ಕರಾವಳಿ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ► ಸಬಳೂರು ಶಾಲೆಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ

ಕಡಬ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಲಾನಯನ ಅಭಿವೃದ್ದಿ ಇಲಾಖೆಯ ಘಟಕ 5 ರ ವತಿಯಿಂದ ಪುತ್ತೂರು ತಾಲೂಕು ಕೊೈಲ ಗ್ರಾಮದ ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಘಟಕದ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಮುಖ್ಯಗುರು ವಾರಿಜ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 75 ಕ್ಕೂ ಹೆಚ್ಚು ಗೇರು ಗಿಡ ಇತರೆ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು. ಜಲಾನಯನ ಇಲಾಖಾ ಘಟಕ 5 ರ ನಾಯಕ ಚಿದಾನಂದ ಪಾನ್ಯಾಲು, […]

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ► ಸಬಳೂರು ಶಾಲೆಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ Read More »

ಕರಾವಳಿ

ಜಂ-ಇಯ್ಯತ್ತುಲ್ ಮುಅಲ್ಲಿಮೀನ್ ಆತೂರು ರೇಂಜ್ ಘಟಕ ಅಸ್ತಿತ್ವಕ್ಕೆ► ಅಧ್ಯಕ್ಷರಾಗಿ ಅನಸ್ ಅಲ್‍ಹಾದಿ ತಂಙಳ್ ಆಯ್ಕೆ

ಕಡಬ: ಆತೂರು ಜಂಇಯ್ಯತ್ತುಲ್ ಮುಅಲ್ಲಿಮೀನ್ ಆತೂರು ಘಟಕದ ಅದ್ಯಕ್ಷರಾಗಿ ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಸೈಯ್ಯದ್ ಅನಸ್ ಹಾದಿ ತಂಙಳ್ ಅಲ್ ಅಝ್‍ಹರಿ, ಪ್ರಧಾನ ಕಾರ್ಯದರ್ಶಿಯಾಗಿ ಆತೂರು ಮದ್ರಸದ ಸದರ್ ಮುಅಲ್ಲಿಂ ಸಿದ್ದಿಕ್ ಫೈಝಿ ಆಯ್ಕೆ ಆಗಿದ್ದಾರೆ. ಉಪಾದ್ಯಕ್ಷರಾಗಿ ಮುರ್ಶಿದ್ ಫೈಝಿ ಕೊೈಲ, ಉಮರ್ ದಾರಿಮಿ ಪೆರಿಯಡ್ಕ , ಕೋಶಾದಿಕಾರಿಯಾಗಿ ಬಿ.ಕೆ. ಅಝೀಝ್ ಆತೂರು , ಜೊತೆಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ದಾರಿಮಿ ಹಳೆನೇರೆಂಕಿ, ಬದ್ರುದ್ದೀನ್ ಮುಸ್ಲಿಯಾರ್ ಆತೂರುಬೈಲ್, ರಂಜ್ ಚಯರ್‍ಮೆನ್ ಆಗಿ ಅಬ್ದುಲ್ ರಜಾಕ್ ದಾರಿಮಿ

ಜಂ-ಇಯ್ಯತ್ತುಲ್ ಮುಅಲ್ಲಿಮೀನ್ ಆತೂರು ರೇಂಜ್ ಘಟಕ ಅಸ್ತಿತ್ವಕ್ಕೆ► ಅಧ್ಯಕ್ಷರಾಗಿ ಅನಸ್ ಅಲ್‍ಹಾದಿ ತಂಙಳ್ ಆಯ್ಕೆ Read More »

ಕರಾವಳಿ

ಗಂಡಿಬಾಗಿಲು ಮದ್ರಸ ಎಸ್.ಕೆ.ಎಸ್.ಬಿ.ವಿ. ಮಹಾಸಭೆ ► ಅಧ್ಯಕ್ಷರಾಗಿ ಫಝಲ್, ಕಾರ್ಯದರ್ಶಿಯಾಗಿ ಮಹಮ್ಮದ್ ಸುಹೈಲ್ ಆಯ್ಕೆ

ಕಡಬ: ಗಂಡಿಬಾಗಿಲು ಹಿಮಾಯತುಲ್ ಇಸ್ಲಾಂ ಮದ್ರಸ ಸಮಸ್ತ ಕೇರಳ ಸುನ್ನಿ ಬಾಲ ವೇದಿ (ಎಸ್‍ಕೆಎಸ್‍ಬಿ.ವಿ) ಇದರ 2018-19ನೇ ಸಾಲಿನ ಅಧ್ಯಕ್ಷರಾಗಿ ಮಹಮ್ಮದ್ ಫಝಲ್ ಕಾರ್ಯದರ್ಶಿಯಾಗಿ ಮಹಮ್ಮದ್ ಸುಹೈಲ್ ಹಾಗೂ ಕೋಶಾಧಿಕಾರಿಯಾಗಿ ಮಹಮ್ಮದ್ ರಾಫಿ ಆಯ್ಕೆ ಆಗಿದ್ದಾರೆ. ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಸೈಯ್ಯದ್ ಅನಸ್ ಹಾದಿ ತಂಙಳ್ ಅಲ್ ಅಝ್‍ಹರಿ ದುವಾಃದೊಂದಿಗೆ, ಮದ್ರಸದ ಸದರ್ ಮುಅಲ್ಲಿಂ ಮೂಸಾ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ, ರಫೀಕ್ ಮುಸ್ಲಿಯಾರ್, ಹಾರಿಸ್ ಗಂಡಿಬಾಗಿಲು ಉಪಸ್ಥಿತಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಯಕ್ಷರಾಗಿ

ಗಂಡಿಬಾಗಿಲು ಮದ್ರಸ ಎಸ್.ಕೆ.ಎಸ್.ಬಿ.ವಿ. ಮಹಾಸಭೆ ► ಅಧ್ಯಕ್ಷರಾಗಿ ಫಝಲ್, ಕಾರ್ಯದರ್ಶಿಯಾಗಿ ಮಹಮ್ಮದ್ ಸುಹೈಲ್ ಆಯ್ಕೆ Read More »

ಕರಾವಳಿ

ಬೆಳಂದೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ► ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಗ್ರಹ

ಕಡಬ: ಬೆಳಂದೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದೆಂಬ ಆಗ್ರಹ ಬೆಳಂದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯಲ್ಲಿ ವ್ಯಕ್ತವಾಯಿತು. ಕುದ್ಮಾರು, ಕಾೈಮಣ, ಬೆಳಂದೂರು ಗ್ರಾಮಗಳನ್ನೊಳಗೊಂಡ ಗ್ರಾಮ ಸಭೆಯು ಬೆಳಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮೇಶ್ವರಿ ಅಗಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಪಂಚಾಯಿತಿ ಉದ್ಯೋಗ ಖಾತರಿ ಸಹಾಯಕ ನಿರ್ದೇಶಕ ನವೀನ್ ಚರ್ಚಾನಿಯಂತ್ರಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಲೋಕನಾಥ್ ಬರೆಪ್ಪಾಡಿ ಮಾತನಾಡಿ, ಕುದ್ಮಾರಿನಲ್ಲಿ ಮದ್ಯದಂಗಡಿ ತೆರೆಯುವ ವದಂತಿ ಹಬ್ಬಿದೆ. ಇಲ್ಲಿ ಶಾಲೆ, ಅಂಗನವಾಡಿ ಕೆಂದ್ರ,

ಬೆಳಂದೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ► ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಗ್ರಹ Read More »

ಕರಾವಳಿ

ರಾಮಕುಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕಡಬ: ವಿದ್ಯಾರ್ಥಿಯ ಪ್ರಾಥಮಿಕ ಹಂತದಲ್ಲಿ ಪ್ರತಿಭೆಗಳನ್ನು ಕ್ರೋಡಿಕರಿಸಿ ಪ್ರೋತ್ಸಾಹ ನೀಡುವ ಸಲುವಾಗಿ ಪ್ರತಿಭಾ ಕಾರಂಜಿಯನ್ನು ಅಯೋಜಿಸಲಾಗುತ್ತದೆ. ಈ ಅವಕಾಶದಿಂದ ವಿದ್ಯಾರ್ಥಿಯ ಪ್ರತಿಭೆ ಹೊರಹೊಮ್ಮಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಯ ಸರ್ವೋತೊಮುಖ ಬೆಳೆವಣಿಗೆಯಲ್ಲಿ ಶಿಕ್ಷಕರ ಪೋಷಕರು ಪ್ರಮುಖ ಪಾತ್ರವಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ ಹೇಳಿದರು. ಅವರು ರಾಮಕುಂಜ ಗ್ರಾಮದ ರಾಮಕುಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ರಾಮಕುಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣ ಕೇವಲ ಪಠ್ಯ ವಿಷಯಕ್ಕೆ

ರಾಮಕುಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಕಡಬ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಆ.08. ಉಪ್ಪಿನಂಗಡಿ – ಕಡಬ ಸಂಪರ್ಕ ರಸ್ತೆಯ ಹೊಸ್ಮಠ ಮುಳುಗು ಸೇತುವೆಯು ಬುಧವಾರ ಬೆಳಿಗ್ಗೆಯಿಂದ ಮುಳುಗಡೆಗೊಂಡಿದ್ದು, ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಡಬ ಪರಿಸರದಲ್ಲಿ ಮಂಗಳವಾರ ರಾತ್ರಿಯಿಂದ ಎಡೆಬಿಡದೆ ಮಳೆ‌ ಸುರಿದಿದ್ದು, ಬುಧವಾರ ಬೆಳಿಗ್ಗೆ ಹೊಸ್ಮಠ ನದಿಯಲ್ಲಿ ನೀರಿನ ಪ್ರಮಾಣ ಅಧಿಕಗೊಂಡು ಸೇತುವೆಯ ಮೇಲೆ ಹರಿಯಲಾರಂಭಿಸಿದೆ. ಪರಿಣಾಮ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ತಡೆಯುಂಟಾಗಿದೆ. ಇದರಿಂದಾಗಿ ಉಪ್ಪಿನಂಗಡಿ ಹಾಗೂ ಕಡಬ ಕಡೆಗೆ ತೆರಳಬೇಕಿದ್ದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಪರದಾಡುವಂತಾಯಿತು.

ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಕಡಬ ಸಂಚಾರ ಸ್ಥಗಿತ Read More »

ಕರಾವಳಿ

ರಾಮಕುಂಜ: ಅಕ್ರಮ ಮರ ಸಾಗಾಟ ಪತ್ತೆ ► ಪಿಕಪ್ ಸಹಿತ ಮರ ವಶಕ್ಕೆ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಆ.07. ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಕಡಬ ಪೊಲೀಸರು ಪಿಕಪ್‌ ಸಹಿತ ಮರದ ತುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಎಎಸ್ಐ ಕೊರಗಪ್ಪ, ಹೆಡ್ ಕಾನ್ಸ್‌ಟೇಬಲ್ ಮೋಹನ ಹಾಗೂ ಸಿಬ್ಬಂದಿಗಳು ರಾಮಕುಂಜ ಪಂಚಾಯತ್ ಬಳಿ ಕಾಯುತ್ತಿದ್ಢಾಗ ಬಂದ ಪಿಕಪ್ ವಾಹನವನ್ನು ನಿಲ್ಲಿಸಲು ತಿಳಿಸಿದಾಗ ವಾಹನವನ್ನು ಸ್ವಲ್ಪ

ರಾಮಕುಂಜ: ಅಕ್ರಮ ಮರ ಸಾಗಾಟ ಪತ್ತೆ ► ಪಿಕಪ್ ಸಹಿತ ಮರ ವಶಕ್ಕೆ, ಇಬ್ಬರು ಪರಾರಿ Read More »

ಕರಾವಳಿ

ಸವಣೂರು ಅಂಚೆ ಪಾಲಕ ದಾಮೋದರ ಕೋಡಂದೂರು ನಿಧನ 

newskadaba.com ಸವಣೂರು : ಅಂಚೆ ಇಲಾಖೆಯ ಸವಣೂರು ಶಾಖೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಾರ್ವಾಕ ಗ್ರಾಮದ ಕೊಡಂದೂರು ದಾಮೋದರ (44) ರವಿವಾರ ಹೃದಯಾಘಾತದಿಂದ ನಿಧನರಾದರು. ಶನಿವಾರ ಎಂದಿನಂತೆ ಅಂಚೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ, ಮನೆಗೆ ಬಂದ ಅವರು ರಾತ್ರಿ ಊಟ ಮಾಡಿ ಮಲಗಿದ್ದರು. ರವಿವಾರ ಬೆಳಿಗ್ಗೆ ಎದ್ದೇಳದೇ ಇದ್ದಾಗ ಮನೆಯವರು ಎಬ್ಬಿಸಲು ಪ್ರಯತ್ನಿದ್ದು, ಈ ವೇಳೆ ದಾಮೋದರ್ ಮೃತಪಟ್ಟಿರುವುದಾಗಿ ಮೃತರ ಸಹೋದರ ರಾಘವ ಕಡಬ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ,

ಸವಣೂರು ಅಂಚೆ ಪಾಲಕ ದಾಮೋದರ ಕೋಡಂದೂರು ನಿಧನ  Read More »

ಕರಾವಳಿ

ಚೆನ್ನಾವರ : ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ

Newskadaba.com ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ — ಮುಹಿಯುದ್ದೀನ್ ಜುಮಾ ಮಸೀದಿ ಕಿದ್ಮತುಲ್ ಇಸ್ಲಾಮ್ ಜಮಾಅತ್ ಕಮಿಟಿ ವತಿಯಿಂದ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಬೀಳ್ಕೋಡುವ ಕಾರ್ಯಕ್ರಮ ನಡೆಯಿತು. ಜಮಾಅತ್ ಕಮಿಟಿಯ ಅಧ್ಯಕ್ಷ ಸಿಎ ಕರೀಮ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಖತೀಬ್ ಉಸ್ತಾದ್ ಅಬ್ದುಲ್ಲ ಅಹ್ಸನಿ ಮಾಡನ್ನೂರು ರವರು ಉದ್ಘಾಟಿಸಿದರು. ಈ ಸಂದರ್ಭ ಹಜ್ ಯಾತ್ರೆ ಕೈಗೊಳ್ಳಲಿರುವ ಚೆನ್ನಾವರ ಮುಹಿಯ್ಯದ್ದಿನ್ ಜುಮಾ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷ ಸಿಪಿ ಅಬೂಬಕರ್ ಮದನಿ

ಚೆನ್ನಾವರ : ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ Read More »

ಕರಾವಳಿ

ಸವಣೂರು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Newskadaba.com ಸವಣೂರು: ಸವಣೂರಿನ ಸಮಗ್ರ ಅಭಿವೃದ್ದಿಯ ದೃಷ್ಟಿಯನ್ನು ಇಟ್ಟುಕೊಂಡು ತಂದೆ ಶೀಂಟೂರು ನಾರಾಯಣ ರೈ ಅವರ ಪ್ರೇರಣೆಯಂತೆ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲಾಗಿದೆ.ಈ ಮೂಲಕ ಗ್ರಾಮೀಣಪ್ರದೇಶದಲ್ಲೂ ಉನ್ನತ ಶಿಕ್ಷಣ ನೀಡುವ ಪ್ರಯತ್ನ ವಿದ್ಯಾಸಂಸ್ಥೆಗಳಿಂದ ಆಗುತ್ತಿದೆ.ಒಟ್ಟಿನಲ್ಲಿ ಸವಣೂರಿನ ಸಮಗ್ರ ಅಭಿವೃದ್ಧಿ ಯೇ ಮುಖ್ಯ ಗುರಿ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು. ಅವರು ಎಸ್.ಎನ್.ಆರ್.ರೂರಲ್ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾ ಚೇತನ ಸಭಾಂಗಣದಲ್ಲಿ ನಡೆದ

ಸವಣೂರು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »

ಕರಾವಳಿ
Scroll to Top