ಕರಾವಳಿ

ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.27. ಠಾಣಾ ವ್ಯಾಪ್ತಿಯ ಶೇಣಿಯಲ್ಲಿ ಯುವತಿಯೋರ್ವಳನ್ನು ಬಲವಂತದಿಂದ ಕರೆದೊಯ್ದು ಸರಣಿ ಅತ್ಯಾಚಾರಗೈದ ಪ್ರಕರಣದ ಮೂವರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮರ ಮೂಡ್ನೂರು ಗ್ರಾಮದ ಕುಡುಂಬಿಲ ನಿವಾಸಿ ಕುಂಇಪ್ಪ ನಾಯ್ಕ ಎಂಬವರ ಪುತ್ರ ಜಯಪ್ರಕಾಶ್ (25), ಚೊಕ್ಕಾಡಿಯ ನೇಣಾರು ನಿವಾಸಿ ಕೂಸಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (20), ಕುಕ್ಕುಜಡ್ಕದ ನೇರ್ಲಡ್ಕ ನಿವಾಸಿ ಗುಡ್ಡಪ್ಪನಾಯ್ಕ ಎಂಬವರ ಪುತ್ರ ರವೀಂದ್ರ (35) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರ ಸಂಜೆ ಹಾಲು […]

ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ Read More »

ಕರಾವಳಿ

ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಮೊಬೈಲ್ ಟವರ್ ಗಳಲ್ಲಿನ ಬ್ಯಾಟರಿ ಕಳವು ಪ್ರಕರಣವನ್ನು ಭೇದಿಸಿರುವ ಉರ್ವ ಠಾಣಾ ಪೊಲೀಸರು ಕಡಬದ ಬಿಳಿನೆಲೆ ನಿವಾಸಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂಡಸ್ ಕಂಪೆನಿಗೆ ಸೇರಿದ 48 ಮೊಬೈಲ್ ಟವರ್‌ನ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಜಾಡು ಹಿಡಿದ ಉರ್ವ ಠಾಣಾ ಪೊಲೀಸರು ಇಂಡಸ್ ಕಂಪೆನಿಯ ಬ್ಯಾಟರಿಗಳ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಸಂಸ್ಥೆಯೊಂದರ ಸಿಬ್ಬಂದಿಗಳಾದ ಕಡಬದ ಬಿಳಿನೆಲೆ ನಿವಾಸಿ ಆನಂದ್(28), ಕಡೂರಿನ ಸೋಮನಹಳ್ಳಿ

ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ Read More »

ಕರಾವಳಿ

ಬೆಳ್ಳಾರೆ: ಯುವತಿಯನ್ನು ಪುಸಲಾಯಿಸಿ ಮೂವರಿಂದ ಸರಣಿ ಅತ್ಯಾಚಾರ ► ಓರ್ವ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.26. ಯುವತಿಯೋರ್ವಳನ್ನು ಬಲವಂತದಿಂದ ಕರೆದೊಯ್ದು ಮೂವರು ಸರಣಿ ಅತ್ಯಾಚಾರ ಎಸಗಿದ ಘಟನೆ ಸೋಮವಾರದಂದು ಠಾಣಾ ವ್ಯಾಪ್ತಿಯ ಚೊಕ್ಕಾಡಿಯಲ್ಲಿ ನಡೆದಿದೆ. ಹಾಲು ಉತ್ಪಾದಕರ ಸಂಘಕ್ಕೆ ಹಾಲು ಕೊಂಡೊಯ್ದು ಹಿಂದಿರುಗುತ್ತಿದ್ದ ಯುವತಿಯನ್ನು ಇಬ್ಬರು ಆಟೊ ರಿಕ್ಷಾ ಚಾಲಕರು ಸೇರಿದಂತೆ ಮೂವರು ಪುಸಲಾಯಿಸಿ ಬಲವಂತದಿಂದ ಕರೆದೊಯ್ದು ರಬ್ಬರ್ ತೋಟದಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಮಂಗಳವಾರದಂದು ಬೆಳ್ಳಾರೆ ಠಾಣೆಗೆ‌ ಯುವತಿ ದೂರು ನೀಡಿದ್ದಾರೆ. ಯುವತಿಯ ದೂರಿನಂತೆ ಬೆಳ್ಳಾರೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ

ಬೆಳ್ಳಾರೆ: ಯುವತಿಯನ್ನು ಪುಸಲಾಯಿಸಿ ಮೂವರಿಂದ ಸರಣಿ ಅತ್ಯಾಚಾರ ► ಓರ್ವ ಆರೋಪಿ ವಶಕ್ಕೆ Read More »

ಕರಾವಳಿ

ಕಡಬ: ಎಡೆಬಿಡದ ಮಳೆಗೆ ಗುಡ್ಡ ಕುಸಿದು ಧರೆಗುರುಳಿದ ವಿದ್ಯುತ್ ಕಂಬ ► ಕೆಲವೇ ಕ್ಷಣಗಳ ಅಂತರದಲ್ಲಿ ಅಪಾಯದಿಂದ ಪಾರಾದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜೂ.26. ಎಡೆಬಿಡದೆ ಮಳೆ‌ ಸುರಿಯುತ್ತಿರುವುದರಿಂದಾಗಿ ವಿದ್ಯುತ್ ಕಂಬದ ಜೊತೆಗೆ ಗುಡ್ಡ ಕುಸಿದು ಬಿದ್ದ ಘಟನೆ ಕಡಬದ ಮುಖ್ಯ ಪೇಟೆಯಲ್ಲಿ ಮಂಗಳವಾರ ಸಂಜೆ‌ ನಡೆದಿದೆ. ಇಲ್ಲಿನ ಮೀನು ಮಾರುಕಟ್ಟೆಯ ಸಮೀಪದದಲ್ಲಿನ ಗುಡ್ಡೆ ಕುಸಿದಿದ್ದು, ತುದಿಯಲ್ಲಿದ್ದ ವಿದ್ಯುತ್ ಕಂಬ ಧರೆಗುರುಳಿದೆ. ಇದರಿಂದಾಗಿ ಮೀನು ಮಾರುಕಟ್ಟೆಯ ಶೆಡ್ ಗೆ ಹಾನಿಯಾಗಿದೆ. ಎಲ್ಲಾ ದಿನಗಳಲ್ಲಿ ಈ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆಗೊಳಿಸಲಾಗುತ್ತಿತ್ತಾದರೂ ಇಂದು ಯಾವುದೇ ವಾಹನಗಳಿರಲಿಲ್ಲ. ಅಲ್ಲದೆ ಘಟನೆ ನಡೆಯುವುದಕ್ಕಿಂತ ಕೆಲವೇ ಕ್ಷಣಗಳ ಮೊದಲು ಶಾಲಾ ವಿದ್ಯಾರ್ಥಿಗಳು ಇದೇ

ಕಡಬ: ಎಡೆಬಿಡದ ಮಳೆಗೆ ಗುಡ್ಡ ಕುಸಿದು ಧರೆಗುರುಳಿದ ವಿದ್ಯುತ್ ಕಂಬ ► ಕೆಲವೇ ಕ್ಷಣಗಳ ಅಂತರದಲ್ಲಿ ಅಪಾಯದಿಂದ ಪಾರಾದ ವಿದ್ಯಾರ್ಥಿಗಳು Read More »

ಕರಾವಳಿ

ಕೋಡಿಂಬಾಳದ ಅರ್ಪಾಜೆ ಕೆರೆ ಒತ್ತುವರಿ ಆರೋಪ ► ಕೆರೆ ಅಭಿವೃದ್ಧಿಗೆ ಮುಂದಾದ ಸ್ಥಳೀಯರಿಗೆ ಕಾನೂನಿನ ತೊಡಕು

(ನ್ಯೂಸ್ ಕಡಬ) newskadaba.com ಕಡಬ, ಜೂ.26. ಇಲ್ಲಿನ ಕೋಡಿಂಬಾಳ ಗ್ರಾಮದ ಅರ್ಪಾಜೆಯಲ್ಲಿ  ಸರ್ವೆ ನಂ.33/3 ರಲ್ಲಿ 0.62 ಎಕರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮಾಡಿ ಕೆರೆಯ ಜಮೀನಿನಲ್ಲಿ ಖಾಸಗಿ ವ್ಯಕ್ತಿಗಳು ರಸ್ತೆ ನಿರ್ಮಿಸಿರುವುದರ ವಿರುದ್ಧ ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಹಲವು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ತಿಂಗಳ ಹಿಂದೆ ದೂರಿಗೆ ಸ್ಪಂದಿಸಿದ ಪುತ್ತೂರು ತಹಶೀಲ್ದಾರ್ ಅನಂತ ಶಂಕರ ಅವರು ಕೆರೆಯನ್ನು ಅಳೆದು ಗಡಿ ಗುರುತು ಮಾಡಿ ಅತಿಕ್ರಮಣ ನಡೆದಿದ್ದರೆ ಕೂಡಲೇ ತೆರವುಗೊಳಿಸುವಂತೆ ಕಡಬ ಕಂದಾಯ

ಕೋಡಿಂಬಾಳದ ಅರ್ಪಾಜೆ ಕೆರೆ ಒತ್ತುವರಿ ಆರೋಪ ► ಕೆರೆ ಅಭಿವೃದ್ಧಿಗೆ ಮುಂದಾದ ಸ್ಥಳೀಯರಿಗೆ ಕಾನೂನಿನ ತೊಡಕು Read More »

ಕರಾವಳಿ

ಬಂಟ್ವಾಳ: ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ಯುವತಿಯೋರ್ವಳು ತನ್ನ ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಬಂಟ್ವಾಳದ ದಡ್ಡಲಕಾಡು ಎಂಬಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಬಂಟ್ವಾಳ ತಾಲೂಕಿನ ದಡ್ಡಲಕಾಡು ನಿವಾಸಿ ಪವಿತ್ರಾ‌(20) ಎಂದು ಗುರುತಿಸಲಾಗಿದೆ. ತಂದೆ ತಾಯಿ ಇಲ್ಲದೆ ಅನಾಥೆಯಾಗಿದ್ದ ಪವಿತ್ರಾ ತನ್ನ ಅಜ್ಜಿಯ ಜೊತೆಗೆ ವಾಸ ಮಾಡಿಕೊಂಡಿದ್ದು ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದೆ. ಸೋಮವಾರದಂದು ಅಡುಗೆ ಕೋಣೆಯಲ್ಲಿ ಮೈಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಂಟ್ವಾಳ: ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ Read More »

ಕರಾವಳಿ

ಬಂಟ್ವಾಳ: ಮಹಾಮಳೆಗೆ ಮುರಿದು ನದಿಗೆ ಬಿದ್ದ ಮುಳ್ಳರಪಟ್ಣ ಸೇತುವೆ ► ವಾಹನ ಸಂಚಾರವಿಲ್ಲದ ಕಾರಣ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.25. ನದಿಗೆ ಅಡ್ಡಲಾಗಿ ಕಟ್ಟಿಲಾಗಿದ್ದ ಸೇತುವೆಯೊಂದು ಕುಸಿದು ನದಿಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮುಲ್ಲರಪಟ್ಣದಲ್ಲಿ ಸೋಮವಾರ ಸಂಜೆ‌ ನಡೆದಿದೆ. ಕುಪ್ಪೆಪದವು – ಬಿ.ಸಿ‌. ರೋಡ್ ರಾಜ್ಯ ಹೆದ್ದಾರಿಯ ಮುಲ್ಲರಪಟ್ಣ ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯು ಸೋಮವಾರ ಸಂಜೆ ಇದ್ದಕ್ಕಿದ್ದಂತೆ ತುಂಬಿ ಹರಿಯುತ್ತಿರುವ ಫಲ್ಗುಣಿ ನದಿಗೆ ಬಿದ್ದಿದೆ. ಈ ಸಂದರ್ಭದಲ್ಲಿ ಸೇತುವೆಯ ಮೇಲೆ ಯಾವುದೇ ವಾಹನ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಸೇತುವೆಯ ಅಡಿಭಾಗದಲ್ಲಿ ಮರಳುಗಾರಿಕೆ ನಡೆಸಿರುವ

ಬಂಟ್ವಾಳ: ಮಹಾಮಳೆಗೆ ಮುರಿದು ನದಿಗೆ ಬಿದ್ದ ಮುಳ್ಳರಪಟ್ಣ ಸೇತುವೆ ► ವಾಹನ ಸಂಚಾರವಿಲ್ಲದ ಕಾರಣ ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಬೆಳ್ಳಾರೆ: ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಬೆಳ್ಳಾರೆ ಜೂ,25. ಯುವ ಜೇಸಿ ಬೆಳ್ಳಾರೆ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇವರುಗಳ ಆಶ್ರಯದಲ್ಲಿ ಕೆ.ಮಂ.ಸಿ ಆಸ್ಪತ್ರೆ, ಕೆ.ವಿ.ಜಿ ದಂತ ಕಾಲೇಜು, ಇಂಡಿಯನ್ ರೆಡ್ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರುಗಳ ಸಹಕಾರದೊಂದಿಗೆ ದಿನಾಂಕ 24 ಭಾನುವಾರದಂದು ಕಲ್ಮಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಠಾರದಲ್ಲಿ ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ ಜರುಗಿತು. ಬೆಳ್ಳಾರೆಯ ಖ್ಯಾತ ವೈದ್ಯರಾಗಿದ್ದ ದಿವಂಗತ ಡಾ|| ಎಸ್. ನಾರಾಯಣ ಭಟ್ ಇವರ ಸ್ಮರಣಾರ್ಥವಾಗಿ

ಬೆಳ್ಳಾರೆ: ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ವಿಶ್ವ ಯೋಗ ದಿನಾಚರಣೆ.

(ನ್ಯೂಸ್ ಕಡಬ) newskadaba.com ಕುಂತೂರು,ಜೂ.25. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಜೂನ್ 21 ರಂದು ವಿಶ್ವ ಯೋಗ ದಿನದ ಪ್ರಯುಕ್ತ ಯೋಗ ತರಬೇತಿಯನ್ನು ನೀಡಲಾಯಿತು. ತರಬೇತುದಾರಾಗಿ ಆಗಮಿಸಿದ ಯೋಗ ಶಿಕ್ಷಕ ಶ್ರೀ ವಿಜೇಶ್ ಅವರ ಮಾರ್ಗದರ್ಶನದಲ್ಲಿ ಪ್ರಶಿಕ್ಷಣಾರ್ಥಿಗಳು ಯೋಗ ದಿನಾಚರಣೆಯನ್ನು ಆಚರಿಸಿದರು.

ಮಾರ್ ಇವಾನಿಯೋಸ್ ಕಾಲೇಜು: ವಿಶ್ವ ಯೋಗ ದಿನಾಚರಣೆ. Read More »

ಕರಾವಳಿ

ವಿಶ್ವದಾದ್ಯಂತ ಜೂನ್ 26ರಂದು ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ.25. ‘ಮತ್ತು ತಂದೀತು ಜೀವಕೇ’ ಕುತ್ತು ವಿಶ್ವದಾದ್ಯಂತ ಜೂನ್ 26ರಂದು ವಿಶ್ವ ಮಾದಕ ದ್ರವ್ಯ ವಿರೋಧಿ ದಿನ ಎಂದು ಆಚರಿಸಲಾಗುತ್ತದೆ. 1987 ರಲ್ಲಿ ಆರಂಭವಾದ ಈ ಆಚರಣೆ, ಜಗತ್ತಿನಾದ್ಯಂತ ‘ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಅದರ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ ಮಾದಕ ವ್ಯಸನಿಗಳನ್ನು ವ್ಯಸನಮುಕ್ತಗೊಳಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಗುರುತರವಾದ ಉದ್ದೇಶವನ್ನು ಹೊಂದಿದೆ. ಒಂದು ಅಂದಾಜು ಮೂಲದ ಪ್ರಕಾರ ಸುಮಾರು 200 ಮಿಲಿಯನ್ ಮಂದಿ ಜಗತ್ತಿನೆಲ್ಲೆಡೆ ಮಾದಕ

ವಿಶ್ವದಾದ್ಯಂತ ಜೂನ್ 26ರಂದು ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ Read More »

ಕರಾವಳಿ
Scroll to Top