ಕರಾವಳಿ

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜು.27. ಅಶೋಕ್ ಲೈಲಾಂಡ್ ದೋಸ್ತ್ ವಾಹನದಲ್ಲಿ ಹಿಂಸಾತ್ಮಕವಾಗಿ 4 ದನಗಳು ಮತ್ತು ಒಂದು ಕರುವನ್ನು ಅಕ್ರಮ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ವಿಟ್ಲ ಪೊಲೀಸರು ಭಜರಂಗದಳದ ಕಾರ್ಯಕರ್ತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಟ್ಲ ಪಡ್ನೂರು ಗ್ರಾಮ ಪಡಾರು ನಿವಾಸಿ ಕೃಷ್ಣ ಭಟ್ ಎಂಬವರ ಪುತ್ರ ಶಶಿ ಕುಮಾರ್(48) ಹಾಗೂ ಕೊಲ್ನಾಡು ಗ್ರಾಮದ ಮಣ್ಣಗದ್ದೆ ಕಟ್ಟತ್ತಿಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ಹಾರಿಸ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಅಶೋಕ್ […]

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ

ಮರ್ಧಾಳ: ಬೈಕಿಗೆ ಬಸ್ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜು.27. ಬೈಕಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ. ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿಗೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಬಂಟ್ರ ಗ್ರಾಮದ ನೈತಿನಡ್ಕ ನಿವಾಸಿ ರತ್ನಾಕರರವರ ಕೈ ಹಾಗೂ ಕಾಲಿಗೆ ಗಾಯಗಳಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ರಸ್ತೆ ಬದಿಯಲ್ಲಿ

ಮರ್ಧಾಳ: ಬೈಕಿಗೆ ಬಸ್ ಢಿಕ್ಕಿ ► ಸವಾರನಿಗೆ ಗಾಯ Read More »

ಕರಾವಳಿ

ಕಬಕ: ಮಾರುತಿ ಓಮ್ನಿ – ಆಟೋರಿಕ್ಷಾ ಢಿಕ್ಕಿ ► ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜು.25. ಮಾರುತಿ ಒಮ್ನಿ ಮತ್ತು ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಕಬಕದಲ್ಲಿ ಬುಧವಾರದಂದು ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಸೇಡಿಯಾಪು ನಿವಾಸಿ ಪುರಂದರ ಎಂದು ಗುರುತಿಸಲಾಗಿದೆ. ಮಾಣಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದಾಗ ಕಬಕ ಸಮೀಪ ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪುರಂದರ ರವರ ಪುತ್ರ ಹಾಗೂ ಪ್ರಯಾಣಿಕರೋರ್ವರು

ಕಬಕ: ಮಾರುತಿ ಓಮ್ನಿ – ಆಟೋರಿಕ್ಷಾ ಢಿಕ್ಕಿ ► ಓರ್ವ ಮೃತ್ಯು Read More »

ಕರಾವಳಿ

ಕೋಡಿಂಬಾಳ: ನೀರಿಗೆ ಬಿದ್ದು ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.24. ವೃದ್ಧೆಯೋರ್ವರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಕೋಡಿಂಬಾಳದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಕೋಡಿಂಬಾಳ ಗ್ರಾಮದ ದಾಸಗುಡ್ಡೆ ನಿವಾಸಿ ಅಣ್ಣಿ ಮಡಿವಾಳ ಎಂಬವರ ಪತ್ನಿ ಸೀತಾ(70) ಎಂದು ಗುರುತಿಸಲಾಗಿದೆ. ಈಕೆ ಹುಲ್ಲು ತರಲೆಂದು ಸೋಮವಾರ ಮಧ್ಯಾಹ್ನ ತೋಟಕ್ಕೆ ತೆರಳಿದ್ದು ವಾಪಾಸ್ಸು ಮನೆಗೆ ಬರದ ಕಾರಣ ಹುಡುಕಾಡಿದಾಗ ಕೋಡಿಂಬಾಳ ಗ್ರಾಮದ ಬರೆಂಗಾಯಿ ಎಂಬಲ್ಲಿ ಕೊಪ್ಪ ತೋಡಿನಲ್ಲಿ ನೀರಿನಲ್ಲಿ ಪೊದರುಗಳ ಮಧ್ಯೆ ಸಿಕ್ಕಿಹಾಕಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಈ ಬಗ್ಗೆ

ಕೋಡಿಂಬಾಳ: ನೀರಿಗೆ ಬಿದ್ದು ವೃದ್ಧೆ ಮೃತ್ಯು Read More »

ಕರಾವಳಿ

ಕೊಕ್ಕಡ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.24. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಮಂಗಳವಾರದಂದು ಪತ್ತೆಯಾಗಿದೆ. ಕೊಕ್ಕಡದಿಂದ ಶಿಬಾಜೆ ಕ್ರಾಸ್ ನ ಕಾಪಿನಬಾಗಿಲು ಜಂಕ್ಷನ್ ನಲ್ಲಿ ಕಸದ ರಾಶಿಯಲ್ಲಿ ಮೃತದೇಹವಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಸ್ಥಳಕ್ಕೆ ತೆರಳಿದ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಮಾರು 35 ರಿಂದ 40 ವರ್ಷ ಪ್ರಾಯದ ಗಂಡಸಿನ‌ ಮೃತದೇಹ ಇದಾಗಿದ್ದು, ಮೃತಪಟ್ಟು ಎರಡ್ಮೂರು ದಿನಗಳಾಗಿರಬಹುದೆಂದು ಅಂದಾಜಿಸಲಾಗಿದೆ. ಹೆಚ್ಚಿನ

ಕೊಕ್ಕಡ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ಕಡಬ ಪೊಲೀಸ್ ಠಾಣೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

(ನ್ಯೂಸ್ ಕಡಬ) newskadaba.com ಕಡಬ, ಜು.25. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಕಡಬ ಆರಕ್ಷಕ ಠಾಣೆಯ ವತಿಯಿಂದ ಜೇಸಿಐ ಕಡಬ ಕದಂಬ, ಕದಂಬ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಂಗಮ ಟೂರಿಸ್ಟ್ ಜೀಪು ಚಾಲಕ ಮಾಲಕರ ಸಂಘದ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹವು ಸೋಮವಾರದಂದು ಕಡಬದಲ್ಲಿ ನಡೆಯಿತು. ಕಡಬ ಪೇಟೆಯಲ್ಲಿ ಮೆರವಣಿಗೆ ನಡೆದ ಬಳಿಕ ಕಡಬ ಠಾಣೆಯಲ್ಲಿ ಉಪ ನಿರೀಕ್ಷಕರಾದ ಪ್ರಕಾಶ್ ದೇವಾಡಿಗರವರು ರಸ್ತೆ ಸುರಕ್ಷತೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ ಸುರಕ್ಷತಾ ವಿಧಾನಗಳ

ಕಡಬ ಪೊಲೀಸ್ ಠಾಣೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ Read More »

ಕರಾವಳಿ

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಸವಣೂರಿನಲ್ಲಿ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಮಂಗಳವಾರದಂದು ನಡೆಯಲಿದೆ. ಪುತ್ತೂರು ಸಹಾಯಕ ಆಯುಕ್ತ ಕೃಷ್ಣ ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ವಹಿಸಲಿದ್ದಾರೆ. ಮಂಗಳೂರು ಉದಯವಾಣಿ ದಿನಪತ್ರಿಕೆಯ ಬ್ಯೂರೋ ಚೀಪ್ ಮನೋಹರ ಪ್ರಸಾದ್ ಪ್ರಧಾನ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ, ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಸವಣೂರಿನಲ್ಲಿ ಪತ್ರಿಕಾ ದಿನಾಚರಣೆ Read More »

ಕರಾವಳಿ

ಕೋಡಿಂಬಾಳದ ವ್ಯಕ್ತಿ ಮಂಗಳೂರಿನಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.24. ಕೋಡಿಂಬಾಳ ಗ್ರಾಮದ ಗುಂಡಿಮಜಲು ಎಂಬಲ್ಲಿ ವಾಸ್ತವ್ಯವಿರುವ ಪುರುಷೋತ್ತಮ(48ವ) ಮಂಗಳೂರಿನ ದಕ್ಕೆಯಲ್ಲಿ ಮೃತಪಟ್ಟಿದ್ದು ಜು.21ರಂದು ಮೃತದೇಹದ ಪತ್ತೆಯಾಗಿ ಕೋಡಿಂಬಾಳದ ಸ್ವಗೃಹದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಮೃತರು ಸುಳ್ಯ ತಾಲೂಕಿನ ಪೈಚಾರ್ ಬಳಿ ಕಾಟೂರು ಎಂಬಲ್ಲಿರುವ ಮಾಯಿಲಪ್ಪ ಗೌಡರ ಪುತ್ರರಾಗಿದ್ದು ಕಳೆದ ಹತ್ತೊಂಬತ್ತು ವರ್ಷಗಳಿಂದ ಕೋಡಿಂಬಾಳದ ಗುಂಡಿಮಜಲಿನಲ್ಲಿ ವಾಸ್ತವ್ಯವಿದ್ದು, ಚಾಲಕ ವೃತ್ತಿಯವರಾಗಿದ್ದು ಕಳೆದ ಕೆಲವು ವರ್ಷಗಳ ಹಿಂದೆ ಮಂಗಳೂರಿನ ಬಂದರು ದಕ್ಕೆಯಲ್ಲಿ ಕಾವೇರಿ ಕಂಪೆನಿಯಲ್ಲಿ ಭರತ್ ಭೂಷನ್ ಎಂಬವರ ಮಾಲಕತ್ವದ ಮೀನಿನ ಲಾರಿಯಲ್ಲಿ ಚಾಲಕನಾಗಿ

ಕೋಡಿಂಬಾಳದ ವ್ಯಕ್ತಿ ಮಂಗಳೂರಿನಲ್ಲಿ ಮೃತ್ಯು Read More »

ಕರಾವಳಿ

ಕೋಡಿಂಬಾಳದ ಮೂರಾಜೆ ಕೊಪ್ಪ ಶಾಲೆಯ ಛಾವಣಿ ಬಿರುಕು ► ಆತಂಕದಲ್ಲಿ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜು.23. ಕೋಡಿಂಬಾಳ ಗ್ರಾಮದ ಮೂರಾಜೆ ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆ ಹಾಗೂ ಛಾವಣಿಯಲ್ಲಿ ಬಿರುಕು ಕಂಡುಬಂದಿರುವ ಕಾರಣದಿಂದಾಗಿ ಶಾಲಾ ವಿದ್ಯಾರ್ಥಿಗಳು ಆತಂಕದಿಂದಲೇ ತರಗತಿ ಕೊಠಡಿಯಲ್ಲಿ ಕುಳಿತು ಪಾಠ ಕೇಳುವಂತಹ ಅತಂತ್ರ ಸ್ಥಿತಿ ಅನುಭವಿಸುತ್ತಿದ್ದಾರೆ. ಸುಮಾರು 40 ವಿದ್ಯಾರ್ಥಿಗಳಿರುವ ಮೂರಾಜೆ ಕೊಪ್ಪ ಶಾಲೆ ಆರಂಭಗೊಂಡು ಕೇವಲ 15 ವರ್ಷಗಳಷ್ಟೇ ಆಗಿದೆ. ಸುಮಾರು 13 ವರ್ಷಗಳ ಹಿಂದೆ ಶಾಲೆಗೆ ಕಟ್ಟಡ ನಿರ್ಮಾಣಗೊಂಡಿದೆ. 2 ತರಗತಿ ಕೊಠಡಿಗಳು ಹಾಗೂ 1 ಕಚೇರಿ ಕೊಠಡಿ

ಕೋಡಿಂಬಾಳದ ಮೂರಾಜೆ ಕೊಪ್ಪ ಶಾಲೆಯ ಛಾವಣಿ ಬಿರುಕು ► ಆತಂಕದಲ್ಲಿ ವಿದ್ಯಾರ್ಥಿಗಳು Read More »

ಕರಾವಳಿ

ಕೈಕಂಬ: ನದಿ ತಟದಲ್ಲಿ ಬಿದ್ದಿದ್ದ ವೃದ್ಧ ಮಹಿಳೆ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.24. ನದಿ ತಟದಲ್ಲಿ ಬಿದ್ದಿದ್ದ ವೃದ್ಧ ಮಹಿಳೆಯೋರ್ವರನ್ನು ಸ್ಥಳೀಯರು ರಕ್ಷಿಸಿದರಾದರೂ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಸೋಮವಾರ ಸಂಜೆ ಕೈಕಂಬದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ದೇವರಮಾರು ನಿವಾಸಿ ಪೆರ್ನು ಗೌಡ ಎಂಬವರ ಪತ್ನಿ ಸುಶೀಲ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದಲ್ಲಿರುವ ಈಕೆಯ ಪುತ್ರಿಗೆ ಹೆರಿಗೆಯಾಗಿದೆಯೆಂದು ತಿಳಿದು ಮನೆಯಲ್ಲಿ ಹೇಳದೆ ಬಂದಿದ್ದ ಇವರು ಸೋಮವಾರ ಸಂಜೆ ಕೈಕಂಬ ಸಮೀಪದ ನದಿ ತಟದಲ್ಲಿ ಬಿದ್ದಿದ್ದರೆನ್ನಲಾಗಿದೆ. ಇದನ್ನು ಕಂಡ

ಕೈಕಂಬ: ನದಿ ತಟದಲ್ಲಿ ಬಿದ್ದಿದ್ದ ವೃದ್ಧ ಮಹಿಳೆ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ
Scroll to Top