ಕರಾವಳಿ

ಬೆಳ್ತಂಗಡಿ: ನಿಗೂಢವಾಗಿ ಕಣ್ಮರೆಯಾದ ವ್ಯಕ್ತಿ

(ನ್ಯೂಸ್‌ ಕಡಬ) newskadaba.com,ಜ.29  ಬೆಳ್ತಂಗಡಿ: ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36) ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು, ಪಿಕಪ್ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಬೆಂಗಳೂರಿನಲ್ಲಿದ್ದ ತಮ್ಮ ಪತ್ನಿಗೆ ಕರೆ ಮಾಡಿದ್ದ ರೋಶನ್, ಜನವರಿ 25 ರಂದು ತಾವು ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದರು. ಅದರಂತೆ ಅಂದು ಬೆಳಿಗ್ಗೆ ಬೆಂಗಳೂರಿಗೆ […]

ಬೆಳ್ತಂಗಡಿ: ನಿಗೂಢವಾಗಿ ಕಣ್ಮರೆಯಾದ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ದುರ್ಮರಣ

(ನ್ಯೂಸ್‌ ಕಡಬ) newskadaba.com,ಜ.29  ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಕೊಕ್ಕರಕಲ್ ಎಂಬಲ್ಲಿ ನಡೆದಿದೆ…..ಮೃತರನ್ನು ಚಿತ್ರಾಪು ಮರ್ಕುಂಜ ನಿವಾಸಿ ವನಜಾ ಪುರುಷೋತ್ತಮ ಪೂಜಾರಿ (59) ಎಂದು ಗುರುತಿಸಲಾಗಿದೆ. ವನಜಾ ಅವರು ಜೆಸಿಂತಾ ಮಚಾದೊ ಎಂಬವರ ಜೊತೆ ಕೊಕ್ಕರಕಲ್ ಸಮೀಪವಿರುವ ಹಾಲು ಸೊಸೈಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐವರ್ನಾಡು : ಕೃಷಿ ತೋಟಕ್ಕೆ ಕಾಡಾನೆ ಧಾಳಿ – ಅಪಾರ ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,ಜ.29  ಸುಳ್ಯ:ಐವರ್ನಾಡು ಗ್ರಾಮದ ಉದ್ದಂಪಾಡಿ ಎಂಬಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆ ಧಾಳಿ ಮಾಡಿ ಅಪಾರ ಕೃಷಿ ನಾಶ ಪಡಿಸಿದ ಘಟನೆ ನಡೆದಿದೆ. ಉದ್ದಂಪಾಡಿ ಹೊನ್ನಪ್ಪ ನಾಯ್ಕ್ ಮತ್ತು ಕರುಣಾಕರ ನಾಯ್ಕ್ ಎಂಬವರ ಕೃಷಿ ತೋಟಕ್ಕೆ ಭಾನುವಾರ ರಾತ್ರಿ ಆನೆಗಳು ಧಾಳಿ ಮಾಡಿ ಅಪಾರ ಕೃಷಿ ನಾಶಮಾಡಿದೆ. ಅಡಕೆ ಗಿಡ, ಬಾಳೆ ,ತೆಂಗಿನ ಗಿಡಗಳನ್ನು ಪುಡಿಗಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಐವರ್ನಾಡು : ಕೃಷಿ ತೋಟಕ್ಕೆ ಕಾಡಾನೆ ಧಾಳಿ – ಅಪಾರ ಕೃಷಿ ನಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೈವಗಳ ಮೂರ್ತಿಗಳು, ಬೆಲೆಬಾಳುವ ವಸ್ತುಗಳ ಕಳವು ಆರೋಪ- ಇಬ್ಬರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಜ.29  ಮಂಗಳೂರು: ಕುಳಾಯಿ ಗ್ರಾಮದ ಬೀಗ ಹಾಕಿದ ಮನೆಯಿಂದ ದೈವದ ಮೂರ್ತಿಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಮಾರು 1.95 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಸೈಯದ್ ಅಲಿ (40), ಬಜ್ಪೆ ನಿವಾಸಿ ವಾಜಿದ್ ಜೆ ಅಲಿಯಾಸ್ ವಾಜಿ (27) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಕುಳಾಯಿ ಗ್ರಾಮದ ಯಶೋದಾ ಕ್ಲಿನಿಕ್ ಬಳಿಯ ನಿವಾಸಿ ಸುರೇಶ್ ಅವರ ಪತ್ನಿ ಅಮಿತಾ

ದೈವಗಳ ಮೂರ್ತಿಗಳು, ಬೆಲೆಬಾಳುವ ವಸ್ತುಗಳ ಕಳವು ಆರೋಪ- ಇಬ್ಬರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.29:  ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಟ್ಟಾಯಂ ಕಾರು ಅಪಘಾತದಲ್ಲಿ ಸುರತ್ಕಲ್ ಯುವಕ ಸಾವು, 4 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,ಜ.28  ಕೊಟ್ಟಾಯಂ: ಕೇರಳದ ಕೊಟ್ಟಾಯಂನಲ್ಲಿ ಬುಧವಾರ ನಡೆದ ಕಾರು ಅಪಘಾತದಲ್ಲಿ ಸುರತ್ಕಲ್‌ನ ಕಾನಾದ ಯುವಕನೊಬ್ಬ ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ.ಮೃತ ವ್ಯಕ್ತಿಯನ್ನು ಮುಲ್ಕಿ ತಾಲ್ಲೂಕಿನ ಅಂಗರಗುಡ್ಡೆ ಮೂಲದ ಶಾನವಾಜ್ ಅಲಿಯಾಸ್ ಶಮೀಮ್ (26) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕಾನಾದ ಚಿರಾಗ್ ಫ್ಲಾಟ್ಸ್‌ನಲ್ಲಿ ವಾಸಿಸುತ್ತಿದ್ದರು. ಶಮೀಮ್ ಮತ್ತು ಇತರ ನಾಲ್ವರು ಕೊಟ್ಟಾಯಂನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕಾಗಿ ಬೌನ್ಸರ್‌ಗಳಾಗಿ ಹೋಗಿದ್ದರು ಎಂದು ತಿಳಿದುಬಂದಿದೆ. ಬುಧವಾರ ಬೆಳಿಗ್ಗೆ, ಅವರು ಉಪಾಹಾರ ಸೇವಿಸಲು ಪಟ್ಟಣದ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಅಪಘಾತ ಸಂಭವಿಸಿದೆ.

ಕೊಟ್ಟಾಯಂ ಕಾರು ಅಪಘಾತದಲ್ಲಿ ಸುರತ್ಕಲ್ ಯುವಕ ಸಾವು, 4 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಕೋಡಿಬೆಂಗ್ರೆಯಲ್ಲಿ ಘೋರ ದುರಂತ ಪ್ರವಾಸಿ ದೋಣಿ ಪಲ್ಟಿಯಾಗಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

  (ನ್ಯೂಸ್‌ ಕಡಬ) newskadaba.com,ಜ.28  ಕೋಡಿಬೆಂಗ್ರೆಯಲ್ಲಿ ಪ್ರವಾಸಿ ದೋಣಿ ಮುಳುಗಿದ ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.ಮೃತರನ್ನು ಮೈಸೂರು ನಿವಾಸಿ ದಿಶಾ (23) ಎಂದು ಗುರುತಿಸಲಾಗಿದೆ. ಜನವರಿ 26 ರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಮೈಸೂರಿನಿಂದ ಕೋಡಿಬೆಂಗ್ರೆಗೆ ರಜೆಯ ಮೇಲೆ ಬಂದಿದ್ದ ಯುವಕರ ಗುಂಪೊಂದು ಪ್ರಯಾಣಿಸುತ್ತಿದ್ದ ಪ್ರವಾಸಿ ದೋಣಿ ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅದೇ ದಿನ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.

ಉಡುಪಿಯ ಕೋಡಿಬೆಂಗ್ರೆಯಲ್ಲಿ ಘೋರ ದುರಂತ ಪ್ರವಾಸಿ ದೋಣಿ ಪಲ್ಟಿಯಾಗಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ!

  (ನ್ಯೂಸ್‌ ಕಡಬ) newskadaba.com,ಜ.28 : ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಮತ್ತು ನೋಟ್‌ಬುಕ್‌ಗಳು ದೊರೆಯಲಿವೆ ಎಂದು ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಆರಂಭದಲ್ಲಿ 500 ಕೆಪಿಎಸ್ ಶಾಲೆಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು.”ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು, ಸರ್ಕಾರವು ಈಗ ಒಟ್ಟು 3,500 ಕೋಟಿ ರೂ. ವೆಚ್ಚದಲ್ಲಿ 900 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿದೆ”

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,ಜ.28 ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳಾದ ಪೂತ್ತೂರಿನ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) , ಬಂಟ್ವಾಳ ನಿವಾಸಿ ಮುಸ್ತಾಫ (46) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ,

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.28: ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top