನಿಯಮಾವಳಿಯನ್ನು ತೀವ್ರವಾಗಿ ಟೀಕಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಇದು ಸಂಪೂರ್ಣ ಅಸ್ಪಷ್ಟತೆಯಿಂದ ಕೂಡಿದೆ ಎಂದು ಹೇಳಿದೆ. ವಿಶ್ವವಿದ್ಯಾಲಯಗಳ ವ್ಯಾಪ್ತಿಯ

ಯುಜಿಸಿಯ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ

(ನ್ಯೂಸ್‌ ಕಡಬ) newskadaba.com,ಜ.29  ಮಂಗಳೂರು: ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್‌ನ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟ್ರೀಯ ಮುಕ್ತ ಈಜು ಚಾಂಪಿಯನ್‌ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ ಹಾರಿಸುವ ಮೂಲಕ ಅನಾವರಣಗೊಳಿಸಲಾಯಿತು. ಆಹ್ವಾನಿತ ಅತಿಥಿಗಳು, ಕ್ರೀಡಾಪಟುಗಳು ಮತ್ತು ಸಂಸ್ಥೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಮುಕುಂದ್ ರಿಯಾಲ್ಟಿಯ ವ್ಯವಸ್ಥಾಪಕ ಪಾಲುದಾರರಾದ ಗುರುದತ್ತ ಶೆಣೈ, ಮಹೇಶ್ ಶೆಟ್ಟಿ ಮತ್ತು ಮಂಗಲದೀಪ್ ಎ.ಆರ್. ನೇತೃತ್ವದಲ್ಲಿ ರುದ್ರಾಕ್ಷ್ ಯೋಜನೆಯ ಮಾಹಿತಿ ಪತ್ರ ಅನಾವರಣಗೊಳಿಸಲಾಯಿತು.

ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top