ಕರಾವಳಿ

ಕಡಬ: ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಬೃಹತ್ ಮರ

(ನ್ಯೂಸ್ ಕಡಬ) newskadaba.com ಕಡಬ, ಆ.03. ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದು ರಿಕ್ಷಾ ಜಖಂಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಕಡಬ ಸಮೀಪದ ಮುಳಿಮಜಲು ಎಂಬಲ್ಲಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ಮುಳಿಮಜಲು ಸಮೀಪದ ಕೊಳಂಬೆತಡ್ಡ ನಿವಾಸಿ ಜಗನ್ನಾಥ್ ಎಂಬವರು ತನ್ನ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟು ಕಡಬ ಕಡೆಗೆ ತೆರಳುತ್ತಿದ್ದಾಗ ಬೃಹತ್ ಗಾತ್ರದ ಮರವೊಂದು ರಿಕ್ಷಾದ ಮೇಲೆ ಬಿದ್ದು ರಿಕ್ಷಾದ ಮುಂಭಾಗ ಜಖಂಗೊಂಡಿದೆ. ಚಾಲಕ ಜಗನ್ನಾಥ್ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕಡಬ: ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಬೃಹತ್ ಮರ Read More »

ಕರಾವಳಿ

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.03. ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿ ಗ್ರಾಮದ ಇರ್ದೆಎಂಬಲ್ಲಿ ಶುಕ್ರವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಬೆಟ್ಟಂಪಾಡಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ, ಇರ್ದೆ ಜೋಗಿಮೂಲೆ ನಿವಾಸಿ ರಮಣ್(15) ಎಂದು ಗುರುತಿಸಲಾಗಿದೆ. ಈತನು ತನ್ನ ಮನೆಯ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದು, ಶುಕ್ರವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ಮುಲ್ಕಿ: ಐದು ವರ್ಷದ ಮಗುವನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮುಲ್ಕಿ, ಆ.03. ತನ್ನ ಐದು ವರ್ಷದ ಮಗುವನ್ನು ಬಾವಿಗೆ ತಳ್ಳಿ ತದನಂತರ ಬಾವಿಗೆ ಹಾರಿದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿಯಲ್ಲಿ ಗುರುವಾರದಂದು ನಡೆದಿದೆ. ಮುಲ್ಕಿ ಗೇರುಕಟ್ಟೆ ಜ್ಯೂನಿಯರ್ ಕಾಲೇಜು ಬಳಿಯ ನಿವಾಸಿ ಸುಧಾಕರ ಎಂಬವರ ಪತ್ನಿ ಸುಜಾತಾ(48) ಹಾಗೂ ಮಗಳು ಕೃತಿಕಾ(5) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಗುರುವಾರದಂದು ತಾಯಿ, ಮಗಳು ಮನೆಯಿಂದ ಕಾಣೆಯಾಗಿದ್ದು, ಈ ಬಗ್ಗೆ ಹುಡುಕಾಡಿದಾಗ ಸುಜಾತಾ ಹಾಗೂ ಕೃತಿಕಾರ ಮೃತದೇಹಗಳು ಮನೆಯ ಬಾವಿಯಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಮಗುವನ್ನು ಬಾವಿಗೆ ತಳ್ಳಿ

ಮುಲ್ಕಿ: ಐದು ವರ್ಷದ ಮಗುವನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ Read More »

ಕರಾವಳಿ

ಹಣಕಾಸಿನ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪ ► ಪುತ್ತೂರು ಮತ್ತು ಬಂಟ್ವಾಳ ಕೆಎಸ್ಸಾರ್ಟಿಸಿ ಡಿಪೋಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ಪುತ್ತೂರು ಮತ್ತು ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಹಣಕಾಸಿನ ಅವ್ಯವಹಾರ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಮಂಗಳೂರು ಎಸಿಬಿ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದಾರೆ. ಕೆಎಸ್ಸಾರ್ಟಿಸಿ ಸಿಬ್ಬಂದಿಯೊಬ್ಬರ ದೂರಿನ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಕೈಕಂಬ ಸಮೀಪದಲ್ಲಿ ಕಾರ್ಯಾಚರಿಸುತ್ತಿರುವ ಕೆಎಸ್ಸಾರ್ಟಿಸಿ ಡಿಪೋ ಹಾಗೂ ಪುತ್ತೂರಿನ ಕೆಎಸ್ಸಾರ್ಟಿಸಿ ಡಿಪೋಗಳಿಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಹಣಕಾಸಿನ ಅವ್ಯವಹಾರದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು

ಹಣಕಾಸಿನ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪ ► ಪುತ್ತೂರು ಮತ್ತು ಬಂಟ್ವಾಳ ಕೆಎಸ್ಸಾರ್ಟಿಸಿ ಡಿಪೋಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು Read More »

ಕರಾವಳಿ

ಮಂಗಳೂರು ಮತ್ತು ಕಡಬ ವಲಯ ಪರಿವಾರ ಬಂಟರ ಸಂಘ ► ಬೀರಂತಡ್ಕದಲ್ಲಿ ಆಟಿ ಆಚರಣೆ ಹಾಗೂ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕುಂತೂರು ಪದವಿನ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ಶ್ರೀ ರಾಜನ್ ದೈವಸ್ಥಾನದ ವಠಾರದಲ್ಲಿ ಮಂಗಳೂರು ಪರಿವಾರ ಬಂಟರ ಸಂಘ, ಕಡಬ ವಲಯ ಪರಿವಾರ ಬಂಟರ ಸಂಘ ಹಾಗೂ ಮಹಿಳಾ ಪರಿವಾರ ಬಂಟರ ಸಂಘದ ವತಿಯಿಂದ ಜು.29ರಂದು ಆಟಿ ಆಚರಣಾ ಕಾರ್ಯಕ್ರಮ ಮತ್ತು ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮವನ್ನು ಪರಿವಾರ ಬಂಟರ ಹಿರಿಯರಾದ ಸೀತಾ ಆರ್.ನಾೈಕ್ ಬೀರಂತಡ್ಕರವರು ದೀಪ ಪ್ರಜ್ವಲನಗೊಳಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿ.ಪರಿಷತ್ ಮಾಜಿ ಸದಸ್ಯ ಸಯ್ಯದ್

ಮಂಗಳೂರು ಮತ್ತು ಕಡಬ ವಲಯ ಪರಿವಾರ ಬಂಟರ ಸಂಘ ► ಬೀರಂತಡ್ಕದಲ್ಲಿ ಆಟಿ ಆಚರಣೆ ಹಾಗೂ ಕ್ರೀಡಾಕೂಟ Read More »

ಕರಾವಳಿ

ವಿಕಲ ಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,‌ ಆ.02. 2018-19ನೇ ಸಾಲಿನಲ್ಲಿ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಯಂತ್ರಚಾಲಿತ ದ್ವಿಚಕ್ರವಾಹನ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ಬುದ್ದಿಮಾಂದ್ಯ ವ್ಯಕ್ತಿಗಳ ತಂದೆ-ತಾಯಿ/ಪೋಷಕರ

ವಿಕಲ ಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ಆರೋಪ ► ಉಬರಡ್ಕ-ಮಿತ್ತೂರು ಗ್ರಾ.ಪಂ. ಅಧ್ಯಕ್ಷ, ಪಿ.ಡಿ.ಓ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕ-ಮಿತ್ತೂರು ಗ್ರಾಮ ಪಂಚಾಯತ್‍ನಲ್ಲಿ 2015-16ನೇ ಸಾಲಿನಲ್ಲಿ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಆದ ದುರುಪಯೋಗದ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರವೀಣ್ ಕುಮಾರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಸಂಪೂರ್ಣ ಸ್ವಚ್ಛತಾ ಆಂದೋಲನದ ನೋಡಲ್ ಅಧಿಕಾರಿಯಾಗಿದ್ದ ರೋಹಿತ್ ಎ.ಆರ್. ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ದ.ಕ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ 7

ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ಆರೋಪ ► ಉಬರಡ್ಕ-ಮಿತ್ತೂರು ಗ್ರಾ.ಪಂ. ಅಧ್ಯಕ್ಷ, ಪಿ.ಡಿ.ಓ ವಿರುದ್ಧ ಕೇಸು ದಾಖಲು Read More »

ಕರಾವಳಿ

ಕೊೈಲ: ‘ನಮ್ಮ ರಸ್ತೆ – ನಮ್ಮ ಹಕ್ಕು’ ಸಮಿತಿ ರಚನೆ ► ಅಧ್ಯಕ್ಷರಾಗಿ ಯತೀಶ್ ಪುತ್ಯ, ಕಾರ್ಯದರ್ಶಿಯಾಗಿ ಮಹೇಶ್ ಆಯ್ಕೆ

(ನ್ಯೂಸ್ ಕಡಬ) newskadaba.com  ಕಡಬ, ಆ.01. ವಾಹನ ಸಂಚಾರಕ್ಕೆ ಮತ್ತು ನಡೆದಾಡಲೂ ಯೋಗ್ಯವಲ್ಲದ ರೀತಿಯಲ್ಲಿ ನಾದುರಸ್ಥಿ ಹೊಂದಿರುವ ಕೊೈಲ ಪಶು ಸಂಗೋಪನಾ ಇಲಾಖಾ ಅಧೀನದಲ್ಲಿರುವ ಸಾರ್ವಜನಿಕ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಮತ್ತು ರಸ್ತೆಯನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಗ್ರಾಮ ಪಂಚಾಯಿತಿ ಸುಪರ್ದಿಗೆ ಬಿಟ್ಟು ಕೊಡಬೇಕು ಎಂಬ ಆಗ್ರಹ ಮತ್ತು ಹೋರಾಟದ ಉದ್ದೇಶದೊಂದಿಗೆ ರಚಿಸಲ್ಪಟ್ಟ ಕೊೈಲ “ನಮ್ಮ ರಸ್ತೆ ನಮ್ಮ ಹಕ್ಕು” ಸಮಿತಿಯ ಅಧ್ಯಕ್ಷರಾಗಿ ಯತೀಶ್ ಪುತ್ಯೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ಪೊಸಲಕ್ಕೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ವೀರಪ್ಪ ದಾಸಯ್ಯ, ,

ಕೊೈಲ: ‘ನಮ್ಮ ರಸ್ತೆ – ನಮ್ಮ ಹಕ್ಕು’ ಸಮಿತಿ ರಚನೆ ► ಅಧ್ಯಕ್ಷರಾಗಿ ಯತೀಶ್ ಪುತ್ಯ, ಕಾರ್ಯದರ್ಶಿಯಾಗಿ ಮಹೇಶ್ ಆಯ್ಕೆ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. ವತಿಯಿಂದ ರಾಜ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಕೆ

(ನ್ಯೂಸ್ ಕಡಬ) newskadaba.com ಕಡಬ, 01. ನೂಜಿಬಾಳ್ತಿಲ ಗ್ರಾ.ಪಂ.ವತಿಯಿಂದ ಜು.30ರಂದು ಪೆರಿಯಶಾಂತಿ – ಮರ್ದಾಳ ರಾಜ್ಯ ಹೆದ್ದಾರಿಯಲ್ಲಿರುವ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ಮುಂಭಾಗ ಗೋಳಿಯಡ್ಕ ಜಂಕ್ಷನ್, ಪೇರಡ್ಕ, ಸಾನ್‍ತೋಮ್ ಶಾಲಾ ಮುಂಭಾಗ ಜಂಕ್ಷನ್‍ನಲ್ಲಿ ಬ್ಯಾರಿಕೇಡ್ ಅಳವಡಿಸಲಾಯಿತು. ಬ್ಯಾರಿಕೇಡ್ ಉದ್ಘಾಟಿಸಿ ಮಾತನಾಡಿದ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್‍ರವರು ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಾಗಿರುವ ಈ ರಸ್ತೆಯಲ್ಲಿ ವಿವಿಧ ರಾಜ್ಯಾದಂತ ಸಾಲು ಸಾಲಾಗಿ ನಿರಂತರ ವಾಹನಗಳು ಪುಣ್ಯಕ್ಷೇತ್ರಗಳಿಗೆ ಸಂದರ್ಶನಕ್ಕಾಗಿ ಬರುತ್ತಿರುವುದಲ್ಲದೆ ಈ ಭಾಗದಲ್ಲಿರುವ ಹಲವಾರು ಧರ್ಮ ದೇಗುಲಗಳು, ಪ್ರಾರ್ಥನಾ ಮಂದಿರಗಳು,

ನೂಜಿಬಾಳ್ತಿಲ ಗ್ರಾ.ಪಂ. ವತಿಯಿಂದ ರಾಜ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಕೆ Read More »

ಕರಾವಳಿ

ರಾಮಕುಂಜ ಪ್ರೌಢಶಾಲೆಯಲ್ಲಿ ವನಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.01. ಶ್ರೀ ರಾಮಕುಂಜೇಶ್ವರ ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆ, ಪುತ್ತೂರು ರೋಟರಿ (ಸಿಟಿ) ಜಂಟಿ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಕಾಲೇಜು ಆವರಣದಲ್ಲಿ ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸತೀಶ್ ಭಟ್, ರೋಟರಿ ಸಂಸ್ಥೆಯ ಮನೋಹರ್, ಅಮಿತಾ ಶಟ್ಟಿ, ಲೋರೆನ್ಸ್ ಗೋಂಜಾಲ್ ವೆನ್ಸ್, ದರ್ಣಪ್ಪ ಗೌಡ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು. ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರು ಪ್ರಾಸ್ತಾವಿಸಿದರು. ವಿದ್ಯಾರ್ಥಿಗಳಾದ

ರಾಮಕುಂಜ ಪ್ರೌಢಶಾಲೆಯಲ್ಲಿ ವನಮಹೋತ್ಸವ Read More »

ಕರಾವಳಿ
Scroll to Top