ಕರಾವಳಿ

ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ ವಿತರಣೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.15. ಪ್ರವಾಸೋದ್ಯಮ ಇಲಾಖೆಯಿಂದ 2018-19ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಯೋಜನೆಯಡಿಯಲ್ಲಿ ಲಘುವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಡ್ಜ್ ಹೊಂದಿರುವ 20 ರಿಂದ 40 ವರ್ಷ ವಯೋಮಿತಿಯೊಳಗಿನ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರವಾಸಿ ವಾಹನಗಳನ್ನು ಖರೀದಿಸಿ ವಿತರಿಸುವ ಸಲುವಾಗಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರವಾಸಿ ಟ್ಯಾಕ್ಸಿಗಳಿಗೆ […]

ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ ವಿತರಣೆಗೆ ಅರ್ಜಿ ಆಹ್ವಾನ Read More »

ಕರಾವಳಿ

ನಾಳೆ ಈದುಲ್ ಫಿತರ್ ಆಚರಿಸಲು ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಶುಕ್ರವಾರದಂದು ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ. ಕೇರಳದ ಕ್ಯಾಲಿಕಟ್ ನಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ದಕ್ಷಿಣ ಕನ್ನಡದಲ್ಲೂ ಶುಕ್ರವಾರ ಈದುಲ್ ಫಿತ್ರ್ ಆಚರಿಸಲಾಗುವುದು ಎಂದಿದ್ದಾರೆ.

ನಾಳೆ ಈದುಲ್ ಫಿತರ್ ಆಚರಿಸಲು ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕರೆ Read More »

ಕರಾವಳಿ

ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ – ಸಿರಿಬಾಗಿಲು ಮಧ್ಯೆ ಭೂಕುಸಿತ ► ಮಂಗಳೂರು – ಬೆಂಗಳೂರು ರೈಲು ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.14. ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ – ಸಿರಿಬಾಗಿಲು ಮಧ್ಯದ ರೈಲ್ವೇ ಹಳಿಯ ಮೇಲೆ ಮಣ್ಣು ಬಿದ್ದ ಪರಿಣಾಮ ಬೆಂಗಳೂರು -ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯಭಾಗದಲ್ಲಿ ಹಠಾತ್ ಭೂಕುಸಿತ ಉಂಟಾಗಿ ರೈಲ್ವೆ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ 10.50ಕ್ಕೆ ಮಂಗಳೂರಿನಿಂದ ಹೊರಟಿದ್ದ ಕಾರವಾರ – ಬೆಂಗಳೂರು ಹಗಲು ರೈಲು ಸುಬ್ರಹ್ಮಣ್ಯ ರೋಡ್ ವರೆಗೆ ಸಂಚರಿಸಿ ಮುಂದಿನ ಪ್ರಯಾಣವನ್ನು ರದ್ದುಗೊಳಿಸಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಹೊರಟಿದ್ದ ರೈಲು ಸಕಲೇಶಪುರವರೆಗೆ

ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ – ಸಿರಿಬಾಗಿಲು ಮಧ್ಯೆ ಭೂಕುಸಿತ ► ಮಂಗಳೂರು – ಬೆಂಗಳೂರು ರೈಲು ಸಂಚಾರ ಸ್ಥಗಿತ Read More »

ಕರಾವಳಿ

ಜೂ.14: ಇಂದು “ವಿಶ್ವ ರಕ್ತದಾನಿಗಳ ದಿನ” ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜೂ.14. “ರಕ್ತದಾನ ಜೀವದಾನ” ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ

ಜೂ.14: ಇಂದು “ವಿಶ್ವ ರಕ್ತದಾನಿಗಳ ದಿನ” ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಕರಾವಳಿ

ವಿಟ್ಲ: ಅಕ್ರಮ ಮರ ಸಾಗಾಟ ► ಪಿಕಪ್ ಸಹಿತ‌ ಮರದ ದಿಮ್ಮಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.14. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿರುವ ಅರಣ್ಯಾಧಿಕಾರಿಗಳು ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕಲ್ಲಡ್ಕ – ವಿಟ್ಲ ಹೆದ್ದಾರಿಯಲ್ಲಿ ಅಕ್ರಮ ಮರ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಕಸಬಾ ಗ್ರಾಮದ ಮಂಗಿಲ ಪದವು ಎಂಬಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದು, ಚಾಲಕ ವಾಹನವನ್ನು ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ. ಮಂಗಳೂರು ವಿಭಾಗ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್ ರವರ ನಿರ್ದೇಶನದಲ್ಲಿ ಸಹಾಯಕ ಅರಣ್ಯ

ವಿಟ್ಲ: ಅಕ್ರಮ ಮರ ಸಾಗಾಟ ► ಪಿಕಪ್ ಸಹಿತ‌ ಮರದ ದಿಮ್ಮಿಗಳು ವಶಕ್ಕೆ Read More »

ಕರಾವಳಿ

ಮಳೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆ ► ಪುತ್ತೂರು, ಸುಳ್ಯ ತಾಲೂಕಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು/ಸುಳ್ಯ, ಜೂ.14. ಭಾರೀ ಮಳೆ ಸುರಿಯುತ್ತಿರುವುದರಿಂದ ಪುತ್ತೂರು ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಭಯ ತಾಲೂಕುಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಸಿ ಕೃಷ್ಣಮೂರ್ತಿ ಆದೇಶಿಸಿದ್ದಾರೆ. ಸುಳ್ಯ ತಹಶಿಲ್ದಾರ್ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಮಳೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆ ► ಪುತ್ತೂರು, ಸುಳ್ಯ ತಾಲೂಕಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಸುಳ್ಯದ ಮುಸ್ಲಿಂ ಯುವಕ ► ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಯುವತಿಯ ಕಡೆಯವರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.13. ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ಮೋಸದ ಬಲೆಗೆ ಕೆಡವಿ ವಿವಾಹವಾಗಿದ್ದುದನ್ನು ಅರಿತ ಯುವತಿ ಹಾಗೂ ಸಂಬಂಧಿಕರು ಯುವಕನನ್ನು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ತೊಕ್ಕೊಟ್ಟು ಸಮೀಪದ ಕುಂಪಲದಲ್ಲಿ ನಡೆದಿದೆ. ಆರೋಪಿ ಯುವಕನನ್ನು ಸುಳ್ಯ ತಾಲೂಕಿನ ಗೂನಡ್ಕ ನಿವಾಸಿ ನಝೀರ್ ಎಂಬವರ ಪುತ್ರ ಸಯ್ಯದ್ ಹಾರೂನ್ ರಶೀದ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಜಿಯೋ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಈತ ತನ್ನ ಹೆಸರನ್ನು ಅರುಣ್ ಪೂಜಾರಿ ಎಂದು ಪರಿಚಯಿಸಿಕೊಂಡು ತೊಕ್ಕೊಟ್ಟು ಸಮೀಪದ ಕುಂಪಲದ

ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಸುಳ್ಯದ ಮುಸ್ಲಿಂ ಯುವಕ ► ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಯುವತಿಯ ಕಡೆಯವರು Read More »

ಕರಾವಳಿ

ಜಯನಗರ ಚುನಾವಣೆಯಲ್ಲಿ ಜಯದ‌ ನಗೆ ಬೀರಿದ ಕಾಂಗ್ರೆಸ್ ► ಮಾಜಿ ಗೃಹ ಸಚಿವರ ಪುತ್ರಿ ಸೌಮ್ಯ ರೆಡ್ಡಿಯ ‘ಕೈ’ ಹಿಡಿದ ಮತದಾರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.13. ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಕೈ ಹಿಡಿದಿರುವ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಬಿಜೆಪಿಯ ಪ್ರಹ್ಲಾದ್ ಬಾಬು ವಿರುದ್ಧ ಎರಡು ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಠೇವಣಿ

ಜಯನಗರ ಚುನಾವಣೆಯಲ್ಲಿ ಜಯದ‌ ನಗೆ ಬೀರಿದ ಕಾಂಗ್ರೆಸ್ ► ಮಾಜಿ ಗೃಹ ಸಚಿವರ ಪುತ್ರಿ ಸೌಮ್ಯ ರೆಡ್ಡಿಯ ‘ಕೈ’ ಹಿಡಿದ ಮತದಾರರು Read More »

ಕರಾವಳಿ

ಗ್ರಾ.ಪಂ. ಪಿಡಿಓ ನೇಣುಬಿಗಿದು ಆತ್ಮಹತ್ಯೆ ► ಪಂಚಾಯತ್ ನ ಶೌಚಾಲಯದಲ್ಲಿ ಕೃತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.13. ಗ್ರಾ.ಪಂ.ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನ ಬುಧವಾರದಂದು ನಡೆದಿದೆ. ದ.ಕ.ಜಿಲ್ಲೆಯ ಮುನ್ನೂರು ಗ್ರಾಮ ಪಂಚಾಯತ್ ಪಿಡಿಓ ಕೃಷ್ಣ ಸ್ವಾಮಿ (47) ಆತ್ಮಹತ್ಯೆ ಮಾಡಿಕೊಂಡವರು. ಇವರು ಡೆತ್ ನೋಟ್ ಬರೆದಿಟ್ಟು ಪಂಚಾಯತ್ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾ.ಪಂ. ಪಿಡಿಓ ನೇಣುಬಿಗಿದು ಆತ್ಮಹತ್ಯೆ ► ಪಂಚಾಯತ್ ನ ಶೌಚಾಲಯದಲ್ಲಿ ಕೃತ್ಯ Read More »

ಕರಾವಳಿ

ಮಕ್ಕಳ ಹೆತ್ತವರಿಗೊಂದು ಶುಭ ಸುದ್ದಿ ► ಇನ್ಮುಂದೆ ಆಯ್ದ ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.13. ರಾಜ್ಯದ ಕೆಲವು ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯು ನಿರ್ಧರಿಸಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ. ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿ ತರಗತಿಗಳ ಅಗತ್ಯವಿದೆ ಎಂದು ಪೋಷಕರ ಬೇಡಿಕೆಯಂತೆ ಸರಕಾರವು ಎಚ್ಚೆತ್ತಿದ್ದು, ಪ್ರಸಕ್ತ ಸಾಲಿನಿಂದಲೇ ರಾಜ್ಯದ 13 ಜಿಲ್ಲೆಗಳ ಸುಮಾರು 100 ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಾಗಲಿವೆ. ಎಲ್ ಕೆಜಿ ತರಗತಿಗೆ ನೂತನ ಪಠ್ಯ ಕ್ರಮವನ್ನು

ಮಕ್ಕಳ ಹೆತ್ತವರಿಗೊಂದು ಶುಭ ಸುದ್ದಿ ► ಇನ್ಮುಂದೆ ಆಯ್ದ ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿ ಆರಂಭ Read More »

ಕರಾವಳಿ
Scroll to Top