ಕರಾವಳಿ

ಮನಶಾಂತಿಗಾಗಿ ಮಂಗಳೂರಿಗೆ ಬರಲು ನಿರ್ಧರಿಸಿದ ಉದ್ಯಮಿ – ಪೋಸ್ಟ್‌ ವೈರಲ್‌

(ನ್ಯೂಸ್‌ ಕಡಬ) newskadaba.com,ಜ.24 : ಬೆಂಗಳೂರು ಜೀವನಕ್ಕೆ ಒಮ್ಮೆ ಹೊಂದಿಕೊಂಡ ಬಳಿಕ ಅದನ್ನು ಬಿಟ್ಟು ಹೋಗುವುದು ಸುಲಭದ ಮಾತಲ್ಲ. ವಿಶೇಷವಾಗಿ ಇಲ್ಲಿ ಹುಟ್ಟಿ, ಬೆಳೆದವರಿಗೆ ಈ ನಗರ ಕೇವಲ ವಾಸಸ್ಥಳವಲ್ಲ, ಜೀವನದ ಭಾಗವೇ ಆಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಬಿಗಡಾಯಿಸುತ್ತಿರುವ ಟ್ರಾಫಿಕ್‌, ಧೂಳು ಮಾಲಿನ್ಯ ಮತ್ತು ಜೀವನದ ಒತ್ತಡದಿಂದಾಗಿ ಅನೇಕರು ನಗರ ತೊರೆಯುವ ಬಗ್ಗೆ ಯೋಚಿಸುತ್ತಿದ್ದಾರೆ. “ನಾನು ಹುಟ್ಟಿ ಬೆಳೆದ ಬೆಂಗಳೂರಿಗೆ ವಿದಾಯ ಹೇಳುವ ಸಮಯ ಬಂದಿದೆ. 41 ವರ್ಷದವನಾಗಿ ನನ್ನ ಸ್ವಂತ ವ್ಯವಹಾರ ನಡೆಸುತ್ತಿದ್ದೇನೆ. ಆದರೆ […]

ಮನಶಾಂತಿಗಾಗಿ ಮಂಗಳೂರಿಗೆ ಬರಲು ನಿರ್ಧರಿಸಿದ ಉದ್ಯಮಿ – ಪೋಸ್ಟ್‌ ವೈರಲ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ

(ನ್ಯೂಸ್‌ ಕಡಬ) newskadaba.com,ಜ.24 ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಓದಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸುವ ಬದಲಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಸಂದಾಯ ಮಾಡುವಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿ ಸೂಚನೆ ನೀಡಿದೆ. ಈ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್‌-3 ವಿದ್ಯಾರ್ಥಿಗಳ ಆಧಾರ್‌ ಲಿಂಕ್‌್ಡ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ

ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,ಜ.24 ಚಿನ್ನದ ದರದಲ್ಲಿ ಇಂದು ಸಹ ಭಾರೀ ಏರಿಕೆ ಕಂಡು ಬಂದಿದೆ. ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 135 ರೂ. ಏರಿಕೆ ಕಂಡು ಬೆಲೆ 14,540 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 147 ರೂ. ಏರಿಕೆ ಕಂಡು ಬಂದಿದ್ದು, 15,862 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,320 ರೂ. ಆದರೆ 10 ಗ್ರಾಂಗೆ ನೀವು 1,45,400 ರೂ. ನೀಡಿದರೆ,

ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10ಕ್ಕೆ-ಸಣ್ಣ ಪ್ಯಾಕ್

(ನ್ಯೂಸ್‌ ಕಡಬ) newskadaba.com,ಜ.24 ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರ ದೈನಂದಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಪ್ಯಾಕ್‌ಗಳನ್ನು ಪರಿಚಯಿಸಿದೆ… ಹೊಸ ಬೆಲೆ ನಿಗದಿ ಪ್ರಕಾರ, ನಂದಿನಿ ಹಾಲು 160 ಮಿಲಿಲೀಟರ್ ಪ್ಯಾಕ್‌ನಲ್ಲಿ ರೂ.10ಕ್ಕೆ ಮಾರಾಟವಾಗಲಿದೆ. ಮೊಸರು 140 ಮಿಲಿಲೀಟರ್ ಪ್ಯಾಕ್‌ನಲ್ಲಿ ಇದೇ ದರಕ್ಕೆ ಲಭ್ಯವಾಗುತ್ತದೆ. ಇದುವರೆಗೆ ಹಾಲು ಮತ್ತು ಮೊಸರು 200 ಮಿಲಿಲೀಟರ್ ಪ್ಯಾಕ್‌ಗಳಲ್ಲಿ ಮಾರಾಟವಾಗುತ್ತಿತ್ತು.

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10ಕ್ಕೆ-ಸಣ್ಣ ಪ್ಯಾಕ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಸಾಲ ಮರುಪಾವತಿಸದೆ ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ವಂಚಿಸಿದ ಖದೀಮರು

(ನ್ಯೂಸ್‌ ಕಡಬ) newskadaba.com,ಜ.24 ಬೆಳ್ತಂಗಡಿ: ವಾಹನವೊಂದಕ್ಕೆ ಬ್ಯಾಂಕ್ ಆಫ್ ಬರೋಡದಿಂದ ತೆಗೆದ ಲಕ್ಷಾಂತರ ರೂ ಸಾಲವನ್ನು ಕಟ್ಟದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಪೋರ್ಜರಿ ಸಹಿಯನ್ನು ಲೆಟರ್ ಹೆಸ್ ನಲ್ಲಿ ಬಳಸಿ ಸಾಲ ಸಂಪೂರ್ಣ ಸಂದಾಯವಾಗಿರುವುದಾಗಿ ಸುಳ್ಳು ಪತ್ರವನ್ನು ಆರ್.ಟಿ.ಒ.ಕಚೇರಿಗೆ ನೀಡಿರುವುದರ ಕುರಿತು ದೂರು ದಾಖಲಾಗಿದೆ. ಮೂಲತಃ ಬೆಳ್ತಂಗಡಿ ನಿವಾಸಿಗಳಾದ ತನ್ವಿರ್ ಹಾಗೂ ಅವರ ತಾಯಿ ನೆಬಿಶಾ ಮತ್ತು ಜುನೈದ್ ಮೆಲ್ಕಾರ್ ಹಾಗೂ ರಮೀಝ್ ಆಲಿಶ್ ಉಪ್ಪಿನಂಗಡಿ ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ

ಬೆಳ್ತಂಗಡಿ : ಸಾಲ ಮರುಪಾವತಿಸದೆ ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ವಂಚಿಸಿದ ಖದೀಮರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯಲ್ಲಿ ಲಾರಿ ಪ್ಲೇಟ್ ಕಟ್; ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

(ನ್ಯೂಸ್‌ ಕಡಬ) newskadaba.com,ಜ.24 ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದಲ್ಲಿ ಸರಕು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ತಿರುವು ಪಡೆದುಕೊಳ್ಳಲು ಸಾಧ್ಯವಾಗದೆ ಪ್ಲೇಟ್ ಕಟ್ ಆಗಿ ರಸ್ತೆ ಮಧ್ಯೆ ಬಾಕಿಯಾಗಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ಶುಕ್ರವಾರ ಸಂಜೆ ನಡೆದಿದ್ದು ರಾತ್ರಿವರೆಗೂ ಟ್ರಾಫಿಕ್ ಜಾಮ್ ಮುಂದುವರಿದಿದೆ. ಪ್ಲೇಟ್ ಕಟ್ ಆಗಿರುವ ಕಾರಣದಿಂದ ಲಾರಿ ರಸ್ತೆಯಲ್ಲೇ ನಿಂತ ಕಾರಣ ಘನ ವಾಹನ ಸಂಚಾರಕ್ಕೆ ಅಡ್ಡಿ ಉಂಟಾ ಯಿತು. ಲಘು ವಾಹನಗಳಿಗೆ ಸಂಚರಿಸುವಷ್ಟು ಜಾಗವಿದ್ದು ಬೇಕಾಬಿಟ್ಟಿಯಾಗಿ ವಾಹನಗಳನ್ನು ನುಗ್ಗಿಸಿದ ಕಾರಣ ಮತ್ತಷ್ಟು

ಬೆಳ್ತಂಗಡಿಯಲ್ಲಿ ಲಾರಿ ಪ್ಲೇಟ್ ಕಟ್; ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಶೂನ್ಯ ಬಡ್ಡಿ ದರದ ಕೃಷಿ ಸಾಲಕ್ಕೆ ಬೇಡಿಕೆ ಹೆಚ್ಚಳ ರೈತರಿಗೆ ಅನೂಕಲಕಾರಿಯಾಗಿರುವ ಸಾಲ ಯೋಜನೆ

(ನ್ಯೂಸ್‌ ಕಡಬ) newskadaba.com,ಜ.24 ಬೆಂಗಳೂರು: ರಾಜ್ಯದಲ್ಲಿ ಶೂನ್ಯ ಬಡ್ಡಿ ದರದ ಅಲ್ಪಾವಧಿ ಕೃಷಿ ಸಾಲಕ್ಕೆ ನಿರೀಕ್ಷೆಗೂ ಮೀರಿ ಬೇಡಿಕೆ ಹೆಚ್ಚಿದ್ದು, ಕಳೆದ ಹಣಕಾಸು ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಸಾಲ ವಿತರಿಸಲಾಗಿದೆ. ಕೃಷಿ ಚಟುವಟಿಕೆ ಪ್ರೋತ್ಸಾಹಿಸಲು ಹಾಗೂ ಗ್ರಾಮೀಣ ಭಾಗದ ಆರ್ಥಿಕತೆಯ ಜೀವನಾಡಿಯಾದ ಸಹಕಾರ ವಲಯದ ಬಲವರ್ಧನೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು 2023-24ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದ ಬೆಳೆ ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿತ್ತು. ಸಹಕಾರ ಸಾಲ ಸಂರಚನೆಯ

ರಾಜ್ಯದಲ್ಲಿ ಶೂನ್ಯ ಬಡ್ಡಿ ದರದ ಕೃಷಿ ಸಾಲಕ್ಕೆ ಬೇಡಿಕೆ ಹೆಚ್ಚಳ ರೈತರಿಗೆ ಅನೂಕಲಕಾರಿಯಾಗಿರುವ ಸಾಲ ಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಮ್ಯಾಕ್ಸ್ ಮಂಜು”

(ನ್ಯೂಸ್‌ ಕಡಬ) newskadaba.com,ಜ,23 : ಉಗ್ರಂ’, ‘ಮ್ಯಾಕ್ಸ್’ ಮುಂತಾದ ಸಿನಿಮಾಗಳಲ್ಲಿ ಅಬ್ಬರಿಸಿರುವ ಮಂಜು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಉಗ್ರಂ ಮಂಜು ಅವರ ವಿವಾಹ ಮಹೋತ್ಸವ ಜರುಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಗ್ರಂ ಮಂಜು – ಸಂಧ್ಯಾ ಅವರ ಕಲ್ಯಾಣ ನೆರವೇರಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಮದುವೆ ಜರುಗಿದ್ದು, ಕುಟುಂಬಸ್ಥರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಸಂಧ್ಯಾ ಕೊರಳಿಗೆ ಉಗ್ರಂ ಮಂಜು ಮಾಂಗಲ್ಯಧಾರಣೆ ಮಾಡಿದ್ದಾರೆ…..

“ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಮ್ಯಾಕ್ಸ್ ಮಂಜು” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಹೆದ್ದಾರಿಯಲ್ಲಿ ಅಪ್ಪಳಿಸಿದ ಸಾವು ಲಾರಿ ಚಕ್ರದಡಿ ಸಿಲುಕಿ ಬ್ರಹ್ಮಾವರದ ಯುವಕ ದಾರುಣ ಸಾವು

(ನ್ಯೂಸ್‌ ಕಡಬ) newskadaba.com,ಜ,23 ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಕೆಜಿ ರಸ್ತೆಯ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸರಕು ಸಾಗಣೆ ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿಕೊಂಡ ಬೈಕ್ ಸವಾರನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಸವಾರನ ದೇಹವು ಛಿದ್ರವಾಗಿತ್ತು. ಅಪಘಾತದಿಂದಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು. ಬ್ರಹ್ಮಾವರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಹಾಲಿಂಗ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ

ಹೆದ್ದಾರಿಯಲ್ಲಿ ಅಪ್ಪಳಿಸಿದ ಸಾವು ಲಾರಿ ಚಕ್ರದಡಿ ಸಿಲುಕಿ ಬ್ರಹ್ಮಾವರದ ಯುವಕ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ.

(ನ್ಯೂಸ್‌ ಕಡಬ) newskadaba.com,ಜ,23 ಮಂಗಳೂರು: 1997 ರಲ್ಲಿ ದಾಖಲಾದ ಸಂಚಲನ ಮೂಡಿಸಿದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಭಯಾನಕ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಸದಸ್ಯನನ್ನು ಮಂಗಳೂರು ನಗರದ ಉರ್ವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ವೆಂಕಟಪ್ಪ ಎಂಬುವರ ಪುತ್ರ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ ಕೃಷ್ಣಪ್ಪ ಅಲಿಯಾಸ್ ಕೃಷ್ಣ (55) ಎಂದು ಗುರುತಿಸಲಾಗಿದೆ. ಅವರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top