ಕರಾವಳಿ

ಶುಚಿತ್ವಕ್ಕೆ ಆದ್ಯತೆ ನೀಡಿದ್ದ ಆಲಂಕಾರು ಪಂಚಾಯತ್ ನಿಂದ ಇದೀಗ ಕಾನೂನು ಸಡಿಲಿಕೆ ► ನಾಯಿ, ಆಡುಗಳ ಆಶ್ರಯ ತಾಣವಾದ ಹಸಿ ಮೀನು ಮಾರುಕಟ್ಟೆ

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಆಲಂಕಾರು ಗ್ರಾಮ ಪಂಚಾಯಿತಿ ಶುಚಿತ್ವಕ್ಕೆ ಆಧ್ಯತೆ ನೀಡಿ ನಿರ್ಮಾಣ ಮಾಡಿದ ಹಸಿ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟುಗಳಿಲ್ಲದೆ ನಾಯಿ, ಆಡುಗಳ ಆಶ್ರಯ ತಾಣವಾಗಿದೆ. ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡಿದರೆ  ವ್ಯಾಪಾರಿಗೆ  ನಷ್ಟವಾಗುತ್ತದೆ ಎಂದು ಪಂಚಾಯಿತಿ ಆಡಳಿತ ನಿರ್ದಾರದಿಂದ ಪೇಟೆಯ ವಿವಿದೆಡೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಅನುವು ಮಾಡಿಕೊಟ್ಟಿರುವುದೆ ಮಾರುಕಟ್ಟೆ ಬಿಕೋ ಎನ್ನಲು ಕಾರಣವಾಗಿದೆ. ಮೂರು ವರ್ಷದ ಹಿಂದೆ ಆಲಂಕಾರು ಪೇಟೆಯಲ್ಲಿ ಖಾಸಗಿ ವ್ಯಕ್ತಿಯೋರ್ವರು ಹಸಿ ಮೀನು ಮಾರುಕಟ್ಟೆ ನಿರ್ಮಿಸಿ ಮೀನು […]

ಶುಚಿತ್ವಕ್ಕೆ ಆದ್ಯತೆ ನೀಡಿದ್ದ ಆಲಂಕಾರು ಪಂಚಾಯತ್ ನಿಂದ ಇದೀಗ ಕಾನೂನು ಸಡಿಲಿಕೆ ► ನಾಯಿ, ಆಡುಗಳ ಆಶ್ರಯ ತಾಣವಾದ ಹಸಿ ಮೀನು ಮಾರುಕಟ್ಟೆ Read More »

ಕರಾವಳಿ

ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆ ರಕ್ಷಕ  ಶಿಕ್ಷಕ ಸಂಘದ ರಚನೆ ► ಅಧ್ಯಕ್ಷರಾಗಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆ

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆಯ  ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಮರ್ದಾಳ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆಗೊಂಡರೆ ಉಪಾಧ್ಯಕ್ಷರಾಗಿ ತಮ್ಮಯ್ಯ ಗೌಡ ಬೆತ್ತೋಡಿ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ರೆ|ಫಾ ಜೋಸ್ ವಿ.ಸಿ ಅಧ್ಯಕ್ಷತೆಯಲ್ಲಿ ಜು.18 ರಂದು ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಸಮಿತಿ ಸದಸ್ಯರಾಗಿ, ವೀರಪ್ಪ ಗೌಡ ಮೇಪತಪಾಲು, ಶಾಂತಿ ಪಾಲೆತ್ತಡ್ಕ, ನಾಗೇಶ ಗೌಡ ಕೋಕಳ, ಕೇಶವ ಗೌಡ

ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆ ರಕ್ಷಕ  ಶಿಕ್ಷಕ ಸಂಘದ ರಚನೆ ► ಅಧ್ಯಕ್ಷರಾಗಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆ Read More »

ಕರಾವಳಿ

ಕಡಬ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಚಿನ್ನ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಪೇಟೆಯ ಹೊರವಲಯದ ಕೊರುಂದೂರು ಎಂಬಲ್ಲಿ ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ಕಳ್ಳರು ವೃದ್ದೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕೋರಂದೂರು ಹರೀಶ್ ಎಂಬವರ ತಾಯಿ ವಯೋವೃದ್ಧೆ 90 ರ ಹರೆಯದ ಸತ್ಯಭಾಮ ಎಂಬವರ ಕತ್ತಿನಲ್ಲಿದ್ದ ಸುಮಾರು ನಾಲ್ಕು ಪವನ್‍ನ ಚಿನ್ನದ ಸರವನ್ನು ಇಬ್ಬರು ಕಳ್ಳರು ಎಗರಿಸಿದ್ದಾರೆ. ಮನೆಯಲ್ಲಿ ಹರೀಶ್ ಮತ್ತು ಅವರ ತಾಯಿ ಇಬ್ಬರೇ ವಾಸವಾಗಿದ್ದು, ಹರೀಶ್ ಅವರು ಸಂಜೆ ವೇಳೆಗೆ ಕಡಬ

ಕಡಬ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಚಿನ್ನ ಎಗರಿಸಿದ ಕಳ್ಳರು Read More »

ಕರಾವಳಿ

ವೃತ್ತಿಯಲ್ಲಿ ಸವಣೂರು ಮೆಸ್ಕಾಂ ಶಾಖಾ ಕಚೇರಿಯ ಜೂನಿಯರ್ ಎಂಜಿನೀಯರ್ ► ಪ್ರವೃತ್ತಿಯಲ್ಲಿ ರಂಗಭೂಮಿ ಕಲಾವಿದ

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಇವರು ಸವಣೂರು ಮೆಸ್ಕಾಂ ಶಾಖಾ ಕಚೇರಿ ಕಿರಿಯ ಎಂಜಿನೀಯರ್. ವೃತ್ತಿಯಲ್ಲಿ ಜೆಇ ಆಗಿದ್ದರೂ ಪ್ರವೃತ್ತಿಯಲ್ಲಿ ರಂಗಭೂಮಿ ಕಲಾವಿದ. ಹುಟ್ಟು ಕಲಾವಿದರಾದ ಇವರು ರಾಜ್ಯದಾದ್ಯಂತ ಅನೇಕ ಕಾರ್ಯಕ್ರಮಗಳಲ್ಲಿ ಬಣ್ಣಹಚ್ಚಿ ಜನಮನ ಗೆದ್ದಿದ್ದಾರೆ. ರಜಾ ಸಮಯವನ್ನು ಕಲಾಸೇವೆಗಾಗಿಯೇ ವಿನಿಯೋಗಿಸುತ್ತಿರುವ ಇವರೇ ನಾಗರಾಜ್. ಬಾಲ್ಯದಿಂದಲೇ ರಂಗಭೂಮಿಯತ್ತ ಆಕರ್ಷಿತರಾದ ಇವರು ಶಾಲಾ ಜೀವನದಲ್ಲಿಯೇ ಪೌರಾಣಿಕ ನಾಟಕಗಳಲ್ಲಿ ವಿವಿಧ ಪಾತ್ರಗಳಲ್ಲಿ ಅಭಿನಯಿಸಿ, ಸೈ ಎನಿಸಿಕೊಂಡವರು. ಮಹಾಭಾರತ, ರಾಮಾಯಣ, ಶನಿಮಹಾತ್ಮೆ, ದಕ್ಷಯಜ್ಞ, ದೇವಿಮಹಾತ್ಮೆ ಮೊದಲಾದ ಪೌರಾಣಿಕ ಸತ್ಯಹರಿಶ್ಚಂದ್ರ, ಕವಿರತ್ನ ಕಾಳಿದಾಸ ಮುಂತಾದ ಸಾಮಾಜಿಕ ನಾಟಕಗಳಲ್ಲಿ

ವೃತ್ತಿಯಲ್ಲಿ ಸವಣೂರು ಮೆಸ್ಕಾಂ ಶಾಖಾ ಕಚೇರಿಯ ಜೂನಿಯರ್ ಎಂಜಿನೀಯರ್ ► ಪ್ರವೃತ್ತಿಯಲ್ಲಿ ರಂಗಭೂಮಿ ಕಲಾವಿದ Read More »

ಕರಾವಳಿ

ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಅವ್ಯವಸ್ಥೆಯನ್ನು ಸರಿಪಡಿಸಲು ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.19. ಜಿಲ್ಲೆಯ ಸುಮಾರು ಎಂಟು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಡರೋಗಿಗಳು ಅವಲಂಬಿಸಿ ಬರುವ ವೆನ್ಲಾಕ್ ಆಸ್ಪತ್ರೆಯಲ್ಲಿ ಆಹಾರ ಪದಾರ್ಥಗಳನ್ನು ಕಸಿಯಲಾಗಿದೆಯಲ್ಲದೆ ಹಲವು ಜ್ವಲಂತ ಸಮಸ್ಯೆಗಳನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಂಡು ಶೀಘ್ರವಾಗಿ ಪರಿಹರಿಸಬೇಕೆಂದು ಎಸ್ ಡಿ ಪಿ ಐ ನಿಯೋಗವು ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಭೇಟಿಯಾಗಿ ಆಗ್ರಹಿಸಿತು. ಸರಕಾರಿ ಆಸ್ಪತ್ರೆಯ ಊಟದ ಮೆನುವಿನಲ್ಲಿ ಮಂಗಳೂರು ಎಂದರೆ ಮತ್ಸ್ಯ ನಗರಿ‌. ಹೀಗಾಗಿ ರೋಗಿಗಳಿಗೆ ಸರಕಾರದಿಂದ ಉಚಿತವಾದ ಮೀನು ಊಟ ಮತ್ತು ಹಾಲು ಬ್ರೆಡ್

ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಅವ್ಯವಸ್ಥೆಯನ್ನು ಸರಿಪಡಿಸಲು ಎಸ್ಡಿಪಿಐ ಆಗ್ರಹ Read More »

ಕರಾವಳಿ

ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಜು.19. ಹೊಟ್ಟೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ರತ್ರೆಯಲ್ಲಿ ನಿಧನರಾಗಿದ್ದಾರೆ. ಸೋಮವಾರದಂದು ಶಿರೂರು ಮೂಲ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಗೆ ಹೊಟ್ಟೆನೋವು ಕಾಣಿಸಿಕೊಂಡು ವಿಪರೀತ ವಾಂತಿ ಮಾಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಬುಧವಾರದಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ Read More »

ಕರಾವಳಿ

ದೀಪಕ್ ರಾವ್ ಕೊಲೆ‌ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ‌ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.17. ಈ ವರ್ಷಾರಂಭದಲ್ಲಿ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೃಷ್ಣಾಪುರ 4 ನೇ ಬ್ಲಾಕ್ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ದಿ| ಇಸ್ಮಾಯಿಲ್ ಎಂಬವರ ಪುತ್ರ ಸಫ್ವಾನ್ ಯಾನೆ ಚಪ್ಪು ಎಂದ ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 2 ನೇ ಬ್ಲಾಕ್ ನ ಅಬ್ದುಲ್ ಮಜೀದ್ ಎಂಬವರ ಮನೆಯ ಎದುರು

ದೀಪಕ್ ರಾವ್ ಕೊಲೆ‌ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ‌ ಬಂಧನ Read More »

ಕರಾವಳಿ

ನಾಳೆಯಿಂದ (ಜು.18) ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ..!! ► ಕಾರಣವೇನೆಂದು ಗೊತ್ತೇ…?

(ನ್ಯೂಸ್ ಕಡಬ) newskadaba.com ಮಂಗಳೂರು, ಜು.17. ಶಿರಾಡಿಘಾಟ್ ರಸ್ತೆಯ ಕಾಮಗಾರಿಯು ಪೂರ್ಣಗೊಂಡು ಜುಲೈ 15 ರಂದು ಉದ್ಘಾಟನೆಗೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತಾದರೂ, ಸದ್ರಿ ರಸ್ತೆ ಕಾಮಗಾರಿಯಲ್ಲಿ ಗಾರ್ಡ್ ವಾಲ್ ಹಾಗೂ ಶೋಲ್ಡರ್ ನಿರ್ಮಾಣದಂತಹ ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇರುವುದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸುವ ಸಲುವಾಗಿ ಘಾಟ್ ರಸ್ತೆಯಲ್ಲಿ ನಾಳೆಯಿಂದ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಅಪೂರ್ಣಗೊಂಡ ರಸ್ತೆಯ ಮೂಲಕ ಭಾರೀ ವಾಹನಗಳು ಸಂಚರಿಸಿದಲ್ಲಿ ಈಗಾಗಲೇ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬಾಕಿ ಉಳಿದ

ನಾಳೆಯಿಂದ (ಜು.18) ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ..!! ► ಕಾರಣವೇನೆಂದು ಗೊತ್ತೇ…? Read More »

ಕರಾವಳಿ

ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಪ್ರವಾಹಕ್ಕೆ ಕೊಚ್ಚಿ ಹೋದ 200 ವರ್ಷಗಳಷ್ಟು ಹಳೆಯ ವೆಲ್ಲೆಸ್ಲಿ ಸೇತುವೆ

(ನ್ಯೂಸ್ ಕಡಬ) newskadaba.com ಮೈಸೂರು, ಜು.17. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾವೇರಿ ನದಿಯ ನೀರಿನ ಹರಿವು ಹೆಚ್ಚಾಗಿದ್ದು, ಸುಮಾರು 200 ವರ್ಷದಷ್ಟು ಹಳೆಯ ವೆಲ್ಲೆಸ್ಲಿ ಸೇತುವೆಯು ಕೊಚ್ಚಿ ಹೋಗಿದೆ. 1799ರ ಸುಮಾರಿಗೆ ಕರ್ನಲ್ ಆರ್ಥೂರ್ ವೆಲ್ಲೆಸ್ಲಿಯು ಕೊಳ್ಳೆಗಾಲ ತಾಲೂಕಿನ ಸತ್ಯಗಾಲ ಸಮೀಪ ನಿರ್ಮಿಸಿದ್ದರೆನ್ನಲಾದ ವೆಲ್ಲೆಸ್ಲಿ ಸೇತುವೆಯು ಕಬಿನಿ ಮತ್ತು ಕೆಆರ್ ಎಸ್ ಜಲಾಯಶಯಗಳಿಂದ ನೀರು ಹರಿಸಿದ ಪರಿಣಾಮ ಕೊಚ್ಚಿ ಹೋಗಿದೆ. ತುಂಬಾ ಹಳೆಯದಾದ ಕಾರಣ ಶಿಥಿಲಗೊಂಡಿದ್ದ ಸೇತುವೆಯನ್ನು ಪುನರ್ ಸ್ಥಾಪಿಸಬೇಕು ಎಂದು

ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಪ್ರವಾಹಕ್ಕೆ ಕೊಚ್ಚಿ ಹೋದ 200 ವರ್ಷಗಳಷ್ಟು ಹಳೆಯ ವೆಲ್ಲೆಸ್ಲಿ ಸೇತುವೆ Read More »

ಕರಾವಳಿ

ಬೆಳ್ಳಾರೆ: ಪದವಿ ಪೂರ್ವ ಕಾಲೇಜಿನ ಲ್ಯಾಪ್ ಟಾಪ್, ಪ್ರೊಜೆಕ್ಟರ್ ಕಳ್ಳತನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.17. ಇಲ್ಲಿನ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕೊಠಡಿಯ ಒಳನುಗ್ಗಿರುವ ಕಳ್ಳರು ಲ್ಯಾಪ್ ಟಾಪ್ ಹಾಗೂ ಪ್ರೊಜೆಕ್ಟರನ್ನು ಹೊತ್ತೊಯ್ದಿದ್ದಾರೆ. ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗಿನ ನಡುವೆ ಒಳ ನುಗ್ಗಿರುವ ಕಳ್ಳರು 13,000/- ರೂಪಾಯಿ ಮೌಲ್ಯದ ಪ್ಯಾನಾಸೋನಿಕ್ ಕಂಪೆನಿಯ ಪ್ರೊಜೆಕ್ಟರ್ ಮತ್ತು ಸುಮಾರು 10,000/- ರೂಪಾಯಿ ಮೌಲ್ಯದ ಆಸಸ್ ಕಂಪೆನಿಯ ಲ್ಯಾಪ್ ಟಾಪ್ ಸೇರಿ ಒಟ್ಟು ರೂಪಾಯಿ 23,000 ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದಾರೆ. ಸೋಮವಾರದಂದು ಉಪನ್ಯಾಸಕರು ಕಾಲೇಜಿಗೆ ಆಗಮಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಬೆಳ್ಳಾರೆ: ಪದವಿ ಪೂರ್ವ ಕಾಲೇಜಿನ ಲ್ಯಾಪ್ ಟಾಪ್, ಪ್ರೊಜೆಕ್ಟರ್ ಕಳ್ಳತನ Read More »

ಕರಾವಳಿ
Scroll to Top